AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jodhpur: ಸರ್ಕಾರಿ ಆಸ್ಪತ್ರೆಯಲ್ಲಿ ಮಾನಸಿಕ ಅಸ್ವಸ್ಥ ರೋಗಿಗಳ ಕಾಲು ಕಚ್ಚುತ್ತಿವೆ ಇಲಿಗಳು

ಜೋಧ್​ಪುರದ ಎಂಡಿಎಂ ಆಸ್ಪತ್ರೆಯ ಮನೋವೈದ್ಯಕೀಯ ವಿಭಾಗದಲ್ಲಿ ಇಲಿಗಳು ರೋಗಿಗಳ ಕಾಲುಗಳನ್ನು ಕಚ್ಚುತ್ತಿವೆ ಎನ್ನುವ ದೂರು ಕೇಳಿಬಂದಿದೆ. ಆಡಳಿತವು ಸೋಮವಾರ ಈ ವಿಷಯದ ಬಗ್ಗೆ ತನಿಖೆ ನಡೆಸಲು ತನಿಖಾ ಸಮಿತಿಯನ್ನು ರಚಿಸಿತು.

Jodhpur: ಸರ್ಕಾರಿ ಆಸ್ಪತ್ರೆಯಲ್ಲಿ ಮಾನಸಿಕ ಅಸ್ವಸ್ಥ ರೋಗಿಗಳ ಕಾಲು ಕಚ್ಚುತ್ತಿವೆ ಇಲಿಗಳು
ಇಲಿ
ನಯನಾ ರಾಜೀವ್
|

Updated on: Jul 04, 2023 | 11:16 AM

Share

ಜೋಧ್​ಪುರ(Jodhpur)ದ ಎಂಡಿಎಂ ಆಸ್ಪತ್ರೆಯ ಮನೋವೈದ್ಯಕೀಯ ವಿಭಾಗದಲ್ಲಿ ಇಲಿಗಳು ರೋಗಿಗಳ ಕಾಲುಗಳನ್ನು ಕಚ್ಚುತ್ತಿವೆ ಎನ್ನುವ ದೂರು ಕೇಳಿಬಂದಿದೆ. ಆಡಳಿತವು ಸೋಮವಾರ ಈ ವಿಷಯದ ಬಗ್ಗೆ ತನಿಖೆ ನಡೆಸಲು ತನಿಖಾ ಸಮಿತಿಯನ್ನು ರಚಿಸಿತು. ನಾಲ್ಕು ಮಾನಸಿಕ ರೋಗಿಗಳು ಕಳೆದ ವಾರ ದೂರು ನೀಡಿದ್ದರು, ಈಗ ಮತ್ತೆ ಅಂಥದ್ದೇ ಘಟನೆ ಮುನ್ನೆಲೆಗೆ ಬಂದಿದ್ದು ಆಡಳಿತವನ್ನು ಮಧ್ಯಪ್ರವೇಶಿಸುವಂತೆ ಕೇಳಿಕೊಳ್ಳಲಾಯಿತು.

ನಾವು ಸಮಿತಿಯನ್ನು ರಚಿಸಿದ್ದೇವೆ, ಮನೋವೈದ್ಯಕೀಯ ವಿಭಾಗದಲ್ಲಿ ರೋಗಿಗಳಿಗೆ ಉಂಟಾದ ಗಾಯಗಳು ಇಲಿಗಳಿಂದ ಉಂಟಾಗಿದೆಯೇ ಅಥವಾ ಇನ್ನಾವುದೇ ಕಾರಣದಿಂದ ಉಂಟಾಗಿದೆಯೇ ಎಂಬುದನ್ನು ಮೊದಲು ಖಚಿತಪಡಿಸಿಕೊಳ್ಳುತ್ತೇವೆ ಎಂದು ದು ಎಸ್‌ಎನ್ ವೈದ್ಯಕೀಯ ಕಾಲೇಜು ಮತ್ತು ಸಂಬಂಧಿತ ಆಸ್ಪತ್ರೆಗಳ ಪ್ರಾಂಶುಪಾಲರಾದ ದಿಲೀಪ್ ಕಚ್ವಾಹಾ ಹೇಳಿದರು.

ಮತ್ತಷ್ಟು ಓದಿ: Uttar Pradesh: ಆಸ್ಪತ್ರೆಯ ಲಿಫ್ಟ್​ನಲ್ಲಿ ಸಿಲುಕಿಕೊಂಡ 12 ರೋಗಿಗಳು, 20 ನಿಮಿಷಗಳ ಬಳಿಕ ರಕ್ಷಣೆ

ವರದಿಯ ಆಧಾರದ ಮೇಲೆ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು, ಆಸ್ಪತ್ರೆಯಲ್ಲಿ ಕೀಟ ನಿಯಂತ್ರಣದ ಜವಾಬ್ದಾರಿ ಹೊಂದಿರುವ ರಾಜಸ್ಥಾನ ಪೆಸ್ಟ್ ಕಂಟ್ರೋಲ್ ವಿರುದ್ಧ ಕ್ರಮ ಕೈಗೊಳ್ಳಲು ಆಸ್ಪತ್ರೆ ಆಡಳಿತಕ್ಕೆ ಸೂಚಿಸಲಾಗಿದೆ ಎಂದು ಕಚ್ವಾಹಾ ಹೇಳಿದರು.

ರೋಗಿಗಳ ವೈದ್ಯಕೀಯ ಸ್ಥಿತಿಯನ್ನು ಪರಿಗಣಿಸಿ ಮನೋವೈದ್ಯಕೀಯ ವಿಭಾಗದಲ್ಲಿ ಕೀಟನಾಶಕ ಸಿಂಪಡಣೆಯಿಂದ ಅಪಾಯವಿದೆ ಎಂದು ತಿಳಿಸಿದ ಆಡಳಿತವು ವಾರ್ಡ್ ಅನ್ನು ಸ್ಥಳಾಂತರಿಸಲು ನಿರ್ಧರಿಸಿದೆ ಎಂದು ಹೇಳಿದರು.

ಜೋಧ್‌ಪುರ ವಿಭಾಗದ ಅತಿದೊಡ್ಡ ಸರ್ಕಾರಿ ಆಸ್ಪತ್ರೆಯಾಗಿರುವ ಎಂಡಿಎಂ ಆಸ್ಪತ್ರೆಯು ನಡೆಯುತ್ತಿರುವ ನಿರ್ಮಾಣ ಕಾರ್ಯ ಮತ್ತು ನೆಲದ ಮೇಲೆ ಬಿದ್ದಿರುವ ಆಹಾರ ತ್ಯಾಜ್ಯಗಳಿಂದ ಇಲಿಗಳಿಗೆ ನೆಲೆಯಾಗಿದೆ, ಇದು ಇಲಿಗಳಿಗೆ ಅನುಕೂಲಕರ ಆವಾಸಸ್ಥಾನವಾಗಿದೆ ಎಂದಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?