AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿ ಗಲಭೆಗೆ ಪಿತೂರಿ ನಡೆಸಿದ್ದು JNU ಮಾಜಿ ವಿದ್ಯಾರ್ಥಿ ಮುಖಂಡ ಉಮರ್ ಖಾಲಿದ್

ಈಶಾನ್ಯ ದೆಹಲಿಯಲ್ಲಿ ನಡೆದ ಕೋಮು ಹಿಂಸಾಚಾರ ಹಿಂದೆ ದೊಡ್ಡ ಪಿತೂರಿಯೇ ನಡೆದಿತ್ತು. ಭಾರತದಲ್ಲಿ ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯ ಕುರಿತಾಗಿ, ಪ್ರಚಾರವನ್ನು ಜಾಗತಿಕವಾಗಿ ಹರಡಲು ಯುಎಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭೇಟಿ ನೀಡಿದ ಸಂರ್ಭದಲ್ಲಿಯೇ ದೆಹಲಿ ಗಲಭೆಗೆ ಉತ್ತೇಜನ ನೀಡುವ ಪಿತೂರಿಯನ್ನು ಜೆಎನ್‌ಯು ಮಾಜಿ ವಿದ್ಯಾರ್ಥಿ ಮುಖಂಡ ಉಮರ್ ಖಾಲಿದ್ ನಡೆಸಿದ್ದ ಎಂದು ಪೊಲೀಸರು ಆರೋಪಿಸಿದ್ದಾರೆ. ಪ್ರಕರಣದಲ್ಲಿ ಖಾಲಿದ್ ಮತ್ತು ಜೆಎನ್‌ಯು ವಿದ್ಯಾರ್ಥಿ ಶಾರ್ಜೀಲ್ ಇಮಾಮ್ ವಿರುದ್ಧ ದೆಹಲಿಯ ನ್ಯಾಯಾಲಯದಲ್ಲಿ ಭಾನುವಾರ ಸಲ್ಲಿಸಲಾದ ಚಾರ್ಜ್‌ಶೀಟ್‌ ಪ್ರಕಾರ ಖಲೀದ್, ಫೆಬ್ರವರಿ […]

ದೆಹಲಿ ಗಲಭೆಗೆ ಪಿತೂರಿ ನಡೆಸಿದ್ದು JNU ಮಾಜಿ ವಿದ್ಯಾರ್ಥಿ ಮುಖಂಡ ಉಮರ್ ಖಾಲಿದ್
ಸಾಧು ಶ್ರೀನಾಥ್​
|

Updated on: Nov 23, 2020 | 5:35 PM

Share

ಈಶಾನ್ಯ ದೆಹಲಿಯಲ್ಲಿ ನಡೆದ ಕೋಮು ಹಿಂಸಾಚಾರ ಹಿಂದೆ ದೊಡ್ಡ ಪಿತೂರಿಯೇ ನಡೆದಿತ್ತು. ಭಾರತದಲ್ಲಿ ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯ ಕುರಿತಾಗಿ, ಪ್ರಚಾರವನ್ನು ಜಾಗತಿಕವಾಗಿ ಹರಡಲು ಯುಎಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭೇಟಿ ನೀಡಿದ ಸಂರ್ಭದಲ್ಲಿಯೇ ದೆಹಲಿ ಗಲಭೆಗೆ ಉತ್ತೇಜನ ನೀಡುವ ಪಿತೂರಿಯನ್ನು ಜೆಎನ್‌ಯು ಮಾಜಿ ವಿದ್ಯಾರ್ಥಿ ಮುಖಂಡ ಉಮರ್ ಖಾಲಿದ್ ನಡೆಸಿದ್ದ ಎಂದು ಪೊಲೀಸರು ಆರೋಪಿಸಿದ್ದಾರೆ.

ಪ್ರಕರಣದಲ್ಲಿ ಖಾಲಿದ್ ಮತ್ತು ಜೆಎನ್‌ಯು ವಿದ್ಯಾರ್ಥಿ ಶಾರ್ಜೀಲ್ ಇಮಾಮ್ ವಿರುದ್ಧ ದೆಹಲಿಯ ನ್ಯಾಯಾಲಯದಲ್ಲಿ ಭಾನುವಾರ ಸಲ್ಲಿಸಲಾದ ಚಾರ್ಜ್‌ಶೀಟ್‌ ಪ್ರಕಾರ ಖಲೀದ್, ಫೆಬ್ರವರಿ 23 ರಂದು ದೆಹಲಿಯಿಂದ ಪಾಟ್ನಾಕ್ಕೆ ತೆರಳಿದ್ದ. ಪಿತೂರಿ ಸಂಚು ಹೂಡಿ ಫೆಬ್ರವರಿ 27 ರಂದು ಹಿಂತಿರುಗಿದ. ಖಲೀದ್ ಇತರ ಆರೋಪಿಗಳೊಂದಿಗೆ ಚಾಂದ್ ಬಾಗ್​ನ ಕಚೇರಿಯಲ್ಲಿ ಸಭೆ ನಡೆಸಿದ್ದರು ಎಂದು ಪೊಲೀಸರು ಆರೋಪಿಸಿದ್ದಾರೆ.

ಎಫ್ಐಆರ್ ತಿಳಿಸಿರುವ ಪ್ರಕಾರ, ಕೋಮು ಹಿಂಸಾಚಾರವು ‘ಪೂರ್ವ ನಿರ್ಧರಿತ ಪಿತೂರಿ’. ಖಲಿದ್ ಎರಡು ಸ್ಥಳಗಳಲ್ಲಿ ಪ್ರಚೋದನಾಕಾರಿ ಭಾಷಣಗಳನ್ನು ನೀಡಿದ್ದರು. ಮತ್ತು ನಾಗರಿಕರಿಗೆ ಬೀದಿಗಳಲ್ಲಿ ಬಂದು ರಸ್ತೆಗಳನ್ನು ನಿರ್ಬಂಧಿಸುವಂತೆ ಮನವಿ ಮಾಡಿದ್ದರು. ಭಾರತದಲ್ಲಿ ಅಲ್ಪಸಂಖ್ಯಾತರ ಬಗ್ಗೆ ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರಚಾರ ಮಾಡಲು ಟ್ರಂಪ್ ಭೇಟಿಯ ಸಮಯದಲ್ಲಿ ಚಿತ್ರಹಿಂಸೆ ನೀಡಲಾಗುತ್ತದೆ ಎಂದು ಪೊಲೀಸರು ಆರೋಪಿಸಿದರು.

ಪಿತೂರಿಯಲ್ಲಿ ಬಂದೂಕುಗಳು, ಪೆಟ್ರೋಲ್ ಬಾಂಬುಗಳು, ಆಸಿಡ್ ಬಾಟಲಿಗಳು ಮತ್ತು ಕಲ್ಲುಗಳನ್ನು ಹಲವಾರು ಮನೆಗಳಲ್ಲಿ ಸಂಗ್ರಹಿಸಲಾಗಿತ್ತು. ಸಹ ಆರೋಪಿ ಮೊಹಮ್ಮದ್ ಡ್ಯಾನಿಶ್ ಎರಡು ವಿಭಿನ್ನ ಸ್ಥಳಗಳಿಂದ ಜನರನ್ನು ಒಂದು ಗೂಡಿಸುವ ಜವಾಬ್ದಾರಿಯನ್ನು ಗಲಭೆಯಲ್ಲಿ ಪಾಲ್ಗೊಳ್ಳಲು ನೀಡಲಾಗಿತ್ತು ಎಂದು ಪೊಲೀಸರು ಆರೋಪಿಸಿದ್ದಾರೆ. ಜಾಫ್ರಾಬಾದ್ ಮೆಟ್ರೋ ನಿಲ್ದಾಣದ ಅಡಿಯಲ್ಲಿ ರಸ್ತೆಗಳನ್ನು ನಿರ್ಬಂಧಿಸಲು ನೆರೆಹೊರೆಯ ಜನರ ಮಧ್ಯೆ ಉದ್ವೇಗ ಉಂಟಾಗಿದೆ ಎಂದು ಚಾರ್ಜ್‌ಶೀಟ್‌ ತಿಳಿಸಿದೆ.

ಖಲೀದ್, ಇಮಾಂ ಮತ್ತು ಫೈಜಾನ್ ಖಾನ್ ವಿರುದ್ಧ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಅಮಿತಾಬ್ ರಾವತ್ ವಿರುದ್ಧ ಚಾರ್ಜ್‌ಶೀಟ್ ದಾಖಲಿಸಲಾಗಿದೆ. ಕಾನೂನು ಬಾಹಿರ ಚಟುವಟಿಕೆ ತಡೆಗಟ್ಟುವಿಕೆ ಕಾಯ್ದೆ ಮತ್ತು ಕ್ರಿಮಿನಲ್ ಪಿತೂರಿ, ಕೊಲೆ, ಗಲಭೆ, ದೇಶದ್ರೋಹ, ಕಾನೂನು ಬಾಹಿರ ಸಭೆ ಮತ್ತು ಭಾರತೀಯ ದಂಡ ಸಂಹಿತೆಯ ಧರ್ಮ, ಭಾಷೆ, ಜಾತಿ ಇತ್ಯಾದಿಗಳ ಆಧಾರದ ಮೇಲೆ ದ್ವೇಷವನ್ನು ಉತ್ತೇಜಿಸುವ ಅಪರಾಧಗಳಿಗೆ ಮರಣ ದಂಡನೆ ಶಿಕ್ಷೆಯನ್ನು ವಿಧಿಸಿದೆ.

ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ