AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್ 19 ಲಸಿಕೆ ತಯಾರಿಕೆಗಾಗಿ ತೆಲಂಗಾಣ ಮೂಲದ ಕಂಪನಿಯೊಂದಿಗೆ ಕೈಜೋಡಿಸಿದ ಜಾನ್ಸನ್ ಆ್ಯಂಡ್​ ಜಾನ್ಸನ್​..

ಭಾರತದಲ್ಲಿ ನಮ್ಮ ಕಂಪನಿಯ ಕೊವಿಡ್​ 19 ಲಸಿಕೆಯ ಕ್ಲಿನಿಕಲ್​ ಪ್ರಯೋಗಗಳಿಗೆ ಅನುಮೋದನೆ ನೀಡುವ ಬಗ್ಗೆ ಇಲ್ಲಿನ ಕೇಂದ್ರ ಸರ್ಕಾರದೊಂದಿಗೆ ಚರ್ಚೆ ನಡೆಯುತ್ತಿದೆ ಎಂದೂ ಜಾನ್ಸನ್ ಆ್ಯಂಡ್​ ಜಾನ್ಸನ್​ ಕಂಪನಿ ತಿಳಿಸಿದೆ.

ಕೊವಿಡ್ 19 ಲಸಿಕೆ ತಯಾರಿಕೆಗಾಗಿ ತೆಲಂಗಾಣ ಮೂಲದ ಕಂಪನಿಯೊಂದಿಗೆ ಕೈಜೋಡಿಸಿದ ಜಾನ್ಸನ್ ಆ್ಯಂಡ್​ ಜಾನ್ಸನ್​..
ಕೊವಿಡ್ 19 ಲಸಿಕೆ ಪ್ರಾತಿನಿಧಿಕ ಚಿತ್ರ
Lakshmi Hegde
|

Updated on: May 19, 2021 | 4:13 PM

Share

ಭಾರತದಲ್ಲಿ ಕೊವಿಡ್​ 19 ಲಸಿಕೆ ತಯಾರಿಕೆಗಾಗಿ ಯುಎಸ್​ ಮೂಲದ ಜಾನ್ಸನ್​ ಆ್ಯಂಡ್​ ಜಾನ್ಸನ್ ಕಂಪನಿ, ತೆಲಂಗಾಣ ಮೂಲದ ಬಯಲಾಜಿಕಲ್​​​ ಇ ಲಿಮಿಟೆಡ್​​ನೊಂದಿಗೆ ಕೈಜೋಡಿಸಿದೆ. ಈ ಲಸಿಕೆಗೆ ಜಾನ್ಸೆನ್​ ಎಂದು ಹೆಸರಿಡಲಾಗಿದ್ದು, ಈಗಾಗಲೇ ಯುಎಸ್​, ಯುರೋಪ್​, ಥೈಲ್ಯಾಂಡ್​, ಸೌತ್​ ಆಫ್ರಿಕಾಗಳಲ್ಲಿ ಬಳಕೆಗೆ ಅನುಮೋದನೆಯೂ ಸಿಕ್ಕಿದೆ. ಜಾನ್ಸನ್​ ಆ್ಯಂಡ್ ಜಾನ್ಸನ್​ ಕಂಪನಿಯು, ಬಯೋಲಜಿಕಲ್ ಇ ಲಿಮಿಟೆಡ್​​ನೊಂದಿಗೆ ಸೇರಿ ಜಾನ್ಸೆನ್ ಕೊವಿಡ್​ 19 ಲಸಿಕೆ ತಯಾರಿಕೆ ಮಾಡಲಾಗಿದೆ. ಜಗತ್ತಿನಾದ್ಯಂತ ವಿವಿಧ ವ್ಯವಸ್ಥೆ, ಸಂಸ್ಥೆಗಳು ನಮ್ಮ ಕಂಪನಿಯ ಲಸಿಕೆ ತಯಾರಿಕೆಯಲ್ಲಿ ತೊಡಗಿಕೊಂಡಿವೆ. ಹಾಗೇ ಈ ಭಾರತದ ಬಯೋಲಜಿಕಲ್​ ಇ ಲಿಮಿಟೆಡ್​ ಕೂಡ ನಮ್ಮ ಲಸಿಕೆಯ ಜಾಗತಿಕ ಪೂರೈಕೆ ಜಾಲದಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಎಂಬ ನಂಬಿಕೆ ಇದೆ ಎಂದು ಜಾನ್ಸನ್​ ಆ್ಯಂಡ್ ಜಾನ್ಸನ್​ ಕಂಪನಿ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿದೆ.

ನಮ್ಮ ಕಂಪನಿಯ ಲಸಿಕೆ ಉತ್ಪಾದನಾ ಸಮಾರ್ಥ್ಯ ಹೆಚ್ಚಿಸಲು, ಜಗತ್ತಿನಾದ್ಯಂತ ಕೊವಿಡ್​ 19 ಲಸಿಕೆಯನ್ನು ಪೂರೈಸಲು ಶ್ರಮವಹಿಸಿ ಕೆಲಸ ಮಾಡಲಾಗುತ್ತಿದೆ. ಈ ಸಾಂಕ್ರಾಮಿಕವನ್ನು ಹೋಗಲಾಡಿಸಲು ನಾವು ಸರ್ಕಾರಗಳು, ಆರೋಗ್ಯ ವ್ಯವಸ್ಥೆಗಳು, ಇನ್ನಿತರ ಕಂಪನಿಗಳೊಂದಿಗೆ ಸಹಭಾಗಿತ್ವ, ಸಹಯೋಗವನ್ನು ಹೊಂದಿದ್ದೇವೆ. ನಮ್ಮೊಂದಿಗೆ ಕೈಜೋಡಿಸಿದ ಎಲ್ಲರಿಗೂ ಧನ್ಯವಾದಗಳನ್ನು ಸಲ್ಲಿಸುತ್ತೇವೆ ಎಂದೂ ಜಾನ್ಸನ್​ ಆ್ಯಂಡ್ ಜಾನ್ಸನ್​ ಹೇಳಿಕೊಂಡಿದೆ.

ಇನ್ನು ಭಾರತದಲ್ಲಿ ನಮ್ಮ ಕಂಪನಿಯ ಕೊವಿಡ್​ 19 ಲಸಿಕೆಯ ಕ್ಲಿನಿಕಲ್​ ಪ್ರಯೋಗಗಳಿಗೆ ಅನುಮೋದನೆ ನೀಡುವ ಬಗ್ಗೆ ಇಲ್ಲಿನ ಕೇಂದ್ರ ಸರ್ಕಾರದೊಂದಿಗೆ ಚರ್ಚೆ ನಡೆಯುತ್ತಿದೆ ಎಂದೂ ಔಷಧೀಯ ಕಂಪನಿ ಮಾಹಿತಿ ನೀಡಿದೆ. ಭಾರತದಲ್ಲಿ ಸದ್ಯ ಕೊವಿಶೀಲ್ಡ್​, ಕೊವ್ಯಾಕ್ಸಿನ್ ಮತ್ತು ರಷ್ಯಾದ ಸ್ಪುಟ್ನಿಕ್ ವಿ ಲಸಿಕೆಗಳ ಬಳಕೆಗೆ ಸರ್ಕಾರ ಅನುಮೋದನೆ ನೀಡಿದೆ. ಇನ್ನು ಜಾನ್ಸನ್​ ಆ್ಯಂಡ್ ಜಾನ್ಸನ್​ ಕಂಪನಿಯ ಲಸಿಕೆಗೆ ಅನುಮತಿ ಸಿಕ್ಕರೆ, ದೇಶದಲ್ಲಿ ಇನ್ನೊಂದು ಲಸಿಕೆ ಬಳಕೆಗೆ ಅವಕಾಶ ಸಿಗುತ್ತದೆ.

ಇದನ್ನೂ ಓದಿ: ರೋಗನಿರೋಧಕ ಶಕ್ತಿ ಹೆಚ್ಚಿಸಲು ಆಹಾರ ಅಭ್ಯಾಸದಲ್ಲಿನ ಈ ಕೆಲವು ಬದಲಾವಣೆ ಬಹಳ ಮುಖ್ಯ

Viral: ಕೊರೊನಾ ಸೋಂಕಿತರಿಗೆ ಈ ಪುಟ್ಟ ಬಾಲಕನ ವಿಶೇಷ ಸಂದೇಶ

(Johnson and Johnson Joins Hand with Telangana based Company to Manufacture Covid 19 Vaccine)

ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ