AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಲ್ಕು ವರ್ಷಗಳ ಬಳಿಕ ಜೆಎನ್​ಯುನಲ್ಲಿ ವಿದ್ಯಾರ್ಥಿ ಒಕ್ಕೂಟದ ಚುನಾವಣೆ, ಮಾರ್ಚ್​ 24ಕ್ಕೆ ಫಲಿತಾಂಶ

ಜವಾಹರಲಾಲ್​ ನೆಹರೂ ವಿಶ್ವವಿದ್ಯಾಲಯದಲ್ಲಿ ನಾಲ್ಕು ವರ್ಷಗಳ ಬಳಿಕ ಇದೀಗ ವಿದ್ಯಾರ್ಥಿ ಒಕ್ಕೂಟದ ಚುನಾವಣೆ ನಡೆಯುತ್ತಿದೆ. ಇದು ಮಾರ್ಚ್​ 22ರಂದು ನಡೆಯಲಿದ್ದು ಮಾರ್ಚ್​ 24ಕ್ಕೆ ಫಲಿತಾಂಶ ಹೊರಬೀಳಲಿದೆ. 2019ರಲ್ಲಿ ಕೊನೆಯ ಬಾರಿಗೆ ಚುನಾವಣೆ ನಡೆಸಲಾಗಿತ್ತು.

ನಾಲ್ಕು ವರ್ಷಗಳ ಬಳಿಕ ಜೆಎನ್​ಯುನಲ್ಲಿ ವಿದ್ಯಾರ್ಥಿ ಒಕ್ಕೂಟದ ಚುನಾವಣೆ, ಮಾರ್ಚ್​ 24ಕ್ಕೆ ಫಲಿತಾಂಶ
ಜೆಎನ್​ಯು
ನಯನಾ ರಾಜೀವ್
|

Updated on:Mar 12, 2024 | 8:16 AM

Share

ನಾಲ್ಕು ವರ್ಷಗಳ ಬಳಿಕ ಜವಾಹರಲಾಲ್​ ನೆಹರೂ ವಿಶ್ವವಿದ್ಯಾಲಯ(ಜೆಎನ್​ಯು)ವು ಚುನಾವಣೆಯನ್ನು ನಡೆಸಲು ಮುಂದಾಗಿದೆ. ಮಾರ್ಚ್​ 22ರಂದು ಚುನಾವಣೆ ನಡೆಯಲಿದ್ದು, 24ಕ್ಕೆ ಫಲಿತಾಂಶ ಹೊರಬರಲಿದೆ. ಜವಾಹರಲಾಲ್​ ನೆಹರೂ ವಿಶ್ವವಿದ್ಯಾಲಯದ ವಿದ್ಯಾರ್ಥಿ ಒಕ್ಕೂಟ ಚುನಾವಣೆಯು ಕೊನೆಯದಾಗಿ 2019ರಲ್ಲಿ ನಡೆದಿತ್ತು. ಜೆಎನ್​ಯು ಚುನಾವಣಾ ಸಮಿತಿಯು ಮಾರ್ಚ್​ 11ರಂದು ಮತದಾರರ ಪಟ್ಟಿಯನ್ನು ತಯಾರಿಸಿದೆ. ಮಾರ್ಚ್​ 14ರಿಂದ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ ಶುರುವಾಗಲಿದೆ.

ಕೊರೊನಾದಿಂದಾಗಿ ನಿಂತಿತ್ತು ಚುನಾವಣೆ ಕೊರೊನಾ ಮಹಾಮಾರಿಯಿಂದಾಗಿ ಚುನಾವಣೆಯನ್ನು ತಡೆಹಿಡಿಯಲಾಗಿತ್ತು. ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳು ಚುನಾವಣಾ ಕೆಲಸದಲ್ಲಿ ತೊಡಗಿದ್ದಾರೆ. ಅಧಿಸೂಚನೆ ಪ್ರಕಾರ, ಮಾರ್ಚ್​ 12ರಂದು ಮತದಾರರ ಪಟ್ಟಿಯಲ್ಲಿ ತಿದ್ದುಪಡಿಗಳನ್ನು ಮಾಡಬಹುದು. ಇದಾದ ನಂತರ ಮರುದಿನ ಮಾರ್ಚ್​ 15ರಂದು ನಾಮಪತ್ರಗಳನ್ನು ಭರ್ತಿ ಮಾಡಲಾಗುತ್ತದೆ. ಯಾವುದೇ ಹೆಸರನ್ನು ತೆಗೆದುಹಾಕಲು ಬಯಸಿದರೆ ಅವರು ಮಾರ್ಚ್​ 16ರಂದು ನಾಮಪತ್ರ ಹಿಂಪಡೆಯಬಹುದು.

ಬೆಳಗ್ಗೆ 9ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಮಧ್ಯಾಹ್ನ 2.30ರಿಂದ ಸಂಜೆ 5.30ರವರೆಗೆ ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ. ಬ್ಯಾಲೆಟ್ ಪೇಪರ್ ಮೂಲಕ ಮಾತ್ರ ಚುನಾವಣೆ ನಡೆಸಲಾಗುವುದು. 42 ಸದಸ್ಯರ ಚುನಾವಣಾ ಸಮಿತಿಯನ್ನು ರಚಿಸಲಾಗಿದೆ. ಇದರೊಂದಿಗೆ 29 ವೀಕ್ಷಕರನ್ನೂ ನೇಮಿಸಲಾಗಿದೆ. ಪ್ರಾಧ್ಯಾಪಕರನ್ನು ಮೇಲ್ವಿಚಾರಕರನ್ನಾಗಿ ಮಾಡಲಾಗಿದೆ.

ಮತ್ತಷ್ಟು ಓದಿ: ಜೆಎನ್​ಯುನಲ್ಲಿ ಪೆರಿಯಾರ್, ಕಾರ್ಲ್​ ಮಾರ್ಕ್ಸ್​ ಭಾವಚಿತ್ರಗಳ ಧ್ವಂಸ: ವಿದ್ಯಾರ್ಥಿಗಳ ಈ ನಡೆಗೆ ಸ್ಟಾಲಿನ್ ಪ್ರತಿಕ್ರಿಯೆ

ಕೋವಿಡ್ ಸಾಂಕ್ರಾಮಿಕ ರೋಗದಿಂದಾಗಿ ಚುನಾವಣೆಗಳು ಸ್ಥಗಿತಗೊಂಡಿವೆ. ಎಲ್ಲಾ ವಿದ್ಯಾರ್ಥಿ ಸಂಘಟನೆಗಳು ಚುನಾವಣೆಗಾಗಿ ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದ್ದವು. ಜೆಎನ್‌ಯು ಆಡಳಿತವು ಫೆಬ್ರವರಿಯಲ್ಲಿ ಚುನಾವಣೆಗೆ ಒಪ್ಪಿಗೆ ನೀಡಲಾಗಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 8:14 am, Tue, 12 March 24

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ