AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

JNU New Rules: ವಿದ್ಯಾರ್ಥಿಗಳು ಧರಣಿ ಮಾಡಿದ್ರೆ 20 ಸಾವಿರ ರೂ, ದಂಡ, ಹಿಂಸಾಚಾರ ಮಾಡಿದ್ರೆ ಪ್ರವೇಶ ರದ್ದು

ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ(JNU) ಹೊಸ ನಿಯಮಗಳನ್ನು ಜಾರಿಗೆ ತಂದಿದೆ. ಅದರ ಪ್ರಕಾರ ಕಾಲೇಜಿನ ಕ್ಯಾಂಪಸ್​ನಲ್ಲಿ ವಿದ್ಯಾರ್ಥಿಯು ಧರಣಿ ಮಾಡಿದರೆ 20 ಸಾವಿರ ರೂ. ಅಥವಾ 30 ಸಾವಿರ ರೂ. ದಂಡ ತೆರಬೇಕಾಗುತ್ತದೆ.

JNU New Rules: ವಿದ್ಯಾರ್ಥಿಗಳು ಧರಣಿ ಮಾಡಿದ್ರೆ 20 ಸಾವಿರ ರೂ, ದಂಡ, ಹಿಂಸಾಚಾರ ಮಾಡಿದ್ರೆ ಪ್ರವೇಶ ರದ್ದು
ಜೆಎನ್​ಯು
ನಯನಾ ರಾಜೀವ್
|

Updated on: Mar 02, 2023 | 8:38 AM

Share

ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ(JNU) ಹೊಸ ನಿಯಮಗಳನ್ನು ಜಾರಿಗೆ ತಂದಿದೆ. ಅದರ ಪ್ರಕಾರ ಕಾಲೇಜಿನ ಕ್ಯಾಂಪಸ್​ನಲ್ಲಿ ವಿದ್ಯಾರ್ಥಿಯು ಧರಣಿ ಮಾಡಿದರೆ 20 ಸಾವಿರ ರೂ. ಅಥವಾ 30 ಸಾವಿರ ರೂ. ದಂಡ ತೆರಬೇಕಾಗುತ್ತದೆ. ಹಿಂಸಾಚಾರದಲ್ಲಿ ಪಾಲ್ಗೊಂಡರೆ ಪ್ರವೇಶ ರದ್ದುಪಡಿಸಲಾಗುತ್ತದೆ ಎಂದು ಹೇಳಲಾಗಿದೆ. ಜೆಎನ್‌ಯು ವಿದ್ಯಾರ್ಥಿಗಳಿಗೆ ಶಿಸ್ತು ಮತ್ತು ಸರಿಯಾದ ನಡವಳಿಕೆಯ 10-ಪುಟದ ನಿಯಮಗಳು ಪ್ರತಿಭಟನೆ ಮತ್ತು ಫೋರ್ಜರಿಯಂತಹ ವಿವಿಧ ಕೃತ್ಯಗಳಿಗೆ ಶಿಕ್ಷೆಯನ್ನು ಸೂಚಿಸುತ್ತವೆ.

ಈ ನಿಯಮಗಳು ಫೆಬ್ರವರಿ 3 ರಿಂದ ಜಾರಿಗೆ ಬಂದಿವೆ, ಶಿಸ್ತು ಮತ್ತು ನಡವಳಿಕೆಯ ನಿಯಮಗಳು ಎಂದು ಕರೆಯಲಾಗಿದೆ. ಈ ನಿಯಮಗಳು ವಿಶ್ವವಿದ್ಯಾಲಯದ ಎಲ್ಲಾ ವಿದ್ಯಾರ್ಥಿಗಳಿಗೆ ಅನ್ವಯವಾಗುತ್ತದೆ. 10 ಪುಟಗಳ ನಿಯಮದಲ್ಲಿ 17 ವಿವಿಧ ಪ್ರಕರಣಗಳಲ್ಲಿ ಭಾಗಿಯಾಗಿರುವುದು ಕಂಡುಬಂದರೂ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ತಿಳಿಸಲಾಗಿದೆ.

ಮತ್ತಷ್ಟು ಓದಿ: ಜೆಎನ್​ಯುನಲ್ಲಿ ಪೆರಿಯಾರ್, ಕಾರ್ಲ್​ ಮಾರ್ಕ್ಸ್​ ಭಾವಚಿತ್ರಗಳ ಧ್ವಂಸ: ವಿದ್ಯಾರ್ಥಿಗಳ ಈ ನಡೆಗೆ ಸ್ಟಾಲಿನ್ ಪ್ರತಿಕ್ರಿಯೆ

ಜೂಜು, ಹಾಸ್ಟೆಲ್ ಕೊಠಡಿಗಳನ್ನು ಅನಧಿಕೃತವಾಗಿ ಆಕ್ರಮಿಸಿಕೊಳ್ಳುವುದು, ನಿಂದನೀಯ ಭಾಷೆಗಳ ಬಳಕೆ, ಫೋರ್ಜರಿ ಪ್ರಕರಣಗಳು ಕೂಡ ಸೇರಿವೆ. ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಇಬ್ಬರನ್ನೂ ಒಳಗೊಂಡಿರುವ ವಿಷಯಗಳನ್ನು ವಿಶ್ವವಿದ್ಯಾಲಯಕ್ಕೆ ಹಾಗೂ ಕೇಂದ್ರ ಮಟ್ಟದ ಕುಂದುಕೊರತೆ ಪರಿಹಾರ ಸಮಿತಿಗೆ ತಿಳಿಸಬಹುದು.

ಲೈಂಗಿಕ ಕಿರುಕುಳ, ರಾಗಿಂಗ್ ಹಾಗೂ ಕೋಮುಸೌಹಾರ್ದತೆಗೆ ಧಕ್ಕೆ ತರುವ ವಿಚಾರಗಳು ಪ್ರಾಕ್ಟರ್ ಕಚೇರಿಯ ವ್ಯಾಪ್ತಿಗೆ ಬರಲಿವೆ. ವಾಸ್ತವವಾಗಿ ಬಿಬಿಸಿ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ಸಂಬಂಧಿಸಿದಂತೆ ವಿಶ್ವವಿದ್ಯಾಲಯದಲ್ಲಿ ಹಲವು ಪ್ರತಿಭಟನೆಗಳು ನಡೆದವು. ಈ ಕಾರಣಗಳಿಂದಾಗಿ ಹೊಸ ನಿಯಮಗಳನ್ನು ಜಾರಿಗೆ ತರುವುದು ವಿಶ್ವವಿದ್ಯಾಲಯಕ್ಕೆ ಅನಿವಾರ್ಯವಾಗಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ