AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್ 19 ಲಸಿಕೆ ತಯಾರಿಕೆಗಾಗಿ ತೆಲಂಗಾಣ ಮೂಲದ ಕಂಪನಿಯೊಂದಿಗೆ ಕೈಜೋಡಿಸಿದ ಜಾನ್ಸನ್ ಆ್ಯಂಡ್​ ಜಾನ್ಸನ್​..

ಭಾರತದಲ್ಲಿ ನಮ್ಮ ಕಂಪನಿಯ ಕೊವಿಡ್​ 19 ಲಸಿಕೆಯ ಕ್ಲಿನಿಕಲ್​ ಪ್ರಯೋಗಗಳಿಗೆ ಅನುಮೋದನೆ ನೀಡುವ ಬಗ್ಗೆ ಇಲ್ಲಿನ ಕೇಂದ್ರ ಸರ್ಕಾರದೊಂದಿಗೆ ಚರ್ಚೆ ನಡೆಯುತ್ತಿದೆ ಎಂದೂ ಜಾನ್ಸನ್ ಆ್ಯಂಡ್​ ಜಾನ್ಸನ್​ ಕಂಪನಿ ತಿಳಿಸಿದೆ.

ಕೊವಿಡ್ 19 ಲಸಿಕೆ ತಯಾರಿಕೆಗಾಗಿ ತೆಲಂಗಾಣ ಮೂಲದ ಕಂಪನಿಯೊಂದಿಗೆ ಕೈಜೋಡಿಸಿದ ಜಾನ್ಸನ್ ಆ್ಯಂಡ್​ ಜಾನ್ಸನ್​..
ಕೊವಿಡ್ 19 ಲಸಿಕೆ ಪ್ರಾತಿನಿಧಿಕ ಚಿತ್ರ
Lakshmi Hegde
|

Updated on: May 19, 2021 | 4:13 PM

Share

ಭಾರತದಲ್ಲಿ ಕೊವಿಡ್​ 19 ಲಸಿಕೆ ತಯಾರಿಕೆಗಾಗಿ ಯುಎಸ್​ ಮೂಲದ ಜಾನ್ಸನ್​ ಆ್ಯಂಡ್​ ಜಾನ್ಸನ್ ಕಂಪನಿ, ತೆಲಂಗಾಣ ಮೂಲದ ಬಯಲಾಜಿಕಲ್​​​ ಇ ಲಿಮಿಟೆಡ್​​ನೊಂದಿಗೆ ಕೈಜೋಡಿಸಿದೆ. ಈ ಲಸಿಕೆಗೆ ಜಾನ್ಸೆನ್​ ಎಂದು ಹೆಸರಿಡಲಾಗಿದ್ದು, ಈಗಾಗಲೇ ಯುಎಸ್​, ಯುರೋಪ್​, ಥೈಲ್ಯಾಂಡ್​, ಸೌತ್​ ಆಫ್ರಿಕಾಗಳಲ್ಲಿ ಬಳಕೆಗೆ ಅನುಮೋದನೆಯೂ ಸಿಕ್ಕಿದೆ. ಜಾನ್ಸನ್​ ಆ್ಯಂಡ್ ಜಾನ್ಸನ್​ ಕಂಪನಿಯು, ಬಯೋಲಜಿಕಲ್ ಇ ಲಿಮಿಟೆಡ್​​ನೊಂದಿಗೆ ಸೇರಿ ಜಾನ್ಸೆನ್ ಕೊವಿಡ್​ 19 ಲಸಿಕೆ ತಯಾರಿಕೆ ಮಾಡಲಾಗಿದೆ. ಜಗತ್ತಿನಾದ್ಯಂತ ವಿವಿಧ ವ್ಯವಸ್ಥೆ, ಸಂಸ್ಥೆಗಳು ನಮ್ಮ ಕಂಪನಿಯ ಲಸಿಕೆ ತಯಾರಿಕೆಯಲ್ಲಿ ತೊಡಗಿಕೊಂಡಿವೆ. ಹಾಗೇ ಈ ಭಾರತದ ಬಯೋಲಜಿಕಲ್​ ಇ ಲಿಮಿಟೆಡ್​ ಕೂಡ ನಮ್ಮ ಲಸಿಕೆಯ ಜಾಗತಿಕ ಪೂರೈಕೆ ಜಾಲದಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಎಂಬ ನಂಬಿಕೆ ಇದೆ ಎಂದು ಜಾನ್ಸನ್​ ಆ್ಯಂಡ್ ಜಾನ್ಸನ್​ ಕಂಪನಿ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿದೆ.

ನಮ್ಮ ಕಂಪನಿಯ ಲಸಿಕೆ ಉತ್ಪಾದನಾ ಸಮಾರ್ಥ್ಯ ಹೆಚ್ಚಿಸಲು, ಜಗತ್ತಿನಾದ್ಯಂತ ಕೊವಿಡ್​ 19 ಲಸಿಕೆಯನ್ನು ಪೂರೈಸಲು ಶ್ರಮವಹಿಸಿ ಕೆಲಸ ಮಾಡಲಾಗುತ್ತಿದೆ. ಈ ಸಾಂಕ್ರಾಮಿಕವನ್ನು ಹೋಗಲಾಡಿಸಲು ನಾವು ಸರ್ಕಾರಗಳು, ಆರೋಗ್ಯ ವ್ಯವಸ್ಥೆಗಳು, ಇನ್ನಿತರ ಕಂಪನಿಗಳೊಂದಿಗೆ ಸಹಭಾಗಿತ್ವ, ಸಹಯೋಗವನ್ನು ಹೊಂದಿದ್ದೇವೆ. ನಮ್ಮೊಂದಿಗೆ ಕೈಜೋಡಿಸಿದ ಎಲ್ಲರಿಗೂ ಧನ್ಯವಾದಗಳನ್ನು ಸಲ್ಲಿಸುತ್ತೇವೆ ಎಂದೂ ಜಾನ್ಸನ್​ ಆ್ಯಂಡ್ ಜಾನ್ಸನ್​ ಹೇಳಿಕೊಂಡಿದೆ.

ಇನ್ನು ಭಾರತದಲ್ಲಿ ನಮ್ಮ ಕಂಪನಿಯ ಕೊವಿಡ್​ 19 ಲಸಿಕೆಯ ಕ್ಲಿನಿಕಲ್​ ಪ್ರಯೋಗಗಳಿಗೆ ಅನುಮೋದನೆ ನೀಡುವ ಬಗ್ಗೆ ಇಲ್ಲಿನ ಕೇಂದ್ರ ಸರ್ಕಾರದೊಂದಿಗೆ ಚರ್ಚೆ ನಡೆಯುತ್ತಿದೆ ಎಂದೂ ಔಷಧೀಯ ಕಂಪನಿ ಮಾಹಿತಿ ನೀಡಿದೆ. ಭಾರತದಲ್ಲಿ ಸದ್ಯ ಕೊವಿಶೀಲ್ಡ್​, ಕೊವ್ಯಾಕ್ಸಿನ್ ಮತ್ತು ರಷ್ಯಾದ ಸ್ಪುಟ್ನಿಕ್ ವಿ ಲಸಿಕೆಗಳ ಬಳಕೆಗೆ ಸರ್ಕಾರ ಅನುಮೋದನೆ ನೀಡಿದೆ. ಇನ್ನು ಜಾನ್ಸನ್​ ಆ್ಯಂಡ್ ಜಾನ್ಸನ್​ ಕಂಪನಿಯ ಲಸಿಕೆಗೆ ಅನುಮತಿ ಸಿಕ್ಕರೆ, ದೇಶದಲ್ಲಿ ಇನ್ನೊಂದು ಲಸಿಕೆ ಬಳಕೆಗೆ ಅವಕಾಶ ಸಿಗುತ್ತದೆ.

ಇದನ್ನೂ ಓದಿ: ರೋಗನಿರೋಧಕ ಶಕ್ತಿ ಹೆಚ್ಚಿಸಲು ಆಹಾರ ಅಭ್ಯಾಸದಲ್ಲಿನ ಈ ಕೆಲವು ಬದಲಾವಣೆ ಬಹಳ ಮುಖ್ಯ

Viral: ಕೊರೊನಾ ಸೋಂಕಿತರಿಗೆ ಈ ಪುಟ್ಟ ಬಾಲಕನ ವಿಶೇಷ ಸಂದೇಶ

(Johnson and Johnson Joins Hand with Telangana based Company to Manufacture Covid 19 Vaccine)

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್