AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುವೇಂದು ಅಧಿಕಾರಿ ಗೆಲುವಿನ ವಿರುದ್ಧ ಮಮತಾ ಬ್ಯಾನರ್ಜಿ ಕಾನೂನು ಹೋರಾಟ; ಅರ್ಜಿ ವಿಚಾರಣೆ ನಡೆಸುತ್ತಿರುವ ನ್ಯಾಯಾಧೀಶರ ಮೇಲೆ ಡೌಟ್​

ಮಮತಾ ಬ್ಯಾನರ್ಜಿ ಪರ ವಕೀಲರ ಮನವಿಯನ್ನು ಬಿಜೆಪಿ ಉಪಾಧ್ಯಕ್ಷ ಜಯ್​ ಪ್ರಕಾಶ್​ ಮಜುಂದಾರ್​ ಟೀಕಿಸಿದ್ದಾರೆ. ನ್ಯಾಯಾಂಗವನ್ನು ಗೌರವಿಸಬೇಕು..ನಂಬಬೇಕು ಎಂದಿದ್ದಾರೆ.

ಸುವೇಂದು ಅಧಿಕಾರಿ ಗೆಲುವಿನ ವಿರುದ್ಧ ಮಮತಾ ಬ್ಯಾನರ್ಜಿ ಕಾನೂನು ಹೋರಾಟ; ಅರ್ಜಿ ವಿಚಾರಣೆ ನಡೆಸುತ್ತಿರುವ ನ್ಯಾಯಾಧೀಶರ ಮೇಲೆ ಡೌಟ್​
ಮಮತಾ ಬ್ಯಾನರ್ಜಿ
TV9 Web
| Edited By: |

Updated on: Jun 19, 2021 | 1:14 PM

Share

ಪಶ್ಚಿಮಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ನಂದಿಗ್ರಾಮ ವಿಧಾನಸಭಾ ಕ್ಷೇತ್ರದಿಂದ ಗೆದ್ದ ಬಿಜೆಪಿಯ ಸುವೇಂದು ಅಧಿಕಾರಿ ( ಟಿಎಂಸಿ ಮಾಜಿ ಮುಖಂಡ)ಯ ವಿರುದ್ಧ ಮಮತಾ ಬ್ಯಾನರ್ಜಿ ಕಾನೂನು ಹೋರಾಟ ಶುರು ಮಾಡಿದ್ದಾರೆ. ಸುವೇಂದು ಅಧಿಕಾರಿ ಗೆಲುವು ಪ್ರಶ್ನಿಸಿ ಮಮತಾ ಬ್ಯಾನರ್ಜಿ ಸಲ್ಲಿಸಿದ ಅರ್ಜಿ ವಿಚಾರಣೆಯನ್ನು ಕೊಲ್ಕತ್ತ ಹೈಕೋರ್ಟ್​ ಜೂ.24ಕ್ಕೆ ಮುಂದೂಡಿದ ಬೆನ್ನಲ್ಲೇ, ಮಮತಾ ಬ್ಯಾನರ್ಜಿಯವರ ಪರ ವಕೀಲರು ಹೊಸದೊಂದು ಬೇಡಿಕೆಯಿಟ್ಟಿದ್ದಾರೆ. ಮಮತಾ ಬ್ಯಾನರ್ಜಿ ಅರ್ಜಿ ವಿಚಾರಣೆಯನ್ನು ನ್ಯಾಯಾಲಯದ ಬೇರೊಂದು ಪೀಠಕ್ಕೆ ವರ್ಗಾಯಿಸಬೇಕು ಎಂದು ಮನವಿ ಮಾಡಿ ಕೊಲ್ಕತ್ತ ಹೈಕೋರ್ಟ್​​ನ ಕಾರ್ಯಕಾರಿ ಮುಖ್ಯನ್ಯಾಯಮೂರ್ತಿಗಳ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ.

ಮಮತಾ ಬ್ಯಾನರ್ಜಿಯವರ ಅರ್ಜಿಯನ್ನು ಸದ್ಯ ಹೈಕೋರ್ಟ್​​ನ ಕೌಶಿಕ್​ ಚಂದಾ ಅವರ ನೇತೃತ್ವದ ಪೀಠ ವಿಚಾರಣೆ ನಡೆಸುತ್ತಿದೆ. ಆದರೆ ಈ ಕೌಶಿಕ್​ ಚಂದಾ ಬಿಜೆಪಿಯ ಸಕ್ರಿಯ ಸದಸ್ಯ ಎಂದು ದೀದಿ ಪರ ವಕೀಲರು ಆರೋಪ ಮಾಡಿದ್ದಾರೆ. ಕೌಶಿಕ್​ ಚಂದಾ ಬಿಜೆಪಿಯ ಸಕ್ರಿಯ ಸದಸ್ಯರಾಗಿರುವ ಕಾರಣ ಅರ್ಜಿ ವಿಚಾರಣೆಯಲ್ಲಿ ರಾಜಕೀಯ ಲೇಪಗಳು ಇರುವ ಸಾಧ್ಯತೆ ಇರುತ್ತದೆ. ಹಾಗಾಗಿ ಈ ವಿಷಯವನ್ನು ಇನ್ನೊಬ್ಬರು ನ್ಯಾಯಾಧೀಶರ ಪೀಠಕ್ಕೆ ವರ್ಗಾಯಿಸಬೇಕು ಎಂದು ವಕೀಲರು ಮನವಿ ಮಾಡಿದ್ದಾರೆ.

ಇನ್ನು ತೃಣಮೂಲ ಕಾಂಗ್ರೆಸ್ ಕೂಡ ಒಂದು ಫೋಟೋವನ್ನು ಪೋಸ್ಟ್ ಮಾಡಿಕೊಂಡಿದೆ. ಸದ್ಯ ಅರ್ಜಿ ವಿಚಾರಣೆ ನಡೆಸುತ್ತಿರುವ ನ್ಯಾಯಾಧೀಶ ಕೌಶಿಕ್​ ಚಾಂದ್​, ಪಶ್ಚಿಮ ಬಂಗಾಳ ಬಿಜೆಪಿ ನಾಯಕ ದಿಲೀಪ್​ ಘೋಷ್​ರೊಟ್ಟಿಗೆ ವೇದಿಕೆಯೊಂದರ ಮೇಲೆ ಕುಳಿತಿರುವ ಫೋಟೋ ಇದು. ಫೋಟೋ ಪೋಸ್ಟ್ ಮಾಡಿದ ಟಿಎಂಸಿ, ಕೌಶಿಕ್ ಚಾಂದ್​ ಅರ್ಜಿ ವಿಚಾರಣೆ ನಡೆಸುತ್ತಿರುವ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದೆ.

ಮಮತಾ ಬ್ಯಾನರ್ಜಿ ಪರ ವಕೀಲರ ಮನವಿಯನ್ನು ಬಿಜೆಪಿ ಉಪಾಧ್ಯಕ್ಷ ಜಯ್​ ಪ್ರಕಾಶ್​ ಮಜುಂದಾರ್​ ಟೀಕಿಸಿದ್ದಾರೆ. ನ್ಯಾಯಾಂಗವನ್ನು ಗೌರವಿಸಬೇಕು..ನಂಬಬೇಕು. ಆದರೆ ದುರಾದೃಷ್ಟಕ್ಕೆ ಪಶ್ಚಿಮ ಬಂಗಾಳದ ಆಡಳಿತ ಪಕ್ಷ ಟಿಎಂಸಿ ನ್ಯಾಯಾಂಗ ವ್ಯವಸ್ಥೆಯ ಮೇಲೆಯೇ ಅಪನಂಬಿಕೆ ತೋರುತ್ತಿದೆ ಎಂದೂ ಹೇಳಿದ್ದಾರೆ.

ಇದನ್ನೂ ಓದಿ: ಕಾಜಲ್​ ಸಂಸಾರದಲ್ಲಿ ಸಹೋದರಿಯ ಸ್ವಾರ್ಥ; ಬಹಿರಂಗವಾಗಿಯೇ ಹೇಳಿಕೊಂಡ ನಟಿ

Follow Us
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ