AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾನ್ಸನ್​ ಆ್ಯಂಡ್ ಜಾನ್ಸನ್​ ಕೊವಿಡ್​ 19 ವಾಕ್ಸಿನ್​ ಸುರಕ್ಷಿತವಲ್ಲ..ಪಾರ್ಶ್ವವಾಯುವಿಗೆ ಕಾರಣವಾಗಬಹುದು: ಎಫ್​ಡಿಎ ವರದಿ

Covid-19 vaccine: ಜಾನ್ಸನ್​ ಆ್ಯಂಡ್​ ಜಾನ್ಸನ್​​ ಕೊವಿಡ್​ 19 ಲಸಿಕೆ ಬಗ್ಗೆ ಆತಂಕಕಾರಿ ಮಾಹಿತಿಯನ್ನು ನೀಡಿರುವ ಎಫ್​ಡಿಎ, ಮಾಡೆರ್ನಾ ಮತ್ತು ಫೈಜರ್​ ಲಸಿಕೆಗಳು ಅಂಥ ಅಪಾಯಕಾರಿ ಫಲಿತಾಂಶವನ್ನು ತೋರುವುದಿಲ್ಲ ಎಂದೂ ಸ್ಪಷ್ಟಪಡಿಸಿದೆ.

ಜಾನ್ಸನ್​ ಆ್ಯಂಡ್ ಜಾನ್ಸನ್​ ಕೊವಿಡ್​ 19 ವಾಕ್ಸಿನ್​ ಸುರಕ್ಷಿತವಲ್ಲ..ಪಾರ್ಶ್ವವಾಯುವಿಗೆ ಕಾರಣವಾಗಬಹುದು: ಎಫ್​ಡಿಎ ವರದಿ
ಜಾನ್ಸನ್​ ಆ್ಯಂಡ್ ಜಾನ್ಸನ್​
TV9 Web
| Edited By: |

Updated on: Jul 13, 2021 | 9:50 AM

Share

ವಾಷಿಂಗ್ಟನ್​: ಕೊರೊನಾ ವೈರಸ್​ ವಿರುದ್ಧ ಜನರ ಜೀವ ಕಾಪಾಡಲು ಹಲವು ಸಂಸ್ಥೆಗಳು ಕೊವಿಡ್​ 19 ಲಸಿಕೆ ಅಭಿವೃದ್ಧಿಪಡಿಸುತ್ತಿವೆ. ಅದರಲ್ಲಿ ಜಾನ್ಸನ್​ ಆ್ಯಂಡ್ ಜಾನ್ಸನ್​ ಕಂಪನಿಯೂ ಒಂದು. ಆದರೆ ಈ ಕಂಪನಿಯ ಲಸಿಕೆಗೆ ಇದೀಗ ಭಾರಿ ಹಿನ್ನಡೆಯಾಗಿದೆ. ಜಾನ್ಸನ್​ ಆ್ಯಂಡ್​ ಜಾನ್ಸನ್​ ಕೊರೊನಾ ವೈರಸ್​ ಲಸಿಕೆ (Johnson & Johnson’s Covid-19 vaccine) ಕೆಲವು ಅಪರೂಪದ ನರವೈಜ್ಞಾನಿಕ ತೊಂದರೆಗಳಿಗೆ ಕಾರಣವಾಗಬಹುದು ಎಂದು ಯುಎಸ್​ನ ಆಹಾರ ಮತ್ತು ಔಷಧ ಆಡಳಿತ (FDA) ಎಚ್ಚರಿಕೆ ನೀಡಿದೆ. ಈ ಲಸಿಕೆ ತೆಗೆದುಕೊಂಡವರಿಗೆ ಎಲ್ಲರಿಗೂ ಸಮಸ್ಯೆ ಕಾಣಿಸಿಕೊಳ್ಳುತ್ತದೆ ಎಂದಲ್ಲ, ಆದರೂ ಅಪಾಯದ ಪ್ರಮಾಣ ತುಸು ಹೆಚ್ಚಾಗಿಯೇ ಇದೆ ಎಂದು ಎಫ್​​ಡಿಎ ಎಚ್ಚರಿಸಿದೆ.

ಜಾನ್ಸನ್​ ಆ್ಯಂಡ್ ಜಾನ್ಸನ್​ ಕೊವಿಡ್​ 19 ಲಸಿಕೆ ನರವೈಜ್ಞಾನಿಕ ಸಮಸ್ಯೆಗಳನ್ನು ಉಂಟು ಮಾಡುತ್ತದೆಯೇ? ಇಲ್ಲವೇ ಎಂಬುದನ್ನು ನಾವಿನ್ನೂ ಪ್ರಮಾಣೀಕರಿಸಿಲ್ಲ. ಆದರೆ ಗುಯಿಲಿನ್-ಬಾರ್ ಸಿಂಡ್ರೋಮ್(Guillain-Barre syndrome) ಎಂಬ ಒಂದು ರೂಪದ ಪಾರ್ಶ್ವವಾಯುವನ್ನು ಉಂಟುಮಾಡುವ ಸಾಧ್ಯತೆ ಹೆಚ್ಚಾಗಿದೆ ಎಂಬುದನ್ನು ಗಮನಿಸಿದ್ದೇವೆ ಎಂದು ಎಫ್​​​ಡಿಎ (FDA) ತಿಳಿಸಿದೆ.

ಜಾನ್ಸನ್​ ಆ್ಯಂಡ್​ ಜಾನ್ಸನ್​​ ಕೊವಿಡ್​ 19 ಲಸಿಕೆ ಬಗ್ಗೆ ಆತಂಕಕಾರಿ ಮಾಹಿತಿಯನ್ನು ನೀಡಿರುವ ಎಫ್​ಡಿಎ, ಮಾಡೆರ್ನಾ ಮತ್ತು ಫೈಜರ್​ ಲಸಿಕೆಗಳು ಅಂಥ ಅಪಾಯಕಾರಿ ಫಲಿತಾಂಶವನ್ನು ತೋರುವುದಿಲ್ಲ ಎಂದೂ ಸ್ಪಷ್ಟಪಡಿಸಿದೆ. ಈವರೆಗೆ ಸುಮಾರು 12.8 ಮಿಲಿಯನ್​​ ಡೋಸ್​ ಜಾನ್ಸೆನ್​ ಲಸಿಕೆ ನೀಡಲಾಗಿದೆ. ಅದರಲ್ಲಿ ಗುಯಿಲಿನ್-ಬಾರ್ ಸಿಂಡ್ರೋಮ್​ನ ಸುಮಾರು 100 ಪ್ರಕರಣಗಳು ಪತ್ತೆಯಾಗಿವೆ ಎಂದೂ ಎಫ್​ಡಿಎ ಮಾಹಿತಿ ನೀಡಿದೆ.

ಇದನ್ನು ಓದಿ: ಕೊರೊನಾ ಮೂರನೇ ಅಲೆ ಭೀತಿ: ನಂದಿಗಿರಿಧಾಮಕ್ಕೆ ವಾರಾಂತ್ಯದಲ್ಲಿ ಪ್ರವೇಶ ನಿರ್ಬಂಧ, ಅನಿರ್ದಿಷ್ಟಾವಧಿ ನಿಯಮ ಜಾರಿ

Follow Us
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ಮಾಫಿ ಸಾಕ್ಷಿಗೆ ದರ್ಶನ್ ಆಕ್ಷೇಪ; ತುರ್ತು ವಿಚಾರಣೆಗೆ ಹೈಕೋರ್ಟ್ ಸಮ್ಮತಿ
ಮಾಫಿ ಸಾಕ್ಷಿಗೆ ದರ್ಶನ್ ಆಕ್ಷೇಪ; ತುರ್ತು ವಿಚಾರಣೆಗೆ ಹೈಕೋರ್ಟ್ ಸಮ್ಮತಿ
ಬಗೆದಷ್ಟು ಬಯಲಾಗ್ತಿದೆ KPSC ಹಗರಣ: Dysp ನೇಮಕಾತಿಯಲ್ಲೂ ಅಕ್ರಮ ಶಂಕೆ
ಬಗೆದಷ್ಟು ಬಯಲಾಗ್ತಿದೆ KPSC ಹಗರಣ: Dysp ನೇಮಕಾತಿಯಲ್ಲೂ ಅಕ್ರಮ ಶಂಕೆ
ಇಲ್ಲಿ ಎದೆಮಟ್ಟದ ನೀರಿನಲ್ಲಿ ನಡೆದರೆ ಮಾತ್ರ ನರಸಿಂಹನ ದರ್ಶನ ಭಾಗ್ಯ!
ಇಲ್ಲಿ ಎದೆಮಟ್ಟದ ನೀರಿನಲ್ಲಿ ನಡೆದರೆ ಮಾತ್ರ ನರಸಿಂಹನ ದರ್ಶನ ಭಾಗ್ಯ!
ನೆಲಮಂಗಲ-ಹಾಸನ ಹೆದ್ದಾರಿ ಟೋಲ್ ದರ ಹೆಚ್ಚಳ: ವಾಹನ ಸವಾರರ ಆಕ್ರೋಶ
ನೆಲಮಂಗಲ-ಹಾಸನ ಹೆದ್ದಾರಿ ಟೋಲ್ ದರ ಹೆಚ್ಚಳ: ವಾಹನ ಸವಾರರ ಆಕ್ರೋಶ
ಹಸುವಿಗೆ ಶಾಸ್ತ್ರೋಕ್ತವಾಗಿ ಸೀಮಂತ ಮಾಡಿದ ಯುವಕ; ಊರ ಜನರಿಗೆ ಹೋಳಿಗೆ ಊಟ!
ಹಸುವಿಗೆ ಶಾಸ್ತ್ರೋಕ್ತವಾಗಿ ಸೀಮಂತ ಮಾಡಿದ ಯುವಕ; ಊರ ಜನರಿಗೆ ಹೋಳಿಗೆ ಊಟ!
ಬಿಜೆಪಿ ಪಾದಯಾತ್ರೆಗೆ ಅಸಲಿ ಕಾರಣ ಬಿಚ್ಚಿಟ್ಟ ವಿಜಯೇಂದ್ರ!
ಬಿಜೆಪಿ ಪಾದಯಾತ್ರೆಗೆ ಅಸಲಿ ಕಾರಣ ಬಿಚ್ಚಿಟ್ಟ ವಿಜಯೇಂದ್ರ!
Live: ಬಿಜೆಪಿ ಪಾದಯಾತ್ರೆಗೆ ಚಾಲನೆ ನೇರಪ್ರಸಾರ
Live: ಬಿಜೆಪಿ ಪಾದಯಾತ್ರೆಗೆ ಚಾಲನೆ ನೇರಪ್ರಸಾರ
ನಾಗೇಂದ್ರ ಆಯ್ತು, ಇನ್ನೊಂದು ವಿಕೆಟ್ ಪತನವಾಗುತ್ತೆ: ಆರ್ ಅಶೋಕ್
ನಾಗೇಂದ್ರ ಆಯ್ತು, ಇನ್ನೊಂದು ವಿಕೆಟ್ ಪತನವಾಗುತ್ತೆ: ಆರ್ ಅಶೋಕ್