AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಬಗ್ಗೆ ಕನ್ನಡದಲ್ಲೇ ಜಾಗೃತಿ ಮೂಡಿಸಿದ್ದ ಜೂ. ಎನ್​ಟಿಆರ್​ಗೆ ಕೊರೊನಾ ಸೋಂಕು ದೃಢ​

ಇತ್ತೀಚೆಗೆ ಕೊರೊನಾ ವೈರಸ್​ ಬಗ್ಗೆ ಎಚ್ಚರಿಕೆಯಿಂದ ಇರುವಂತೆ ವಿಡಿಯೋವೊಂದರಲ್ಲಿ ಕನ್ನಡದಲ್ಲಿ ಮಾತನಾಡಿ, ‘ಮಾತೃ’ಭಾಷಾ ಪ್ರೇಮ ಮೆರೆದು, ಕನ್ನಡಿಗರ ಬಗ್ಗೆ ಕಾಳಜಿ ವ್ಯಕ್ತಪಡಿಸಿದ್ದ ತೆಲುಗು ಖ್ಯಾತ ನಟ ಜೂ. ಎನ್​ಟಿಆರ್ ಅವರಿಗೂ ಈಗ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಈ ಬಗ್ಗೆ ಟ್ವೀಟ್​ ಮಾಡಿ ತಿಳಿಸಿರುವ ಜೂ. ಎನ್​ಟಿಆರ್ ನನಗೂ ಕೊರೊನಾ ಬಂದಿದೆ. ಆದರೆ ಅಭಿಮಾನಿಗಳೂ ಅತಂಕಪಡುವುದು ಬೇಡ. ನಾನು ಆರೋಗ್ಯವಾಗಿದ್ದೇನೆ. ನಾನೂ ಮತ್ತು ನನ್ನ ಕುಟುಂಬಸ್ಥರು ಮನೆಯಲ್ಲೇ ಕ್ವಾರೆಂಟೈನ್​ ಆಗಿದ್ದೇವೆ. ವೈದ್ಯರ ನಿಗಾದಲ್ಲಿ ನಾವೆಲ್ಲ ಸಮರ್ಪಕವಾಗಿ ಚಿಕಿತ್ಸೆ […]

ಕೊರೊನಾ ಬಗ್ಗೆ ಕನ್ನಡದಲ್ಲೇ ಜಾಗೃತಿ ಮೂಡಿಸಿದ್ದ ಜೂ. ಎನ್​ಟಿಆರ್​ಗೆ ಕೊರೊನಾ ಸೋಂಕು ದೃಢ​
ಕೊರೊನಾ ಬಗ್ಗೆ ಕನ್ನಡದಲ್ಲೇ ಜಾಗೃತಿ ಮೂಡಿಸಿದ್ದ ಜೂ. ಎನ್​ಟಿಆರ್​ಗೆ ಕೊರೊನಾ ಸೋಂಕು ದೃಢ​
ಸಾಧು ಶ್ರೀನಾಥ್​
|

Updated on:May 10, 2021 | 3:52 PM

Share

ಇತ್ತೀಚೆಗೆ ಕೊರೊನಾ ವೈರಸ್​ ಬಗ್ಗೆ ಎಚ್ಚರಿಕೆಯಿಂದ ಇರುವಂತೆ ವಿಡಿಯೋವೊಂದರಲ್ಲಿ ಕನ್ನಡದಲ್ಲಿ ಮಾತನಾಡಿ, ‘ಮಾತೃ’ಭಾಷಾ ಪ್ರೇಮ ಮೆರೆದು, ಕನ್ನಡಿಗರ ಬಗ್ಗೆ ಕಾಳಜಿ ವ್ಯಕ್ತಪಡಿಸಿದ್ದ ತೆಲುಗು ಖ್ಯಾತ ನಟ ಜೂ. ಎನ್​ಟಿಆರ್ ಅವರಿಗೂ ಈಗ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಈ ಬಗ್ಗೆ ಟ್ವೀಟ್​ ಮಾಡಿ ತಿಳಿಸಿರುವ ಜೂ. ಎನ್​ಟಿಆರ್ ನನಗೂ ಕೊರೊನಾ ಬಂದಿದೆ. ಆದರೆ ಅಭಿಮಾನಿಗಳೂ ಅತಂಕಪಡುವುದು ಬೇಡ. ನಾನು ಆರೋಗ್ಯವಾಗಿದ್ದೇನೆ. ನಾನೂ ಮತ್ತು ನನ್ನ ಕುಟುಂಬಸ್ಥರು ಮನೆಯಲ್ಲೇ ಕ್ವಾರೆಂಟೈನ್​ ಆಗಿದ್ದೇವೆ. ವೈದ್ಯರ ನಿಗಾದಲ್ಲಿ ನಾವೆಲ್ಲ ಸಮರ್ಪಕವಾಗಿ ಚಿಕಿತ್ಸೆ ಪಡೆಯುತ್ತಿದ್ದೇವೆ. ಇತ್ತೀಚೆಗೆ ನಮ್ಮ ಸಂಪರ್ಕಕ್ಕೆ ಬಂದವರು ಟೆಸ್ಟ್ ಮಾಡಿಸಿಕೊಳ್ಳಿ ಮತ್ತು ಜಾಗ್ರತೆ ವಹಿಸಿ ಎಂದು ತಿಳಿಸಿದ್ದಾರೆ. ​

ಜೂ. ಎನ್​ಟಿಆರ್ ಆಂಗ್ಲ ಟ್ವೀಟ್​ ಹೀಗಿದೆ: I’ve tested positive for Covid19. Plz don’t worry,I’m doing absolutely fine. My family & I have isolated ourselves & we’re following all protocols under the supervision of doctors. I request those who’ve come into contact with me over the last few days to pl get tested. Stay safe

​ಇತ್ತೀಚೆಗೆ ಕೊರೊನಾ ವೈರಸ್​ ಬಗ್ಗೆ ಎಚ್ಚರಿಕೆಯಿಂದ ಇರುವಂತೆ ಜೂ. ಎನ್​ಟಿಆರ್ ನೀಡಿದ್ದ ವಿಡಿಯೋ ಸಂದೇಶ ಹೀಗಿದೆ: ಎಲ್ಲರಿಗೂ ನಮಸ್ಕಾರ. ಕೋವಿಡ್​ ವಿರುದ್ಧದ ಹೋರಾಟದಲ್ಲಿ ಮಾಸ್ಕ್ ಹಾಗೂ​ ಸ್ಯಾನಿಟೈಸರ್​ ದೊಡ್ಡ ಅಸ್ತ್ರವಾಗಿದೆ. ಸದಾ ಮಾಸ್ಕ್​ ಧರಿಸಿ. ಕೈ ಸ್ವಚ್ಛವಾಗಿಟ್ಟುಕೊಳ್ಳಿ. ಪಬ್ಲಿಕ್​ನಲ್ಲಿ ಓಡಾಡುವಾಗ ಅಂತರ ಕಾಯ್ದುಕೊಳ್ಳಿ. ಮಾಸ್ಕ್​ ಧರಿಸುವುದಾಗಿ ಹಾಗೂ ವ್ಯಾಕ್ಸಿನ್​ ಹಾಕಿಸಿಕೊಳ್ಳುವುದಾಗಿ ಪ್ರತಿಜ್ಞೆ ಮಾಡಿ ಎಂದು ಕೋರಿದ್ದಾರೆ.

ಅಕ್ಟೋಬರ್​ 13ರಂದು ಆರ್​ಆರ್​ಆರ್​ ಚಿತ್ರ ತೆರೆಗೆ ತರುವುದಾಗಿ ರಾಜಮೌಳಿ ಘೋಷಣೆ ಮಾಡಿದ್ದರು. ಈ ವಿಚಾರ ಕೇಳಿ ಅಭಿಮಾನಿಗಳು ಕೂಡ ಸಖತ್​ ಖುಷಿಯಾಗಿದ್ದರು. ಆದರೆ, ಈಗ ಅಭಿಮಾನಿಗಳಿಗೆ ಬ್ಯಾಡ್​ನ್ಯೂಸ್ ಒಂದು ಸಿಕ್ಕಿದೆ. ಆರ್​ಆರ್​ಆರ್​ ಸಿನಿಮಾ ರಿಲೀಸ್​ ದಿನಾಂಕ 2022ಕ್ಕೆ ಮುಂದೂಡಲ್ಪಟ್ಟಿದೆಯಂತೆ. ಆರ್​ಆರ್​ಆರ್​​ ಸಿನಿಮಾದ ಮೇಲೆ ಭಾರೀ ನಿರೀಕ್ಷೆ ಇದೆ. 2015ರಲ್ಲಿ ಬಾಹುಬಲಿ ಸಿನಿಮಾ ತೆರೆಕಂಡಿತ್ತು. ಇದಾದ ಎರಡೇ ವರ್ಷಕ್ಕೆ ಬಾಹುಬಲಿ 2 ಸಿನಿಮಾ ತೆರೆಕಂಡಿತ್ತು. ಈ ಸಿನಿಮಾ ತೆರೆಕಂಡು ನಾಲ್ಕು ವರ್ಷಗಳೇ ಕಳೆದಿವೆ. ಈಗ ರಾಜಮೌಳಿ ಅವರ ಮುಂದಿನ ಚಿತ್ರದ ಬಗ್ಗೆ ಭಾರೀ ನಿರೀಕ್ಷೆ ಇಟ್ಟುಕೊಳ್ಳಲಾಗಿದೆ. ಆದರೆ, ಪದೇಪದೇ ಸಿನಿಮಾ ರಿಲೀಸ್​ ದಿನಾಂಕ ಮುಂದೂಡಲ್ಪಡುತ್ತಿರುವುದು ಅಭಿಮಾನಿಗಳಿಗೆ ಬೇಸರ ಉಂಟಾಗುತ್ತಿದೆ.

(jr ntr tarak tweets to tell he got contracted coronavirus)

Also Read:

ಕೊರೊನಾ ಬಗ್ಗೆ ಕನ್ನಡದಲ್ಲೇ ಜಾಗೃತಿ ಮೂಡಿಸಿದ ಟಾಲಿವುಡ್​ ಸ್ಟಾರ್​ ಜೂ. ಎನ್​ಟಿಆರ್​

ಖ್ಯಾತ ಯುವ ನಟ ಅಲ್ಲು ಅರ್ಜುನ್​ಗೂ ಬಂತು ಕೊರೊನಾ ಸೋಂಕು

Published On - 3:48 pm, Mon, 10 May 21

ಬೆಳೆಬಾಳುವ ಮರಗಳನ್ನೇ ಕಡಿದು ಮಾರಿಕೊಂಡ್ರಾ ಅಧಿಕಾರಿಗಳು?
ಬೆಳೆಬಾಳುವ ಮರಗಳನ್ನೇ ಕಡಿದು ಮಾರಿಕೊಂಡ್ರಾ ಅಧಿಕಾರಿಗಳು?
ತುಂಗಭದ್ರಾ ಕ್ರಸ್ಟ್ ಗೇಟ್: 2 ದಿನದಲ್ಲಿ 18ನೇ ಗೇಟ್ ಬೇಸಮೆಂಟ್ ರೆಡಿ
ತುಂಗಭದ್ರಾ ಕ್ರಸ್ಟ್ ಗೇಟ್: 2 ದಿನದಲ್ಲಿ 18ನೇ ಗೇಟ್ ಬೇಸಮೆಂಟ್ ರೆಡಿ
ಬೆಂಗಳೂರಿನ ಪಿಜಿಯಲ್ಲಿ ಸಿಲಿಂಡರ್​ ಸ್ಫೋಟ: ಓರ್ವ ಸಾವು, ಕೆಲವರಿಗೆ ಗಾಯ
ಬೆಂಗಳೂರಿನ ಪಿಜಿಯಲ್ಲಿ ಸಿಲಿಂಡರ್​ ಸ್ಫೋಟ: ಓರ್ವ ಸಾವು, ಕೆಲವರಿಗೆ ಗಾಯ
ತನ್ನ ಕ್ಷೇತ್ರದಲ್ಲಿ ಕರೆಂಟ್ ತೆಗೆದಿದ್ದಕ್ಕೆ ವಿದ್ಯುತ್ ಕಂಬ ಹತ್ತಿದ ಶಾಸಕ
ತನ್ನ ಕ್ಷೇತ್ರದಲ್ಲಿ ಕರೆಂಟ್ ತೆಗೆದಿದ್ದಕ್ಕೆ ವಿದ್ಯುತ್ ಕಂಬ ಹತ್ತಿದ ಶಾಸಕ
ನ್ಯೂ ಇಯರ್ ಗಿಫ್ಟ್​: ಮನೆ ಕಳೆದುಕೊಂಡ ಕೋಗಲು ಜನರಿಗೆ ಹೊಸ ಸೂರು
ನ್ಯೂ ಇಯರ್ ಗಿಫ್ಟ್​: ಮನೆ ಕಳೆದುಕೊಂಡ ಕೋಗಲು ಜನರಿಗೆ ಹೊಸ ಸೂರು
ಬಿಗ್ ಬಾಸ್: ಮುಚ್ಚುಮರೆ ಇಲ್ಲದೇ 3 ರಿಲೇಷನ್​ಶಿಪ್ ಬಗ್ಗೆ ನಿಜ ಹೇಳಿದ ಸೂರಜ್
ಬಿಗ್ ಬಾಸ್: ಮುಚ್ಚುಮರೆ ಇಲ್ಲದೇ 3 ರಿಲೇಷನ್​ಶಿಪ್ ಬಗ್ಗೆ ನಿಜ ಹೇಳಿದ ಸೂರಜ್
ಕಾರಿನ ಮೇಲೆ ಬಿದ್ದ ವಾಟರ್ ಟ್ಯಾಂಕರ್
ಕಾರಿನ ಮೇಲೆ ಬಿದ್ದ ವಾಟರ್ ಟ್ಯಾಂಕರ್
ಮತ್ತೊಂದು ಕೆನರಾ ಬ್ಯಾಂಕಿನಿಂದ ಗ್ರಾಹಕರಿಗೆ ಮಹಾ ಮೋಸ
ಮತ್ತೊಂದು ಕೆನರಾ ಬ್ಯಾಂಕಿನಿಂದ ಗ್ರಾಹಕರಿಗೆ ಮಹಾ ಮೋಸ
ಕೋಗಿಲು ಲೇಔಟ್​​ಗೆ ಡಿಕೆ ಶಿವಕುಮಾರ್​ ಭೇಟಿ: ಪರಿಶೀಲನೆ, ಹೇಳಿದ್ದಿಷ್ಟು
ಕೋಗಿಲು ಲೇಔಟ್​​ಗೆ ಡಿಕೆ ಶಿವಕುಮಾರ್​ ಭೇಟಿ: ಪರಿಶೀಲನೆ, ಹೇಳಿದ್ದಿಷ್ಟು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು