AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jodhpur: ಸರ್ಕಾರಿ ಆಸ್ಪತ್ರೆಯಲ್ಲಿ ಮಾನಸಿಕ ಅಸ್ವಸ್ಥ ರೋಗಿಗಳ ಕಾಲು ಕಚ್ಚುತ್ತಿವೆ ಇಲಿಗಳು

ಜೋಧ್​ಪುರದ ಎಂಡಿಎಂ ಆಸ್ಪತ್ರೆಯ ಮನೋವೈದ್ಯಕೀಯ ವಿಭಾಗದಲ್ಲಿ ಇಲಿಗಳು ರೋಗಿಗಳ ಕಾಲುಗಳನ್ನು ಕಚ್ಚುತ್ತಿವೆ ಎನ್ನುವ ದೂರು ಕೇಳಿಬಂದಿದೆ. ಆಡಳಿತವು ಸೋಮವಾರ ಈ ವಿಷಯದ ಬಗ್ಗೆ ತನಿಖೆ ನಡೆಸಲು ತನಿಖಾ ಸಮಿತಿಯನ್ನು ರಚಿಸಿತು.

Jodhpur: ಸರ್ಕಾರಿ ಆಸ್ಪತ್ರೆಯಲ್ಲಿ ಮಾನಸಿಕ ಅಸ್ವಸ್ಥ ರೋಗಿಗಳ ಕಾಲು ಕಚ್ಚುತ್ತಿವೆ ಇಲಿಗಳು
ಇಲಿ
ನಯನಾ ರಾಜೀವ್
|

Updated on: Jul 04, 2023 | 11:16 AM

Share

ಜೋಧ್​ಪುರ(Jodhpur)ದ ಎಂಡಿಎಂ ಆಸ್ಪತ್ರೆಯ ಮನೋವೈದ್ಯಕೀಯ ವಿಭಾಗದಲ್ಲಿ ಇಲಿಗಳು ರೋಗಿಗಳ ಕಾಲುಗಳನ್ನು ಕಚ್ಚುತ್ತಿವೆ ಎನ್ನುವ ದೂರು ಕೇಳಿಬಂದಿದೆ. ಆಡಳಿತವು ಸೋಮವಾರ ಈ ವಿಷಯದ ಬಗ್ಗೆ ತನಿಖೆ ನಡೆಸಲು ತನಿಖಾ ಸಮಿತಿಯನ್ನು ರಚಿಸಿತು. ನಾಲ್ಕು ಮಾನಸಿಕ ರೋಗಿಗಳು ಕಳೆದ ವಾರ ದೂರು ನೀಡಿದ್ದರು, ಈಗ ಮತ್ತೆ ಅಂಥದ್ದೇ ಘಟನೆ ಮುನ್ನೆಲೆಗೆ ಬಂದಿದ್ದು ಆಡಳಿತವನ್ನು ಮಧ್ಯಪ್ರವೇಶಿಸುವಂತೆ ಕೇಳಿಕೊಳ್ಳಲಾಯಿತು.

ನಾವು ಸಮಿತಿಯನ್ನು ರಚಿಸಿದ್ದೇವೆ, ಮನೋವೈದ್ಯಕೀಯ ವಿಭಾಗದಲ್ಲಿ ರೋಗಿಗಳಿಗೆ ಉಂಟಾದ ಗಾಯಗಳು ಇಲಿಗಳಿಂದ ಉಂಟಾಗಿದೆಯೇ ಅಥವಾ ಇನ್ನಾವುದೇ ಕಾರಣದಿಂದ ಉಂಟಾಗಿದೆಯೇ ಎಂಬುದನ್ನು ಮೊದಲು ಖಚಿತಪಡಿಸಿಕೊಳ್ಳುತ್ತೇವೆ ಎಂದು ದು ಎಸ್‌ಎನ್ ವೈದ್ಯಕೀಯ ಕಾಲೇಜು ಮತ್ತು ಸಂಬಂಧಿತ ಆಸ್ಪತ್ರೆಗಳ ಪ್ರಾಂಶುಪಾಲರಾದ ದಿಲೀಪ್ ಕಚ್ವಾಹಾ ಹೇಳಿದರು.

ಮತ್ತಷ್ಟು ಓದಿ: Uttar Pradesh: ಆಸ್ಪತ್ರೆಯ ಲಿಫ್ಟ್​ನಲ್ಲಿ ಸಿಲುಕಿಕೊಂಡ 12 ರೋಗಿಗಳು, 20 ನಿಮಿಷಗಳ ಬಳಿಕ ರಕ್ಷಣೆ

ವರದಿಯ ಆಧಾರದ ಮೇಲೆ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು, ಆಸ್ಪತ್ರೆಯಲ್ಲಿ ಕೀಟ ನಿಯಂತ್ರಣದ ಜವಾಬ್ದಾರಿ ಹೊಂದಿರುವ ರಾಜಸ್ಥಾನ ಪೆಸ್ಟ್ ಕಂಟ್ರೋಲ್ ವಿರುದ್ಧ ಕ್ರಮ ಕೈಗೊಳ್ಳಲು ಆಸ್ಪತ್ರೆ ಆಡಳಿತಕ್ಕೆ ಸೂಚಿಸಲಾಗಿದೆ ಎಂದು ಕಚ್ವಾಹಾ ಹೇಳಿದರು.

ರೋಗಿಗಳ ವೈದ್ಯಕೀಯ ಸ್ಥಿತಿಯನ್ನು ಪರಿಗಣಿಸಿ ಮನೋವೈದ್ಯಕೀಯ ವಿಭಾಗದಲ್ಲಿ ಕೀಟನಾಶಕ ಸಿಂಪಡಣೆಯಿಂದ ಅಪಾಯವಿದೆ ಎಂದು ತಿಳಿಸಿದ ಆಡಳಿತವು ವಾರ್ಡ್ ಅನ್ನು ಸ್ಥಳಾಂತರಿಸಲು ನಿರ್ಧರಿಸಿದೆ ಎಂದು ಹೇಳಿದರು.

ಜೋಧ್‌ಪುರ ವಿಭಾಗದ ಅತಿದೊಡ್ಡ ಸರ್ಕಾರಿ ಆಸ್ಪತ್ರೆಯಾಗಿರುವ ಎಂಡಿಎಂ ಆಸ್ಪತ್ರೆಯು ನಡೆಯುತ್ತಿರುವ ನಿರ್ಮಾಣ ಕಾರ್ಯ ಮತ್ತು ನೆಲದ ಮೇಲೆ ಬಿದ್ದಿರುವ ಆಹಾರ ತ್ಯಾಜ್ಯಗಳಿಂದ ಇಲಿಗಳಿಗೆ ನೆಲೆಯಾಗಿದೆ, ಇದು ಇಲಿಗಳಿಗೆ ಅನುಕೂಲಕರ ಆವಾಸಸ್ಥಾನವಾಗಿದೆ ಎಂದಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
ಗ್ಯಾಸ್​ ಇಲ್ಲದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು