AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾರ್ಖಂಡ್ ಕಾನ್​ಸ್ಟೆಬಲ್ ನೇಮಕಾತಿ: ದೈಹಿಕ ಪರೀಕ್ಷೆ ವೇಳೆ 3 ಮಂದಿ ಸಾವು, 25 ಅಭ್ಯರ್ಥಿಗಳು ಅಸ್ವಸ್ಥ

ಜಾರ್ಖಂಡ್​ನಲ್ಲಿ ನಡೆದ ಕಾನ್​ಸ್ಟೆಬಲ್ ನೇಮಕಾರಿ ಪ್ರಕ್ರಿಯೆ ವೇಳೆ ಮೂವರು ಅಭ್ಯರ್ಥಿಗಳು ಮೃತಪಟ್ಟಿರುವ ಘಟನೆ ನಡೆದಿದೆ. ಅವರನ್ನು ಮೇದಿನಿರೈ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶುಕ್ರವಾರ ಪೊಲೀಸರು ಈ ಮಾಹಿತಿ ನೀಡಿದ್ದಾರೆ.

ಜಾರ್ಖಂಡ್ ಕಾನ್​ಸ್ಟೆಬಲ್ ನೇಮಕಾತಿ: ದೈಹಿಕ ಪರೀಕ್ಷೆ ವೇಳೆ 3 ಮಂದಿ ಸಾವು, 25 ಅಭ್ಯರ್ಥಿಗಳು ಅಸ್ವಸ್ಥ
ಪರೀಕ್ಷೆ
ನಯನಾ ರಾಜೀವ್
|

Updated on: Sep 01, 2024 | 9:40 AM

Share

ಜಾರ್ಖಂಡ್‌ನ ಪಲಾಮು ಜಿಲ್ಲೆಯಲ್ಲಿ ಅಬಕಾರಿ ಇಲಾಖೆಯ ಕಾನ್​ಸ್ಟೆಬಲ್ ನೇಮಕಾತಿ ಪ್ರಕ್ರಿಯೆಯ ದೈಹಿಕ ಪರೀಕ್ಷೆಯ ವೇಳೆ ಮೂರ್ಛೆ ಹೋದ 25 ಅಭ್ಯರ್ಥಿಗಳ ಪೈಕಿ ಮೂವರು ಸಾವನ್ನಪ್ಪಿದ್ದಾರೆ. ಅವರನ್ನು ಮೇದಿನಿರೈ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶುಕ್ರವಾರ ಪೊಲೀಸರು ಈ ಮಾಹಿತಿ ನೀಡಿದ್ದಾರೆ.

ಉಪವಿಭಾಗೀಯ ಪೊಲೀಸ್ ಅಧಿಕಾರಿ ಮಣಿಭೂಷಣ್ ಪ್ರಸಾದ್ ಮಾತನಾಡಿ,  ಇಬ್ಬರು ಅಭ್ಯರ್ಥಿಗಳು ಪಲಮು ಜಿಲ್ಲೆಯ ಮೇದಿನಿನಗರದಲ್ಲಿರುವ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಚಿಕಿತ್ಸೆಯ ಸಮಯದಲ್ಲಿ ಸಾವನ್ನಪ್ಪಿದ್ದರೆ, ಒಬ್ಬರು ರಾಂಚಿಯ ರಿಮ್ಸ್​ನಲ್ಲಿ ಸಾವನ್ನಪ್ಪಿದ್ದಾರೆ.

ಪ್ರಾಥಮಿಕ ತನಿಖೆಯ ಪ್ರಕಾರ ಉಸಿರಾಟದ ತೊಂದರೆಯಿಂದ ಸಾವು ಸಂಭವಿಸಿದೆ ಎಂದು ಆಸ್ಪತ್ರೆ ಅಧೀಕ್ಷಕ ಡಾ.ಆರ್.ಕೆ.ರಂಜನ್ ತಿಳಿಸಿದ್ದಾರೆ.  ಅಮರೇಶ್ ಕುಮಾರ್ (20), ಅರುಣ್ ಕುಮಾರ್ (25) ಮತ್ತು ಪ್ರದೀಪ್ ಕುಮಾರ್ (25) ಎಂದು ಗುರುತಿಸಲಾಗಿದೆ. ಪಲಾಮು ಜಿಲ್ಲೆಯಲ್ಲಿ ಅಬಕಾರಿ ಇಲಾಖೆಯ ಕಾನ್​ಸ್ಟೆಬಲ್ ನೇಮಕಾತಿ ಪರೀಕ್ಷೆಯಲ್ಲಿ ಭಾಗವಹಿಸುವುದು ಸೇರಿದಂತೆ ದೈಹಿಕ ಪರೀಕ್ಷೆಯಲ್ಲಿ ಭಾಗವಹಿಸಿದ್ದ ಸುಮಾರು 100 ಅಭ್ಯರ್ಥಿಗಳು ಇಲ್ಲಿಯವರೆಗೆ ಪ್ರಜ್ಞಾಹೀನರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಸೆ.9ರವರೆಗೆ ನೇಮಕಾತಿ ಪ್ರಕ್ರಿಯೆ ನಡೆಯಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಏತನ್ಮಧ್ಯೆ, ಮುಖ್ಯಮಂತ್ರಿ ಹೇಮಂತ್ ಸೊರೆನ್ ಈ ವಿಷಯದ ಬಗ್ಗೆ ತಕ್ಷಣ ಗಮನಹರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಜಾರ್ಖಂಡ್ ಸ್ಟಾಫ್ ಸೆಲೆಕ್ಷನ್ ಕಮಿಷನ್ ನಡೆಸುವ ಪರೀಕ್ಷೆಯ ಮೂಲಕ ಒಟ್ಟು 583 ಹುದ್ದೆಗಳನ್ನು ನೇಮಿಸಿಕೊಳ್ಳಲಾಗುವುದು ಎಂದು ನಾವು ನಿಮಗೆ ಹೇಳೋಣ. ಇದಕ್ಕಾಗಿ ದೈಹಿಕ ಪರೀಕ್ಷೆ ಪ್ರಕ್ರಿಯೆ ವಿವಿಧ ಜಿಲ್ಲೆಗಳಲ್ಲಿ ನಡೆಯುತ್ತಿದೆ. ಇದಕ್ಕಾಗಿ 10 ಕಿಲೋಮೀಟರ್ ಓಡಬೇಕು.

ಬಿಸಿಲಿನ ಝಳದಲ್ಲಿ ಓಡಿದ್ದರಿಂದ ಹಲವು ಅಭ್ಯರ್ಥಿಗಳು ಮೂರ್ಛೆ ಹೋಗುತ್ತಿದ್ದಾರೆ. ಒಂದು ವಾರದ ಹಿಂದೆ, ಪೂರ್ವ ಸಿಂಗ್‌ಭೂಮ್ ಜಿಲ್ಲೆಯ ಜದುಗೋರಾದಲ್ಲಿ ಗಿರಿದಿಹ್‌ನ ಕೇಶ್ವರಿ ನಿವಾಸಿ ಅಭ್ಯರ್ಥಿಯೊಬ್ಬರು ರೇಸ್‌ನಲ್ಲಿ ಸಾವನ್ನಪ್ಪಿದ್ದರು. ಇನ್ನು ಹಲವು ಜಿಲ್ಲೆಗಳಿಂದ ಅಭ್ಯರ್ಥಿಗಳು ಅನಾರೋಗ್ಯಕ್ಕೆ ತುತ್ತಾಗಿರುವ ಬಗ್ಗೆ ವರದಿಯಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!