AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಂಧ್ರ ಜಿನ್ನಾ ಟವರ್​ ವಿವಾದ; ಇಡೀ ಟವರ್​ಗೆ ಕೇಸರಿ-ಬಿಳಿ-ಹಸಿರು ಬಣ್ಣ ಬಳಿಸಿದ ಶಾಸಕ, ನಾಳೆ ಧ್ವಜಾರೋಹಣ

ಜನವರಿ 26ರ ಗಣರಾಜ್ಯೋತ್ಸವದಂದು ಬಲಪಂಥೀಯ ಸಂಘಟನೆಯ ಒಂದಷ್ಟು ಜನರು  ಜಿನ್ನಾ ಟವರ್​​ಗೆ ನುಗ್ಗಿ, ಅಲ್ಲಿ ಧ್ವಜಾರೋಹಣ ನಡೆಸಲು ಮುಂದಾಗಿದ್ದರು. ಆದರೆ ಇದರಿಂದ ಗಲಾಟೆಯಾಗುವ ಸಾಧ್ಯತೆ ಹೆಚ್ಚಾಗಿದ್ದುದರಿಂದ ಪೊಲೀಸರು ಅವರನ್ನು ತಡೆದಿದ್ದರು

ಆಂಧ್ರ ಜಿನ್ನಾ ಟವರ್​ ವಿವಾದ; ಇಡೀ ಟವರ್​ಗೆ ಕೇಸರಿ-ಬಿಳಿ-ಹಸಿರು ಬಣ್ಣ ಬಳಿಸಿದ ಶಾಸಕ, ನಾಳೆ ಧ್ವಜಾರೋಹಣ
ಜಿನ್ನಾ ಟವರ್​
TV9 Web
| Edited By: |

Updated on: Feb 02, 2022 | 11:43 AM

Share

ಆಂಧ್ರಪ್ರದೇಶದ ಗುಂಟೂರಿನಲ್ಲಿರುವ ಜಿನ್ನಾ ಟವರ್​​ನ್ನು (Jinnah Tower) ತ್ರಿವರ್ಣಗಳಿಂದ (ಕೇಸರಿ-ಬಿಳಿ-ಹಸಿರು) ಪೇಂಟಿಂಗ್​ ಮಾಡಲಾಗಿದೆ. ಜನವರಿ 26ರಂದು ಇಲ್ಲಿ ರಾಷ್ಟ್ರಧ್ವಜಾರೋಹಣ ಮಾಡುವ ಸಂಬಂಧ ವಿವಾದ ಸೃಷ್ಟಿಯಾಗಿತ್ತು. ಅದರ ಬೆನಲ್ಲೇ ಈ ಟವರ್​ಗೆ ಕೇಸರಿ-ಬಿಳಿ-ಹಸಿರು ಬಣ್ಣ (Tricolour )ಬಳಿಯಲಾಗಿದ್ದು, ನಾಳೆ (ಫೆ.3) ಇಲ್ಲಿ ಧ್ವಜಾರೋಹಣ ಮಾಡಲಾಗುವುದು ಎಂದು ಗುಂಟೂರು ಪೂರ್ವ ಕ್ಷೇತ್ರದ ಶಾಸಕ ಮೊಹಮ್ಮದ್​ ಮುಸ್ತಫಾ ಹೇಳಿದ್ದಾರೆ.  ಜನವರಿ 26ರ ಗಣರಾಜ್ಯೋತ್ಸವದಂದು ಬಲಪಂಥೀಯ ಸಂಘಟನೆಯ ಒಂದಷ್ಟು ಜನರು  ಜಿನ್ನಾ ಟವರ್​​ಗೆ ನುಗ್ಗಿ, ಅಲ್ಲಿ ಧ್ವಜಾರೋಹಣ ನಡೆಸಲು ಮುಂದಾಗಿದ್ದರು. ಆದರೆ ಇದರಿಂದ ಗಲಾಟೆಯಾಗುವ ಸಾಧ್ಯತೆ ಹೆಚ್ಚಾಗಿದ್ದುದರಿಂದ ಪೊಲೀಸರು ಅವರನ್ನು ತಡೆದಿದ್ದರು. 

ಆದರೆ ಈಗ ಆಂಧ್ರದ ಆಡಳಿತ ಪಕ್ಷ ವೈಎಸ್​ಆರ್​ಸಿಪಿಯ ಶಾಸಕ ಮುಸ್ತಫಾ ಅವರೇ ಖುದ್ದಾಗಿ ನಿಂತು ಇಡೀ ಟವರ್​ಗೆ ಪೇಂಟಿಂಗ್​ ಮಾಡಿಸಿದ್ದಾರೆ. ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿ, ಈ ಟವರ್​ಗೆ ರಾಷ್ಟ್ರಧ್ವಜ ಮಾದರಿಯಲ್ಲಿ ಪೇಂಟಿಂಗ್​ ಮಾಡಬೇಕು ಎಂದು ಅನೇಕರು ಮನವಿ ಮಾಡಿದ್ದರು. ಅದರಂತೆ ಬಣ್ಣ ಬಳಿಯಲಾಗಿದೆ. ಅಲ್ಲದೆ, ರಾಷ್ಟ್ರಧ್ವಜ ಹಾರಿಸಲು ಟವರ್​ ಬಳಿಯೇ ಒಂದು ಕಂಬವನ್ನೂ ನಿರ್ಮಿಸಲಾಗಿದೆ ಎಂದು ಹೇಳಿದ್ದಾರೆ. ಅಷ್ಟೇ ಅಲ್ಲ, ಭಾರತಕ್ಕೆ ಸ್ವಾತಂತ್ರ್ಯ ತಂದುಕೊಡಲು ಹಲವು ಮುಸ್ಲಿಂ ಮುಖಂಡರೂ ಹೋರಾಡಿದ್ದಾರೆ. ಆದರೆ ಸ್ವಾತಂತ್ರ್ಯ ಬಂದ ನಂತರ ಅದೆಷ್ಟೋ ಜನರು ಪಾಕಿಸ್ತಾನಕ್ಕೆ ಹೋಗಿ ನೆಲೆಸಿದರು. ನಾವು ಭಾರತೀಯರಾಗಿ ಇಲ್ಲಿಯೇ ಜೀವನ ನಡೆಸುತ್ತಿದ್ದೇವೆ. ನಮ್ಮ ತಾಯ್ನಾಡಾದ ಭಾರತದ ಬಗ್ಗೆ ನಮಗೂ ಅಪಾರ ಪ್ರೀತಿ-ಗೌರವ ಇದೆ ಎಂದು ಹೇಳಿದ್ದಾರೆ.

ಜನವರಿ 26ರಂದು ಹಿಂದು ವಾಹಿನಿ ಎಂಬ ಗುಂಪಿನ ಜನರು ಟವರ್​ಗೆ ಪ್ರವೇಶಿಸಿ, ಅಲ್ಲಿ ರಾಷ್ಟ್ರಧ್ವಜ ಹಾರಿಸಲು ಮುಂದಾಗಿದ್ದರು. ಆದರೆ ಪೊಲೀಸರು ತಡೆದಿದ್ದರು. ಪೊಲೀಸರು ತಡೆಯುತ್ತಿದ್ದಂತೆ ಪ್ರತಿಭಟನೆಯೂ ಶುರುವಾಗಿತ್ತು. ಹಿಂದು ವಾಹಿನಿ ಗುಂಪಿನವರು ಭಾರತ್​ ಮಾತಾ ಕಿ ಜೈ ಎಂಬ ಘೋಷಣೆಗಳನ್ನೂ ಕೂಗಿದ್ದರು. ಈ ಟವರ್​ ಹೆಸರು ಇತ್ತೀಚೆಗೆ ಇನ್ನಷ್ಟು ವಿರೋಧಕ್ಕೆ ಗುರಿಯಾಗಿದೆ. ಪಾಕಿಸ್ತಾನ ಸಂಸ್ಥಾಪಕ ಮೊಹಮ್ಮದ್ ಅಲಿ ಜಿನ್ನಾ ಹೆಸರಿನ ಬದಲಿಗೆ ನಮ್ಮ ಮಾಜಿ ರಾಷ್ಟ್ರಪತಿ ಎಪಿಜೆ ಅಬ್ದುಲ್​ ಕಲಾಂ ಅಥವಾ ದಲಿತ ಕವಿ ಗುರಾಮ್​ ಜಶುವಾ ಹೆಸರಿಡಬೇಕು ಎಂಬ ಆಗ್ರಹ ಕೇಳಿಬರುತ್ತಿದೆ.

ಇನ್ನೊಂದೆಡೆ ಕಳೆದ ವಾರ ಹೇಳಿಕೆ ನೀಡಿದ್ದ ವೈಎಸ್​ಆರ್​ಸಿಪಿ ಎಂಎಲ್​ಸಿ ಅಪ್ಪಿ ರೆಡ್ಡಿ, ಈ ಜಿನ್ನಾ ಟವರ್​ ಎಂಬುದು ಇಷ್ಟು ವರ್ಷಗಳ ಕಾಳ ಶಾಂತಿ-ಸಾಮರಸ್ಯದ ಪ್ರತೀಕವಾಗಿಯೇ ಇತ್ತು. ಇದೀಗ ಬಿಜೆಪಿ ಟವರ್​ ವಿಚಾರದಲ್ಲಿ ಕೋಮು ಸೌಹಾರ್ದತೆ ಕದಡುತ್ತಿದೆ ಎಂದು ಆರೋಪಿಸಿದ್ದಾರೆ.  ಇದನ್ನು ನೆಲಸಮಗೊಳಿಸುವ ಬಗ್ಗೆ ಬಿಜೆಪಿಯವರು ಪದೇಪದೆ ವಿವಾದಾತ್ಮಕ ಹೇಳಿಕೆ ನೀಡುತ್ತಿದ್ದಾರೆ. ಹಾಗಾಗಿ ಇಲ್ಲಿ ಸುರಕ್ಷತಾ ಬೇಲಿಗಳನ್ನು ಹಾಕಿ, ಪೊಲೀಸ್ ಭದ್ರತೆ ಹೆಚ್ಚಿಸಲಾಗಿದೆ. ರಾಷ್ಟ್ರಧ್ವಜ ಹಾರಿಸಲು ಬಂದವನ್ನು ಬಂಧಿಸಲಾಯಿತು ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: Ramanujacharya Statue: ರಾಮಾನುಜಾಚಾರ್ಯ ಸಹಸ್ರಾಬ್ದಿ ಕಾರ್ಯಕ್ರಮಗಳ ಆರಂಭಕ್ಕೆ ಭರದ ಸಿದ್ಧತೆ

ಬೆಳ್ಳಂಬೆಳಗ್ಗೆ ಭ್ರಷ್ಟರಿಗೆ ಬಿಸಿಮುಟ್ಟಿಸಿದ ಲೋಕಾಯುಕ್ತ: ಹಲವೆಡೆ ದಾಳಿ
ಬೆಳ್ಳಂಬೆಳಗ್ಗೆ ಭ್ರಷ್ಟರಿಗೆ ಬಿಸಿಮುಟ್ಟಿಸಿದ ಲೋಕಾಯುಕ್ತ: ಹಲವೆಡೆ ದಾಳಿ
2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
ಫ್ಯಾಮಿಲಿ ವೀಕ್: ರಾಶಿಕಾ ತಾಯಿ ಮಾತಿಗೆ ಸ್ಟನ್ ಆದ ಗಿಲ್ಲಿ
ಫ್ಯಾಮಿಲಿ ವೀಕ್: ರಾಶಿಕಾ ತಾಯಿ ಮಾತಿಗೆ ಸ್ಟನ್ ಆದ ಗಿಲ್ಲಿ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ರಸ್ತೆ ಅಡ್ಡಗಟ್ಟಿ ಬರ್ತ್‌ಡೇ ಆಚರಣೆ, ಪುಂಡರ ಹಾವಳಿ ವಿಡಿಯೋ ವೈರಲ್
ರಸ್ತೆ ಅಡ್ಡಗಟ್ಟಿ ಬರ್ತ್‌ಡೇ ಆಚರಣೆ, ಪುಂಡರ ಹಾವಳಿ ವಿಡಿಯೋ ವೈರಲ್
ರಜತ್ ಅವರ ಸಂಭಾವನೆ ಎಷ್ಟು? ಓಪನ್ ಆಗಿ ಮಾತನಾಡಿದ ಬುಜ್ಜಿ
ರಜತ್ ಅವರ ಸಂಭಾವನೆ ಎಷ್ಟು? ಓಪನ್ ಆಗಿ ಮಾತನಾಡಿದ ಬುಜ್ಜಿ
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ
ರೀಲ್ಸ್ ತಂದ ಆಪತ್ತು: ಇನ್ಸ್ಟಾಗ್ರಾಮ್​​​ ಬಳಸುವವರು ಈ ವಿಡಿಯೋನ ಒಮ್ಮೆ ನೋಡಿ
ರೀಲ್ಸ್ ತಂದ ಆಪತ್ತು: ಇನ್ಸ್ಟಾಗ್ರಾಮ್​​​ ಬಳಸುವವರು ಈ ವಿಡಿಯೋನ ಒಮ್ಮೆ ನೋಡಿ