AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾನ್ಸನ್​ ಆ್ಯಂಡ್ ಜಾನ್ಸನ್​ ಕೊವಿಡ್​ 19 ವಾಕ್ಸಿನ್​ ಸುರಕ್ಷಿತವಲ್ಲ..ಪಾರ್ಶ್ವವಾಯುವಿಗೆ ಕಾರಣವಾಗಬಹುದು: ಎಫ್​ಡಿಎ ವರದಿ

Covid-19 vaccine: ಜಾನ್ಸನ್​ ಆ್ಯಂಡ್​ ಜಾನ್ಸನ್​​ ಕೊವಿಡ್​ 19 ಲಸಿಕೆ ಬಗ್ಗೆ ಆತಂಕಕಾರಿ ಮಾಹಿತಿಯನ್ನು ನೀಡಿರುವ ಎಫ್​ಡಿಎ, ಮಾಡೆರ್ನಾ ಮತ್ತು ಫೈಜರ್​ ಲಸಿಕೆಗಳು ಅಂಥ ಅಪಾಯಕಾರಿ ಫಲಿತಾಂಶವನ್ನು ತೋರುವುದಿಲ್ಲ ಎಂದೂ ಸ್ಪಷ್ಟಪಡಿಸಿದೆ.

ಜಾನ್ಸನ್​ ಆ್ಯಂಡ್ ಜಾನ್ಸನ್​ ಕೊವಿಡ್​ 19 ವಾಕ್ಸಿನ್​ ಸುರಕ್ಷಿತವಲ್ಲ..ಪಾರ್ಶ್ವವಾಯುವಿಗೆ ಕಾರಣವಾಗಬಹುದು: ಎಫ್​ಡಿಎ ವರದಿ
ಜಾನ್ಸನ್​ ಆ್ಯಂಡ್ ಜಾನ್ಸನ್​
TV9 Web
| Edited By: |

Updated on: Jul 13, 2021 | 9:50 AM

Share

ವಾಷಿಂಗ್ಟನ್​: ಕೊರೊನಾ ವೈರಸ್​ ವಿರುದ್ಧ ಜನರ ಜೀವ ಕಾಪಾಡಲು ಹಲವು ಸಂಸ್ಥೆಗಳು ಕೊವಿಡ್​ 19 ಲಸಿಕೆ ಅಭಿವೃದ್ಧಿಪಡಿಸುತ್ತಿವೆ. ಅದರಲ್ಲಿ ಜಾನ್ಸನ್​ ಆ್ಯಂಡ್ ಜಾನ್ಸನ್​ ಕಂಪನಿಯೂ ಒಂದು. ಆದರೆ ಈ ಕಂಪನಿಯ ಲಸಿಕೆಗೆ ಇದೀಗ ಭಾರಿ ಹಿನ್ನಡೆಯಾಗಿದೆ. ಜಾನ್ಸನ್​ ಆ್ಯಂಡ್​ ಜಾನ್ಸನ್​ ಕೊರೊನಾ ವೈರಸ್​ ಲಸಿಕೆ (Johnson & Johnson’s Covid-19 vaccine) ಕೆಲವು ಅಪರೂಪದ ನರವೈಜ್ಞಾನಿಕ ತೊಂದರೆಗಳಿಗೆ ಕಾರಣವಾಗಬಹುದು ಎಂದು ಯುಎಸ್​ನ ಆಹಾರ ಮತ್ತು ಔಷಧ ಆಡಳಿತ (FDA) ಎಚ್ಚರಿಕೆ ನೀಡಿದೆ. ಈ ಲಸಿಕೆ ತೆಗೆದುಕೊಂಡವರಿಗೆ ಎಲ್ಲರಿಗೂ ಸಮಸ್ಯೆ ಕಾಣಿಸಿಕೊಳ್ಳುತ್ತದೆ ಎಂದಲ್ಲ, ಆದರೂ ಅಪಾಯದ ಪ್ರಮಾಣ ತುಸು ಹೆಚ್ಚಾಗಿಯೇ ಇದೆ ಎಂದು ಎಫ್​​ಡಿಎ ಎಚ್ಚರಿಸಿದೆ.

ಜಾನ್ಸನ್​ ಆ್ಯಂಡ್ ಜಾನ್ಸನ್​ ಕೊವಿಡ್​ 19 ಲಸಿಕೆ ನರವೈಜ್ಞಾನಿಕ ಸಮಸ್ಯೆಗಳನ್ನು ಉಂಟು ಮಾಡುತ್ತದೆಯೇ? ಇಲ್ಲವೇ ಎಂಬುದನ್ನು ನಾವಿನ್ನೂ ಪ್ರಮಾಣೀಕರಿಸಿಲ್ಲ. ಆದರೆ ಗುಯಿಲಿನ್-ಬಾರ್ ಸಿಂಡ್ರೋಮ್(Guillain-Barre syndrome) ಎಂಬ ಒಂದು ರೂಪದ ಪಾರ್ಶ್ವವಾಯುವನ್ನು ಉಂಟುಮಾಡುವ ಸಾಧ್ಯತೆ ಹೆಚ್ಚಾಗಿದೆ ಎಂಬುದನ್ನು ಗಮನಿಸಿದ್ದೇವೆ ಎಂದು ಎಫ್​​​ಡಿಎ (FDA) ತಿಳಿಸಿದೆ.

ಜಾನ್ಸನ್​ ಆ್ಯಂಡ್​ ಜಾನ್ಸನ್​​ ಕೊವಿಡ್​ 19 ಲಸಿಕೆ ಬಗ್ಗೆ ಆತಂಕಕಾರಿ ಮಾಹಿತಿಯನ್ನು ನೀಡಿರುವ ಎಫ್​ಡಿಎ, ಮಾಡೆರ್ನಾ ಮತ್ತು ಫೈಜರ್​ ಲಸಿಕೆಗಳು ಅಂಥ ಅಪಾಯಕಾರಿ ಫಲಿತಾಂಶವನ್ನು ತೋರುವುದಿಲ್ಲ ಎಂದೂ ಸ್ಪಷ್ಟಪಡಿಸಿದೆ. ಈವರೆಗೆ ಸುಮಾರು 12.8 ಮಿಲಿಯನ್​​ ಡೋಸ್​ ಜಾನ್ಸೆನ್​ ಲಸಿಕೆ ನೀಡಲಾಗಿದೆ. ಅದರಲ್ಲಿ ಗುಯಿಲಿನ್-ಬಾರ್ ಸಿಂಡ್ರೋಮ್​ನ ಸುಮಾರು 100 ಪ್ರಕರಣಗಳು ಪತ್ತೆಯಾಗಿವೆ ಎಂದೂ ಎಫ್​ಡಿಎ ಮಾಹಿತಿ ನೀಡಿದೆ.

ಇದನ್ನು ಓದಿ: ಕೊರೊನಾ ಮೂರನೇ ಅಲೆ ಭೀತಿ: ನಂದಿಗಿರಿಧಾಮಕ್ಕೆ ವಾರಾಂತ್ಯದಲ್ಲಿ ಪ್ರವೇಶ ನಿರ್ಬಂಧ, ಅನಿರ್ದಿಷ್ಟಾವಧಿ ನಿಯಮ ಜಾರಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ