AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾರಾಷ್ಟ್ರ ವಿಪಕ್ಷ ನಾಯಕರಾಗಿ ಜಿತೇಂದ್ರ ಅವಾದ್ ನೇಮಕ

ಮಹಾರಾಷ್ಟ್ರ ವಿಪಕ್ಷ ನಾಯಕರಾಗಿದ್ದ ಅಜಿತ್ ಪವಾರ್ ಅವರು ಏಕನಾಥ್ ಶಿಂಧೆ ಸರ್ಕಾರದ ಜೊತೆ ಕೈಜೋಡಿಸಿದ ಹಿನ್ನೆಲೆ ವಿಪಕ್ಷ ಸ್ಥಾನಕ್ಕೆ ಜಿತೇಂದ್ರ ಅವಾದ್ ಅವರನ್ನು ನೇಮಕ ಮಾಡಲಾಗಿದೆ.

ಮಹಾರಾಷ್ಟ್ರ ವಿಪಕ್ಷ ನಾಯಕರಾಗಿ ಜಿತೇಂದ್ರ ಅವಾದ್ ನೇಮಕ
ಮಹಾರಾಷ್ಟ್ರ ವಿಪಕ್ಷ ನಾಯಕರಾಗಿ ಜಿತೇಂದ್ರ ಅವಾದ್ ನೇಮಕ ಮಾಡಿದ ಎನ್​ಸಿಪಿ ಮುಖ್ಯಸ್ಥ ಶರದ್ ಪವಾರ್
TV9 Web
| Edited By: Rakesh Nayak Manchi|

Updated on:Jul 02, 2023 | 6:15 PM

Share

ಮುಂಬೈ: ಮಹಾರಾಷ್ಟ್ರ ವಿಪಕ್ಷ ನಾಯಕರಾಗಿದ್ದ ಅಜಿತ್ ಪವಾರ್ (Ajit Pawar) ಅವರು ಏಕನಾಥ್ ಶಿಂಧೆ ಸರ್ಕಾರದ ಜೊತೆ ಕೈಜೋಡಿಸಿ ಉಪಮುಖ್ಯಮಂತ್ರಿಯಾಗಿದ್ದು, ಇತ್ತ ಎನ್​ಸಿಪಿ (NCP) ಮುಖ್ಯಸ್ಥ ಶರದ್ ಪವಾರ್ (Sharad Pawar) ಅವರು ವಿಪಕ್ಷ ನಾಯಕನನ್ನಾಗಿ ಜಿತೇಂದ್ರ ಅವಾದ್ (Jitendra Awhad) ಅವರನ್ನು ನೇಮಕ ಮಾಡಿದ್ದಾರೆ. ಈ ಬಗ್ಗೆ ಸಭಾಪತಿ ಅವರಿಗೆ ಶರದ್ ಪವಾರ್ ಪತ್ರ ಬರೆದಿದ್ದಾರೆ.

ಪಕ್ಷದ ಬೆಳವಣಿಗೆಗಳ ಬಗ್ಗೆ ಮುಂಬೈನಲ್ಲಿ ಮಾತನಾಡಿದ ಎನ್​ಸಿಪಿ ಮುಖ್ಯಸ್ಥ ಶರದ್ ಪವಾರ್, ನಾಳೆ ಎನ್​ಸಿಪಿ ನಾಯಕರ ಸಭೆ ಕರೆದಿದ್ದೇವೆ ಎಂದರು. ಈ ಹಿಂದೆಯೂ ಪಕ್ಷದಲ್ಲಿ ವಿಶ್ವಾಸಘಾತಕ ಘಟನೆಗಳು ನಡೆದಿದೆ. ಆಗ ಪಕ್ಷ ಬಿಟ್ಟು ಹೋದವರು ಚುನಾವಣೆಯಲ್ಲಿ ಸೋತಿದ್ದಾರೆ. ನಾನು ಮತ್ತೊಮ್ಮೆ ಪಕ್ಷವನ್ನು ಸಂಘಟಿಸಿ ತೋರಿಸುತ್ತೇನೆ. ಮಮತಾ ಬ್ಯಾನರ್ಜಿ, ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಹಲವು ನಾಯಕರು ನನ್ನ ಜೊತೆಗಿದ್ದಾರೆ. ನಿಮ್ಮ ಜೊತೆ ನಾವಿದ್ದೇವೆ ಅಂತಾ ನಾಯಕರು ನನಗೆ ಹೇಳಿದ್ದಾರೆ ಎಂದರು.

ಇದನ್ನೂ ಓದಿ: Maharashtra Politics: ಜನರು ಈ ಆಟವನ್ನು ಸಹಿಸುವುದಿಲ್ಲ: ಶಿಂದೆ ಸರ್ಕಾರ ಸೇರಿದ ಅಜಿತ್ ಪವಾರ್ ವಿರುದ್ಧ ಗುಡುಗಿದ ಸಂಜಯ್ ರಾವತ್

ಎನ್​ಸಿಪಿ ಯಾರದ್ದು ಎಂಬುದನ್ನು ಜನರ ಸಾಬೀತುಪಡಿಸುತ್ತಾರೆ. ಪಕ್ಷ ವಿರೋಧಿ ಚಟುವಟಿಕೆ ನಡೆಸುವವರ ವಿರುದ್ಧ ಕ್ರಮಕೈಗೊಳ್ಳುತ್ಥೇನೆ. ಕೆಲ ದಿನಗಳಲ್ಲಿ ಎಲ್ಲ ಸತ್ಯವೂ ಹೊರ ಬರಲಿದೆ. ಮಹಾರಾಷ್ಟ್ರದ ಜನರ ಮೇಲೆ ನನಗೆ ಸಂಪೂರ್ಣ ವಿಶ್ವಾಸವಿದೆ ಎಂದು ಶರದ್ ಪವಾರ್ ಹೇಳಿದರು.

ಬಿಜೆಪಿ-ಶಿಂಧೆ ಸಮ್ಮಿಶ್ರ ಸರ್ಕಾರಕ್ಕೆ ಅಜಿತ್ ‘ಪವಾರ್’

ಎನ್​ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರ ಸೋದರಳಿನಾಗಿರುವ ಅಜಿತ್ ಪವಾರ್, ಪಕ್ಷದೊಳಗಿನ ಆಂತರಿಕ ಬೆಳವಣಿಗೆಯಿಂದಲೇ ಅಸಮಾಧಾನಗೊಂಡು ಇಂದು ಆಡಳಿತ ಪಕ್ಷ ಬಿಜೆಪಿ ಮತ್ತು ಸಿಎಂ ಏಕನಾಥ್ ಶಿಂಧೆ ಬಣದ ಜೊತೆ ಕೈ ಜೋಡಿಸಿದ್ದಾರೆ. ಅದರಂತೆ ಇಂದೇ ಡಿಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಜಿತ್ ಪವಾರ್ 9 ನಾಯಕರೊಂದಿಗೆ ಮಹಾರಾಷ್ಟ್ರ ಸರ್ಕಾರಕ್ಕೆ ಸೇರ್ಪಡೆಗೊಂಡಿದ್ದಾರೆ. ಪಕ್ಷದ ಮೂಲಗಳ ಪ್ರಕಾರ, 53 ಎನ್‌ಸಿಪಿ ಶಾಸಕರ ಪೈಕಿ 43 ಶಾಸಕರ ಬೆಂಬಲವನ್ನು ಅಜಿತ್ ಪವಾರ್ ಹೊಂದಿದ್ದಾರೆ.

ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:01 pm, Sun, 2 July 23

Follow Us
Web contact
Web contact

TV9 Kannada

Read More
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!