AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿಯ ಜೆಎನ್‌ಯು ವಿದ್ಯಾರ್ಥಿನಿಗೆ ಮದುವೆಯಾಗುವುದಾಗಿ ನಂಬಿಸಿ, ವ್ಯಕ್ತಿಯಿಂದ ಅತ್ಯಾಚಾರ

ದೆಹಲಿ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ವಿದ್ಯಾರ್ಥಿನಿಯೊಬ್ಬಳಿಗೆ ಮದುವೆ ಮಾಡಿಕೊಳ್ಳುವುದಾಗಿ ಭರವಸೆ ನೀಡಿ ಆಕೆಯ ಜತೆಗೆ ಲೈಂಗಿಕ ಸಂಪರ್ಕ ಹೊಂದಿದ್ದು. ಇದೀಗ ಮದುವೆಯಾಗುವುದಿಲ್ಲ ಎಂದು ಹೇಳಿ, ಆಕೆಗೆ ಮೋಸ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ದೆಹಲಿಯ ಜೆಎನ್‌ಯು ವಿದ್ಯಾರ್ಥಿನಿಗೆ ಮದುವೆಯಾಗುವುದಾಗಿ ನಂಬಿಸಿ, ವ್ಯಕ್ತಿಯಿಂದ ಅತ್ಯಾಚಾರ
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on: Sep 14, 2023 | 1:28 PM

Share

ದೆಹಲಿ, ಸೆ.14: ವಿದ್ಯಾರ್ಥಿನಿಯೊಬ್ಬಳಿಗೆ ಮದುವೆಯಾಗುದಾಗಿ ನಂಬಿಸಿ ಆಕೆಯ ಜತೆಗೆ ದೈಹಿಕ ಸಂಪರ್ಕ ನಡೆಸಿ, ಇದೀಗ ಮದುವೆಯಾಗುವುದಿಲ್ಲ ಎಂದು ಮೋಸ ಮಾಡಿರುವ ಘಟನೆ ಉತ್ತರ ದೆಹಲಿಯ (Delhi) ವಜೀರಾಬಾದ್ ಪ್ರದೇಶದಲ್ಲಿ ನಡೆದಿದೆ. ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ವಿದ್ಯಾರ್ಥಿನಿಯೊಬ್ಬಳಿಗೆ ಮದುವೆ ಮಾಡಿಕೊಳ್ಳುವುದಾಗಿ ಭರವಸೆ ನೀಡಿ ಆಕೆಯ ಜತೆಗೆ ಲೈಂಗಿಕ ಸಂಪರ್ಕ ಹೊಂದಿದ್ದು. ಇದೀಗ ಮದುವೆಯಾಗುವುದಿಲ್ಲ ಎಂದು ಹೇಳಿ, ಆಕೆಗೆ ಮೋಸ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸರು ತಿಳಿಸಿರುವ ಪ್ರಕಾರ ಆರೋಪಿ ದಕ್ಷಿಣ ದೆಹಲಿಯ ಜೆಎನ್‌ಯು ಕ್ಯಾಂಪಸ್‌ನ ನಿವಾಸಿಯಾಗಿದ್ದು, ಸುಮಾರು ನಾಲ್ಕು ವರ್ಷಗಳ ಹಿಂದೆ ಸಂಘಟನೆಯೊಂದರ ಮೂಲಕ ಆರೋಪಿಯನ್ನು ಈ ವಿದ್ಯಾರ್ಥಿನಿ ಭೇಟಿಯಾಗಿದ್ದಾಳೆ ಎಂದು ಪೊಲೀಸರು ಹೇಳಿದ್ದಾರೆ.

ನಂತರ ಇಬ್ಬರ ನಡುವೆ ಸ್ನೇಹವಾಗಿ ಮದುವೆ ಹಂತಕ್ಕೆ ಹೋಗಿದೆ. ಏಪ್ರಿಲ್ 3 ರಂದು ಆಕೆಯನ್ನು ಆರೋಪಿಯು ವಜೀರಾಬಾದ್‌ನಲ್ಲಿರುವ ಫ್ಲಾಟ್‌ಗೆ ಕರೆಸಿಕೊಂಡು. ಆಕೆಗೆ ಮದುವೆಯಾಗುವುದಾಗಿ ಭರವಸೆ ನೀಡಿದ್ದಾನೆ. ಬಳಿಕ ಆಕೆಯ ಜತೆಗೆ ಲೈಂಗಿಕ ಸಂಪರ್ಕ ನಡೆಸಿ, ಇದೀಗ ಆಕೆಯನ್ನು ಮದುವೆಯಾಗುವುದಿಲ್ಲ ಎಂದು ಹೇಳಿದ್ದಾನೆ. ಈ ಬಗ್ಗೆ ವಿದ್ಯಾರ್ಥಿನಿ ದೂರು ನೀಡಿದ್ದು, ಸೂಕ್ತ ಕ್ರಮವನ್ನು ತೆಗೆದುಕೊಳ್ಳಲಾಗುವುದು ಎಂದು ಪೊಲೀಸ್ ಅಧಿಕಾರಿ ಸಾಗರ್ ಸಿಂಗ್ ಕಲ್ಸಿ ಹೇಳಿದ್ದಾರೆ.

ಇದನ್ನೂ ಓದಿ: ಬ್ರಾಹ್ಮಣರೇ ಕ್ಯಾಂಪಸ್ ಬಿಟ್ಟು ತೊಲಗಿ; ಜೆಎನ್​ಯು ಗೋಡೆಗಳಲ್ಲಿ ಬ್ರಾಹ್ಮಣ ವಿರೋಧಿ ಘೋಷಣೆ

ಆರೋಪಿಯ ಮೇಲೆ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 376 (ಅತ್ಯಾಚಾರ) ಅಡಿಯಲ್ಲಿ ವಜೀರಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ ಮತ್ತು ಈಗಾಗಲೇ ತನಿಖೆಯನ್ನು ಪ್ರಾರಂಭಿಸಲಾಗಿದೆ ಎಂದು ಪೊಲೀಸ್​​ ಅಧಿಕಾರಿ ಸಾಗರ್ ಸಿಂಗ್ ಕಲ್ಸಿ ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜಾತ್ರೆಯಲ್ಲಿ ಯುವತಿಯರನ್ನು ಹಿಂಬಾಲಿಸಿ ಖಾಸಗಿ ಭಾಗ ಮುಟ್ಟಿ ಹಿಂಸೆ
ಜಾತ್ರೆಯಲ್ಲಿ ಯುವತಿಯರನ್ನು ಹಿಂಬಾಲಿಸಿ ಖಾಸಗಿ ಭಾಗ ಮುಟ್ಟಿ ಹಿಂಸೆ