AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jodhpur Clash: ಈದ್ ವೇಳೆ ಜೋಧ್​ಪುರದಲ್ಲಿ 2 ಸಮುದಾಯಗಳ ನಡುವೆ ಘರ್ಷಣೆ, ಕಲ್ಲು ತೂರಾಟ; ಇಂಟರ್ನೆಟ್​ ಸೇವೆ ಸ್ಥಗಿತ

ನಮಾಜ್ ಮಾಡುವ ಪ್ರದೇಶದ ಬಳಿ ಪರಶುರಾಮನ ಧ್ವಜವನ್ನು ಹಾರಿಸಲಾಗಿತ್ತು. ಸ್ಥಳೀಯ ಮುಸ್ಲಿಂ ಸಮುದಾಯದವರು ಈದ್ ಸಂದರ್ಭದಲ್ಲಿ ಈ ಧ್ವಜವನ್ನು ತೆಗೆದುಹಾಕುವ ಬಗ್ಗೆ ವಿವಾದ ಉಂಟಾಗಿದೆ.

Jodhpur Clash: ಈದ್ ವೇಳೆ ಜೋಧ್​ಪುರದಲ್ಲಿ 2 ಸಮುದಾಯಗಳ ನಡುವೆ ಘರ್ಷಣೆ, ಕಲ್ಲು ತೂರಾಟ; ಇಂಟರ್ನೆಟ್​ ಸೇವೆ ಸ್ಥಗಿತ
ಜೋಧ್​ಪುರ ಗಲಭೆ
TV9 Web
| Edited By: |

Updated on: May 03, 2022 | 11:22 AM

Share

ಜೋಧ್​ಪುರ: ಸೋಮವಾರ ತಡರಾತ್ರಿ ಜೋಧ್‌ಪುರದ (Jodhpur) ಜಲೋರಿ ಗೇಟ್ ಪ್ರದೇಶದಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಪ್ರತಿಮೆಯ ಮೇಲೆ ಧ್ವಜಾರೋಹಣ ಮಾಡುವ ಕುರಿತು ಎರಡು ಸಮುದಾಯಗಳ ಸದಸ್ಯರ ನಡುವೆ ಘರ್ಷಣೆ ನಡೆದಿದೆ. ಈ ಘರ್ಷಣೆಯ ಬಳಿಕ ಕಲ್ಲು ತೂರಾಟ ಕೂಡ ನಡೆದಿದೆ. ಈ ಘಟನೆಯಲ್ಲಿ ಕೆಲವು ಪೊಲೀಸರು ಗಾಯಗೊಂಡಿದ್ದು, ಜೋಧ್​ಪುರದಲ್ಲಿ ಇಂಟರ್ನೆಟ್ ಸೇವೆಗಳನ್ನು (Internet Service) ಸ್ಥಗಿತಗೊಳಿಸಲಾಗಿದೆ.

ಸೋಮವಾರ ರಾತ್ರಿ 11.10ಕ್ಕೆ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈದ್ ದಿನದಂದೇ ಪರಶುರಾಮ ಜಯಂತಿಯಂದು ಹಾಕಲಾಗಿದ್ದ ಧ್ವಜಗಳ ವಿಚಾರವಾಗಿ ಘರ್ಷಣೆ ಆರಂಭವಾಗಿದೆ. ನಮಾಜ್ ಮಾಡುವ ಪ್ರದೇಶದ ಬಳಿ ಪರಶುರಾಮನ ಧ್ವಜವನ್ನು ಹಾರಿಸಲಾಗಿತ್ತು. ಸ್ಥಳೀಯ ಮುಸ್ಲಿಂ ಸಮುದಾಯದವರು ಈದ್ ಸಂದರ್ಭದಲ್ಲಿ ಈ ಧ್ವಜವನ್ನು ತೆಗೆದುಹಾಕುವ ಬಗ್ಗೆ ವಿವಾದ ಉಂಟಾಗಿದೆ ಎಂದು ಹೆಚ್ಚುವರಿ ಮಹಾನಿರ್ದೇಶಕ (ಕಾನೂನು ಮತ್ತು ಸುವ್ಯವಸ್ಥೆ) ಹವಾ ಸಿಂಗ್ ಘುಮಾರಿಯಾ ಹೇಳಿದ್ದಾರೆ.

ಈ ಪ್ರದೇಶವು ಈದ್ಗಾದ ಪಕ್ಕದಲ್ಲಿರುವುದರಿಂದ ಮತ್ತು ಈದ್‌ನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ನಮಾಜ್ ಮಾಡುವ ಸಾಧ್ಯತೆಯಿರುವುದರಿಂದ ಪೊಲೀಸ್ ಕಮಿಷನರ್ ಮಧ್ಯಪ್ರವೇಶಿಸಿ ಸ್ಥಳದ ಸಮೀಪಕ್ಕೆ ಜನರನ್ನು ಬರಲು ಬಿಡಲಿಲ್ಲ. ಆದರೆ, ಜನರನ್ನು ಚದುರಿಸುವಾಗ ಉದ್ವಿಗ್ನತೆ ಹೆಚ್ಚಾಗಿ, ಕಲ್ಲು ತೂರಾಟ ನಡೆಯಿತು. ಸದ್ಯಕ್ಕೆ ಪರಿಸ್ಥಿತಿ ನಿಯಂತ್ರಣದಲ್ಲಿದೆ ಮತ್ತು ಜೋಧ್‌ಪುರದಲ್ಲಿ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಜೋಧ್‌ಪುರದ ಜಲೋರಿ ಗೇಟ್‌ನಲ್ಲಿ ಎರಡು ಗುಂಪುಗಳ ನಡುವಿನ ಘರ್ಷಣೆಯ ಪರಿಣಾಮವಾಗಿ ಉದ್ವಿಗ್ನತೆ ದುರದೃಷ್ಟಕರವಾಗಿದೆ. ಆ ಸ್ಥಳದಲ್ಲಿ ಹೇಗಾದರೂ ಮಾಡಿ ಶಾಂತಿ ಸುವ್ಯವಸ್ಥೆ ಕಾಪಾಡುವಂತೆ ಆಡಳಿತಕ್ಕೆ ಸೂಚನೆ ನೀಡಿದ್ದೇನೆ. ಜೋಧ್‌ಪುರ, ಮಾರ್ವಾರ್‌ನಲ್ಲಿನ ಪ್ರೀತಿ ಮತ್ತು ಸಹೋದರತ್ವದ ಸಂಪ್ರದಾಯವನ್ನು ಗೌರವಿಸಿ, ಶಾಂತಿ ಮತ್ತು ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವಲ್ಲಿ ಸಹಾಯ ಮಾಡಲು ನಾನು ಎಲ್ಲಾ ಕಡೆಯವರಿಗೆ ಮನವಿ ಮಾಡುತ್ತೇನೆ ಎಂದು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಇಂದು ಬೆಳಗ್ಗೆ ಟ್ವೀಟ್ ಮಾಡಿದ್ದಾರೆ.

ಸೋಮವಾರ ರಾತ್ರಿ ಧಾರ್ಮಿಕ ಧ್ವಜಾರೋಹಣಕ್ಕೆ ಸಂಬಂಧಿಸಿದಂತೆ ಎರಡು ಗುಂಪುಗಳು ಮುಖಾಮುಖಿಯಾದ ನಂತರ ರಾಜಸ್ಥಾನದ ಜೋಧ್‌ಪುರ ಪಟ್ಟಣದಲ್ಲಿ ಉದ್ವಿಗ್ನತೆ ಉಂಟಾಗಿದೆ. ಈದ್-ಉಲ್-ಫಿತರ್ ಮತ್ತು ಅಕ್ಷಯ ತೃತೀಯ ಹಬ್ಬಗಳ ಮೊದಲು ಒಂದು ಸಮುದಾಯದ ಕೆಲವು ದುಷ್ಕರ್ಮಿಗಳು ಬಲ್ಮುಕಂದ್ ಬಿಸ್ಸಾ ವೃತ್ತದಲ್ಲಿ ಇಸ್ಲಾಮಿಕ್ ಧ್ವಜವನ್ನು ಹಾಕಿ ಕೇಸರಿ ಧ್ವಜವನ್ನು ತೆಗೆದ ನಂತರ ಘರ್ಷಣೆಗಳು ನಡೆದಿವೆ. ಈ ಗಲಾಟೆಯಲ್ಲಿ ಹಲವು ಪೊಲೀಸ್ ವಾಹನಗಳಿಗೆ ಹಾನಿಯಾಗಿದೆ.

ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಈದ್ ನಮಾಝ್ ಮುಗಿದ ಕೂಡಲೇ ಅಲ್ಲಾಹು ಅಕ್ಬರ್ ಘೋಷಣೆ ಮೊಳಗಿತು. ಇದರಿಂದ ಜಲೋರಿ ಗೇಟ್ ಪ್ರದೇಶದಲ್ಲಿ ಕೋಮು ಉದ್ವಿಗ್ನತೆ ಉಂಟಾಯಿತು. ಇದು ಕಲ್ಲು ತೂರಾಟಕ್ಕೆ ಕಾರಣವಾಯಿತು. ನಮಾಜ್ ಮಾಡಿದ ನಂತರ ಗುಂಪು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿ ವಾಹನಗಳನ್ನು ಧ್ವಂಸಗೊಳಿಸಿದರು. ವಸತಿ ಪ್ರದೇಶಗಳಲ್ಲೂ ಕಲ್ಲು ತೂರಾಟ ನಡೆದಿದೆ. ಈ ಘಟನೆಯಲ್ಲಿ ಹಲವಾರು ಅಂಗಡಿಗಳು ಮತ್ತು ಶೋರೂಂಗಳಿಗೂ ಹಾನಿಯಾಗಿದೆ.

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ