AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rana Ayyub ಕೊವಿಡ್ ಮತ್ತು ಪ್ರವಾಹ ಸಂತ್ರಸ್ತರ ಪರಿಹಾರ ನಿಧಿ ದುರುಪಯೋಗ ಆರೋಪ: ಪತ್ರಕರ್ತೆ ರಾಣಾ ಅಯ್ಯೂಬ್ ವಿರುದ್ಧ ಪ್ರಕರಣ ದಾಖಲು

ಪ್ರಕರಣದ ತನಿಖೆ ನಡೆಸಲಾಗುತ್ತಿದೆ ಎಂದು ನಗರ ಪೊಲೀಸ್ ವರಿಷ್ಠಾಧಿಕಾರಿ ಜ್ಞಾನೇಂದ್ರ ಸಿಂಗ್ ತಿಳಿಸಿದ್ದಾರೆ. ಪ್ರಕರಣವನ್ನು ತನಿಖೆ ಮಾಡಿದ ನಂತರ ಮತ್ತು ಆಕೆಯ ವಿರುದ್ಧ ಸಾಕ್ಷ್ಯವನ್ನು ಕಂಡುಕೊಂಡ ನಂತರವೇ ಪೊಲೀಸರು ಪತ್ರಕರ್ತೆಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳುತ್ತಾರೆ ಎಂದು ಅವರು ಹೇಳಿದರು.

Rana Ayyub ಕೊವಿಡ್ ಮತ್ತು ಪ್ರವಾಹ ಸಂತ್ರಸ್ತರ ಪರಿಹಾರ ನಿಧಿ ದುರುಪಯೋಗ ಆರೋಪ: ಪತ್ರಕರ್ತೆ ರಾಣಾ ಅಯ್ಯೂಬ್ ವಿರುದ್ಧ ಪ್ರಕರಣ ದಾಖಲು
ರಾಣಾ ಅಯ್ಯೂಬ್ (ಟ್ವಿಟರ್ ಚಿತ್ರ)
TV9 Web
| Edited By: |

Updated on: Sep 09, 2021 | 6:36 PM

Share

ದೆಹಲಿ: ಕೆಲವು ಪೂರ್ವ ರಾಜ್ಯಗಳಲ್ಲಿ ಕೊವಿಡ್ ರೋಗಿಗಳಿಗಾಗಿ ಮತ್ತು ಪ್ರವಾಹ ಸಂತ್ರಸ್ತರಿಗೆ ದೇಣಿಗೆ ಸಂಗ್ರಹಿಸಿದ ಮತ್ತು ದುರುಪಯೋಗಪಡಿಸಿಕೊಂಡ ಆರೋಪದ ಮೇಲೆ ವಂಚನೆ ಮತ್ತು ಹಣದ ಅವ್ಯವಹಾರ ಸೇರಿದಂತೆ ಹಲವು ಆರೋಪಗಳಲ್ಲಿ ಪತ್ರಕರ್ತೆ ರಾಣಾ ಅಯ್ಯೂಬ್ ವಿರುದ್ಧ ಗಾಜಿಯಾಬಾದ್ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಪತ್ರಕರ್ತೆ ರಾಣಾ ಅಯ್ಯೂಬ್ ಮೇಲ ವಿಶ್ವಾಸ ಉಲ್ಲಂಘನೆ ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿ ಕಂಪ್ಯೂಟರ್ ಸಂಪನ್ಮೂಲಗಳನ್ನು ಬಳಸಿಕೊಂಡು ಮೋಸ ಮಾಡಿದ ಆರೋಪವೂ ಇದೆ. ಈ ವಾರದ ಆರಂಭದಲ್ಲಿ ಅಂದರೆ ಮಂಗಳವಾರ ಎಫ್‌ಐಆರ್ ದಾಖಲಿಸಲಾಗಿದೆ.

ಪ್ರಕರಣದ ತನಿಖೆ ನಡೆಸಲಾಗುತ್ತಿದೆ ಎಂದು ನಗರ ಪೊಲೀಸ್ ವರಿಷ್ಠಾಧಿಕಾರಿ ಜ್ಞಾನೇಂದ್ರ ಸಿಂಗ್ ತಿಳಿಸಿದ್ದಾರೆ. ಪ್ರಕರಣವನ್ನು ತನಿಖೆ ಮಾಡಿದ ನಂತರ ಮತ್ತು ಆಕೆಯ ವಿರುದ್ಧ ಸಾಕ್ಷ್ಯವನ್ನು ಕಂಡುಕೊಂಡ ನಂತರವೇ ಪೊಲೀಸರು ಪತ್ರಕರ್ತೆಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳುತ್ತಾರೆ ಎಂದು ಅವರು ಹೇಳಿದರು.

72 ವರ್ಷದ ಬುಲಂದ್‌ಶಹರ್ ನಿವಾಸಿಯೊಬ್ಬರು ಜನರ ಗುಂಪೊಂದು ಅವರನ್ನು ಅಪಹರಿಸಿದ ನಂತರ ಜೈ ಶ್ರೀ ರಾಮ್ ಎಂದು ಘೋಷಣೆ ಕೂಗುವಂತೆ ಹೇಳಿತು ಮತ್ತು ಹಲ್ಲೆ ನಡೆಸಿ ಬಲವಂತವಾಗಿ ಗಡ್ಡವನ್ನು ಕತ್ತರಿಸಿದ್ದಾರೆ ಎಂದು ಆರೋಪಿಸಿದ ನಕಲಿ ವಿಡಿಯೊ ಪ್ರಸಾರದ ಪ್ರಕರಣದಲ್ಲಿ ಕೂಡಾ ರಾಣಾ ಹೆಸರು ಕೂಡ ಇದೆ.

ಆದಾಗ್ಯೂ, ಗಾಜಿಯಾಬಾದ್ ಪೋಲೀಸರು ನಂತರ ವಯಸ್ಸಾದ ಮುಸ್ಲಿಂ ವ್ಯಕ್ತಿ ಮಾಡಿದ ಕೋಮು ಆರೋಪಗಳು ಸುಳ್ಳೆಂದು ಕಂಡುಕೊಂಡಿದ್ದು. ರಾಜಕೀಯ ಕಾರ್ಯಕರ್ತರ ಒತ್ತಾಯದಿಂದ ಆ ವ್ಯಕ್ತಿ ಹೀಗೆ ಆರೋಪಿಸಿದ್ದರು ಎಂದಿದ್ದಾರೆ.

ಇದನ್ನೂ ಓದಿ: ವಿದ್ಯಾರ್ಥಿಗಳನ್ನು ಹೊರದಬ್ಬಲಾಗಿದೆ, 11 ಅಧ್ಯಾಪಕರ ಅಮಾನತು; ವಿಶ್ವಭಾರತಿ ಕ್ಯಾಂಪಸ್​​ನಲ್ಲಿ ವಿಸಿ ವಿರುದ್ಧ ಆರೋಪ- ಪ್ರತ್ಯಾರೋಪ, ಪ್ರತಿಭಟನೆ

(Journalist Rana Ayyub booked by the Ghaziabad police fo ‘misappropriating’ funds for Covid patients flood victims)

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ