ಜೋಧ್​ಪುರದಲ್ಲಿ 11 ಮಂದಿ ಪಾಕಿಸ್ತಾನಿ ವಲಸಿಗರ ಸಾಮೂಹಿಕ ಆತ್ಮಹತ್ಯೆ ಪ್ರಕರಣ, 3 ವರ್ಷದ ಬಳಿಕ ಅಂತೂ ಕಾರಣ ಬಹಿರಂಗವಾಯ್ತು

ರಾಜಸ್ತಾನ(Rajasthan)ದ ಜೋಧ್​ಪುರ ಜಿಲ್ಲೆಯ ಹೊಲವೊಂದರಲ್ಲಿ ಪಾಕಿಸ್ತಾನ(Pakistan)ದಿಂದ ವಲಸೆ(Migration) ಬಂದಿದ್ದ ಹಿಂದೂ ಕುಟುಂಬದ 11 ಸದಸ್ಯರು ಶವವಾಗಿ ಪತ್ತೆಯಾಗಿದ್ದ ಪ್ರಕರಣಕ್ಕೆ ಈಗ ಟ್ವಿಸ್ಟ್​ ಸಿಕ್ಕಿದೆ.

ಜೋಧ್​ಪುರದಲ್ಲಿ 11 ಮಂದಿ ಪಾಕಿಸ್ತಾನಿ ವಲಸಿಗರ ಸಾಮೂಹಿಕ ಆತ್ಮಹತ್ಯೆ ಪ್ರಕರಣ, 3 ವರ್ಷದ ಬಳಿಕ ಅಂತೂ ಕಾರಣ ಬಹಿರಂಗವಾಯ್ತು
ಜೋಧ್​ಪುರ್ ಪಾಕಿಸ್ತಾನ ವಲಸಿಗರ ಆತ್ಮಹತ್ಯೆImage Credit source: India TV
Follow us
|

Updated on:Apr 23, 2023 | 10:03 AM

ರಾಜಸ್ತಾನ(Rajasthan)ದ ಜೋಧ್​ಪುರ ಜಿಲ್ಲೆಯ ಹೊಲವೊಂದರಲ್ಲಿ ಪಾಕಿಸ್ತಾನ(Pakistan)ದಿಂದ ವಲಸೆ(Migration) ಬಂದಿದ್ದ ಹಿಂದೂ ಕುಟುಂಬದ 11 ಸದಸ್ಯರು ಶವವಾಗಿ ಪತ್ತೆಯಾಗಿದ್ದ ಪ್ರಕರಣಕ್ಕೆ ಈಗ ಟ್ವಿಸ್ಟ್​ ಸಿಕ್ಕಿದೆ. ಪೊಲೀಸರು ಆತ್ಮಹತ್ಯೆಗಿದ್ದ ಕಾರಣವನ್ನು ಬಹಿರಂಗಪಡಿಸಿದ್ದಾರೆ. ಕೌಟುಂಬಿಕ ಕಲಹದಿಂದ 11 ಮಂದಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನುವ ಮಾಹಿತಿಯನ್ನು ಪೊಲೀಸರು ನೀಡಿದ್ದಾರೆ. ಪೊಲೀಸರು ಶನಿವಾರ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಸಿದ್ದಾರೆ.

2020ರ ಆಗಸ್ಟ್ 9 ರಂದು ಜೋಧ್​ಪುರದ ದೇಚು ತಹಸಿಲ್​ನ ಲೋಡ್ಟಾ ಗ್ರಾಮದ ಜಮೀನಿನಲ್ಲಿ ಒಂದೇ ಕುಟುಂಬದ 11 ಮಂದಿ ಸದಸ್ಯರು ಶವವಾಗಿ ಪತ್ತೆಯಾಗಿದ್ದರು. ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಇತರ ಕೆಲವು ಕುಟುಂಬ ಸದಸ್ಯರು ಮತ್ತು ಸಮುದಾಯದ ಕೆಲವು ಜನರ ವಿರುದ್ಧ ಪ್ರಕರಣ ದಾಖಲಾಗಿತ್ತು.

ಮತ್ತಷ್ಟು ಓದಿ: Magadi: ಕುರಿಗಳನ್ನು ತೊಳೆಯಲು ಹೋಗಿದ್ದವರು ಕೆರೆ ಪಾಲು: ಒಂದೇ ಕುಟುಂಬದ ಮೂವರು ದುರ್ಮರಣ

ಮೃತರನ್ನು ಬುಧರಾಮ್ ಭೀಲ್ (75) ಎಂದು ಗುರುತಿಸಲಾಗಿದೆ; ಅವರ ಪತ್ನಿ ಅಂತರಾ ದೇವಿ (70); ಮಗ ರವಿ (31); ಪುತ್ರಿಯರಾದ ಪ್ರಿಯಾ (25) ಮತ್ತು ಸುಮನ್ (22); ಮೊಮ್ಮಕ್ಕಳಾದ ಮುಕ್ದಾಶ್ (17) ಮತ್ತು ನೈನ್ (12); ಲಕ್ಷ್ಮಿ (40) ಮತ್ತು ಕುಟುಂಬದ ಉಳಿದಿರುವ ಸದಸ್ಯ ಕೇವಲ್ ರಾಮ್ ಅವರ ಮೂವರು ಅಪ್ರಾಪ್ತ ಪುತ್ರರು. ಕೇವಲ್ ರಾಮ್ ಅವರ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಾಗಿತ್ತು.

ಗುಡಿಸಿಲಿನಲ್ಲಿ ಪೊಲೀಸರಿಗೆ ಕೆಲವು ರಾಸಾಯನಿಕದ ಬಾಟಲಿಗಳು ಸಿಕ್ಕಿದ್ದವು, ಮೃತಪಟ್ಟವರೆಲ್ಲರಿಗೂ ಯಾವುದೋ ವಿಷಕಾರಿ ಪದಾರ್ಥವನ್ನು ನೀಡಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಅವರು ಪಾಕಿಸ್ತಾನದಿಂದ ಭಾರತಕ್ಕೆ ವಲಸೆ ಬಂದ ಹಿಂದುಗಳಾಗಿದ್ದು, ಭಿಲ್ ಸಮುದಾಯಕ್ಕೆ ಸೇರಿದವರಾಗಿದ್ದರು.

ಪಾಕಿಸ್ತಾನದ ಹಿಂದೂ ವಲಸಿಗರ ಹಕ್ಕುಗಳಿಗಾಗಿ ಕೆಲಸ ಮಾಡುತ್ತಿರುವ ಸೀಮಂತ್ ಲೋಕ ಸಂಘಟನೆಯ ಮುಖ್ಯಸ್ಥ ಹಿಂದೂ ಸಿಂಗ್ ಸೋಧಾ, ಆತ್ಮಹತ್ಯೆಯ ತನಿಖೆಯಲ್ಲಿ ಪೊಲೀಸರು ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಆರೋಪಿಸಿದ್ದರು.ಭಾರತದಲ್ಲಿ ಈ ಸಮುದಾಯಕ್ಕೆ ಅನ್ಯಾಯವಾಗುತ್ತಿದೆ ಎಂಬುದಕ್ಕೆ ಇದೊಂದು ನಿದರ್ಶನ ಎಂದು ಕಿಡಿಕಾರಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:02 am, Sun, 23 April 23

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ