AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಷ್ಟ್ರೀಯ ಭದ್ರತೆಗೆ ವಿರುದ್ಧವಾಗಿ ವರ್ತಿಸಿದರೆ ಪತ್ರಕರ್ತರ ಮಾನ್ಯತೆ ರದ್ದು; ಕೇಂದ್ರ ಸರ್ಕಾರದಿಂದ ನೂತನ ಮಾರ್ಗಸೂಚಿ ಬಿಡುಗಡೆ

ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವಾಲಯ ಬಿಡುಗಡೆ ಮಾಡಿರುವ ‘ಕೇಂದ್ರೀಯ ಮಾಧ್ಯಮ ಮಾನ್ಯತೆ ಮಾರ್ಗಸೂಚಿಗಳು-2022’ರಲ್ಲಿ ಉಲ್ಲೇಖಿಸಿರುವ ನೂತನ ಮಾರ್ಗಸೂಚಿಗಳ ಮಾಹಿತಿ ಹೀಗಿದೆ.

ರಾಷ್ಟ್ರೀಯ ಭದ್ರತೆಗೆ ವಿರುದ್ಧವಾಗಿ ವರ್ತಿಸಿದರೆ ಪತ್ರಕರ್ತರ ಮಾನ್ಯತೆ ರದ್ದು; ಕೇಂದ್ರ ಸರ್ಕಾರದಿಂದ ನೂತನ ಮಾರ್ಗಸೂಚಿ ಬಿಡುಗಡೆ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Feb 08, 2022 | 7:28 PM

ನವದೆಹಲಿ: ಪತ್ರಕರ್ತರು “ಭಾರತದ ಸಾರ್ವಭೌಮತೆ ಮತ್ತು ಸಮಗ್ರತೆ, ರಾಜ್ಯದ ಭದ್ರತೆ, ಅನ್ಯ ರಾಜ್ಯಗಳೊಂದಿಗೆ ಸೌಹಾರ್ದ ಸಂಬಂಧ, ಸಾರ್ವಜನಿಕ ಸುವ್ಯವಸ್ಥೆ, ಸಭ್ಯತೆ ಅಥವಾ ನೈತಿಕತೆ ಅಥವಾ ನ್ಯಾಯಾಂಗ ನಿಂದನೆಗೆ ಸಂಬಂಧಿಸಿದಂತೆ ರಾಷ್ಟ್ರೀಯ ಭದ್ರತೆಗೆ ವಿರುದ್ಧವಾಗಿ ಅಥವಾ ಪೂರ್ವಾಗ್ರಹ ಪೀಡಿತವಾಗಿ ವರ್ತಿಸಿದರೆ ಅವರ ಮಾನ್ಯತೆಯನ್ನು ರದ್ದುಗೊಳಿಸಲು ಅವಕಾಶವಿದೆ ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಅಧೀನ ಏಜೆನ್ಸಿಯಾದ PIB ತಿಳಿಸಿದೆ.

ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವಾಲಯ ಬಿಡುಗಡೆ ಮಾಡಿರುವ ‘ಕೇಂದ್ರೀಯ ಮಾಧ್ಯಮ ಮಾನ್ಯತೆ ಮಾರ್ಗಸೂಚಿಗಳು-2022’ರಲ್ಲಿ ಉಲ್ಲೇಖಿಸಿರುವ ನೂತನ ಮಾರ್ಗಸೂಚಿಗಳಲ್ಲಿ ಈ ವಿಷಯವನ್ನು ತಿಳಿಸಲಾಗಿದೆ. ಮಿತ್ರ ರಾಷ್ಟ್ರಗಳೊಂದಿಗಿನ ಸಂಬಂಧಗಳ ಮೇಲೆ ಪರಿಣಾಮ ಬೀರುವುದು, ನ್ಯಾಯಾಂಗ ನಿಂದನೆ, ಮಾನನಷ್ಟ ಅಥವಾ ಅಪರಾಧಕ್ಕೆ ಪ್ರಚೋದಿಸುವಂತಹ ವಿಷಯಗಳಲ್ಲಿ ಪತ್ರಕರ್ತರು ಪೂರ್ವಗ್ರಹಪೀಡಿತರಂತೆ ವರ್ತಿಸಬಾರದು. ಒಂದುವೇಳೆ ಇಂತಹ ನಡವಳಿಕೆ ಕಂಡುಬಂದರೆ ಅವರಿಗೆ ನೀಡಿರುವ ಮಾನ್ಯತೆಯನ್ನು ರದ್ದುಗೊಳಿಸಬಹುದಾಗಿದೆ’ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ಮಾಹಿತಿ ತಂತ್ರಜ್ಞಾನ (ಮಧ್ಯವರ್ತಿ ಮಾರ್ಗಸೂಚಿಗಳು ಮತ್ತು ಡಿಜಿಟಲ್ ಮಾಧ್ಯಮ ನೀತಿ ಸಂಹಿತೆ) ನಿಯಮಗಳ ಅಡಿಯಲ್ಲಿ ತಮ್ಮ ವಿವರಗಳನ್ನು ಸಚಿವಾಲಯದೊಂದಿಗೆ ದಾಖಲಿಸಿರುವ ಮತ್ತು ಸಂಗ್ರಾಹಕರಲ್ಲದ ಡಿಜಿಟಲ್ ಮಾಧ್ಯಮ ಸುದ್ದಿ ಪ್ರಕಾಶಕರಿಗಾಗಿ ಕೆಲಸ ಮಾಡುವ ಪತ್ರಕರ್ತರು ಈಗ ಮಾನ್ಯತೆಗೆ ಅರ್ಹರಾಗಿರುತ್ತಾರೆ. ಮಾನ್ಯತೆ ಪಡೆಯಲು ಅವರು ಕನಿಷ್ಠ ಐದು ವರ್ಷಗಳ ಅನುಭವವನ್ನು ಹೊಂದಿರಬೇಕು. ವೆಬ್‌ಸೈಟ್ ಕನಿಷ್ಠ ಒಂದು ವರ್ಷ ಹಳೆಯದಾಗಿರಬೇಕು ಮತ್ತು ಒಬ್ಬ ಪತ್ರಕರ್ತ ಮಾನ್ಯತೆ ಪಡೆಯಲು ಹಿಂದಿನ ಆರು ತಿಂಗಳುಗಳಲ್ಲಿ ಕನಿಷ್ಠ ಒಂದು ಮಿಲಿಯನ್‌ನಿಂದ ಐದು ಮಿಲಿಯನ್ ವ್ಯೂಗಳನ್ನು ಹೊಂದಿರಬೇಕು.

ಇದರ ಜೊತೆಗೆ ಆನ್‌ಲೈನ್‌ ಸುದ್ದಿ ವೇದಿಕೆಗಳಲ್ಲಿ ಕಾರ್ಯ ನಿರ್ವಹಿಸುವ ಪತ್ರಕರ್ತರಿಗೆ ಸಂಬಂಧಿಸಿದ ಮಾರ್ಗಸೂಚಿಗಳನ್ನು ಸಹ ಬಿಡುಗಡೆ ಮಾಡಲಾಗಿದೆ. ಸುದ್ದಿಗಳನ್ನು ಸಂಗ್ರಹಿಸಿ, ಜನರಿಗೆ ಒದಗಿಸುವ ಕಾರ್ಯದಲ್ಲಿ ನಿರತರಾದವರನ್ನು ಮಾನ್ಯತೆಗಾಗಿ ಪರಿಗಣಿಸುವುದಿಲ್ಲ ಎಂದು ವಾರ್ತಾ ಮತ್ತು ಪ್ರಸಾರ ಸಚಿವಾಲಯ ತಿಳಿಸಿದೆ.

ಇದನ್ನೂ ಓದಿ: ನಾಳೆಯಿಂದ 3 ದಿನ ಶಾಲೆ-ಕಾಲೇಜುಗಳಿಗೆ ರಜೆ; ಕರ್ನಾಟಕ ಸರ್ಕಾರದಿಂದ ಘೋಷಣೆ

PM Modi in Parliament: ಕಾಂಗ್ರೆಸ್ ಇಲ್ಲದಿದ್ದರೆ ತುರ್ತು ಪರಿಸ್ಥಿತಿ, ಸಿಖ್ ದಂಗೆಗಳು ಸಂಭವಿಸುತ್ತಿರಲಿಲ್ಲ; ಸಂಸತ್​ನಲ್ಲಿ ಪ್ರಧಾನಿ ಮೋದಿ ವಾಗ್ದಾಳಿ

ಆರ್​ಸಿಬಿ ಗೆಲುವಿನ ಸಂಭ್ರಮಾಚರಣೆ ಹೇಗಿತ್ತು? ವಿಡಿಯೋ ನೋಡಿ
ಆರ್​ಸಿಬಿ ಗೆಲುವಿನ ಸಂಭ್ರಮಾಚರಣೆ ಹೇಗಿತ್ತು? ವಿಡಿಯೋ ನೋಡಿ
ಗಾಜಿಯಾಬಾದ್ ಅಪಾರ್ಟ್​ಮೆಂಟ್​​ ಲಿಫ್ಟ್‌ನಲ್ಲಿ ಸಿಲುಕಿದ ಮಗು
ಗಾಜಿಯಾಬಾದ್ ಅಪಾರ್ಟ್​ಮೆಂಟ್​​ ಲಿಫ್ಟ್‌ನಲ್ಲಿ ಸಿಲುಕಿದ ಮಗು
ಆರ್​ಸಿಬಿ ವಿರುದ್ಧ ಶತಕ ಬಾರಿಸಿ ಪಲ್ಟಿ ಹೊಡೆದ ಪಂತ್
ಆರ್​ಸಿಬಿ ವಿರುದ್ಧ ಶತಕ ಬಾರಿಸಿ ಪಲ್ಟಿ ಹೊಡೆದ ಪಂತ್
ಕಮಲ್ ಹಾಸನ್ ವಿವಾದಾತ್ಮಕ ಹೇಳಿಕೆಗೆ ಕೆರಳಿದ ಕನ್ನಡಿಗರು, ಎಚ್ಚರಿಕೆ
ಕಮಲ್ ಹಾಸನ್ ವಿವಾದಾತ್ಮಕ ಹೇಳಿಕೆಗೆ ಕೆರಳಿದ ಕನ್ನಡಿಗರು, ಎಚ್ಚರಿಕೆ
ಪದ್ಮಭೂಷಣ ಪ್ರಶಸ್ತಿ ಸ್ವೀಕರಿಸಿದ ಅನಂತ್ ನಾಗ್
ಪದ್ಮಭೂಷಣ ಪ್ರಶಸ್ತಿ ಸ್ವೀಕರಿಸಿದ ಅನಂತ್ ನಾಗ್
ಪ್ರಸ್ತುತವಾಗಿ ಉಚ್ಚಾಟಿತರು ಕಾಂಗ್ರೆಸ್ ಸೇರಬಹುದೇ ಅಂತ ಗೊತ್ತಿಲ್ಲ: ಸಚಿವ
ಪ್ರಸ್ತುತವಾಗಿ ಉಚ್ಚಾಟಿತರು ಕಾಂಗ್ರೆಸ್ ಸೇರಬಹುದೇ ಅಂತ ಗೊತ್ತಿಲ್ಲ: ಸಚಿವ
ರೌಡಿಶೀಟರ್ ಅನಿಸ್ಕೊಂಡು ಬದುಕು ನಡೆಸುವುದು ಬಹಳ ಕಷ್ಟ: ನವಾಬ್ ಪಾಶಾ
ರೌಡಿಶೀಟರ್ ಅನಿಸ್ಕೊಂಡು ಬದುಕು ನಡೆಸುವುದು ಬಹಳ ಕಷ್ಟ: ನವಾಬ್ ಪಾಶಾ
ಬಿಜೆಪಿಯ 25 ಶಾಸಕರನ್ನು ಸೇರಿಸಿಕೊಳ್ಳಲು ಶಿವಕುಮಾರ್ ರೆಡಿ ಮಾಡಿದ್ದಾರೆ:ಶಾಸಕ
ಬಿಜೆಪಿಯ 25 ಶಾಸಕರನ್ನು ಸೇರಿಸಿಕೊಳ್ಳಲು ಶಿವಕುಮಾರ್ ರೆಡಿ ಮಾಡಿದ್ದಾರೆ:ಶಾಸಕ
ವಿಜಯೇಂದ್ರ ನಾಯಕತ್ವದಲ್ಲಿ 245/224 ಸೀಟು ಬಂದರೂ ಅಚ್ಚರಿಯಿಲ್ಲ: ಯತ್ನಾಳ್
ವಿಜಯೇಂದ್ರ ನಾಯಕತ್ವದಲ್ಲಿ 245/224 ಸೀಟು ಬಂದರೂ ಅಚ್ಚರಿಯಿಲ್ಲ: ಯತ್ನಾಳ್
ಕ್ಷೇತ್ರದಲ್ಲಿ ಮಾಡಲು ಬೇಕಾದಷ್ಟು ಕೆಲಸವಿದೆ, ಮುಂದುವರಿಸುತ್ತೇನೆ: ಸೋಮಶೇಖರ್
ಕ್ಷೇತ್ರದಲ್ಲಿ ಮಾಡಲು ಬೇಕಾದಷ್ಟು ಕೆಲಸವಿದೆ, ಮುಂದುವರಿಸುತ್ತೇನೆ: ಸೋಮಶೇಖರ್