AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾನ್ಸನ್​ ಆ್ಯಂಡ್ ಜಾನ್ಸನ್​ ಕೊವಿಡ್​ 19 ವಾಕ್ಸಿನ್​ ಸುರಕ್ಷಿತವಲ್ಲ..ಪಾರ್ಶ್ವವಾಯುವಿಗೆ ಕಾರಣವಾಗಬಹುದು: ಎಫ್​ಡಿಎ ವರದಿ

Covid-19 vaccine: ಜಾನ್ಸನ್​ ಆ್ಯಂಡ್​ ಜಾನ್ಸನ್​​ ಕೊವಿಡ್​ 19 ಲಸಿಕೆ ಬಗ್ಗೆ ಆತಂಕಕಾರಿ ಮಾಹಿತಿಯನ್ನು ನೀಡಿರುವ ಎಫ್​ಡಿಎ, ಮಾಡೆರ್ನಾ ಮತ್ತು ಫೈಜರ್​ ಲಸಿಕೆಗಳು ಅಂಥ ಅಪಾಯಕಾರಿ ಫಲಿತಾಂಶವನ್ನು ತೋರುವುದಿಲ್ಲ ಎಂದೂ ಸ್ಪಷ್ಟಪಡಿಸಿದೆ.

ಜಾನ್ಸನ್​ ಆ್ಯಂಡ್ ಜಾನ್ಸನ್​ ಕೊವಿಡ್​ 19 ವಾಕ್ಸಿನ್​ ಸುರಕ್ಷಿತವಲ್ಲ..ಪಾರ್ಶ್ವವಾಯುವಿಗೆ ಕಾರಣವಾಗಬಹುದು: ಎಫ್​ಡಿಎ ವರದಿ
ಜಾನ್ಸನ್​ ಆ್ಯಂಡ್ ಜಾನ್ಸನ್​
TV9 Web
| Edited By: |

Updated on: Jul 13, 2021 | 9:50 AM

Share

ವಾಷಿಂಗ್ಟನ್​: ಕೊರೊನಾ ವೈರಸ್​ ವಿರುದ್ಧ ಜನರ ಜೀವ ಕಾಪಾಡಲು ಹಲವು ಸಂಸ್ಥೆಗಳು ಕೊವಿಡ್​ 19 ಲಸಿಕೆ ಅಭಿವೃದ್ಧಿಪಡಿಸುತ್ತಿವೆ. ಅದರಲ್ಲಿ ಜಾನ್ಸನ್​ ಆ್ಯಂಡ್ ಜಾನ್ಸನ್​ ಕಂಪನಿಯೂ ಒಂದು. ಆದರೆ ಈ ಕಂಪನಿಯ ಲಸಿಕೆಗೆ ಇದೀಗ ಭಾರಿ ಹಿನ್ನಡೆಯಾಗಿದೆ. ಜಾನ್ಸನ್​ ಆ್ಯಂಡ್​ ಜಾನ್ಸನ್​ ಕೊರೊನಾ ವೈರಸ್​ ಲಸಿಕೆ (Johnson & Johnson’s Covid-19 vaccine) ಕೆಲವು ಅಪರೂಪದ ನರವೈಜ್ಞಾನಿಕ ತೊಂದರೆಗಳಿಗೆ ಕಾರಣವಾಗಬಹುದು ಎಂದು ಯುಎಸ್​ನ ಆಹಾರ ಮತ್ತು ಔಷಧ ಆಡಳಿತ (FDA) ಎಚ್ಚರಿಕೆ ನೀಡಿದೆ. ಈ ಲಸಿಕೆ ತೆಗೆದುಕೊಂಡವರಿಗೆ ಎಲ್ಲರಿಗೂ ಸಮಸ್ಯೆ ಕಾಣಿಸಿಕೊಳ್ಳುತ್ತದೆ ಎಂದಲ್ಲ, ಆದರೂ ಅಪಾಯದ ಪ್ರಮಾಣ ತುಸು ಹೆಚ್ಚಾಗಿಯೇ ಇದೆ ಎಂದು ಎಫ್​​ಡಿಎ ಎಚ್ಚರಿಸಿದೆ.

ಜಾನ್ಸನ್​ ಆ್ಯಂಡ್ ಜಾನ್ಸನ್​ ಕೊವಿಡ್​ 19 ಲಸಿಕೆ ನರವೈಜ್ಞಾನಿಕ ಸಮಸ್ಯೆಗಳನ್ನು ಉಂಟು ಮಾಡುತ್ತದೆಯೇ? ಇಲ್ಲವೇ ಎಂಬುದನ್ನು ನಾವಿನ್ನೂ ಪ್ರಮಾಣೀಕರಿಸಿಲ್ಲ. ಆದರೆ ಗುಯಿಲಿನ್-ಬಾರ್ ಸಿಂಡ್ರೋಮ್(Guillain-Barre syndrome) ಎಂಬ ಒಂದು ರೂಪದ ಪಾರ್ಶ್ವವಾಯುವನ್ನು ಉಂಟುಮಾಡುವ ಸಾಧ್ಯತೆ ಹೆಚ್ಚಾಗಿದೆ ಎಂಬುದನ್ನು ಗಮನಿಸಿದ್ದೇವೆ ಎಂದು ಎಫ್​​​ಡಿಎ (FDA) ತಿಳಿಸಿದೆ.

ಜಾನ್ಸನ್​ ಆ್ಯಂಡ್​ ಜಾನ್ಸನ್​​ ಕೊವಿಡ್​ 19 ಲಸಿಕೆ ಬಗ್ಗೆ ಆತಂಕಕಾರಿ ಮಾಹಿತಿಯನ್ನು ನೀಡಿರುವ ಎಫ್​ಡಿಎ, ಮಾಡೆರ್ನಾ ಮತ್ತು ಫೈಜರ್​ ಲಸಿಕೆಗಳು ಅಂಥ ಅಪಾಯಕಾರಿ ಫಲಿತಾಂಶವನ್ನು ತೋರುವುದಿಲ್ಲ ಎಂದೂ ಸ್ಪಷ್ಟಪಡಿಸಿದೆ. ಈವರೆಗೆ ಸುಮಾರು 12.8 ಮಿಲಿಯನ್​​ ಡೋಸ್​ ಜಾನ್ಸೆನ್​ ಲಸಿಕೆ ನೀಡಲಾಗಿದೆ. ಅದರಲ್ಲಿ ಗುಯಿಲಿನ್-ಬಾರ್ ಸಿಂಡ್ರೋಮ್​ನ ಸುಮಾರು 100 ಪ್ರಕರಣಗಳು ಪತ್ತೆಯಾಗಿವೆ ಎಂದೂ ಎಫ್​ಡಿಎ ಮಾಹಿತಿ ನೀಡಿದೆ.

ಇದನ್ನು ಓದಿ: ಕೊರೊನಾ ಮೂರನೇ ಅಲೆ ಭೀತಿ: ನಂದಿಗಿರಿಧಾಮಕ್ಕೆ ವಾರಾಂತ್ಯದಲ್ಲಿ ಪ್ರವೇಶ ನಿರ್ಬಂಧ, ಅನಿರ್ದಿಷ್ಟಾವಧಿ ನಿಯಮ ಜಾರಿ

ಬೆಳೆಬಾಳುವ ಮರಗಳನ್ನೇ ಕಡಿದು ಮಾರಿಕೊಂಡ್ರಾ ಅಧಿಕಾರಿಗಳು?
ಬೆಳೆಬಾಳುವ ಮರಗಳನ್ನೇ ಕಡಿದು ಮಾರಿಕೊಂಡ್ರಾ ಅಧಿಕಾರಿಗಳು?
ತುಂಗಭದ್ರಾ ಕ್ರಸ್ಟ್ ಗೇಟ್: 2 ದಿನದಲ್ಲಿ 18ನೇ ಗೇಟ್ ಬೇಸಮೆಂಟ್ ರೆಡಿ
ತುಂಗಭದ್ರಾ ಕ್ರಸ್ಟ್ ಗೇಟ್: 2 ದಿನದಲ್ಲಿ 18ನೇ ಗೇಟ್ ಬೇಸಮೆಂಟ್ ರೆಡಿ
ಬೆಂಗಳೂರಿನ ಪಿಜಿಯಲ್ಲಿ ಸಿಲಿಂಡರ್​ ಸ್ಫೋಟ: ಓರ್ವ ಸಾವು, ಕೆಲವರಿಗೆ ಗಾಯ
ಬೆಂಗಳೂರಿನ ಪಿಜಿಯಲ್ಲಿ ಸಿಲಿಂಡರ್​ ಸ್ಫೋಟ: ಓರ್ವ ಸಾವು, ಕೆಲವರಿಗೆ ಗಾಯ
ತನ್ನ ಕ್ಷೇತ್ರದಲ್ಲಿ ಕರೆಂಟ್ ತೆಗೆದಿದ್ದಕ್ಕೆ ವಿದ್ಯುತ್ ಕಂಬ ಹತ್ತಿದ ಶಾಸಕ
ತನ್ನ ಕ್ಷೇತ್ರದಲ್ಲಿ ಕರೆಂಟ್ ತೆಗೆದಿದ್ದಕ್ಕೆ ವಿದ್ಯುತ್ ಕಂಬ ಹತ್ತಿದ ಶಾಸಕ
ನ್ಯೂ ಇಯರ್ ಗಿಫ್ಟ್​: ಮನೆ ಕಳೆದುಕೊಂಡ ಕೋಗಲು ಜನರಿಗೆ ಹೊಸ ಸೂರು
ನ್ಯೂ ಇಯರ್ ಗಿಫ್ಟ್​: ಮನೆ ಕಳೆದುಕೊಂಡ ಕೋಗಲು ಜನರಿಗೆ ಹೊಸ ಸೂರು
ಬಿಗ್ ಬಾಸ್: ಮುಚ್ಚುಮರೆ ಇಲ್ಲದೇ 3 ರಿಲೇಷನ್​ಶಿಪ್ ಬಗ್ಗೆ ನಿಜ ಹೇಳಿದ ಸೂರಜ್
ಬಿಗ್ ಬಾಸ್: ಮುಚ್ಚುಮರೆ ಇಲ್ಲದೇ 3 ರಿಲೇಷನ್​ಶಿಪ್ ಬಗ್ಗೆ ನಿಜ ಹೇಳಿದ ಸೂರಜ್
ಕಾರಿನ ಮೇಲೆ ಬಿದ್ದ ವಾಟರ್ ಟ್ಯಾಂಕರ್
ಕಾರಿನ ಮೇಲೆ ಬಿದ್ದ ವಾಟರ್ ಟ್ಯಾಂಕರ್
ಮತ್ತೊಂದು ಕೆನರಾ ಬ್ಯಾಂಕಿನಿಂದ ಗ್ರಾಹಕರಿಗೆ ಮಹಾ ಮೋಸ
ಮತ್ತೊಂದು ಕೆನರಾ ಬ್ಯಾಂಕಿನಿಂದ ಗ್ರಾಹಕರಿಗೆ ಮಹಾ ಮೋಸ
ಕೋಗಿಲು ಲೇಔಟ್​​ಗೆ ಡಿಕೆ ಶಿವಕುಮಾರ್​ ಭೇಟಿ: ಪರಿಶೀಲನೆ, ಹೇಳಿದ್ದಿಷ್ಟು
ಕೋಗಿಲು ಲೇಔಟ್​​ಗೆ ಡಿಕೆ ಶಿವಕುಮಾರ್​ ಭೇಟಿ: ಪರಿಶೀಲನೆ, ಹೇಳಿದ್ದಿಷ್ಟು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು