AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸ್ಟೆಲ್ ಶುಲ್ಕ ಏರಿಕೆ, JNU ವಿದ್ಯಾರ್ಥಿಗಳ ಭಾರಿ ಪ್ರತಿಭಟನೆ

ದೆಹಲಿ: ಜವಾಹರ್​ಲಾಲ್ ನೆಹರೂ ವಿಶ್ವವಿದ್ಯಾಲಯದಲ್ಲಿ ಇದ್ದಕ್ಕಿದ್ದಂತೆ ಹಾಸ್ಟೆಲ್ ಶುಲ್ಕ ಏರಿಕೆ ವಿರೋಧಿಸಿ ವಿದ್ಯಾರ್ಥಿಗಳು ಬಹಳ ದಿನದಿಂದ ಪ್ರತಿಭಟನೆ ನಡೆಸ್ತಿದ್ದಾರೆ. ಜೆಎನ್​ಯುನಲ್ಲಿ ನಡೆದಿದ್ದ ಪದವಿ ಪ್ರದಾನ ಸಮಾರಂಭಕ್ಕೆ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಆಗಮಿಸಿದ್ದ ವೇಳೆ, ವಿದ್ಯಾರ್ಥಿಗಳು ಭಾರಿ ಪ್ರತಿಭಟನೆ ನಡೆಸಿದ್ದಾರೆ. ಆದ್ರೆ, ಜೆಎನ್​ಯು ಆಡಳಿತ ಮಂಡಳಿ ಇದ್ಯಾವುದಕ್ಕೂ ತಲೆ ಕೆಡಿಸಿಕೊಂಡಿಲ್ಲ. ಇದ್ರಿಂದ ಆಕ್ರೋಶಗೊಂಡ ಜೆಎನ್​ಯು ವಿದ್ಯಾರ್ಥಿ ಸಂಘ ಸೋಮವಾರ ಸಂಸದರನ್ನ ಭೇಟಿ ಮಾಡಲು ಮುಂದಾಗಿದೆ. ಆದ್ರೆ, ಇದಕ್ಕೆ ಪೊಲೀಸರು ಅವಕಾಶ ನೀಡಲಿಲ್ಲ. ಇದ್ರಿಂದ ಲುಟೆನ್ಸ್ ದೆಹಲಿ ರಸ್ತೆಗಳು ರಣಾಂಗಣವಾಗಿ […]

ಹಾಸ್ಟೆಲ್ ಶುಲ್ಕ ಏರಿಕೆ, JNU ವಿದ್ಯಾರ್ಥಿಗಳ ಭಾರಿ ಪ್ರತಿಭಟನೆ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Nov 19, 2019 | 2:45 PM

Share

ದೆಹಲಿ: ಜವಾಹರ್​ಲಾಲ್ ನೆಹರೂ ವಿಶ್ವವಿದ್ಯಾಲಯದಲ್ಲಿ ಇದ್ದಕ್ಕಿದ್ದಂತೆ ಹಾಸ್ಟೆಲ್ ಶುಲ್ಕ ಏರಿಕೆ ವಿರೋಧಿಸಿ ವಿದ್ಯಾರ್ಥಿಗಳು ಬಹಳ ದಿನದಿಂದ ಪ್ರತಿಭಟನೆ ನಡೆಸ್ತಿದ್ದಾರೆ. ಜೆಎನ್​ಯುನಲ್ಲಿ ನಡೆದಿದ್ದ ಪದವಿ ಪ್ರದಾನ ಸಮಾರಂಭಕ್ಕೆ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಆಗಮಿಸಿದ್ದ ವೇಳೆ, ವಿದ್ಯಾರ್ಥಿಗಳು ಭಾರಿ ಪ್ರತಿಭಟನೆ ನಡೆಸಿದ್ದಾರೆ.

ಆದ್ರೆ, ಜೆಎನ್​ಯು ಆಡಳಿತ ಮಂಡಳಿ ಇದ್ಯಾವುದಕ್ಕೂ ತಲೆ ಕೆಡಿಸಿಕೊಂಡಿಲ್ಲ. ಇದ್ರಿಂದ ಆಕ್ರೋಶಗೊಂಡ ಜೆಎನ್​ಯು ವಿದ್ಯಾರ್ಥಿ ಸಂಘ ಸೋಮವಾರ ಸಂಸದರನ್ನ ಭೇಟಿ ಮಾಡಲು ಮುಂದಾಗಿದೆ. ಆದ್ರೆ, ಇದಕ್ಕೆ ಪೊಲೀಸರು ಅವಕಾಶ ನೀಡಲಿಲ್ಲ. ಇದ್ರಿಂದ ಲುಟೆನ್ಸ್ ದೆಹಲಿ ರಸ್ತೆಗಳು ರಣಾಂಗಣವಾಗಿ ಪರಿವರ್ತಿತವಾಯಿತು.

ರಣಾಂಗಣವಾಗಿ ಬದಲಾದ ಲುಟೆನ್ಸ್ ದೆಹಲಿಯ ರಸ್ತೆಗಳು! ತಮ್ಮ ವಿವಿಧ ಬೇಡಿಕೆಗಳನ್ನ ಈಡೇರಿಸುವಂತೆ ಆಗ್ರಹಿಸಿ ಜೆಎನ್​ಯು ವಿದ್ಯಾರ್ಥಿಗಳು, ವಿಶ್ವವಿದ್ಯಾಲಯದ ಆವರಣದಿಂದ ಸಂಸತ್​ವರೆಗೆ ಜಾಥಾ ನಡೆಸಿದ್ದಾರೆ. ವಿದ್ಯಾರ್ಥಿಗಳು ಜಾಥಾ ನಡೆಸ್ತಾರೆ ಅಂತಾ ಗೊತ್ತಾಗಿ, ದೆಹಲಿ ಪೊಲೀಸರು ಜಾಥಾ ಸಾಗುವ ರಸ್ತೆಗಳ ಉದ್ದಕ್ಕೂ ಬ್ಯಾರಿಕೇಡ್​ಗಳನ್ನ ಹಾಕಿ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತೆ ವಹಿಸಿದ್ದಾರೆ.

ಆದ್ರೆ, ವಿದ್ಯಾರ್ಥಿಗಳು ಸಫ್ದರ್​ಜಂಗ್ ಸಮಾಧಿ ಬಳಿ ಬಂದಿದ್ದಾರೆ. ಆಗ ಪೊಲೀಸರು ಸಂಸತ್ ಕಡೆ ತೆರಳದಂತೆ ತಡೆಯೊಡ್ಡಿದ್ದಾರೆ. ಈ ವೇಳೆ ವಿದ್ಯಾರ್ಥಿಗಳ ಜೊತೆ ಘರ್ಷಣೆ ನಡಿದಿದ್ದು, ಜೆಎನ್​ಯು ಅಧ್ಯಕ್ಷ ಐಶೆ ಘೋಷ್​ ಸೇರಿ ಹಲವರನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಯಾವಾಗ ವಿದ್ಯಾರ್ಥಿ ಸಂಘದ ಅಧ್ಯಕ್ಷರು ಮತ್ತು ಕೆಲವು ವಿದ್ಯಾರ್ಥಿಗಳನ್ನ ವಶಕ್ಕೆ ಪಡೆದ್ರೋ, ವಿದ್ಯಾರ್ಥಿಗಳ ಆಕ್ರೋಶದ ಕಟ್ಟೆ ಒಡೀತು. ಸಂಸತ್​ಗೆ ತೆರಳುವ ಮಾರ್ಗದಲ್ಲೇ ಧರಣಿ ಆರಂಭಿಸಿದ್ರು. ಇದ್ರಿಂದ ಲುಟೆನ್ಸ್ ದೆಹಲಿ ರಸ್ತೆಗಳಲ್ಲಿ ಭಾರಿ ಟ್ರಾಫಿಕ್ ಜಾಮ್ ಉಂಟಾಯ್ತು. ಕೊನೆಗೆ ಸೋಮವಾರ ರಾತ್ರಿ 7.30ರ ವೇಳೆಗೆ ಪೊಲೀಸರು ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್​ ಮಾಡಿ ಚದುರಿಸಿದ್ರು.

ಜೆಎನ್​ಯು ವಿದ್ಯಾರ್ಥಿಗಳು ಹಾಸ್ಟೆಲ್ ಶುಲ್ಕ ಏರಿಕೆಯನ್ನ ವಿರೋಧಿಸಿ ಮತ್ತಷ್ಟು ದಿನ ಪ್ರತಿಭಟನೆ ನಡೆಸೋ ಸಾಧ್ಯತೆ ಇದೆ. ಇದರ ನಡುವೆ ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯಕ್ಕೆ ಭೇಟಿ ನೀಡಿ ಜೆಎನ್​ಯು ವಿದ್ಯಾರ್ಥಿಗಳ ನಿಯೋಗ ತಮ್ಮ ಬೇಡಿಕೆ ಪಟ್ಟಿಯನ್ನ ಸಲ್ಲಿಸಿದೆ. ಇದಾದ ಬಳಿಕ ಪ್ರತಿಭಟನಾನಿರತ ವಿದ್ಯಾರ್ಥಿಗಳು ಜೆಎನ್​ಯು ಕ್ಯಾಂಪಸ್​ಗೆ ಮರಳಿದ್ದಾರೆ.

Published On - 2:43 pm, Tue, 19 November 19

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ