AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಮ್ಮು-ಕಾಶ್ಮೀರ ಡಿಡಿಸಿ ಕೊನೇ ಹಂತದ ಮತದಾನ ಮುಕ್ತಾಯ; ಡಿ.22ಕ್ಕೆ ಫಲಿತಾಂಶ

ಡಿಡಿಸಿಗೆ ನಡೆದ ಎಂಟೂ ಹಂತಗಳ ಚುನಾವಣೆಯಲ್ಲಿ ಒಟ್ಟಾರೆ ಶೇ 51.76 ಮತದಾನವಾಗಿದೆ. ಜಮ್ಮುವಿನ ರಿಯಾಸಿ ಜಿಲ್ಲೆಯಲ್ಲಿ ಗರಿಷ್ಠ ಶೇ 74.62 ಮತ್ತು ಕಾಶ್ಮೀರ ವಿಭಾಗ ಪುಲ್ವಾಮಾ ಜಿಲ್ಲೆಯಲ್ಲಿ ಕನಿಷ್ಠ ಶೇ 6.70 ಮತದಾನ ದಾಖಲಾಗಿದೆ.

ಜಮ್ಮು-ಕಾಶ್ಮೀರ ಡಿಡಿಸಿ ಕೊನೇ ಹಂತದ ಮತದಾನ ಮುಕ್ತಾಯ; ಡಿ.22ಕ್ಕೆ ಫಲಿತಾಂಶ
ಜಮ್ಮು ಮತ್ತು ಕಾಶ್ಮೀರ ಮತದಾನ
shruti hegde
| Edited By: |

Updated on: Dec 20, 2020 | 4:26 PM

Share

ಶ್ರೀನಗರ: ಜಮ್ಮು ಕಾಶ್ಮೀರ ಜಿಲ್ಲಾ ಅಭಿವೃದ್ಧಿ ಮಂಡಳಿ (DDC) ಚುನಾವಣೆಯ 8ನೇ ಹಂತದ (ಕೊನೇ ಹಂತ) ಮತದಾನ ಇಂದು 28 ಕ್ಷೇತ್ರಗಳಲ್ಲಿ ಯಶಸ್ವಿಯಾಗಿ ನಡೆಯಿತು. ಒಟ್ಟು ಶೇ.50.98ರಷ್ಟು ಮತದಾನವಾಗಿದೆ. ಯಾವುದೇ ದೊಡ್ಡ ಅಹಿತಕರ ಘಟನೆ ನಡೆದಿಲ್ಲ ಎಂದು ಸ್ಥಳೀಯ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ಒಟ್ಟು 280 ಸ್ಥಾನಗಳಿಗೆ ಎಂಟು ಹಂತದಲ್ಲಿ ಮತದಾನ ನಡೆದಿದೆ. ಇಂದಿನ ಕೊನೇ ಹಂತದಲ್ಲಿ ಜಮ್ಮುವಿನಲ್ಲಿ ಶೇ.72.71 ಮತ್ತು ಕಾಶ್ಮೀರದಲ್ಲಿ ಶೇ. 29.91ರಷ್ಟು ಮತದಾನ ದಾಖಲಾಗಿದೆ. ಡಿಸೆಂಬರ್ 22ರಂದು ಫಲಿತಾಂಶ ಹೊರಬೀಳಲಿದೆ ಎಂದು  ರಾಜ್ಯ ಚುನಾವಣಾ ಆಯುಕ್ತ ಕೆ.ಕೆ ಶರ್ಮಾ ಹೇಳಿದ್ದಾರೆ.

ಎಲ್ಲ ಎಂಟೂ ಹಂತಗಳಲ್ಲಿ ಒಟ್ಟಾರೆ ಶೇ. 51.76 ಮತದಾನವಾಗಿದ್ದು, ಜಮ್ಮುವಿನ ರಿಯಾಸಿ ಜಿಲ್ಲೆಯಲ್ಲಿ ಗರಿಷ್ಠ ಶೇ 74.62 ಮತ್ತು ಕಾಶ್ಮೀರ ವಿಭಾಗ ಪುಲ್ವಾಮಾ ಜಿಲ್ಲೆಯಲ್ಲಿ ಕನಿಷ್ಠ ಶೇ 6.70 ಮತದಾನ ದಾಖಲಾಗಿದೆ. ರಾಜಧಾನಿ ಶ್ರೀನಗರದಲ್ಲಿ ಶೇ 33.76ರಷ್ಟು ಮತದಾನವಾಗಿದೆ ಎಂದು ಅಧಿಕಾರಿಗಳು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

ಡಿಡಿಸಿಯ ಸುದೀರ್ಘ ಚುನಾವಣಾ ಅವಧಿಯಲ್ಲಿ ಒಂದೆರಡು ಕಡೆ ಭದ್ರತಾಪಡೆಗಳ ಮೇಲೆ ಗ್ರೆನೇಡ್ ದಾಳಿ ನಡೆದಿದೆ. ದಕ್ಷಿಣ ಕಾಶ್ಮೀರದ ಅಪ್ನಿ ಪಕ್ಷದ ಅಭ್ಯರ್ಥಿ ಮೇಲೆ ಹಲ್ಲೆ ನಡೆದಿತ್ತು ಹಾಗೂ ಶ್ರೀನಗರದಲ್ಲಿ ಮಾಜಿ ಪಿಡಿಪಿ ಮುಖಂಡನ ವೈಯಕ್ತಿಕ ಭದ್ರತಾ ಅಧಿಕಾರಿಯೋರ್ವರ ಹತ್ಯೆಯೂ ನಡೆದಿದೆ. ಇಷ್ಟನ್ನು ಹೊರತು ಪಡಿಸಿದರೆ ಮತ್ಯಾವುದೇ ಅಹಿತಕರ ಘಟನೆ ನಡೆದಿಲ್ಲ ಎಂದು ಶರ್ಮಾ ತಿಳಿಸಿದ್ದಾರೆ.

370ನೇ ವಿಧಿ ರದ್ದು ನಂತರ ಜಮ್ಮು ಕಾಶ್ಮೀರದಲ್ಲಿ ಮೊದಲ ಬಾರಿಗೆ ಚುನಾವಣೆ ಇಂದಿನಿಂದ ಆರಂಭ

Follow Us
shruti hegde
shruti hegde
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!