AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುವೇಂದು ಅಧಿಕಾರಿ ಗೆಲುವಿನ ವಿರುದ್ಧ ಮಮತಾ ಬ್ಯಾನರ್ಜಿ ಕಾನೂನು ಹೋರಾಟ; ಅರ್ಜಿ ವಿಚಾರಣೆ ನಡೆಸುತ್ತಿರುವ ನ್ಯಾಯಾಧೀಶರ ಮೇಲೆ ಡೌಟ್​

ಮಮತಾ ಬ್ಯಾನರ್ಜಿ ಪರ ವಕೀಲರ ಮನವಿಯನ್ನು ಬಿಜೆಪಿ ಉಪಾಧ್ಯಕ್ಷ ಜಯ್​ ಪ್ರಕಾಶ್​ ಮಜುಂದಾರ್​ ಟೀಕಿಸಿದ್ದಾರೆ. ನ್ಯಾಯಾಂಗವನ್ನು ಗೌರವಿಸಬೇಕು..ನಂಬಬೇಕು ಎಂದಿದ್ದಾರೆ.

ಸುವೇಂದು ಅಧಿಕಾರಿ ಗೆಲುವಿನ ವಿರುದ್ಧ ಮಮತಾ ಬ್ಯಾನರ್ಜಿ ಕಾನೂನು ಹೋರಾಟ; ಅರ್ಜಿ ವಿಚಾರಣೆ ನಡೆಸುತ್ತಿರುವ ನ್ಯಾಯಾಧೀಶರ ಮೇಲೆ ಡೌಟ್​
ಮಮತಾ ಬ್ಯಾನರ್ಜಿ
TV9 Web
| Updated By: Lakshmi Hegde|

Updated on: Jun 19, 2021 | 1:14 PM

Share

ಪಶ್ಚಿಮಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ನಂದಿಗ್ರಾಮ ವಿಧಾನಸಭಾ ಕ್ಷೇತ್ರದಿಂದ ಗೆದ್ದ ಬಿಜೆಪಿಯ ಸುವೇಂದು ಅಧಿಕಾರಿ ( ಟಿಎಂಸಿ ಮಾಜಿ ಮುಖಂಡ)ಯ ವಿರುದ್ಧ ಮಮತಾ ಬ್ಯಾನರ್ಜಿ ಕಾನೂನು ಹೋರಾಟ ಶುರು ಮಾಡಿದ್ದಾರೆ. ಸುವೇಂದು ಅಧಿಕಾರಿ ಗೆಲುವು ಪ್ರಶ್ನಿಸಿ ಮಮತಾ ಬ್ಯಾನರ್ಜಿ ಸಲ್ಲಿಸಿದ ಅರ್ಜಿ ವಿಚಾರಣೆಯನ್ನು ಕೊಲ್ಕತ್ತ ಹೈಕೋರ್ಟ್​ ಜೂ.24ಕ್ಕೆ ಮುಂದೂಡಿದ ಬೆನ್ನಲ್ಲೇ, ಮಮತಾ ಬ್ಯಾನರ್ಜಿಯವರ ಪರ ವಕೀಲರು ಹೊಸದೊಂದು ಬೇಡಿಕೆಯಿಟ್ಟಿದ್ದಾರೆ. ಮಮತಾ ಬ್ಯಾನರ್ಜಿ ಅರ್ಜಿ ವಿಚಾರಣೆಯನ್ನು ನ್ಯಾಯಾಲಯದ ಬೇರೊಂದು ಪೀಠಕ್ಕೆ ವರ್ಗಾಯಿಸಬೇಕು ಎಂದು ಮನವಿ ಮಾಡಿ ಕೊಲ್ಕತ್ತ ಹೈಕೋರ್ಟ್​​ನ ಕಾರ್ಯಕಾರಿ ಮುಖ್ಯನ್ಯಾಯಮೂರ್ತಿಗಳ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ.

ಮಮತಾ ಬ್ಯಾನರ್ಜಿಯವರ ಅರ್ಜಿಯನ್ನು ಸದ್ಯ ಹೈಕೋರ್ಟ್​​ನ ಕೌಶಿಕ್​ ಚಂದಾ ಅವರ ನೇತೃತ್ವದ ಪೀಠ ವಿಚಾರಣೆ ನಡೆಸುತ್ತಿದೆ. ಆದರೆ ಈ ಕೌಶಿಕ್​ ಚಂದಾ ಬಿಜೆಪಿಯ ಸಕ್ರಿಯ ಸದಸ್ಯ ಎಂದು ದೀದಿ ಪರ ವಕೀಲರು ಆರೋಪ ಮಾಡಿದ್ದಾರೆ. ಕೌಶಿಕ್​ ಚಂದಾ ಬಿಜೆಪಿಯ ಸಕ್ರಿಯ ಸದಸ್ಯರಾಗಿರುವ ಕಾರಣ ಅರ್ಜಿ ವಿಚಾರಣೆಯಲ್ಲಿ ರಾಜಕೀಯ ಲೇಪಗಳು ಇರುವ ಸಾಧ್ಯತೆ ಇರುತ್ತದೆ. ಹಾಗಾಗಿ ಈ ವಿಷಯವನ್ನು ಇನ್ನೊಬ್ಬರು ನ್ಯಾಯಾಧೀಶರ ಪೀಠಕ್ಕೆ ವರ್ಗಾಯಿಸಬೇಕು ಎಂದು ವಕೀಲರು ಮನವಿ ಮಾಡಿದ್ದಾರೆ.

ಇನ್ನು ತೃಣಮೂಲ ಕಾಂಗ್ರೆಸ್ ಕೂಡ ಒಂದು ಫೋಟೋವನ್ನು ಪೋಸ್ಟ್ ಮಾಡಿಕೊಂಡಿದೆ. ಸದ್ಯ ಅರ್ಜಿ ವಿಚಾರಣೆ ನಡೆಸುತ್ತಿರುವ ನ್ಯಾಯಾಧೀಶ ಕೌಶಿಕ್​ ಚಾಂದ್​, ಪಶ್ಚಿಮ ಬಂಗಾಳ ಬಿಜೆಪಿ ನಾಯಕ ದಿಲೀಪ್​ ಘೋಷ್​ರೊಟ್ಟಿಗೆ ವೇದಿಕೆಯೊಂದರ ಮೇಲೆ ಕುಳಿತಿರುವ ಫೋಟೋ ಇದು. ಫೋಟೋ ಪೋಸ್ಟ್ ಮಾಡಿದ ಟಿಎಂಸಿ, ಕೌಶಿಕ್ ಚಾಂದ್​ ಅರ್ಜಿ ವಿಚಾರಣೆ ನಡೆಸುತ್ತಿರುವ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದೆ.

ಮಮತಾ ಬ್ಯಾನರ್ಜಿ ಪರ ವಕೀಲರ ಮನವಿಯನ್ನು ಬಿಜೆಪಿ ಉಪಾಧ್ಯಕ್ಷ ಜಯ್​ ಪ್ರಕಾಶ್​ ಮಜುಂದಾರ್​ ಟೀಕಿಸಿದ್ದಾರೆ. ನ್ಯಾಯಾಂಗವನ್ನು ಗೌರವಿಸಬೇಕು..ನಂಬಬೇಕು. ಆದರೆ ದುರಾದೃಷ್ಟಕ್ಕೆ ಪಶ್ಚಿಮ ಬಂಗಾಳದ ಆಡಳಿತ ಪಕ್ಷ ಟಿಎಂಸಿ ನ್ಯಾಯಾಂಗ ವ್ಯವಸ್ಥೆಯ ಮೇಲೆಯೇ ಅಪನಂಬಿಕೆ ತೋರುತ್ತಿದೆ ಎಂದೂ ಹೇಳಿದ್ದಾರೆ.

ಇದನ್ನೂ ಓದಿ: ಕಾಜಲ್​ ಸಂಸಾರದಲ್ಲಿ ಸಹೋದರಿಯ ಸ್ವಾರ್ಥ; ಬಹಿರಂಗವಾಗಿಯೇ ಹೇಳಿಕೊಂಡ ನಟಿ

ಸಂಸತ್ತಿನಲ್ಲಿ ವಿರೋಧಪಕ್ಷ ವಿನಾಕಾರಣ ಗದ್ದಲವೆಬ್ಬಿಸುತ್ತಿದೆ: ಸೋಮಣ್ಣ
ಸಂಸತ್ತಿನಲ್ಲಿ ವಿರೋಧಪಕ್ಷ ವಿನಾಕಾರಣ ಗದ್ದಲವೆಬ್ಬಿಸುತ್ತಿದೆ: ಸೋಮಣ್ಣ
ಜೈಲಿನಲ್ಲಿ ಇರುವ ಕೈದಿಗೆ ಹಾಡುವ ಅವಕಾಶ ನೀಡಿದ ಕೆ. ಕಲ್ಯಾಣ್
ಜೈಲಿನಲ್ಲಿ ಇರುವ ಕೈದಿಗೆ ಹಾಡುವ ಅವಕಾಶ ನೀಡಿದ ಕೆ. ಕಲ್ಯಾಣ್
ಮಚ್ಚಿನೊಂದಿಗೆ ಆರೋಪಿ ನ್ಯಾಯಾಲಯ ಪ್ರವೇಶಿಸಿದ್ದು ಪೊಲೀಸರ ಕರ್ತವ್ಯಲೋಪ
ಮಚ್ಚಿನೊಂದಿಗೆ ಆರೋಪಿ ನ್ಯಾಯಾಲಯ ಪ್ರವೇಶಿಸಿದ್ದು ಪೊಲೀಸರ ಕರ್ತವ್ಯಲೋಪ
‘ಜೂನಿಯರ್’ ಸಿನಿಮಾದ ಯಶಸ್ಸು, ನಿರ್ದೇಶಕ ರಾಧಾಕೃಷ್ಣ ಹೇಳಿದ್ದೇನು?
‘ಜೂನಿಯರ್’ ಸಿನಿಮಾದ ಯಶಸ್ಸು, ನಿರ್ದೇಶಕ ರಾಧಾಕೃಷ್ಣ ಹೇಳಿದ್ದೇನು?
ಏನೂ ಅರಿಯದ ಮಗುವನ್ನು ಸಾಯಿಸುವ ಮಾನಸಿಕತೆಗೆ ಏನೆನ್ನಬೇಕು?
ಏನೂ ಅರಿಯದ ಮಗುವನ್ನು ಸಾಯಿಸುವ ಮಾನಸಿಕತೆಗೆ ಏನೆನ್ನಬೇಕು?
ಸ್ಟಂಟ್ ದೃಶ್ಯಕ್ಕೆ ಎಷ್ಟು ಶ್ರಮ ಪಟ್ಟಿದ್ದಾರೆ ಕಿರೀಟಿ: ವಿಡಿಯೋ ನೋಡಿ
ಸ್ಟಂಟ್ ದೃಶ್ಯಕ್ಕೆ ಎಷ್ಟು ಶ್ರಮ ಪಟ್ಟಿದ್ದಾರೆ ಕಿರೀಟಿ: ವಿಡಿಯೋ ನೋಡಿ
ರೌಡಿಶೀಟರ್ ಬಿಕ್ಲು ಶಿವ ಬರ್ಬರ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
ರೌಡಿಶೀಟರ್ ಬಿಕ್ಲು ಶಿವ ಬರ್ಬರ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
ಸ್ವಜನ ಪಕ್ಷಪಾತ, ಭ್ರಷ್ಟಾಚಾರದಿಂದ ಸಿದ್ದರಾಮಯ್ಯ ಗಾವುದ ದೂರ: ಮಹದೇವಪ್ಪ
ಸ್ವಜನ ಪಕ್ಷಪಾತ, ಭ್ರಷ್ಟಾಚಾರದಿಂದ ಸಿದ್ದರಾಮಯ್ಯ ಗಾವುದ ದೂರ: ಮಹದೇವಪ್ಪ
ಖಜಾನೆ ತುಂಬಿಸಿಕೊಳ್ಳಲು ರಾಜ್ಯ ಸರ್ಕಾರ ವಾಮಮಾರ್ಗ ಅನುಸರಿಸಿದೆ: ಸಿಟಿ ರವಿ
ಖಜಾನೆ ತುಂಬಿಸಿಕೊಳ್ಳಲು ರಾಜ್ಯ ಸರ್ಕಾರ ವಾಮಮಾರ್ಗ ಅನುಸರಿಸಿದೆ: ಸಿಟಿ ರವಿ
ನಾಲ್ಕು ದಿನಗಳ ಅಂತರದಲ್ಲಿ ಇಬ್ಬರು ಮಹಿಳೆಯರನ್ನು ಬಲಿಪಡೆದ ಬಿಎಂಟಿಸಿ ಬಸ್
ನಾಲ್ಕು ದಿನಗಳ ಅಂತರದಲ್ಲಿ ಇಬ್ಬರು ಮಹಿಳೆಯರನ್ನು ಬಲಿಪಡೆದ ಬಿಎಂಟಿಸಿ ಬಸ್