AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾರಾಷ್ಟ್ರ ವಿಪಕ್ಷ ನಾಯಕರಾಗಿ ಜಿತೇಂದ್ರ ಅವಾದ್ ನೇಮಕ

ಮಹಾರಾಷ್ಟ್ರ ವಿಪಕ್ಷ ನಾಯಕರಾಗಿದ್ದ ಅಜಿತ್ ಪವಾರ್ ಅವರು ಏಕನಾಥ್ ಶಿಂಧೆ ಸರ್ಕಾರದ ಜೊತೆ ಕೈಜೋಡಿಸಿದ ಹಿನ್ನೆಲೆ ವಿಪಕ್ಷ ಸ್ಥಾನಕ್ಕೆ ಜಿತೇಂದ್ರ ಅವಾದ್ ಅವರನ್ನು ನೇಮಕ ಮಾಡಲಾಗಿದೆ.

ಮಹಾರಾಷ್ಟ್ರ ವಿಪಕ್ಷ ನಾಯಕರಾಗಿ ಜಿತೇಂದ್ರ ಅವಾದ್ ನೇಮಕ
ಮಹಾರಾಷ್ಟ್ರ ವಿಪಕ್ಷ ನಾಯಕರಾಗಿ ಜಿತೇಂದ್ರ ಅವಾದ್ ನೇಮಕ ಮಾಡಿದ ಎನ್​ಸಿಪಿ ಮುಖ್ಯಸ್ಥ ಶರದ್ ಪವಾರ್
Follow us
TV9 Web
| Updated By: Rakesh Nayak Manchi

Updated on:Jul 02, 2023 | 6:15 PM

ಮುಂಬೈ: ಮಹಾರಾಷ್ಟ್ರ ವಿಪಕ್ಷ ನಾಯಕರಾಗಿದ್ದ ಅಜಿತ್ ಪವಾರ್ (Ajit Pawar) ಅವರು ಏಕನಾಥ್ ಶಿಂಧೆ ಸರ್ಕಾರದ ಜೊತೆ ಕೈಜೋಡಿಸಿ ಉಪಮುಖ್ಯಮಂತ್ರಿಯಾಗಿದ್ದು, ಇತ್ತ ಎನ್​ಸಿಪಿ (NCP) ಮುಖ್ಯಸ್ಥ ಶರದ್ ಪವಾರ್ (Sharad Pawar) ಅವರು ವಿಪಕ್ಷ ನಾಯಕನನ್ನಾಗಿ ಜಿತೇಂದ್ರ ಅವಾದ್ (Jitendra Awhad) ಅವರನ್ನು ನೇಮಕ ಮಾಡಿದ್ದಾರೆ. ಈ ಬಗ್ಗೆ ಸಭಾಪತಿ ಅವರಿಗೆ ಶರದ್ ಪವಾರ್ ಪತ್ರ ಬರೆದಿದ್ದಾರೆ.

ಪಕ್ಷದ ಬೆಳವಣಿಗೆಗಳ ಬಗ್ಗೆ ಮುಂಬೈನಲ್ಲಿ ಮಾತನಾಡಿದ ಎನ್​ಸಿಪಿ ಮುಖ್ಯಸ್ಥ ಶರದ್ ಪವಾರ್, ನಾಳೆ ಎನ್​ಸಿಪಿ ನಾಯಕರ ಸಭೆ ಕರೆದಿದ್ದೇವೆ ಎಂದರು. ಈ ಹಿಂದೆಯೂ ಪಕ್ಷದಲ್ಲಿ ವಿಶ್ವಾಸಘಾತಕ ಘಟನೆಗಳು ನಡೆದಿದೆ. ಆಗ ಪಕ್ಷ ಬಿಟ್ಟು ಹೋದವರು ಚುನಾವಣೆಯಲ್ಲಿ ಸೋತಿದ್ದಾರೆ. ನಾನು ಮತ್ತೊಮ್ಮೆ ಪಕ್ಷವನ್ನು ಸಂಘಟಿಸಿ ತೋರಿಸುತ್ತೇನೆ. ಮಮತಾ ಬ್ಯಾನರ್ಜಿ, ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಹಲವು ನಾಯಕರು ನನ್ನ ಜೊತೆಗಿದ್ದಾರೆ. ನಿಮ್ಮ ಜೊತೆ ನಾವಿದ್ದೇವೆ ಅಂತಾ ನಾಯಕರು ನನಗೆ ಹೇಳಿದ್ದಾರೆ ಎಂದರು.

ಇದನ್ನೂ ಓದಿ: Maharashtra Politics: ಜನರು ಈ ಆಟವನ್ನು ಸಹಿಸುವುದಿಲ್ಲ: ಶಿಂದೆ ಸರ್ಕಾರ ಸೇರಿದ ಅಜಿತ್ ಪವಾರ್ ವಿರುದ್ಧ ಗುಡುಗಿದ ಸಂಜಯ್ ರಾವತ್

ಎನ್​ಸಿಪಿ ಯಾರದ್ದು ಎಂಬುದನ್ನು ಜನರ ಸಾಬೀತುಪಡಿಸುತ್ತಾರೆ. ಪಕ್ಷ ವಿರೋಧಿ ಚಟುವಟಿಕೆ ನಡೆಸುವವರ ವಿರುದ್ಧ ಕ್ರಮಕೈಗೊಳ್ಳುತ್ಥೇನೆ. ಕೆಲ ದಿನಗಳಲ್ಲಿ ಎಲ್ಲ ಸತ್ಯವೂ ಹೊರ ಬರಲಿದೆ. ಮಹಾರಾಷ್ಟ್ರದ ಜನರ ಮೇಲೆ ನನಗೆ ಸಂಪೂರ್ಣ ವಿಶ್ವಾಸವಿದೆ ಎಂದು ಶರದ್ ಪವಾರ್ ಹೇಳಿದರು.

ಬಿಜೆಪಿ-ಶಿಂಧೆ ಸಮ್ಮಿಶ್ರ ಸರ್ಕಾರಕ್ಕೆ ಅಜಿತ್ ‘ಪವಾರ್’

ಎನ್​ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರ ಸೋದರಳಿನಾಗಿರುವ ಅಜಿತ್ ಪವಾರ್, ಪಕ್ಷದೊಳಗಿನ ಆಂತರಿಕ ಬೆಳವಣಿಗೆಯಿಂದಲೇ ಅಸಮಾಧಾನಗೊಂಡು ಇಂದು ಆಡಳಿತ ಪಕ್ಷ ಬಿಜೆಪಿ ಮತ್ತು ಸಿಎಂ ಏಕನಾಥ್ ಶಿಂಧೆ ಬಣದ ಜೊತೆ ಕೈ ಜೋಡಿಸಿದ್ದಾರೆ. ಅದರಂತೆ ಇಂದೇ ಡಿಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಜಿತ್ ಪವಾರ್ 9 ನಾಯಕರೊಂದಿಗೆ ಮಹಾರಾಷ್ಟ್ರ ಸರ್ಕಾರಕ್ಕೆ ಸೇರ್ಪಡೆಗೊಂಡಿದ್ದಾರೆ. ಪಕ್ಷದ ಮೂಲಗಳ ಪ್ರಕಾರ, 53 ಎನ್‌ಸಿಪಿ ಶಾಸಕರ ಪೈಕಿ 43 ಶಾಸಕರ ಬೆಂಬಲವನ್ನು ಅಜಿತ್ ಪವಾರ್ ಹೊಂದಿದ್ದಾರೆ.

ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:01 pm, Sun, 2 July 23

ದಂಪತಿಗೆ ಮದುವೆಯಾಗಿ ಕೇವಲ ಎರಡು ವರ್ಷವಾಗಿತ್ತು
ದಂಪತಿಗೆ ಮದುವೆಯಾಗಿ ಕೇವಲ ಎರಡು ವರ್ಷವಾಗಿತ್ತು
ಮೊಹಮ್ಮದ್ ಸಿರಾಜ್​ಗೆ ವಜ್ರದ ಉಂಗುರ ನೀಡಿದ ರೋಹಿತ್ ಶರ್ಮಾ
ಮೊಹಮ್ಮದ್ ಸಿರಾಜ್​ಗೆ ವಜ್ರದ ಉಂಗುರ ನೀಡಿದ ರೋಹಿತ್ ಶರ್ಮಾ
VIDEO: ಔಟ್ ಮಾಡು... ಔಟ್ ಮಾಡು... ಪಂದ್ಯದ ನಡುವೆ ಕಾವ್ಯ ಮಾರನ್ ರಿಯಾಕ್ಷನ್
VIDEO: ಔಟ್ ಮಾಡು... ಔಟ್ ಮಾಡು... ಪಂದ್ಯದ ನಡುವೆ ಕಾವ್ಯ ಮಾರನ್ ರಿಯಾಕ್ಷನ್
ದಿಂಬಂ ಘಾಟ್​ನಲ್ಲಿ ರಾಶಿ ರಾಶಿ ಟೊಮೆಟೋ ತಿಂದು ತೇಗಿದ ಕಾಡಾನೆ: ವಿಡಿಯೋ ನೋಡಿ
ದಿಂಬಂ ಘಾಟ್​ನಲ್ಲಿ ರಾಶಿ ರಾಶಿ ಟೊಮೆಟೋ ತಿಂದು ತೇಗಿದ ಕಾಡಾನೆ: ವಿಡಿಯೋ ನೋಡಿ
Daily Devotional: ಮನೆ ಹತ್ತಿರ ಅಶ್ವಥ್ಥ ವೃಕ್ಷ ಬೆಳೆದರೆ ಏನು ಮಾಡಬೇಕು?
Daily Devotional: ಮನೆ ಹತ್ತಿರ ಅಶ್ವಥ್ಥ ವೃಕ್ಷ ಬೆಳೆದರೆ ಏನು ಮಾಡಬೇಕು?
horoscope: ಈ ರಾಶಿಯವರು ಅಪರಿಚಿತರಿಂದ ಸ್ವಲ್ಪ ಅಂತರ ಕಾಯ್ದುಕೊಳ್ಳುವರು
horoscope: ಈ ರಾಶಿಯವರು ಅಪರಿಚಿತರಿಂದ ಸ್ವಲ್ಪ ಅಂತರ ಕಾಯ್ದುಕೊಳ್ಳುವರು
3 ವಿಕೆಟ್, 1 ಕ್ಯಾಚ್; ಇತಿಹಾಸ ಬರೆದ ಪ್ಯಾಟ್ ಕಮ್ಮಿನ್ಸ್
3 ವಿಕೆಟ್, 1 ಕ್ಯಾಚ್; ಇತಿಹಾಸ ಬರೆದ ಪ್ಯಾಟ್ ಕಮ್ಮಿನ್ಸ್
ಸೋನು ನಿಗಮ್ ಕನ್ನಡಿಗರನ್ನು ಭಯೋತ್ಪಾದಕರಿಗೆ ಹೋಲಿಸಿದ್ದು ತಪ್ಪು: ಶಮಿತಾ
ಸೋನು ನಿಗಮ್ ಕನ್ನಡಿಗರನ್ನು ಭಯೋತ್ಪಾದಕರಿಗೆ ಹೋಲಿಸಿದ್ದು ತಪ್ಪು: ಶಮಿತಾ
ಅನುಮೋದನೆ ಸಿಕ್ಕರೂ176 ಕೋಚ್ ಗಳ ನೇಮಕ ಯಾಕಾಗಿಲ್ಲ ಅಂತ ಪ್ರಶ್ನಿಸಿದ ಸಿಎಂ
ಅನುಮೋದನೆ ಸಿಕ್ಕರೂ176 ಕೋಚ್ ಗಳ ನೇಮಕ ಯಾಕಾಗಿಲ್ಲ ಅಂತ ಪ್ರಶ್ನಿಸಿದ ಸಿಎಂ
ದಿನೇಶ್ ಗುಂಡೂರಾವ್ ಉಸ್ತುವಾರಿ ಸಚಿವನಾಗಿ ಸಿಕ್ಕಿದ್ದು ನಮ್ಮ ದುರ್ದೈವ: ಪೂಂಜ
ದಿನೇಶ್ ಗುಂಡೂರಾವ್ ಉಸ್ತುವಾರಿ ಸಚಿವನಾಗಿ ಸಿಕ್ಕಿದ್ದು ನಮ್ಮ ದುರ್ದೈವ: ಪೂಂಜ