ಭಾರತದಲ್ಲಿ ಬಳಕೆಯಾಗಲಿದೆಯಾ ಜಾನ್ಸನ್​ ಆ್ಯಂಡ್​ ಜಾನ್ಸನ್​ ಲಸಿಕೆ; ಅನುಮೋದನೆಗೆ ಅರ್ಜಿ ಸಲ್ಲಿಸಿದ ಕಂಪನಿ

Johnson & Johnson Covid 19 Vaccine: ಈ ಹಿಂದೆ ಕಂಪನಿ ತನ್ನ ಲಸಿಕೆಯನ್ನು ಭಾರತದಲ್ಲಿ ಕ್ಲಿನಿಕಲ್ ಪ್ರಯೋಗ ನಡೆಸಲು ಅವಕಾಶ ನೀಡಬೇಕು ಎಂದು ಡಿಸಿಜಿಐಗೆ ಮನವಿ ಮಾಡಿತ್ತು. ನಂತರ ಅದನ್ನು ವಾಪಸ್​ ಪಡೆದಿತ್ತು.

ಭಾರತದಲ್ಲಿ ಬಳಕೆಯಾಗಲಿದೆಯಾ ಜಾನ್ಸನ್​ ಆ್ಯಂಡ್​ ಜಾನ್ಸನ್​ ಲಸಿಕೆ; ಅನುಮೋದನೆಗೆ ಅರ್ಜಿ ಸಲ್ಲಿಸಿದ ಕಂಪನಿ
ಜಾನ್ಸನ್​ ಆ್ಯಂಡ್​ ಜಾನ್ಸನ್​ ಕೊವಿಡ್ 19
Follow us
| Updated By: Lakshmi Hegde

Updated on:Aug 06, 2021 | 3:33 PM

134 ವರ್ಷದಷ್ಟು ಹಳೆಯ, ಅಮೆರಿಕನ್​ ಫಾರ್ಮಾ ಸಮೂಹ ಸಂಸ್ಥೆ ಕೊವಿಡ್​ 19 ಲಸಿಕೆಯೊಂದನ್ನು ಅಭಿವೃದ್ಧಿಪಡಿಸಿದ್ದು ಗೊತ್ತೇ ಇದೆ. ಇದೀಗ ತಾನು ಅಭಿವೃದ್ಧಿ ಪಡಿಸಿದ ಒಂದೇ ಡೋಸ್​ನ ಲಸಿಕೆಯನ್ನು ಭಾರತದಲ್ಲಿ ತುರ್ತು ಬಳಕೆಗೆ ಅನುಮೋದನೆ ನೀಡಬೇಕು ಎಂದು ಕೇಂದ್ರ ಔಷಧ ಗುಣಮಟ್ಟ ನಿಯಂತ್ರಣಾ ಸಂಸ್ಥೆ (Central Drug Standard Control Organisation)ಗೆ ಅರ್ಜಿ ಸಲ್ಲಿಸಿದೆ. ಈ ಹಿಂದೆ ಕಂಪನಿ ತನ್ನ ಲಸಿಕೆಯನ್ನು ಭಾರತದಲ್ಲಿ ಕ್ಲಿನಿಕಲ್ ಪ್ರಯೋಗ ನಡೆಸಲು ಅವಕಾಶ ನೀಡಬೇಕು ಎಂದು ಡಿಸಿಜಿಐಗೆ ಮನವಿ ಮಾಡಿತ್ತು. ಆದರೆ, ಪ್ರತಿಷ್ಠಿತ ಮತ್ತು ಮಾನ್ಯತೆ ಪಡೆದ ಲಸಿಕೆಗಳನ್ನು ನೇರವಾಗಿ ಬಳಕೆಗೆ ಅನುಮೋದನೆ ಕೇಳಿ ಅರ್ಜಿ ಸಲ್ಲಿಸಿ ಎಂದು ಕೇಂದ್ರ ಸರ್ಕಾರ ಹೇಳಿದ್ದರಿಂದ, ಜಾನ್ಸನ್​ ಆ್ಯಂಡ್ ಜಾನ್ಸನ್​ ಪ್ರಯೋಗಕ್ಕೆ ಅವಕಾಶ ಕೇಳಿ, ಸಲ್ಲಿಸಿದ್ದ ಅರ್ಜಿಯನ್ನು ಕೆಲವೇ ದಿನಗಳ ಹಿಂದೆ ಹಿಂಪಡೆದಿತ್ತು.

ಈ ಬಗ್ಗೆ ಜಾನ್ಸನ್​ ಆ್ಯಂಡ್ ಜಾನ್ಸನ್​ ಕಂಪನಿ ಹೇಳಿಕೆ ಬಿಡುಗಡೆ ಮಾಡಿದ್ದು, ಬಯೋಲಾಜಿಕಲ್ ಇ ಲಿಮಿಟೆಡ್​​ ಸಹಯೋಗದೊಂದಿಗೆ ಭಾರತ ಸೇರಿ, ಪ್ರಪಂಚದಾದ್ಯಂತ ನಮ್ಮ ಲಸಿಕೆಯನ್ನು ಪರಿಚಯಿಸಲು ಉತ್ಸುಕರಾಗಿದ್ದೇವೆ. ಬಯಾಲಜಿಕಲ್​ ಇ ಸಂಸ್ಥೆ ನಮ್ಮ ಜಾಗತಿಕ ಪೂರೈಕೆ ಸರಪಳಿ ಜಾಲದ ಒಂದು ಪ್ರಮುಖ ಭಾಗವಾಗಿದೆ ಎಂದೂ ಹೇಳಿಕೊಂಡಿದೆ. ಭಾರತದಲ್ಲಿ ಸದ್ಯ ಕೊವಿಶೀಲ್ಡ್​, ಕೊವ್ಯಾಕ್ಸಿನ್​, ಸ್ಪುಟ್ನಿಕ್​ ವಿ, ಮಾಡೆರ್ನಾ ಲಸಿಕೆಗಳು ಬಳಕೆಯಾಗುತ್ತಿವೆ. ಇದೀಗ ಒಮ್ಮೆ ಜಾನ್ಸನ್​ ಆ್ಯಂಡ್ ಜಾನ್ಸನ್​ ಕಂಪನಿಯ ಲಸಿಕೆಗೂ ಅನುಮೋದನೆ ಸಿಕ್ಕರೆ ಮತ್ತೊಂದು ಲಸಿಕೆ ಕೊವಿಡ್​ 19 ವಿರುದ್ಧ ಹೋರಾಟಕ್ಕೆ ಸಿಕ್ಕಂತಾಗುತ್ತದೆ.

ಇದನ್ನೂ ಓದಿ: ಬಿಗ್ ಬಾಸ್ ಫಿನಾಲೆಯಲ್ಲಿ ಅರವಿಂದ್​ ಕೆಪಿ ಗೆಲುವಿಗೂ, ಸೋಲಿಗೂ ಕಾರಣವಾಗಬಹುದು ಈ ಅಂಶಗಳು

Tokyo Olympics: ‘ಈ ಪದಕ ನಿಮಗಾಗಿ ಅಪ್ಪಾ’ ಪಿ ಆರ್ ಶ್ರೀಜೇಶ್ ಭಾವನಾತ್ಮಕ ಟ್ವೀಟ್

Johnson & Johnson applies for approval of its Covid 19 vaccine in India

Published On - 3:02 pm, Fri, 6 August 21

ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು