Suicide: ಹೋಟೆಲ್​ನ 6ನೇ ಮಹಡಿಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ರೂಪದರ್ಶಿ

ಆತ್ಮಹತ್ಯೆಗೂ ಮುನ್ನ ರೂಪದರ್ಶಿ ತನ್ನ ತಂದೆಗೆ ಫೋನ್ ಮಾಡಿ ಕೊನೆಯ ಬಾರಿ ನಿಮ್ಮ ಮುಖವನ್ನು ನೋಡಬೇಕೆನಿಸುತ್ತಿದೆ. ನಾನು ಈ ಪ್ರಪಂಚದಿಂದ ದೂರ ಹೋಗುತ್ತಿದ್ದೇನೆ ಎಂದು ಹೇಳಿದ್ದರು.

Suicide: ಹೋಟೆಲ್​ನ 6ನೇ ಮಹಡಿಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ರೂಪದರ್ಶಿ
ಆತ್ಮಹತ್ಯೆ ತಡೆಯಿರಿ
Follow us
| Updated By: ಸುಷ್ಮಾ ಚಕ್ರೆ

Updated on: Jan 31, 2022 | 3:46 PM

ಜೈಪುರ: ರಾಜಸ್ಥಾನದ ಜೋಧ್‌ಪುರ ಜಿಲ್ಲೆಯಲ್ಲಿ 19 ವರ್ಷದ ರೂಪದರ್ಶಿಯೊಬ್ಬರು ಹೋಟೆಲ್‌ನ ರೂಮಿನಿಂದ ಹಾರಿ ಜೀವನ ಅಂತ್ಯಗೊಳಿಸಲು ಯತ್ನಿಸಿದ ದಾರುಣ ಘಟನೆ ನಡೆದಿದೆ. 6ನೇ ಮಹಡಿಯಿಂದ ಹಾರಿ ಆತ್ಮಹತ್ಯೆ (Suicide) ಮಾಡಿಕೊಳ್ಳುವ ಮುನ್ನ ಆಕೆ ತನ್ನ ತಂದೆಗೆ ಫೋನ್ ಮಾಡಿದ್ದರು. 19 ವರ್ಷದ ಗುಂಗುನ್ ಉಪಾಧ್ಯಾಯ ಎಂಬ ಮಾಡೆಲ್ ಶನಿವಾರ ಉದಯಪುರದಿಂದ ಜೋಧ್​ಪುರಕ್ಕೆ ಮರಳಿದ್ದರು. ಈ ವೇಳೆ ತಮ್ಮ ಹೋಟೆಲ್ ರೂಮಿನಿಂದ ಹಾರಿ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದಾರೆ. ತಮ್ಮ ಮಗಳು ಆತ್ಮಹತ್ಯೆ ಮಾಡಿಕೊಳ್ಳಲಿರುವ ವಿಷಯವನ್ನು ಆಕೆಯ ತಂದೆ ಜೋಧ್​ಪುರದ ಪೊಲೀಸರಿಗೆ ತಿಳಿಸಿದ್ದರು. ತಕ್ಷಣ ಕಾರ್ಯೋನ್ಮುಖರಾದ ಪೊಲೀಸರು ಹೋಟೆಲ್​ಗೆ ತಲುಪುವಷ್ಟರಲ್ಲಿ ಆಕೆ ಕೆಳಗೆ ಬಿದ್ದು ತೀವ್ರವಾಗಿ ಗಾಯಗೊಂಡಿದ್ದರು.

ತಕ್ಷಣ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಜೀವನ್ಮರಣದ ನಡುವೆ ಹೋರಾಡುತ್ತಿದ್ದಾರೆ. ಶನಿವಾರ ರಾತ್ರಿ ಈ ಘಟನೆ ನಡೆದಿದೆ ಎಂದು ವರದಿಗಳು ತಿಳಿಸಿವೆ. ಆಕೆ ಜೋಧ್‌ಪುರದ ಹೋಟೆಲ್ ಲಾರ್ಡ್ಸ್ ಇನ್‌ನಲ್ಲಿ ಉಳಿದುಕೊಂಡಿದ್ದರು. ಆತ್ಮಹತ್ಯೆಗೂ ಮುನ್ನ ಆಕೆ ತನ್ನ ತಂದೆಗೆ ಫೋನ್ ಮಾಡಿ ಕೊನೆಯ ಬಾರಿ ನಿಮ್ಮ ಮುಖವನ್ನು ನೋಡಬೇಕೆನಿಸುತ್ತಿದೆ. ನಾನು ಈ ಪ್ರಪಂಚದಿಂದ ದೂರ ಹೋಗುತ್ತಿದ್ದೇನೆ ಎಂದು ಹೇಳಿದ್ದರು.

ಈ ಹಿನ್ನೆಲೆಯಲ್ಲಿ ಆಕೆಯ ತಂದೆ ಕೂಡಲೇ ಪೊಲೀಸರನ್ನು ಸಂಪರ್ಕಿಸಿದ್ದರು. ಅಧಿಕಾರಿಗಳು ಆಕೆ ಜೋಧ್‌ಪುರದ ಹೋಟೆಲ್‌ನಲ್ಲಿರುವುದನ್ನು ತಿಳಿದು ಅಲ್ಲಿಗೆ ಬಂದಿದ್ದರು. ಆದರೆ ಪೊಲೀಸರು ಸ್ಥಳಕ್ಕೆ ತಲುಪುವ ಮೊದಲೇ ರೂಪದರ್ಶಿ ಹೋಟೆಲ್‌ನ ಆರನೇ ಮಹಡಿಯಿಂದ ಜಿಗಿದಿದ್ದರು. ಆತ್ಮಹತ್ಯೆಗೆ ಯತ್ನಿಸಲು ಕಾರಣವೇನು ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

6ನೇ ಮಹಡಿಯಿಂದ ಬಿದ್ದ ಪರಿಣಾಮ ಗುಂಗುನ್‌ಗೆ ತೀವ್ರ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತು. ಆಕೆಯ ಕಾಲುಗಳು ಮತ್ತು ಎದೆಗೆ ಪೆಟ್ಟಾಗಿ ಸಾಕಷ್ಟು ರಕ್ತಸ್ರಾವವಾಗಿದೆ. ಅಪಾರ ಪ್ರಮಾಣದ ರಕ್ತದ ನಷ್ಟದಿಂದಾಗಿ ವೈದ್ಯರು ಆಕೆಗೆ ರಕ್ತ ನೀಡುವ ವ್ಯವಸ್ಥೆ ಮಾಡಿದ್ದಾರೆ.

ಇದನ್ನೂ ಓದಿ: Crime News: ಅಮ್ಮನಿಗೆ ಔಷಧ ತರಲು ಹೋದ ಬಾಲಕಿ ಮೇಲೆ ಪಕ್ಕದ ಮನೆಯವನಿಂದ ಅತ್ಯಾಚಾರ

Murder: ಮರುಮದುವೆಯಾಗಲು ಮುಂದಾದ 80 ವರ್ಷದ ತಂದೆಯನ್ನು ಕೊಚ್ಚಿ ಕೊಂದ ಮಗ!

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ