AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಮ್ಮು-ಕಾಶ್ಮೀರ ಡಿಡಿಸಿ ಕೊನೇ ಹಂತದ ಮತದಾನ ಮುಕ್ತಾಯ; ಡಿ.22ಕ್ಕೆ ಫಲಿತಾಂಶ

ಡಿಡಿಸಿಗೆ ನಡೆದ ಎಂಟೂ ಹಂತಗಳ ಚುನಾವಣೆಯಲ್ಲಿ ಒಟ್ಟಾರೆ ಶೇ 51.76 ಮತದಾನವಾಗಿದೆ. ಜಮ್ಮುವಿನ ರಿಯಾಸಿ ಜಿಲ್ಲೆಯಲ್ಲಿ ಗರಿಷ್ಠ ಶೇ 74.62 ಮತ್ತು ಕಾಶ್ಮೀರ ವಿಭಾಗ ಪುಲ್ವಾಮಾ ಜಿಲ್ಲೆಯಲ್ಲಿ ಕನಿಷ್ಠ ಶೇ 6.70 ಮತದಾನ ದಾಖಲಾಗಿದೆ.

ಜಮ್ಮು-ಕಾಶ್ಮೀರ ಡಿಡಿಸಿ ಕೊನೇ ಹಂತದ ಮತದಾನ ಮುಕ್ತಾಯ; ಡಿ.22ಕ್ಕೆ ಫಲಿತಾಂಶ
ಜಮ್ಮು ಮತ್ತು ಕಾಶ್ಮೀರ ಮತದಾನ
shruti hegde
| Edited By: |

Updated on: Dec 20, 2020 | 4:26 PM

Share

ಶ್ರೀನಗರ: ಜಮ್ಮು ಕಾಶ್ಮೀರ ಜಿಲ್ಲಾ ಅಭಿವೃದ್ಧಿ ಮಂಡಳಿ (DDC) ಚುನಾವಣೆಯ 8ನೇ ಹಂತದ (ಕೊನೇ ಹಂತ) ಮತದಾನ ಇಂದು 28 ಕ್ಷೇತ್ರಗಳಲ್ಲಿ ಯಶಸ್ವಿಯಾಗಿ ನಡೆಯಿತು. ಒಟ್ಟು ಶೇ.50.98ರಷ್ಟು ಮತದಾನವಾಗಿದೆ. ಯಾವುದೇ ದೊಡ್ಡ ಅಹಿತಕರ ಘಟನೆ ನಡೆದಿಲ್ಲ ಎಂದು ಸ್ಥಳೀಯ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ಒಟ್ಟು 280 ಸ್ಥಾನಗಳಿಗೆ ಎಂಟು ಹಂತದಲ್ಲಿ ಮತದಾನ ನಡೆದಿದೆ. ಇಂದಿನ ಕೊನೇ ಹಂತದಲ್ಲಿ ಜಮ್ಮುವಿನಲ್ಲಿ ಶೇ.72.71 ಮತ್ತು ಕಾಶ್ಮೀರದಲ್ಲಿ ಶೇ. 29.91ರಷ್ಟು ಮತದಾನ ದಾಖಲಾಗಿದೆ. ಡಿಸೆಂಬರ್ 22ರಂದು ಫಲಿತಾಂಶ ಹೊರಬೀಳಲಿದೆ ಎಂದು  ರಾಜ್ಯ ಚುನಾವಣಾ ಆಯುಕ್ತ ಕೆ.ಕೆ ಶರ್ಮಾ ಹೇಳಿದ್ದಾರೆ.

ಎಲ್ಲ ಎಂಟೂ ಹಂತಗಳಲ್ಲಿ ಒಟ್ಟಾರೆ ಶೇ. 51.76 ಮತದಾನವಾಗಿದ್ದು, ಜಮ್ಮುವಿನ ರಿಯಾಸಿ ಜಿಲ್ಲೆಯಲ್ಲಿ ಗರಿಷ್ಠ ಶೇ 74.62 ಮತ್ತು ಕಾಶ್ಮೀರ ವಿಭಾಗ ಪುಲ್ವಾಮಾ ಜಿಲ್ಲೆಯಲ್ಲಿ ಕನಿಷ್ಠ ಶೇ 6.70 ಮತದಾನ ದಾಖಲಾಗಿದೆ. ರಾಜಧಾನಿ ಶ್ರೀನಗರದಲ್ಲಿ ಶೇ 33.76ರಷ್ಟು ಮತದಾನವಾಗಿದೆ ಎಂದು ಅಧಿಕಾರಿಗಳು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

ಡಿಡಿಸಿಯ ಸುದೀರ್ಘ ಚುನಾವಣಾ ಅವಧಿಯಲ್ಲಿ ಒಂದೆರಡು ಕಡೆ ಭದ್ರತಾಪಡೆಗಳ ಮೇಲೆ ಗ್ರೆನೇಡ್ ದಾಳಿ ನಡೆದಿದೆ. ದಕ್ಷಿಣ ಕಾಶ್ಮೀರದ ಅಪ್ನಿ ಪಕ್ಷದ ಅಭ್ಯರ್ಥಿ ಮೇಲೆ ಹಲ್ಲೆ ನಡೆದಿತ್ತು ಹಾಗೂ ಶ್ರೀನಗರದಲ್ಲಿ ಮಾಜಿ ಪಿಡಿಪಿ ಮುಖಂಡನ ವೈಯಕ್ತಿಕ ಭದ್ರತಾ ಅಧಿಕಾರಿಯೋರ್ವರ ಹತ್ಯೆಯೂ ನಡೆದಿದೆ. ಇಷ್ಟನ್ನು ಹೊರತು ಪಡಿಸಿದರೆ ಮತ್ಯಾವುದೇ ಅಹಿತಕರ ಘಟನೆ ನಡೆದಿಲ್ಲ ಎಂದು ಶರ್ಮಾ ತಿಳಿಸಿದ್ದಾರೆ.

370ನೇ ವಿಧಿ ರದ್ದು ನಂತರ ಜಮ್ಮು ಕಾಶ್ಮೀರದಲ್ಲಿ ಮೊದಲ ಬಾರಿಗೆ ಚುನಾವಣೆ ಇಂದಿನಿಂದ ಆರಂಭ

Follow Us
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್