ಜುಲೈ 18 ರಂದು ನಡೆಯಲಿರುವ ಎನ್‌ಡಿಎ ಸಭೆಗೆ ಹಾಜರಾಗಲು ಚಿರಾಗ್ ಪಾಸ್ವಾನ್‌ಗೆ ಪತ್ರ ಬರೆದ ನಡ್ಡಾ

ಪ್ರಾದೇಶಿಕ ಪಕ್ಷವನ್ನು ಎನ್‌ಡಿಎಯ ಪ್ರಮುಖ ಘಟಕವೆಂದು ಹೇಳಿರುವ ನಡ್ಡಾ, ಬಡವರ ಅಭಿವೃದ್ಧಿ ಮತ್ತು ಕಲ್ಯಾಣಕ್ಕಾಗಿರುವ ಮೋದಿ ಸರ್ಕಾರದ ಪ್ರಮುಖ ಪಾಲುದಾರ ಎಲ್‌ಜೆಪಿ (ಆರ್) ಎಂದು ಹೇಳಿದ್ದಾರೆ.

ಜುಲೈ 18 ರಂದು ನಡೆಯಲಿರುವ ಎನ್‌ಡಿಎ ಸಭೆಗೆ ಹಾಜರಾಗಲು ಚಿರಾಗ್ ಪಾಸ್ವಾನ್‌ಗೆ ಪತ್ರ ಬರೆದ ನಡ್ಡಾ
ಚಿರಾಗ್ ಪಾಸ್ವಾನ್
ರಶ್ಮಿ ಕಲ್ಲಕಟ್ಟ

Updated on: Jul 15, 2023 | 4:55 PM

ದೆಹಲಿ ಜುಲೈ 15: ಮೋದಿ ಸರ್ಕಾರದ ವಿರುದ್ಧ ವಿಪಕ್ಷಗಳು ಒಂದಾಗಲು ತೀವ್ರ ಪ್ರಯತ್ನ ನಡೆಸುತ್ತಿರುವ ನಡುವೆಯೇ ಆಡಳಿತ ಪಕ್ಷವು ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದು, ಜುಲೈ 18ರಂದು ನಡೆಯಲಿರುವ ಬಿಜೆಪಿ (BJP) ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ ಸಭೆಯಲ್ಲಿ (NDA Meeting) ಲೋಕಜನಶಕ್ತಿ ಪಕ್ಷದ (ರಾಮ್‌ವಿಲಾಸ್) ನಾಯಕ ಚಿರಾಗ್ ಪಾಸ್ವಾನ್ (Chirag Paswan) ಪಾಲ್ಗೊಳ್ಳುವ ಸಾಧ್ಯತೆಯಿದೆ. ಕೇಂದ್ರ ಸಚಿವ ನಿತ್ಯಾನಂದ ರಾಯ್ ಅವರು ಶುಕ್ರವಾರ ರಾತ್ರಿ ಚಿರಾಗ್ ಪಾಸ್ವಾನ್ ಅವರನ್ನು ಎರಡನೇ ಬಾರಿಗೆ ಭೇಟಿಯಾಗಿದ್ದಾರೆ. ಅದೇ ವೇಳೆ ಎನ್‌ಡಿಎ ಸಭೆಯಲ್ಲಿ ಭಾಗವಹಿಸುವಂತೆ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರು ಯುವ ನಾಯಕನಿಗೆ ಬರೆದ ಪತ್ರವನ್ನು ಎಲ್‌ಜೆಪಿ (ಆರ್) ಹಂಚಿಕೊಂಡಿದೆ

ಪ್ರಾದೇಶಿಕ ಪಕ್ಷವನ್ನು ಎನ್‌ಡಿಎಯ ಪ್ರಮುಖ ಘಟಕವೆಂದು ಹೇಳಿರುವ ನಡ್ಡಾ, ಬಡವರ ಅಭಿವೃದ್ಧಿ ಮತ್ತು ಕಲ್ಯಾಣಕ್ಕಾಗಿರುವ ಮೋದಿ ಸರ್ಕಾರದ ಪ್ರಮುಖ ಪಾಲುದಾರ ಎಲ್‌ಜೆಪಿ (ಆರ್) ಎಂದು ಹೇಳಿದ್ದಾರೆ.


2020 ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಪ್ರಚಾರಕ್ಕಾಗಿ ಬಿಹಾರದಲ್ಲಿ ಮೈತ್ರಿಯಿಂದ ಹೊರನಡೆದ ನಂತರ ದಿವಂಗತ ದಲಿತ ನಾಯಕ ರಾಮ್ ವಿಲಾಸ್ ಪಾಸ್ವಾನ್ ಅವರ ಪುತ್ರ ಚಿರಾಗ್ ಪಾಸ್ವಾನ್ ಅವರನ್ನು ಮತ್ತೆ ಎನ್‌ಡಿಎ ತೆಕ್ಕೆಗೆ ತರಲು ಬಿಜೆಪಿಯ ಪ್ರಯತ್ನಿಸುತ್ತಿದೆ.

ಈಗ ಕೇಂದ್ರ ಸಚಿವರಾಗಿರುವ ಅವರ ಚಿಕ್ಕಪ್ಪ ಪಶುಪತಿ ಕುಮಾರ್ ಪಾರಸ್ ನೇತೃತ್ವದಲ್ಲಿ ಎಲ್‌ಜೆಪಿಯಲ್ಲಿನ ವಿಭಜನೆಯು ಅವರನ್ನು ದುರ್ಬಲಗೊಳಿಸಿದರೆ, ಚಿರಾಗ್ ಪಾಸ್ವಾನ್ ಪಕ್ಷದ ನಿಷ್ಠಾವಂತ ಮತಬ್ಯಾಂಕ್ ಅನ್ನು ತಮ್ಮೊಂದಿಗೆ ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಅದು ರಾಜ್ಯದಲ್ಲಿ ಬಿಜೆಪಿಗೆ ತನ್ನ ಪ್ರಾಮುಖ್ಯತೆಯನ್ನು ಸೂಚಿಸುತ್ತದೆ. ಆರ್‌ಜೆಡಿ, ಜೆಡಿಯು, ಕಾಂಗ್ರೆಸ್ ಮತ್ತು ಎಡಪಕ್ಷಗಳ ಒಕ್ಕೂಟವು ಬಿಜೆಪಿ ವಿರುದ್ಧ ಕಣಕ್ಕಿಳಿದಿವೆ. ಪ್ರಮುಖ ವಿಷಯಗಳಲ್ಲಿ ಅವರು ಬಿಜೆಪಿಯನ್ನು ಬೆಂಬಲಿಸುವಲ್ಲಿ ದೃಢವಾಗಿ ನಿಂತಿದ್ದಾರೆ.

ಇದನ್ನೂ ಓದಿ: PM Modi UAE Visit: ಅರಬ್ ರಾಷ್ಟ್ರಕ್ಕೆ ಮೋದಿ ಆಗಮನ, ಆತ್ಮೀಯವಾಗಿ ಬರಮಾಡಿಕೊಂಡ ಯುಎಇ ಕ್ರೌನ್ ಪ್ರಿನ್ಸ್

NDA ಸಭೆಯಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನಾ, ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಬಣ, ಬಿಹಾರ ಮತ್ತು ಉತ್ತರ ಪ್ರದೇಶದ ಹಲವಾರು ಸಣ್ಣ ಪಕ್ಷಗಳು ಮತ್ತು ಈಶಾನ್ಯ ರಾಜ್ಯಗಳ ಪ್ರಾದೇಶಿಕ ಪಕ್ಷಗಳು ಸೇರಿದಂತೆ ಹಲವಾರು ಹೊಸ ಬಿಜೆಪಿ ಮಿತ್ರಪಕ್ಷಗಳು ಭಾಗವಹಿಸುವ ನಿರೀಕ್ಷೆಯಿದೆ.

ಪ್ರಧಾನಿ ನರೇಂದ್ರ ಮೋದಿ ಕೂಡ ಸಭೆಯಲ್ಲಿ ಪಾಲ್ಗೊಳ್ಳುವ ಸಾಧ್ಯತೆ ಇದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

Follow Us