AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಬಗ್ಗೆ ಕನ್ನಡದಲ್ಲೇ ಜಾಗೃತಿ ಮೂಡಿಸಿದ್ದ ಜೂ. ಎನ್​ಟಿಆರ್​ಗೆ ಕೊರೊನಾ ಸೋಂಕು ದೃಢ​

ಇತ್ತೀಚೆಗೆ ಕೊರೊನಾ ವೈರಸ್​ ಬಗ್ಗೆ ಎಚ್ಚರಿಕೆಯಿಂದ ಇರುವಂತೆ ವಿಡಿಯೋವೊಂದರಲ್ಲಿ ಕನ್ನಡದಲ್ಲಿ ಮಾತನಾಡಿ, ‘ಮಾತೃ’ಭಾಷಾ ಪ್ರೇಮ ಮೆರೆದು, ಕನ್ನಡಿಗರ ಬಗ್ಗೆ ಕಾಳಜಿ ವ್ಯಕ್ತಪಡಿಸಿದ್ದ ತೆಲುಗು ಖ್ಯಾತ ನಟ ಜೂ. ಎನ್​ಟಿಆರ್ ಅವರಿಗೂ ಈಗ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಈ ಬಗ್ಗೆ ಟ್ವೀಟ್​ ಮಾಡಿ ತಿಳಿಸಿರುವ ಜೂ. ಎನ್​ಟಿಆರ್ ನನಗೂ ಕೊರೊನಾ ಬಂದಿದೆ. ಆದರೆ ಅಭಿಮಾನಿಗಳೂ ಅತಂಕಪಡುವುದು ಬೇಡ. ನಾನು ಆರೋಗ್ಯವಾಗಿದ್ದೇನೆ. ನಾನೂ ಮತ್ತು ನನ್ನ ಕುಟುಂಬಸ್ಥರು ಮನೆಯಲ್ಲೇ ಕ್ವಾರೆಂಟೈನ್​ ಆಗಿದ್ದೇವೆ. ವೈದ್ಯರ ನಿಗಾದಲ್ಲಿ ನಾವೆಲ್ಲ ಸಮರ್ಪಕವಾಗಿ ಚಿಕಿತ್ಸೆ […]

ಕೊರೊನಾ ಬಗ್ಗೆ ಕನ್ನಡದಲ್ಲೇ ಜಾಗೃತಿ ಮೂಡಿಸಿದ್ದ ಜೂ. ಎನ್​ಟಿಆರ್​ಗೆ ಕೊರೊನಾ ಸೋಂಕು ದೃಢ​
ಕೊರೊನಾ ಬಗ್ಗೆ ಕನ್ನಡದಲ್ಲೇ ಜಾಗೃತಿ ಮೂಡಿಸಿದ್ದ ಜೂ. ಎನ್​ಟಿಆರ್​ಗೆ ಕೊರೊನಾ ಸೋಂಕು ದೃಢ​
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:May 10, 2021 | 3:52 PM

Share

ಇತ್ತೀಚೆಗೆ ಕೊರೊನಾ ವೈರಸ್​ ಬಗ್ಗೆ ಎಚ್ಚರಿಕೆಯಿಂದ ಇರುವಂತೆ ವಿಡಿಯೋವೊಂದರಲ್ಲಿ ಕನ್ನಡದಲ್ಲಿ ಮಾತನಾಡಿ, ‘ಮಾತೃ’ಭಾಷಾ ಪ್ರೇಮ ಮೆರೆದು, ಕನ್ನಡಿಗರ ಬಗ್ಗೆ ಕಾಳಜಿ ವ್ಯಕ್ತಪಡಿಸಿದ್ದ ತೆಲುಗು ಖ್ಯಾತ ನಟ ಜೂ. ಎನ್​ಟಿಆರ್ ಅವರಿಗೂ ಈಗ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಈ ಬಗ್ಗೆ ಟ್ವೀಟ್​ ಮಾಡಿ ತಿಳಿಸಿರುವ ಜೂ. ಎನ್​ಟಿಆರ್ ನನಗೂ ಕೊರೊನಾ ಬಂದಿದೆ. ಆದರೆ ಅಭಿಮಾನಿಗಳೂ ಅತಂಕಪಡುವುದು ಬೇಡ. ನಾನು ಆರೋಗ್ಯವಾಗಿದ್ದೇನೆ. ನಾನೂ ಮತ್ತು ನನ್ನ ಕುಟುಂಬಸ್ಥರು ಮನೆಯಲ್ಲೇ ಕ್ವಾರೆಂಟೈನ್​ ಆಗಿದ್ದೇವೆ. ವೈದ್ಯರ ನಿಗಾದಲ್ಲಿ ನಾವೆಲ್ಲ ಸಮರ್ಪಕವಾಗಿ ಚಿಕಿತ್ಸೆ ಪಡೆಯುತ್ತಿದ್ದೇವೆ. ಇತ್ತೀಚೆಗೆ ನಮ್ಮ ಸಂಪರ್ಕಕ್ಕೆ ಬಂದವರು ಟೆಸ್ಟ್ ಮಾಡಿಸಿಕೊಳ್ಳಿ ಮತ್ತು ಜಾಗ್ರತೆ ವಹಿಸಿ ಎಂದು ತಿಳಿಸಿದ್ದಾರೆ. ​

ಜೂ. ಎನ್​ಟಿಆರ್ ಆಂಗ್ಲ ಟ್ವೀಟ್​ ಹೀಗಿದೆ: I’ve tested positive for Covid19. Plz don’t worry,I’m doing absolutely fine. My family & I have isolated ourselves & we’re following all protocols under the supervision of doctors. I request those who’ve come into contact with me over the last few days to pl get tested. Stay safe

​ಇತ್ತೀಚೆಗೆ ಕೊರೊನಾ ವೈರಸ್​ ಬಗ್ಗೆ ಎಚ್ಚರಿಕೆಯಿಂದ ಇರುವಂತೆ ಜೂ. ಎನ್​ಟಿಆರ್ ನೀಡಿದ್ದ ವಿಡಿಯೋ ಸಂದೇಶ ಹೀಗಿದೆ: ಎಲ್ಲರಿಗೂ ನಮಸ್ಕಾರ. ಕೋವಿಡ್​ ವಿರುದ್ಧದ ಹೋರಾಟದಲ್ಲಿ ಮಾಸ್ಕ್ ಹಾಗೂ​ ಸ್ಯಾನಿಟೈಸರ್​ ದೊಡ್ಡ ಅಸ್ತ್ರವಾಗಿದೆ. ಸದಾ ಮಾಸ್ಕ್​ ಧರಿಸಿ. ಕೈ ಸ್ವಚ್ಛವಾಗಿಟ್ಟುಕೊಳ್ಳಿ. ಪಬ್ಲಿಕ್​ನಲ್ಲಿ ಓಡಾಡುವಾಗ ಅಂತರ ಕಾಯ್ದುಕೊಳ್ಳಿ. ಮಾಸ್ಕ್​ ಧರಿಸುವುದಾಗಿ ಹಾಗೂ ವ್ಯಾಕ್ಸಿನ್​ ಹಾಕಿಸಿಕೊಳ್ಳುವುದಾಗಿ ಪ್ರತಿಜ್ಞೆ ಮಾಡಿ ಎಂದು ಕೋರಿದ್ದಾರೆ.

ಅಕ್ಟೋಬರ್​ 13ರಂದು ಆರ್​ಆರ್​ಆರ್​ ಚಿತ್ರ ತೆರೆಗೆ ತರುವುದಾಗಿ ರಾಜಮೌಳಿ ಘೋಷಣೆ ಮಾಡಿದ್ದರು. ಈ ವಿಚಾರ ಕೇಳಿ ಅಭಿಮಾನಿಗಳು ಕೂಡ ಸಖತ್​ ಖುಷಿಯಾಗಿದ್ದರು. ಆದರೆ, ಈಗ ಅಭಿಮಾನಿಗಳಿಗೆ ಬ್ಯಾಡ್​ನ್ಯೂಸ್ ಒಂದು ಸಿಕ್ಕಿದೆ. ಆರ್​ಆರ್​ಆರ್​ ಸಿನಿಮಾ ರಿಲೀಸ್​ ದಿನಾಂಕ 2022ಕ್ಕೆ ಮುಂದೂಡಲ್ಪಟ್ಟಿದೆಯಂತೆ. ಆರ್​ಆರ್​ಆರ್​​ ಸಿನಿಮಾದ ಮೇಲೆ ಭಾರೀ ನಿರೀಕ್ಷೆ ಇದೆ. 2015ರಲ್ಲಿ ಬಾಹುಬಲಿ ಸಿನಿಮಾ ತೆರೆಕಂಡಿತ್ತು. ಇದಾದ ಎರಡೇ ವರ್ಷಕ್ಕೆ ಬಾಹುಬಲಿ 2 ಸಿನಿಮಾ ತೆರೆಕಂಡಿತ್ತು. ಈ ಸಿನಿಮಾ ತೆರೆಕಂಡು ನಾಲ್ಕು ವರ್ಷಗಳೇ ಕಳೆದಿವೆ. ಈಗ ರಾಜಮೌಳಿ ಅವರ ಮುಂದಿನ ಚಿತ್ರದ ಬಗ್ಗೆ ಭಾರೀ ನಿರೀಕ್ಷೆ ಇಟ್ಟುಕೊಳ್ಳಲಾಗಿದೆ. ಆದರೆ, ಪದೇಪದೇ ಸಿನಿಮಾ ರಿಲೀಸ್​ ದಿನಾಂಕ ಮುಂದೂಡಲ್ಪಡುತ್ತಿರುವುದು ಅಭಿಮಾನಿಗಳಿಗೆ ಬೇಸರ ಉಂಟಾಗುತ್ತಿದೆ.

(jr ntr tarak tweets to tell he got contracted coronavirus)

Also Read:

ಕೊರೊನಾ ಬಗ್ಗೆ ಕನ್ನಡದಲ್ಲೇ ಜಾಗೃತಿ ಮೂಡಿಸಿದ ಟಾಲಿವುಡ್​ ಸ್ಟಾರ್​ ಜೂ. ಎನ್​ಟಿಆರ್​

ಖ್ಯಾತ ಯುವ ನಟ ಅಲ್ಲು ಅರ್ಜುನ್​ಗೂ ಬಂತು ಕೊರೊನಾ ಸೋಂಕು

Published On - 3:48 pm, Mon, 10 May 21

Follow Us
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ