AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಮ್ಮು-ಕಾಶ್ಮೀರ ಡಿಡಿಸಿ ಕೊನೇ ಹಂತದ ಮತದಾನ ಮುಕ್ತಾಯ; ಡಿ.22ಕ್ಕೆ ಫಲಿತಾಂಶ

ಡಿಡಿಸಿಗೆ ನಡೆದ ಎಂಟೂ ಹಂತಗಳ ಚುನಾವಣೆಯಲ್ಲಿ ಒಟ್ಟಾರೆ ಶೇ 51.76 ಮತದಾನವಾಗಿದೆ. ಜಮ್ಮುವಿನ ರಿಯಾಸಿ ಜಿಲ್ಲೆಯಲ್ಲಿ ಗರಿಷ್ಠ ಶೇ 74.62 ಮತ್ತು ಕಾಶ್ಮೀರ ವಿಭಾಗ ಪುಲ್ವಾಮಾ ಜಿಲ್ಲೆಯಲ್ಲಿ ಕನಿಷ್ಠ ಶೇ 6.70 ಮತದಾನ ದಾಖಲಾಗಿದೆ.

ಜಮ್ಮು-ಕಾಶ್ಮೀರ ಡಿಡಿಸಿ ಕೊನೇ ಹಂತದ ಮತದಾನ ಮುಕ್ತಾಯ; ಡಿ.22ಕ್ಕೆ ಫಲಿತಾಂಶ
ಜಮ್ಮು ಮತ್ತು ಕಾಶ್ಮೀರ ಮತದಾನ
shruti hegde
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on: Dec 20, 2020 | 4:26 PM

Share

ಶ್ರೀನಗರ: ಜಮ್ಮು ಕಾಶ್ಮೀರ ಜಿಲ್ಲಾ ಅಭಿವೃದ್ಧಿ ಮಂಡಳಿ (DDC) ಚುನಾವಣೆಯ 8ನೇ ಹಂತದ (ಕೊನೇ ಹಂತ) ಮತದಾನ ಇಂದು 28 ಕ್ಷೇತ್ರಗಳಲ್ಲಿ ಯಶಸ್ವಿಯಾಗಿ ನಡೆಯಿತು. ಒಟ್ಟು ಶೇ.50.98ರಷ್ಟು ಮತದಾನವಾಗಿದೆ. ಯಾವುದೇ ದೊಡ್ಡ ಅಹಿತಕರ ಘಟನೆ ನಡೆದಿಲ್ಲ ಎಂದು ಸ್ಥಳೀಯ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ಒಟ್ಟು 280 ಸ್ಥಾನಗಳಿಗೆ ಎಂಟು ಹಂತದಲ್ಲಿ ಮತದಾನ ನಡೆದಿದೆ. ಇಂದಿನ ಕೊನೇ ಹಂತದಲ್ಲಿ ಜಮ್ಮುವಿನಲ್ಲಿ ಶೇ.72.71 ಮತ್ತು ಕಾಶ್ಮೀರದಲ್ಲಿ ಶೇ. 29.91ರಷ್ಟು ಮತದಾನ ದಾಖಲಾಗಿದೆ. ಡಿಸೆಂಬರ್ 22ರಂದು ಫಲಿತಾಂಶ ಹೊರಬೀಳಲಿದೆ ಎಂದು  ರಾಜ್ಯ ಚುನಾವಣಾ ಆಯುಕ್ತ ಕೆ.ಕೆ ಶರ್ಮಾ ಹೇಳಿದ್ದಾರೆ.

ಎಲ್ಲ ಎಂಟೂ ಹಂತಗಳಲ್ಲಿ ಒಟ್ಟಾರೆ ಶೇ. 51.76 ಮತದಾನವಾಗಿದ್ದು, ಜಮ್ಮುವಿನ ರಿಯಾಸಿ ಜಿಲ್ಲೆಯಲ್ಲಿ ಗರಿಷ್ಠ ಶೇ 74.62 ಮತ್ತು ಕಾಶ್ಮೀರ ವಿಭಾಗ ಪುಲ್ವಾಮಾ ಜಿಲ್ಲೆಯಲ್ಲಿ ಕನಿಷ್ಠ ಶೇ 6.70 ಮತದಾನ ದಾಖಲಾಗಿದೆ. ರಾಜಧಾನಿ ಶ್ರೀನಗರದಲ್ಲಿ ಶೇ 33.76ರಷ್ಟು ಮತದಾನವಾಗಿದೆ ಎಂದು ಅಧಿಕಾರಿಗಳು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

ಡಿಡಿಸಿಯ ಸುದೀರ್ಘ ಚುನಾವಣಾ ಅವಧಿಯಲ್ಲಿ ಒಂದೆರಡು ಕಡೆ ಭದ್ರತಾಪಡೆಗಳ ಮೇಲೆ ಗ್ರೆನೇಡ್ ದಾಳಿ ನಡೆದಿದೆ. ದಕ್ಷಿಣ ಕಾಶ್ಮೀರದ ಅಪ್ನಿ ಪಕ್ಷದ ಅಭ್ಯರ್ಥಿ ಮೇಲೆ ಹಲ್ಲೆ ನಡೆದಿತ್ತು ಹಾಗೂ ಶ್ರೀನಗರದಲ್ಲಿ ಮಾಜಿ ಪಿಡಿಪಿ ಮುಖಂಡನ ವೈಯಕ್ತಿಕ ಭದ್ರತಾ ಅಧಿಕಾರಿಯೋರ್ವರ ಹತ್ಯೆಯೂ ನಡೆದಿದೆ. ಇಷ್ಟನ್ನು ಹೊರತು ಪಡಿಸಿದರೆ ಮತ್ಯಾವುದೇ ಅಹಿತಕರ ಘಟನೆ ನಡೆದಿಲ್ಲ ಎಂದು ಶರ್ಮಾ ತಿಳಿಸಿದ್ದಾರೆ.

370ನೇ ವಿಧಿ ರದ್ದು ನಂತರ ಜಮ್ಮು ಕಾಶ್ಮೀರದಲ್ಲಿ ಮೊದಲ ಬಾರಿಗೆ ಚುನಾವಣೆ ಇಂದಿನಿಂದ ಆರಂಭ

ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ