AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾನ್ಸನ್​ ಆ್ಯಂಡ್ ಜಾನ್ಸನ್​ ಕೊವಿಡ್​ 19 ವಾಕ್ಸಿನ್​ ಸುರಕ್ಷಿತವಲ್ಲ..ಪಾರ್ಶ್ವವಾಯುವಿಗೆ ಕಾರಣವಾಗಬಹುದು: ಎಫ್​ಡಿಎ ವರದಿ

Covid-19 vaccine: ಜಾನ್ಸನ್​ ಆ್ಯಂಡ್​ ಜಾನ್ಸನ್​​ ಕೊವಿಡ್​ 19 ಲಸಿಕೆ ಬಗ್ಗೆ ಆತಂಕಕಾರಿ ಮಾಹಿತಿಯನ್ನು ನೀಡಿರುವ ಎಫ್​ಡಿಎ, ಮಾಡೆರ್ನಾ ಮತ್ತು ಫೈಜರ್​ ಲಸಿಕೆಗಳು ಅಂಥ ಅಪಾಯಕಾರಿ ಫಲಿತಾಂಶವನ್ನು ತೋರುವುದಿಲ್ಲ ಎಂದೂ ಸ್ಪಷ್ಟಪಡಿಸಿದೆ.

ಜಾನ್ಸನ್​ ಆ್ಯಂಡ್ ಜಾನ್ಸನ್​ ಕೊವಿಡ್​ 19 ವಾಕ್ಸಿನ್​ ಸುರಕ್ಷಿತವಲ್ಲ..ಪಾರ್ಶ್ವವಾಯುವಿಗೆ ಕಾರಣವಾಗಬಹುದು: ಎಫ್​ಡಿಎ ವರದಿ
ಜಾನ್ಸನ್​ ಆ್ಯಂಡ್ ಜಾನ್ಸನ್​
TV9 Web
| Edited By: |

Updated on: Jul 13, 2021 | 9:50 AM

Share

ವಾಷಿಂಗ್ಟನ್​: ಕೊರೊನಾ ವೈರಸ್​ ವಿರುದ್ಧ ಜನರ ಜೀವ ಕಾಪಾಡಲು ಹಲವು ಸಂಸ್ಥೆಗಳು ಕೊವಿಡ್​ 19 ಲಸಿಕೆ ಅಭಿವೃದ್ಧಿಪಡಿಸುತ್ತಿವೆ. ಅದರಲ್ಲಿ ಜಾನ್ಸನ್​ ಆ್ಯಂಡ್ ಜಾನ್ಸನ್​ ಕಂಪನಿಯೂ ಒಂದು. ಆದರೆ ಈ ಕಂಪನಿಯ ಲಸಿಕೆಗೆ ಇದೀಗ ಭಾರಿ ಹಿನ್ನಡೆಯಾಗಿದೆ. ಜಾನ್ಸನ್​ ಆ್ಯಂಡ್​ ಜಾನ್ಸನ್​ ಕೊರೊನಾ ವೈರಸ್​ ಲಸಿಕೆ (Johnson & Johnson’s Covid-19 vaccine) ಕೆಲವು ಅಪರೂಪದ ನರವೈಜ್ಞಾನಿಕ ತೊಂದರೆಗಳಿಗೆ ಕಾರಣವಾಗಬಹುದು ಎಂದು ಯುಎಸ್​ನ ಆಹಾರ ಮತ್ತು ಔಷಧ ಆಡಳಿತ (FDA) ಎಚ್ಚರಿಕೆ ನೀಡಿದೆ. ಈ ಲಸಿಕೆ ತೆಗೆದುಕೊಂಡವರಿಗೆ ಎಲ್ಲರಿಗೂ ಸಮಸ್ಯೆ ಕಾಣಿಸಿಕೊಳ್ಳುತ್ತದೆ ಎಂದಲ್ಲ, ಆದರೂ ಅಪಾಯದ ಪ್ರಮಾಣ ತುಸು ಹೆಚ್ಚಾಗಿಯೇ ಇದೆ ಎಂದು ಎಫ್​​ಡಿಎ ಎಚ್ಚರಿಸಿದೆ.

ಜಾನ್ಸನ್​ ಆ್ಯಂಡ್ ಜಾನ್ಸನ್​ ಕೊವಿಡ್​ 19 ಲಸಿಕೆ ನರವೈಜ್ಞಾನಿಕ ಸಮಸ್ಯೆಗಳನ್ನು ಉಂಟು ಮಾಡುತ್ತದೆಯೇ? ಇಲ್ಲವೇ ಎಂಬುದನ್ನು ನಾವಿನ್ನೂ ಪ್ರಮಾಣೀಕರಿಸಿಲ್ಲ. ಆದರೆ ಗುಯಿಲಿನ್-ಬಾರ್ ಸಿಂಡ್ರೋಮ್(Guillain-Barre syndrome) ಎಂಬ ಒಂದು ರೂಪದ ಪಾರ್ಶ್ವವಾಯುವನ್ನು ಉಂಟುಮಾಡುವ ಸಾಧ್ಯತೆ ಹೆಚ್ಚಾಗಿದೆ ಎಂಬುದನ್ನು ಗಮನಿಸಿದ್ದೇವೆ ಎಂದು ಎಫ್​​​ಡಿಎ (FDA) ತಿಳಿಸಿದೆ.

ಜಾನ್ಸನ್​ ಆ್ಯಂಡ್​ ಜಾನ್ಸನ್​​ ಕೊವಿಡ್​ 19 ಲಸಿಕೆ ಬಗ್ಗೆ ಆತಂಕಕಾರಿ ಮಾಹಿತಿಯನ್ನು ನೀಡಿರುವ ಎಫ್​ಡಿಎ, ಮಾಡೆರ್ನಾ ಮತ್ತು ಫೈಜರ್​ ಲಸಿಕೆಗಳು ಅಂಥ ಅಪಾಯಕಾರಿ ಫಲಿತಾಂಶವನ್ನು ತೋರುವುದಿಲ್ಲ ಎಂದೂ ಸ್ಪಷ್ಟಪಡಿಸಿದೆ. ಈವರೆಗೆ ಸುಮಾರು 12.8 ಮಿಲಿಯನ್​​ ಡೋಸ್​ ಜಾನ್ಸೆನ್​ ಲಸಿಕೆ ನೀಡಲಾಗಿದೆ. ಅದರಲ್ಲಿ ಗುಯಿಲಿನ್-ಬಾರ್ ಸಿಂಡ್ರೋಮ್​ನ ಸುಮಾರು 100 ಪ್ರಕರಣಗಳು ಪತ್ತೆಯಾಗಿವೆ ಎಂದೂ ಎಫ್​ಡಿಎ ಮಾಹಿತಿ ನೀಡಿದೆ.

ಇದನ್ನು ಓದಿ: ಕೊರೊನಾ ಮೂರನೇ ಅಲೆ ಭೀತಿ: ನಂದಿಗಿರಿಧಾಮಕ್ಕೆ ವಾರಾಂತ್ಯದಲ್ಲಿ ಪ್ರವೇಶ ನಿರ್ಬಂಧ, ಅನಿರ್ದಿಷ್ಟಾವಧಿ ನಿಯಮ ಜಾರಿ

Follow Us
ಸಿಲಿಂಡರ್ ಕದ್ದು ಪರಾರಿಯಾದ ಕಳ್ಳರು; ಸಿಸಿಟಿವಿಯಲ್ಲಿ ಖತರ್ನಾಕ್ ಕೃತ್ಯ ಸೆರೆ
ಸಿಲಿಂಡರ್ ಕದ್ದು ಪರಾರಿಯಾದ ಕಳ್ಳರು; ಸಿಸಿಟಿವಿಯಲ್ಲಿ ಖತರ್ನಾಕ್ ಕೃತ್ಯ ಸೆರೆ
ಪಶುವೈದ್ಯೆ ಸಾವು: ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ; ಸಮೀಕ್ಷಾ ರೆಡ್ಡಿ ಮಾವ
ಪಶುವೈದ್ಯೆ ಸಾವು: ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ; ಸಮೀಕ್ಷಾ ರೆಡ್ಡಿ ಮಾವ
ಡಿಕೆಶಿ​​​ನ್ನ ಸಿಎಂ ಮಾಡಿ ಎಂದಿದ್ದಕ್ಕೆ ಬಜೆಟ್​​ನಲ್ಲಿ 1 ರೂ ನೀಡಿಲ್ಲ
ಡಿಕೆಶಿ​​​ನ್ನ ಸಿಎಂ ಮಾಡಿ ಎಂದಿದ್ದಕ್ಕೆ ಬಜೆಟ್​​ನಲ್ಲಿ 1 ರೂ ನೀಡಿಲ್ಲ
ರೂಮಿನಲ್ಲಿ ಕೂಡಿ ಹಾಕಿ ಬೆಲ್ಟ್‌ನಿಂದ ಬಾರಿಸಿದ ಪ್ರಿನ್ಸಿಪಾಲ್!
ರೂಮಿನಲ್ಲಿ ಕೂಡಿ ಹಾಕಿ ಬೆಲ್ಟ್‌ನಿಂದ ಬಾರಿಸಿದ ಪ್ರಿನ್ಸಿಪಾಲ್!
ರಂಜಾನ್ ನಮಾಜ್ ವೇಳೆ ಹೆಜ್ಜೇನು ದಾಳಿ
ರಂಜಾನ್ ನಮಾಜ್ ವೇಳೆ ಹೆಜ್ಜೇನು ದಾಳಿ
‘ಸಿನಿಮಾ ಸೋತಾಗ ಆ ಮಾತನ್ನು ಯಾರಿಗೂ ಹೇಳೇಡಿ’; ರವಿಚಂದ್ರನ್ ಕೋರಿಕೆ
‘ಸಿನಿಮಾ ಸೋತಾಗ ಆ ಮಾತನ್ನು ಯಾರಿಗೂ ಹೇಳೇಡಿ’; ರವಿಚಂದ್ರನ್ ಕೋರಿಕೆ
IPLಗೆ ಚಿನ್ನಸ್ವಾಮಿ ಸಜ್ಜು, ಏನೇನು ಮುನ್ನೆಚ್ಚೆರಿಕೆ ಕೈಗೊಂಡಿದ್ದಾರೆ ನೋಡಿ!
IPLಗೆ ಚಿನ್ನಸ್ವಾಮಿ ಸಜ್ಜು, ಏನೇನು ಮುನ್ನೆಚ್ಚೆರಿಕೆ ಕೈಗೊಂಡಿದ್ದಾರೆ ನೋಡಿ!
ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಕೆಎಸ್​ಆರ್​ಟಿಸಿ ಬಸ್ ಪಲ್ಟಿ!
ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಕೆಎಸ್​ಆರ್​ಟಿಸಿ ಬಸ್ ಪಲ್ಟಿ!
ಪೆಟ್ರೋಲ್, ಡೀಸೆಲ್​ಗಾಗಿ ರಿಪ್ಪನ್‌ಪೇಟೆ ಬಂಕ್ ಮುಂದೆ ಮುಗಿಬಿದ್ರು ಜನ!
ಪೆಟ್ರೋಲ್, ಡೀಸೆಲ್​ಗಾಗಿ ರಿಪ್ಪನ್‌ಪೇಟೆ ಬಂಕ್ ಮುಂದೆ ಮುಗಿಬಿದ್ರು ಜನ!
ಊರಿಗೆ ಹೋಗಲು ವಾಹನ ಸಿಕ್ಕಿಲ್ಲವೆಂದು ಬಸ್ಸನ್ನೇ ಕದ್ದೊಯ್ದ ಚಾಲಾಕಿ ಚಾಲಕ!
ಊರಿಗೆ ಹೋಗಲು ವಾಹನ ಸಿಕ್ಕಿಲ್ಲವೆಂದು ಬಸ್ಸನ್ನೇ ಕದ್ದೊಯ್ದ ಚಾಲಾಕಿ ಚಾಲಕ!