AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೆಎನ್​ಯು ಗುಂಪು ಘರ್ಷಣೆ: ಮಾಂಸಾಹಾರ ಪೂರೈಕೆ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಹೊಡೆದಾಟ

ರಾಮನವಮಿಯಂದು ಹಾಸ್ಟೆಲ್ ಕ್ಯಾಂಟೀನ್​ನಲ್ಲಿ ಮಾಂಸಾಹಾರ ಸಿದ್ಧಪಡಿಸಿ ಪೂರೈಸಿದ್ದಕ್ಕೆ ವಿದ್ಯಾರ್ಥಿಗಳ ಗುಂಪೊಂದು ವಿರೋಧ ವ್ಯಕ್ತಪಡಿಸಿತು.

ಜೆಎನ್​ಯು ಗುಂಪು ಘರ್ಷಣೆ: ಮಾಂಸಾಹಾರ ಪೂರೈಕೆ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಹೊಡೆದಾಟ
ದೆಹಲಿಯ ಜವಾಹರ್​ಲಾಲ್ ನೆಹರು ವಿಶ್ವವಿದ್ಯಾಲಯದಲ್ಲಿ ಘರ್ಷಣೆ
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Apr 11, 2022 | 6:52 AM

ದೆಹಲಿ: ಜವಾಹರ್​ಲಾಲ್ ನೆಹರು ವಿಶ್ವವಿದ್ಯಾಲಯ (Jawaharlal Nehru University – JNU) ಕ್ಯಾಂಪಸ್​ನಲ್ಲಿ ಭಾನುವಾರ ವಿದ್ಯಾರ್ಥಿಗಳ ಎರಡು ಗುಂಪಿನ ನಡುವೆ ಘರ್ಷಣೆ ನಡೆದಿದೆ. ಘಟನೆಯಲ್ಲಿ ಸುಮಾರು 60 ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಎಡಪಂಥೀಯ ವಿದ್ಯಾರ್ಥಿ ಸಂಘಟನೆಯು ತಮ್ಮ ಬಣದ 50 ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ ಎಂದು ಹೇಳಿದ್ದರೆ, ಎಬಿವಿಪಿ ತನ್ನ 12 ಕಾರ್ಯಕರ್ತರಿಗೆ ಗಾಯಗಳಾಗಿವೆ ಎಂದಿದೆ. ‘ಗಾಯಗೊಂಡಿದ್ದ ಆರು ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ’ ಎಂದು ದೆಹಲಿ ಪೊಲೀಸರು ಹೇಳಿದ್ದಾರೆ. ರಾಮನವಮಿಯಂದು ಹಾಸ್ಟೆಲ್ ಕ್ಯಾಂಟೀನ್​ನಲ್ಲಿ ಮಾಂಸಾಹಾರ ಸಿದ್ಧಪಡಿಸಿ ಪೂರೈಸಿದ್ದಕ್ಕೆ ವಿದ್ಯಾರ್ಥಿಗಳ ಗುಂಪೊಂದು ವಿರೋಧ ವ್ಯಕ್ತಪಡಿಸಿತು. ವಿವಿ ಆವರಣದಲ್ಲಿರುವ ಕಾವೇರಿ ಹಾಸ್ಟೆಲ್​ನಲ್ಲಿ ಮಧ್ಯಾಹ್ನ 3.30ಕ್ಕೆ ಘಟನೆ ನಡೆದಿದೆ. ಘಟನೆಗೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಕಾರಣ ಎಂದು ಜವಾಹರ್​ಲಾಲ್ ನೆಹರು ವಿಶ್ವವಿದ್ಯಾಲಯ ವಿದ್ಯಾರ್ಥಿ ಸಂಘಟನೆ (Jawaharlal Nehru University Students’ Union – JNUSU) ಹೇಳಿದೆ. ಘಟನೆಯಲ್ಲಿ ಮೆಸ್​ ಕಾರ್ಯದರ್ಶಿಯ ಮೇಲೆ ಹಲ್ಲೆ ನಡೆದಿದ್ದು, ಹಾಸ್ಟೆಲ್​ ಒಳಗೆ ಮಾಂಸಾಹಾರ ಪೂರೈಕೆಯನ್ನು ತಡೆಯಲಾಗಿದೆ.

ಜೆಎನ್​ಯುಎಸ್​ಯು ಹೇಳಿಕೆಯನ್ನು ಎಬಿವಿಪಿ ಒಪ್ಪಿಲ್ಲ. ನಮ್ಮ ಕಾರ್ಯಕರ್ತರು ಹಾಸ್ಟೆಲ್​ನಲ್ಲಿ ರಾಮನವಮಿ ಪೂಜೆ ಮಾಡಲು ಯತ್ನಿಸಿದರು. ಇದಕ್ಕೆ ಎರಡಪಂಥೀಯ ಸಂಘಟನೆಗಳು ವಿರೋಧ ವ್ಯಕ್ತಪಡಿಸಿದಾಗ ಗೊಂದಲ ಉಂಟಾಯಿತು ಎಂದು ಹೇಳಿದರು. ಎರಡೂ ಗುಂಪುಗಳ ನಡುವೆ ಕಲ್ಲುತೂರಾಟ ನಡೆದಿದ್ದು, ಹಲವು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ವಿಷಯ ತಿಳಿದ ತಕ್ಷಣ ಸ್ಥಳಕ್ಕೆ ಧಾವಿಸಿದ ಪೊಲೀಸರು ಪರಿಸ್ಥಿತಿ ನಿಯಂತ್ರಿಸಿದರು. ‘ಪ್ರಸ್ತುತ ಕ್ಯಾಂಪಸ್​ನಲ್ಲಿ ಯಾವುದೇ ಘರ್ಷಣೆ ನಡೆಯುತ್ತಿಲ್ಲ. ಪ್ರತಿಭಟನೆ ಮುಕ್ತಾಯವಾಗಿದೆ. ವಿಶ್ವವಿದ್ಯಾಲಯದ ವಿನಂತಿಯ ಮೇರೆಗೆ ನಮ್ಮ ತಂಡದೊಂದಿಗೆ ಇಲ್ಲಿಗೆ ಬಂದಿದ್ದೇವೆ. ಶಾಂತಿ ಕಾಪಾಡಲು ಯತ್ನಿಸುತ್ತಿದ್ದೇವೆ’ ಎಂದು ದೆಹಲಿಯ ಡೆಪ್ಯುಟಿ ಕಮಿಷನಲ್ ಆಫ್ ಪೊಲೀಸ್ ಮನೋಜ್ ಹೇಳಿದರು. ಕ್ಯಾಂಪಸ್​ನಲ್ಲಿ ಎಬಿವಿಪಿ ತೋಳ್ಬಲ ಪ್ರದರ್ಶಿಸುತ್ತಾ ಗೂಂಡಾಗಿರಿ ನಡೆಸುತ್ತಿದೆ ಎಂದು ಜೆಎನ್​ಯುಎಸ್​ಯು ಆರೋಪ ಮಾಡಿದೆ.

‘ಎಬಿವಿಪಿ ಕಾರ್ಯಕರ್ತರು ಮೆಸ್​ನ ಮೆನು ಬದಲಿಸುವಂತೆ ಒಂದೇ ಸಮನೆ ಒತ್ತಡ ಹೇರುತ್ತಿದ್ದಾರೆ. ಎಲ್ಲ ವಿದ್ಯಾರ್ಥಿಗಳಿಗೆ ಮಾಂಸಾಹಾರ ಸರಬರಾಜು ಮಾಡಬಾರದು ಎನ್ನುವುದು ಅವರ ವಾದವಾಗಿದೆ. ಜೆಎನ್​ಯು ಆವರಣವು ಎಲ್ಲ ವಿದ್ಯಾರ್ಥಿಗಳಿಗೆ ಸಂಬಂಧಿಸಿದ್ದು. ಇದನ್ನು ಯಾವುದೋ ಒಂದು ನಿರ್ದಿಷ್ಟ ವರ್ಗಕ್ಕೆ ತಕ್ಕಂತೆ ಬದಲಿಸಲು ಆಗುವುದಿಲ್ಲ’ ಎಂದು ಜೆಎನ್​ಯುಎಸ್​ಯು ಹೇಳಿದೆ. ಜೆಎನ್​ಯುಎಸ್​ಯು ಆರೋಪವನ್ನು ಎಬಿವಿಪಿ ತಳ್ಳಿಹಾಕಿದೆ. ‘ಕೆಲ ಸಾಮಾನ್ಯ ವಿದ್ಯಾರ್ಥಿಗಳು ರಾಮನವಮಿ ಪ್ರಯುಕ್ತ ಪೂಜೆ ಮತ್ತು ಹವನವನ್ನು ಕಾವೇರಿ ಹಾಸ್ಟೆಲ್​ನಲ್ಲಿ ಆಯೋಜಿಸಿದ್ದರು. ಪೂಜೆಗೆ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಬಂದಿದ್ದರು. ಇದಕ್ಕೆ ಕೆಲ ಎಡಪಂಥೀಯರು ಅಡ್ಡಿಪಡಿಸಿದರು. ಆಹಾರದ ಹಕ್ಕು ವಿಚಾರವನ್ನು ಇದ್ದಕ್ಕಿದ್ದಂತೆ ಪ್ರಸ್ತಾಪಿಸಿ ಗೊಂದಲದ ವಾತಾವರಣ ಉಂಟು ಮಾಡಿದರು’ ಎಂದು ಎಬಿವಿಪಿ ಪ್ರತಿ ಆರೋಪ ಮಾಡಿದೆ.

ವಿಶ್ವವಿದ್ಯಾಲಯದ ಕ್ಯಾಂಪಸ್​ನ ಮೆಸ್​ನಲ್ಲಿ ಮಾಂಸಾಹಾರ ಸಿದ್ಧಪಡಿಸಲು ಎಬಿವಿಪಿ ಅವಕಾಶ ಮಾಡಿಕೊಡುತ್ತಿಲ್ಲ ಎನ್ನುವ ಪೋಸ್ಟ್ ಒಂದು ಭಾನುವಾರ ವೈರಲ್ ಆಗಿತ್ತು. ಈ ಮೆಸ್​ನಲ್ಲಿ ವಾರಾಂತ್ಯಗಳಲ್ಲಿ ಸಾಮಾನ್ಯವಾಗಿ ಮಾಂಸಾಹಾರ ಸಿದ್ಧಪಡಿಸಲಾಗುತ್ತದೆ. ಆದರೆ ನಿನ್ನೆ ಎಬಿವಿಪಿ ಕಾರ್ಯಕರ್ತರು ಮಾಂಸಾಹಾರ ಸಿದ್ಧಪಡಿಸುವುದನ್ನು ವಿರೋಧಿಸಿದ್ದರು ಎಂದು ಜೆಎನ್​ಯು ವಿದ್ಯಾರ್ಥಿ ಸಾರಿಕಾ ಎಎನ್​ಐ ಸುದ್ದಿಸಂಸ್ಥೆಗೆ ತಿಳಿಸಿದ್ದರು.

ಇದನ್ನೂ ಓದಿ: ನಾನು ಟ್ವಿಟರ್ ಖಾತೆಯನ್ನು ಹೊಂದಿರಲಿಲ್ಲ, ಇದು ನನ್ನ ವಿರುದ್ಧದ ಪಿತೂರಿ: ಜೆಎನ್‌ಯು ಉಪಕುಲಪತಿ

ಇದನ್ನೂ ಓದಿ: ಪ್ರಚೋದನಕಾರಿ ಭಾಷಣ: ಜೆಎನ್‌ಯು ವಿದ್ಯಾರ್ಥಿ ಶರ್ಜೀಲ್ ಇಮಾಮ್ ವಿರುದ್ಧ ದೇಶದ್ರೋಹದ ಆರೋಪ ಹೊರಿಸಿದ ದೆಹಲಿ ನ್ಯಾಯಾಲಯ

ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ
ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಯತ್ನಾಳ್ ವಿರುದ್ಧ ಮುಸ್ಲಿಮರ ಪ್ರತಿಭಟನೆಯಲ್ಲಿ ಹಿಂದೂ ಸ್ವಾಮೀಜಿಗಳು!
ಯತ್ನಾಳ್ ವಿರುದ್ಧ ಮುಸ್ಲಿಮರ ಪ್ರತಿಭಟನೆಯಲ್ಲಿ ಹಿಂದೂ ಸ್ವಾಮೀಜಿಗಳು!
ಪಹಲ್ಗಾಮ್​ನಲ್ಲಿ ಧರ್ಮ ಕೇಳಿ ಶೂಟ್ ಮಾಡಿದ್ದು ನಿಜ: ಮಂಜುನಾಥ್ ಪತ್ನಿ ಪಲ್ಲವಿ
ಪಹಲ್ಗಾಮ್​ನಲ್ಲಿ ಧರ್ಮ ಕೇಳಿ ಶೂಟ್ ಮಾಡಿದ್ದು ನಿಜ: ಮಂಜುನಾಥ್ ಪತ್ನಿ ಪಲ್ಲವಿ