AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸ್ಟೆಲ್ ಶುಲ್ಕ ಏರಿಕೆ, JNU ವಿದ್ಯಾರ್ಥಿಗಳ ಭಾರಿ ಪ್ರತಿಭಟನೆ

ದೆಹಲಿ: ಜವಾಹರ್​ಲಾಲ್ ನೆಹರೂ ವಿಶ್ವವಿದ್ಯಾಲಯದಲ್ಲಿ ಇದ್ದಕ್ಕಿದ್ದಂತೆ ಹಾಸ್ಟೆಲ್ ಶುಲ್ಕ ಏರಿಕೆ ವಿರೋಧಿಸಿ ವಿದ್ಯಾರ್ಥಿಗಳು ಬಹಳ ದಿನದಿಂದ ಪ್ರತಿಭಟನೆ ನಡೆಸ್ತಿದ್ದಾರೆ. ಜೆಎನ್​ಯುನಲ್ಲಿ ನಡೆದಿದ್ದ ಪದವಿ ಪ್ರದಾನ ಸಮಾರಂಭಕ್ಕೆ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಆಗಮಿಸಿದ್ದ ವೇಳೆ, ವಿದ್ಯಾರ್ಥಿಗಳು ಭಾರಿ ಪ್ರತಿಭಟನೆ ನಡೆಸಿದ್ದಾರೆ. ಆದ್ರೆ, ಜೆಎನ್​ಯು ಆಡಳಿತ ಮಂಡಳಿ ಇದ್ಯಾವುದಕ್ಕೂ ತಲೆ ಕೆಡಿಸಿಕೊಂಡಿಲ್ಲ. ಇದ್ರಿಂದ ಆಕ್ರೋಶಗೊಂಡ ಜೆಎನ್​ಯು ವಿದ್ಯಾರ್ಥಿ ಸಂಘ ಸೋಮವಾರ ಸಂಸದರನ್ನ ಭೇಟಿ ಮಾಡಲು ಮುಂದಾಗಿದೆ. ಆದ್ರೆ, ಇದಕ್ಕೆ ಪೊಲೀಸರು ಅವಕಾಶ ನೀಡಲಿಲ್ಲ. ಇದ್ರಿಂದ ಲುಟೆನ್ಸ್ ದೆಹಲಿ ರಸ್ತೆಗಳು ರಣಾಂಗಣವಾಗಿ […]

ಹಾಸ್ಟೆಲ್ ಶುಲ್ಕ ಏರಿಕೆ, JNU ವಿದ್ಯಾರ್ಥಿಗಳ ಭಾರಿ ಪ್ರತಿಭಟನೆ
ಸಾಧು ಶ್ರೀನಾಥ್​
|

Updated on:Nov 19, 2019 | 2:45 PM

Share

ದೆಹಲಿ: ಜವಾಹರ್​ಲಾಲ್ ನೆಹರೂ ವಿಶ್ವವಿದ್ಯಾಲಯದಲ್ಲಿ ಇದ್ದಕ್ಕಿದ್ದಂತೆ ಹಾಸ್ಟೆಲ್ ಶುಲ್ಕ ಏರಿಕೆ ವಿರೋಧಿಸಿ ವಿದ್ಯಾರ್ಥಿಗಳು ಬಹಳ ದಿನದಿಂದ ಪ್ರತಿಭಟನೆ ನಡೆಸ್ತಿದ್ದಾರೆ. ಜೆಎನ್​ಯುನಲ್ಲಿ ನಡೆದಿದ್ದ ಪದವಿ ಪ್ರದಾನ ಸಮಾರಂಭಕ್ಕೆ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಆಗಮಿಸಿದ್ದ ವೇಳೆ, ವಿದ್ಯಾರ್ಥಿಗಳು ಭಾರಿ ಪ್ರತಿಭಟನೆ ನಡೆಸಿದ್ದಾರೆ.

ಆದ್ರೆ, ಜೆಎನ್​ಯು ಆಡಳಿತ ಮಂಡಳಿ ಇದ್ಯಾವುದಕ್ಕೂ ತಲೆ ಕೆಡಿಸಿಕೊಂಡಿಲ್ಲ. ಇದ್ರಿಂದ ಆಕ್ರೋಶಗೊಂಡ ಜೆಎನ್​ಯು ವಿದ್ಯಾರ್ಥಿ ಸಂಘ ಸೋಮವಾರ ಸಂಸದರನ್ನ ಭೇಟಿ ಮಾಡಲು ಮುಂದಾಗಿದೆ. ಆದ್ರೆ, ಇದಕ್ಕೆ ಪೊಲೀಸರು ಅವಕಾಶ ನೀಡಲಿಲ್ಲ. ಇದ್ರಿಂದ ಲುಟೆನ್ಸ್ ದೆಹಲಿ ರಸ್ತೆಗಳು ರಣಾಂಗಣವಾಗಿ ಪರಿವರ್ತಿತವಾಯಿತು.

ರಣಾಂಗಣವಾಗಿ ಬದಲಾದ ಲುಟೆನ್ಸ್ ದೆಹಲಿಯ ರಸ್ತೆಗಳು! ತಮ್ಮ ವಿವಿಧ ಬೇಡಿಕೆಗಳನ್ನ ಈಡೇರಿಸುವಂತೆ ಆಗ್ರಹಿಸಿ ಜೆಎನ್​ಯು ವಿದ್ಯಾರ್ಥಿಗಳು, ವಿಶ್ವವಿದ್ಯಾಲಯದ ಆವರಣದಿಂದ ಸಂಸತ್​ವರೆಗೆ ಜಾಥಾ ನಡೆಸಿದ್ದಾರೆ. ವಿದ್ಯಾರ್ಥಿಗಳು ಜಾಥಾ ನಡೆಸ್ತಾರೆ ಅಂತಾ ಗೊತ್ತಾಗಿ, ದೆಹಲಿ ಪೊಲೀಸರು ಜಾಥಾ ಸಾಗುವ ರಸ್ತೆಗಳ ಉದ್ದಕ್ಕೂ ಬ್ಯಾರಿಕೇಡ್​ಗಳನ್ನ ಹಾಕಿ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತೆ ವಹಿಸಿದ್ದಾರೆ.

ಆದ್ರೆ, ವಿದ್ಯಾರ್ಥಿಗಳು ಸಫ್ದರ್​ಜಂಗ್ ಸಮಾಧಿ ಬಳಿ ಬಂದಿದ್ದಾರೆ. ಆಗ ಪೊಲೀಸರು ಸಂಸತ್ ಕಡೆ ತೆರಳದಂತೆ ತಡೆಯೊಡ್ಡಿದ್ದಾರೆ. ಈ ವೇಳೆ ವಿದ್ಯಾರ್ಥಿಗಳ ಜೊತೆ ಘರ್ಷಣೆ ನಡಿದಿದ್ದು, ಜೆಎನ್​ಯು ಅಧ್ಯಕ್ಷ ಐಶೆ ಘೋಷ್​ ಸೇರಿ ಹಲವರನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಯಾವಾಗ ವಿದ್ಯಾರ್ಥಿ ಸಂಘದ ಅಧ್ಯಕ್ಷರು ಮತ್ತು ಕೆಲವು ವಿದ್ಯಾರ್ಥಿಗಳನ್ನ ವಶಕ್ಕೆ ಪಡೆದ್ರೋ, ವಿದ್ಯಾರ್ಥಿಗಳ ಆಕ್ರೋಶದ ಕಟ್ಟೆ ಒಡೀತು. ಸಂಸತ್​ಗೆ ತೆರಳುವ ಮಾರ್ಗದಲ್ಲೇ ಧರಣಿ ಆರಂಭಿಸಿದ್ರು. ಇದ್ರಿಂದ ಲುಟೆನ್ಸ್ ದೆಹಲಿ ರಸ್ತೆಗಳಲ್ಲಿ ಭಾರಿ ಟ್ರಾಫಿಕ್ ಜಾಮ್ ಉಂಟಾಯ್ತು. ಕೊನೆಗೆ ಸೋಮವಾರ ರಾತ್ರಿ 7.30ರ ವೇಳೆಗೆ ಪೊಲೀಸರು ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್​ ಮಾಡಿ ಚದುರಿಸಿದ್ರು.

ಜೆಎನ್​ಯು ವಿದ್ಯಾರ್ಥಿಗಳು ಹಾಸ್ಟೆಲ್ ಶುಲ್ಕ ಏರಿಕೆಯನ್ನ ವಿರೋಧಿಸಿ ಮತ್ತಷ್ಟು ದಿನ ಪ್ರತಿಭಟನೆ ನಡೆಸೋ ಸಾಧ್ಯತೆ ಇದೆ. ಇದರ ನಡುವೆ ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯಕ್ಕೆ ಭೇಟಿ ನೀಡಿ ಜೆಎನ್​ಯು ವಿದ್ಯಾರ್ಥಿಗಳ ನಿಯೋಗ ತಮ್ಮ ಬೇಡಿಕೆ ಪಟ್ಟಿಯನ್ನ ಸಲ್ಲಿಸಿದೆ. ಇದಾದ ಬಳಿಕ ಪ್ರತಿಭಟನಾನಿರತ ವಿದ್ಯಾರ್ಥಿಗಳು ಜೆಎನ್​ಯು ಕ್ಯಾಂಪಸ್​ಗೆ ಮರಳಿದ್ದಾರೆ.

Published On - 2:43 pm, Tue, 19 November 19

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್