AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾನ್ಸನ್ & ಜಾನ್ಸನ್ ಕಂಪನಿಯ ಲಸಿಕೆ ಪ್ರಯೋಗಕ್ಕೆ ಅನುಮತಿ ನೀಡಿದ ಭಾರತ ಸರ್ಕಾರ

ಅಮೆರಿಕ ಮೂಲದ ಜಾನ್ಸನ್ ಅಂಡ್ ಜಾನ್ಸನ್ ಕಂಪನಿಗೆ ಭಾರತದಲ್ಲಿ ಎರಡು ಹಂತದ ಪ್ರಯೋಗ ನಡೆಸಲು ಅನುಮತಿ ಸಿಕ್ಕಿದೆ. ಭಾರತದಲ್ಲಿ ಕೋವಿಡ್ ಲಸಿಕೆಗಳು ದೊರೆಯುವ ಪ್ರಮಾಣ ಹೆಚ್ಚಿಸುವ ನಿಟ್ಟಿನಲ್ಲಿ ಇದು ಮಹತ್ವದ ಕ್ರಮ ಎನಿಸಿದೆ.

ಜಾನ್ಸನ್ & ಜಾನ್ಸನ್ ಕಂಪನಿಯ ಲಸಿಕೆ ಪ್ರಯೋಗಕ್ಕೆ ಅನುಮತಿ ನೀಡಿದ ಭಾರತ ಸರ್ಕಾರ
ಜಾನ್ಸನ್ ಅಂಡ್ ಜಾನ್ಸನ್ ಲಸಿಕೆ (ಸಂಗ್ರಹ ಚಿತ್ರ)
Ghanashyam D M | ಡಿ.ಎಂ.ಘನಶ್ಯಾಮ
|

Updated on: Apr 09, 2021 | 4:42 PM

Share

ದೆಹಲಿ: ಜಾನ್ಸನ್ & ಜಾನ್ಸನ್​ ಕಂಪನಿಯ ಸಿಂಗಲ್ ಡೋಸ್ ಕೊವಿಡ್ ತಡೆ ಲಸಿಕೆ ಪ್ರಯೋಗಕ್ಕೆ ಭಾರತ ಸರ್ಕಾರವು ಅನುಮತಿ ನೀಡಿದೆ. ಅಮೆರಿಕ ಮೂಲದ ಜಾನ್ಸನ್ ಅಂಡ್ ಜಾನ್ಸನ್ ಕಂಪನಿಗೆ ಭಾರತದಲ್ಲಿ ಎರಡು ಹಂತದ ಪ್ರಯೋಗ ನಡೆಸಲು ಅನುಮತಿ ಸಿಕ್ಕಿದೆ. ಭಾರತದಲ್ಲಿ ಕೋವಿಡ್ ಲಸಿಕೆಗಳು ದೊರೆಯುವ ಪ್ರಮಾಣ ಹೆಚ್ಚಿಸುವ ನಿಟ್ಟಿನಲ್ಲಿ ಇದು ಮಹತ್ವದ ಕ್ರಮ ಎನಿಸಿದೆ. ಈ ಸಂಬಂಧ ಔಷಧ ಮಹಾ ನಿಯಂತ್ರಕರ (DGCA) ಸೂಚನೆಗೆ ಪ್ರತಿಕ್ರಿಯಿಸಿರುವ ಜಾನ್ಸನ್ & ಜಾನ್ಸನ್, ಭಾರತದಲ್ಲಿ ಶೀಘ್ರ ಲಸಿಕೆ ಪ್ರಯೋಗ ಆರಂಭಿಸಲಾಗುವುದು ಎಂದು ತಿಳಿಸಿದೆ.

ದೇಶದಲ್ಲಿ ಕೊರೊನಾ 2ನೇ ಅಲೆ ಕಾಣಿಸಿಕೊಂಡ ನಂತರ ಲಸಿಕೆಗಳಿಗೆ ವ್ಯಾಪಕ ಬೇಡಿಕೆ ವ್ಯಕ್ತವಾಗಿದೆ. ನಮ್ಮಲ್ಲಿ ಲಸಿಕೆ ಸಂಗ್ರಹ ಮುಗಿದಿದೆ ಎಂದು ಕೆಲ ರಾಜ್ಯಗಳು ಹೇಳಿಕೊಂಡಿದ್ದವು. ಸಕಾಲಕ್ಕೆ ಲಸಿಕೆ ಪೂರೈಸಲು ತುಂಬಾ ಕಷ್ಟಪಡುತ್ತಿದ್ದೇವೆ ಎಂದು ಆಸ್ಟ್ರಾಜೆನೆಕಾ ಲಸಿಕೆ ಉತ್ಪಾದಿಸುತ್ತಿರುವ ಪುಣೆಯ ಸೀರಮ್ ಇನ್​ಸ್ಟಿಟ್ಯೂಟ್​ ಆಫ್ ಇಂಡಿಯಾ ಹೇಳಿತ್ತು.

ಜಾನ್ಸನ್​ ಅಂಡ್ ಜಾನ್ಸನ್ ಸಂಸ್ಥೆಯ ಸಿಂಗಲ್ ಶಾಟ್ ಲಸಿಕೆಗೆ ಮುಂದಿನ ದಿನಗಳಲ್ಲಿ ಅನುಮತಿ ದೊರೆತರೆ ಲಸಿಕೆ ಹೆಚ್ಚು ಜನರಿಗೆ ಒದಗಿಸಲು ಸರ್ಕಾರಗಳಿಗೆ ಸಾಧ್ಯವಾಗುತ್ತದೆ. ಆರಂಭದಲ್ಲಿ 1000 ಮಂದಿಯನ್ನು ಲಸಿಕೆ ಪ್ರಯೋಗಕ್ಕಾ ಕಂಪನಿಯು ಗುರುತಿಸಿಕೊಳ್ಳಬೇಕಾಗುತ್ತದೆ. ಇವರಿಗೆ ಲಸಿಕೆ ನೀಡಿ, ಅವರ ದೇಹದಲ್ಲಿ ಆಗುವ ಪರಿಣಾಮಗಳನ್ನು ಆಮೂಲಾಗ್ರ ದಾಖಲಿಸಿ ಹಿಂದಿನ ದತ್ತಾಂಶಗಳ ಜೊತೆಗೆ ಹೋಲಿಸಿ ನೋಡಬೇಕಿದೆ. ಸಮಾಧಾನಕರ ಫಲಿತಾಂಶಗಳು ಬಂದರೆ ಲಸಿಕೆ ಬಳಕೆಗೆ ಅನುಮತಿ ಸಿಗಲಿದೆ.

ಭಾರತದಲ್ಲಿ ಜಾನ್ಸನ್ ಅಂಡ್​ ಜಾನ್ಸನ್ ಕಂಪನಿಯು ‘ಬಯಲಾಜಿಕಲ್ ಇ’ ಕಂಪನಿಯ ಜೊತೆಗೆ ಲಸಿಕೆ ಉತ್ಪಾದನಾ ತಂತ್ರಜ್ಞಾನ ಹಂಚಿಕೊಳ್ಳುವ ಮತ್ತು ಉತ್ಪಾದನೆಗೆ ಬೇಕಾದ ವ್ಯವಸ್ಥೆ ರೂಪಿಸಿಕೊಳ್ಳಲು ಒಪ್ಪಂದ ಮಾಡಿಕೊಂಡಿದೆ. ಕಳೆದ ಫೆಬ್ರುವರಿಯಲ್ಲಿ ಜಾನ್ಸನ್ ಅಂಡ್ ಜಾನ್ಸನ್ ಲಸಿಕೆಗೆ ಅಮೆರಿಕದಲ್ಲಿ ತುರ್ತುಬಳಕೆ ಅನುಮತಿ ಸಿಕ್ಕಿತ್ತು.

ಭಾರತದಲ್ಲಿ ಲಸಿಕೆ ಸಂಗ್ರಹ ವಿವರ ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿ ಅಂಶಗಳ ಪ್ರಕಾರ ದೇಶದಲ್ಲಿ ಮುಂದಿನ 5 ದಿನಗಳಿಗಾಗುವಷ್ಟು ಕೊವಿಡ್ ಲಸಿಕೆ ಸಂಗ್ರಹದಲ್ಲಿದೆ. ದೇಶದಾದ್ಯಂತ ಲಸಿಕೆ ನೀಡುವ ಪ್ರಕ್ರಿಯೆ ಮುಂದುವರಿದಿದ್ದು, ಲಸಿಕ ಕೊರತೆ ನೀಗಿಸುವಂತೆ ರಾಜ್ಯ ಸರ್ಕಾರಗಳು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿವೆ. ಮುಂದಿನ ಒಂದು ವಾರದಲ್ಲಿ ಹೆಚ್ಚಿನ ಲಸಿಕೆ ಲಭ್ಯವಾಗುವಂತೆ ಮಾಡಲಾಗುವುದು ಎಂದು ಕೇಂದ್ರ ಸರ್ಕಾರ ಹೇಳಿದೆ. ಆಂಧ್ರ ಪ್ರದೇಶ ಮತ್ತು ಬಿಹಾರದಲ್ಲಿ ಸದ್ಯ ಎರಡು ದಿನಗಳಿಗಾಗುವಷ್ಟು ಲಸಿಕೆ ಉಳಿದಿದೆ. ಒಡಿಶಾದಲ್ಲಿ ನಾಲ್ಕು ದಿನಗಳಿಗಾಗುವಷ್ಟು ಲಸಿಕೆ ಬಾಕಿ ಇದೆ. ಏಪ್ರಿಲ್ ತಿಂಗಳಲ್ಲಿ ದೇಶದಾದ್ಯಂತ 3.6 ದಶಲಕ್ಷ ಡೋಸ್ ಲಸಿಕೆ ನೀಡಲಾಗಿದೆ. ಒಟ್ಟು 19.6 ದಶಲಕ್ಷ ಡೋಸ್ ಈಗ ಸಂಗ್ರಹದಲ್ಲಿದ್ದು ಇದು ಐದೂವರೆ ದಿನಕ್ಕಾಗುವಷ್ಟಾಗಿದೆ. ಮುಂದಿನ ವಾರದಲ್ಲಿ 24.5 ದಶಲಕ್ಷ ಡೋಸ್ ಲಸಿಕೆ ತಯಾರಾಗಲಿದ್ದು ಒಂದು ವಾರಕ್ಕಾಗುವಷ್ಟಿದೆ.

ಆರೋಗ್ಯ ಸಚಿವಾಲಯದ ಅಧಿಕಾರಿಗಳ ಮಾಹಿತಿ ಪ್ರಕಾರ ಲಸಿಕೆ ಸಂಗ್ರಹ ಮತ್ತು ಲಸಿಕೆ ವಿತರಣೆಯ ಕಾರ್ಯಕ್ಕೆ 4ರಿಂದ 8 ದಿನಗಳು ಬೇಕಾಗುತ್ತವೆ. ಪ್ರತಿದಿನವೂ ಎಲ್ಲ ರಾಜ್ಯಗಳೊಂದಿಗೆ ಮಾತುಕತೆ ನಡೆಸಿ ಅಲ್ಲಿನ ಲಸಿಕೆ ವಿತರಣೆ, ಲಸಿಕೆ ಸಂಗ್ರಹದ ಅಂಕಿ ಅಂಶಗಳನ್ನು ಪರಿಶೀಲಿಸಲಾಗುತ್ತದೆ.

ಲಸಿಕೆ ಪಡೆದ 176 ಮಂದಿ ಸಾವು ದೇಶದಲ್ಲಿ ಕೊವಿಡ್ ಲಸಿಕೆ ವಿತರಣೆ ಪ್ರಕ್ರಿಯೆ ಮುಂದುವರಿಯುತ್ತಿದ್ದು 71 ದಿನಗಳ ಅವಧಿಯಲ್ಲಿ ಕೊವಿಡ್ ಲಸಿಕೆ ಸ್ವೀಕರಿಸಿದ 176 ಮಂದಿ ಮೃತಪಟ್ಟಿದ್ದಾರೆ. ಜ.16ರಿಂದ ಮಾರ್ಚ್ 27ರ ಅವಧಿಯಲ್ಲಿ ಇಷ್ಟು ಸಾವು ಸಂಭವಿಸಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿ ಅಂಶಗಳನ್ನು ಆಧರಿಸಿ ದಿ ಪ್ರಿಂಟ್ ವರದಿ ಮಾಡಿದೆ. ಆದಾಗ್ಯೂ ಲಸಿಕೆ ಸ್ವೀಕರಿಸಿರುವುದರಿಂದಲೇ ಸಾವು ಸಂಭವಿಸಿದೆ ಎಂದು ಹೇಳಲು ಯಾವುದೇ ಸಾಕ್ಷ್ಯ ಇಲ್ಲ ಎಂದು ಆರೋಗ್ಯ ಸಚಿವಾಲಯದ ಅಧಿಕಾರಿ ಹೇಳಿದ್ದಾರೆ. ಜ.16ರಿಂದ ಮಾರ್ಚ್ 27ರ ಅವಧಿಯಲ್ಲಿ 6 ಕೋಟಿಗಿಂತಲೂ ಹೆಚ್ಚು (6,11,13,354) ಕೊವಿಡ್ ಲಸಿಕೆ ನೀಡಲಾಗಿದೆ. ಈ ಪೈಕಿ 176 ಮಂದಿ ಸಾವನ್ನಪ್ಪಿದ್ದಾರೆ.

(Johnson Johnson set to begin India trial of its single shot vaccine soon)

ಇದನ್ನೂ ಓದಿ: ಕೊವಿಡ್ ಲಸಿಕೆಗೆ ಹೆಚ್ಚಿದ ಬೇಡಿಕೆ; ಕೊವ್ಯಾಕ್ಸ್ ಮೂಲಕ ಎಲ್ಲ ದೇಶಗಳಿಗೆ ಲಸಿಕೆ ಪೂರೈಕೆ: ವಿಶ್ವ ಆರೋಗ್ಯ ಸಂಸ್ಥೆ

ಇದನ್ನೂ ಓದಿ: ಲಸಿಕೆ ಪಡೆಯಲು ಹಿಂದೇಟು ಹಾಕಿದ ಜನ; ಮುಸ್ಲಿಂ ಧರ್ಮಗುರುಗಳಿಗೆ ಮನವೊಲಿಸಿ ಲಸಿಕೆ ನೀಡಿದ ಜಿಲ್ಲಾಡಳಿತ

Follow Us
Ghanashyam D M | ಡಿ.ಎಂ.ಘನಶ್ಯಾಮ
Ghanashyam D M | ಡಿ.ಎಂ.ಘನಶ್ಯಾಮ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ