AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jharkhand Politics: ಹೈದರಾಬಾದ್‌ಗೆ ತೆರಳಿದ ಜೆಎಂಎಂ ನೇತೃತ್ವದ ಮೈತ್ರಿಕೂಟದ ಶಾಸಕರು

ಮುಂದಿನ ಸರ್ಕಾರ ರಚನೆಗೆ ಹಕ್ಕು ಮಂಡಿಸಿರುವ ಚಂಪೈ ಸೊರೆನ್ ಅವರು ಮುಖ್ಯಮಂತ್ರಿಯಾಗಲು ತಮಗೆ ಬೇಕಾದ ಬೆಂಬಲವಿದೆ ಎಂದು ತೋರಿಸಲು 43 ಶಾಸಕರು ತನ್ನೊಂದಿಗೆ ಇರುವ ವಿಡಿಯೊವನ್ನು ಗುರುವಾರ ಬಿಡುಗಡೆ ಮಾಡಿದರು. ಸುಮಾರು 20 ಗಂಟೆಗಳ ಕಾಯುವಿಕೆಯ ನಂತರ, ಅಂತಿಮವಾಗಿ ಗುರುವಾರ ಸಂಜೆ ರಾಜ್ಯಪಾಲರನ್ನು ಭೇಟಿಯಾಗಲು ಜೆಎಂಎಂ ನಾಯಕನಿಗೆ ಆಹ್ವಾನ ಸಿಕ್ಕಿತ್ತು.

Jharkhand Politics: ಹೈದರಾಬಾದ್‌ಗೆ ತೆರಳಿದ ಜೆಎಂಎಂ ನೇತೃತ್ವದ ಮೈತ್ರಿಕೂಟದ ಶಾಸಕರು
ಶಾಸಕರ ಬಸ್ಸು
ರಶ್ಮಿ ಕಲ್ಲಕಟ್ಟ
|

Updated on: Feb 01, 2024 | 8:52 PM

Share

ದೆಹಲಿ ಫೆಬ್ರುವರಿ 01: ಜಾರ್ಖಂಡ್​​ನಲ್ಲಿ (Jharkhand)ಮುಖ್ಯಮಂತ್ರಿ ಇಲ್ಲದೇ ಸುಮಾರು 24 ಗಂಟೆಗಳ ಕಾಲ ಕಳೆದಿದೆ, 81 ಸದಸ್ಯರ ವಿಧಾನಸಭೆಯಲ್ಲಿ ಜೆಎಂಎಂ (JMM) ನಾಯಕ 43 ಶಾಸಕರ ಬೆಂಬಲವನ್ನು ಪಡೆದಿದ್ದರೂ ರಾಜ್ಯದಲ್ಲಿ ಮುಂದಿನ ಸರ್ಕಾರ ರಚಿಸಲು ಜಾರ್ಖಂಡ್ ಮುಕ್ತಿ ಮೋರ್ಚಾದ ಹೊಸದಾಗಿ ಚುನಾಯಿತ ನಾಯಕ ಚಂಪೈ ಸೊರೆನ್ (Champai Soren) ಅವರನ್ನು ಆಹ್ವಾನಿಸಲು ರಾಜ್ಯಪಾಲ ಸಿಪಿ ರಾಧಾಕೃಷ್ಣನ್ ನಿರಾಕರಿಸಿದ್ದಾರೆ. ಬುಧವಾರ ತಡರಾತ್ರಿ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಗಾಗಿದ್ದ ಹೇಮಂತ್ ಸೊರೆನ್ ರಾಜೀನಾಮೆಯಿಂದ ರಾಜ್ಯ ರಾಜಕೀಯ ಬಿಕ್ಕಟ್ಟಿಗೆ ಸಿಲುಕಿದೆ.

ಮುಂದಿನ ಸರ್ಕಾರ ರಚನೆಗೆ ಹಕ್ಕು ಮಂಡಿಸಿರುವ ಚಂಪೈ ಸೊರೆನ್ ಅವರು ಮುಖ್ಯಮಂತ್ರಿಯಾಗಲು ತಮಗೆ ಬೇಕಾದ ಬೆಂಬಲವಿದೆ ಎಂದು ತೋರಿಸಲು 43 ಶಾಸಕರು ತನ್ನೊಂದಿಗೆ ಇರುವ ವಿಡಿಯೊವನ್ನು ಗುರುವಾರ ಬಿಡುಗಡೆ ಮಾಡಿದರು. ಸುಮಾರು 20 ಗಂಟೆಗಳ ಕಾಯುವಿಕೆಯ ನಂತರ, ಅಂತಿಮವಾಗಿ ಗುರುವಾರ ಸಂಜೆ ರಾಜ್ಯಪಾಲರನ್ನು ಭೇಟಿಯಾಗಲು ಜೆಎಂಎಂ ನಾಯಕನಿಗೆ ಆಹ್ವಾನ ಸಿಕ್ಕಿತು. ಆದಾಗ್ಯೂ, ವಿಡಿಯೊ ಮತ್ತು ಬೆಂಬಲ ಪತ್ರಗಳ ಹೊರತಾಗಿಯೂ, ರಾಜ್ಯಪಾಲರು ಜೆಎಂಎಂ ನಾಯಕನನ್ನು ಸರ್ಕಾರ ರಚಿಸಲು ಆಹ್ವಾನಿಸಲಿಲ್ಲ.

ಹೊಸ ಸರ್ಕಾರ ರಚನೆ ಪ್ರಕ್ರಿಯೆ ಆರಂಭವಾಗಬೇಕು ಎಂದು ನಾವು ರಾಜ್ಯಪಾಲರನ್ನು ಒತ್ತಾಯಿಸಿದ್ದೇವೆ. ಶೀಘ್ರದಲ್ಲೇ ಪ್ರಕ್ರಿಯೆ ಆರಂಭವಾಗಲಿದೆ ಎಂದು ರಾಜ್ಯಪಾಲರು ಭರವಸೆ ನೀಡಿದ್ದಾರೆ ಎಂದು ಚಂಪೈ ಸೊರೆನ್ ಅವರು ರಾಜ್ಯಪಾಲರನ್ನು ಭೇಟಿಯಾದ ನಂತರ ಸುದ್ದಿಗಾರರಿಗೆ ತಿಳಿಸಿದರು. “ಪ್ರಸ್ತುತ, ನಾವು ನಮ್ಮ ಬೆಂಬಲದಲ್ಲಿ 43 ಶಾಸಕರಿರುವ ವರದಿಯನ್ನು ಸಲ್ಲಿಸಿದ್ದೇವೆ. ಸಂಖ್ಯೆ 46-47 ಕ್ಕೆ ತಲುಪುತ್ತದೆ ಎಂದು ನಾವು ನಿರೀಕ್ಷಿಸುತ್ತೇವೆ ಆದ್ದರಿಂದ ಯಾವುದೇ ತೊಂದರೆ ಇಲ್ಲ. ನಮ್ಮ ‘ಘಟಬಂಧನ್’ ತುಂಬಾ ಪ್ರಬಲವಾಗಿದೆ” ಎಂದಿದ್ದಾರೆ ಅವರು.

ಒಂದು ವೇಳೆ ರಾಜ್ಯಪಾಲರು ನಮ್ಮನ್ನು ಕರೆಯಲು ವಿಫಲವಾದರೆ ನಾಳೆ ಮಧ್ಯಾಹ್ನ ಮತ್ತೆ ಭೇಟಿಗೆ ಅವಕಾಶವನ್ನು ಕೇಳುತ್ತೇವೆ ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಅಲಂಗೀರ್ ಆಲಂ ರಾಜ್ಯಪಾಲರನ್ನು ಭೇಟಿಯಾದ ನಂತರ ಹೇಳಿದರು. ಸರ್ಕಾರ ರಚನೆ ಕುರಿತು ಶೀಘ್ರ ನಿರ್ಧಾರ ಕೈಗೊಳ್ಳದಿದ್ದರೆ ಕುದುರೆ ವ್ಯಾಪಾರಕ್ಕೆ ಯಾರು ಹೊಣೆ ಎಂದು ಸಭೆಯಲ್ಲಿ ಆತಂಕ ವ್ಯಕ್ತಪಡಿಸಿದರು ಎಂದು ಆಲಂ ಹೇಳಿದರು. 81 ಸದಸ್ಯರ ಜಾರ್ಖಂಡ್ ವಿಧಾನಸಭೆಯಲ್ಲಿ, ಕಾಂಗ್ರೆಸ್ ಮತ್ತು ಆರ್‌ಜೆಡಿ ಒಳಗೊಂಡಿರುವ ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ನೇತೃತ್ವದ ಮೈತ್ರಿಕೂಟವು ಜೆಎಂಎಂನ 29, ಕಾಂಗ್ರೆಸ್‌ನ 17 ಮತ್ತು ಆರ್‌ಜೆಡಿಯ 1 ಸೇರಿದಂತೆ 47 ಶಾಸಕರನ್ನು ಹೊಂದಿದೆ. ಬಿಜೆಪಿ 25 ಸದಸ್ಯರನ್ನು ಹೊಂದಿದೆ ಮತ್ತು ಎಜೆಎಸ್‌ಯು ಪಕ್ಷವು ಮೂವರು ಶಾಸಕರನ್ನು ಹೊಂದಿದೆ. ಎನ್​​ಸಿಪಿ ಮತ್ತು ಸಿಪಿಐ (ML) ತಲಾ ಒಬ್ಬ ಸದಸ್ಯರನ್ನು ಹೊಂದಿದ್ದು, ಮೂವರು ಪಕ್ಷೇತರರು ಇದ್ದಾರೆ.

ಸರ್ಕಾರ ರಚನೆಯ ಅನಿಶ್ಚಿತತೆಯೊಂದಿಗೆ, ಕುದುರೆ ವ್ಯಾಪಾರ ತಡೆಯಲು ಇಂಡಿಯಾ ಬ್ಲಾಕ್ ಶಾಸಕರನ್ನು ರಾಜ್ಯದಿಂದ ಹೊರಗೆ ಸ್ಥಳಾಂತರಿಸುತ್ತಿದೆ. ಕಾಂಗ್ರೆಸ್ ಸರ್ಕಾರ ಇರುವ ಹೈದರಾಬಾದ್‌ಗೆ ಶಾಸಕರನ್ನು ಕರೆತರಲಾಗುತ್ತಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಏತನ್ಮಧ್ಯೆ, ಜೆಎಂಎಂ ನಾಯಕ ಮತ್ತು ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರನ್ನು ರಾಂಚಿಯ ವಿಶೇಷ ಪಿಎಂಎಲ್‌ಎ ನ್ಯಾಯಾಲಯವು ಭೂ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಒಂದು ದಿನದ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ.

ತಮ್ಮ ಬಂಧನದ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿರುವ ಹೇಮಂತ್ ಸೊರೆನ್, ಜೆಎಂಎಂ ಶಾಸಕರು ಮತ್ತು ಮಿತ್ರ ಪಕ್ಷಗಳ ಶಾಸಕರೊಂದಿಗೆ ರಾಜಭವನದಲ್ಲಿ ರಾಜೀನಾಮೆ ನೀಡಲು ತೆರಳಿದ್ದ ತನ್ನನ್ನು ರಾಜಭವನದಿಂದ ಬಂಧಿಸಲಾಗಿದೆ ಎಂದು ಅರ್ಜಿಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ:Hemant Soren: ಜಾರ್ಖಂಡ್‌ನ ಮಾಜಿ ಸಿಎಂ ಹೇಮಂತ್ ಸೊರೆನ್​​​ಗೆ ನ್ಯಾಯಾಂಗ ಬಂಧನ 

“ಜನವರಿ 31, 2024 ರಂದು ರಾತ್ರಿ 10.10 ರ ಸುಮಾರಿಗೆ ಅರ್ಜಿದಾರರ ಬಂಧನವು ಕಾನೂನುಬಾಹಿರ ಮತ್ತು ದುರುದ್ದೇಶಪೂರಿತವಾಗಿದೆ ಮತ್ತು ನ್ಯಾಯವ್ಯಾಪ್ತಿಯಿಲ್ಲ,” ಎಂದು ಎಸ್‌ಸಿಯಲ್ಲಿ ಸೊರೆನ್ ಅವರ ಮನವಿಯಲ್ಲಿ ಹೇಳಲಾಗಿದೆ. “ಬಂಧನವು ಸುಸಂಘಟಿತ ಪಿತೂರಿಯ ಒಂದು ಭಾಗವಾಗಿದೆ, ಇದು ಕೆಲವೇ ತಿಂಗಳುಗಳಲ್ಲಿ ನಡೆಯಲಿರುವ ಸಾರ್ವತ್ರಿಕ ಚುನಾವಣೆಗಳಿಗೆ ಪೂರ್ವಭಾವಿಯಾಗಿ ರೂಪುಗೊಂಡಿದೆ ಎಂದು ಅದು ಹೇಳಿದೆ.

ಕೇಂದ್ರ ಸರ್ಕಾರದ ಆದೇಶದ ಮೇರೆಗೆ ಇಡಿಯ ಕ್ರಮವು ತನ್ನ ಪ್ರಜಾಸತ್ತಾತ್ಮಕವಾಗಿ ಚುನಾಯಿತ ಸರ್ಕಾರವನ್ನು ಉರುಳಿಸುವ ಗುರಿಯನ್ನು ಹೊಂದಿದೆ ಎಂದು ಸೊರೆನ್ ಆರೋಪಿಸಿದ್ದಾರೆ. “ಜಾರ್ಖಂಡ್ ಮುಕ್ತಿ ಮೋರ್ಚಾ ನೇತೃತ್ವದ ಆಡಳಿತಾರೂಢ ಮೈತ್ರಿಕೂಟವು ವಿಧಾನಸಭೆಯ ಒಟ್ಟು 81 ಶಾಸಕರ ಪೈಕಿ 47 ಶಾಸಕರ ಬೆಂಬಲವನ್ನು ಹೊಂದಿದೆ. ಅವರು ಚಂಪೈ ಸೊರೆನ್ ಅವರನ್ನು ತಮ್ಮ ನಾಯಕನನ್ನಾಗಿ ಆಯ್ಕೆ ಮಾಡಿದ್ದಾರೆ. ರಾಜೀನಾಮೆಗೆ ಅನುಗುಣವಾಗಿ ಜಾರ್ಖಂಡ್ ರಾಜ್ಯದ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿದ್ದಾರೆ ಎಂದು ಸೊರೆನ್ ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು