AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುವೇಂದು ಅಧಿಕಾರಿ ಗೆಲುವಿನ ವಿರುದ್ಧ ಮಮತಾ ಬ್ಯಾನರ್ಜಿ ಕಾನೂನು ಹೋರಾಟ; ಅರ್ಜಿ ವಿಚಾರಣೆ ನಡೆಸುತ್ತಿರುವ ನ್ಯಾಯಾಧೀಶರ ಮೇಲೆ ಡೌಟ್​

ಮಮತಾ ಬ್ಯಾನರ್ಜಿ ಪರ ವಕೀಲರ ಮನವಿಯನ್ನು ಬಿಜೆಪಿ ಉಪಾಧ್ಯಕ್ಷ ಜಯ್​ ಪ್ರಕಾಶ್​ ಮಜುಂದಾರ್​ ಟೀಕಿಸಿದ್ದಾರೆ. ನ್ಯಾಯಾಂಗವನ್ನು ಗೌರವಿಸಬೇಕು..ನಂಬಬೇಕು ಎಂದಿದ್ದಾರೆ.

ಸುವೇಂದು ಅಧಿಕಾರಿ ಗೆಲುವಿನ ವಿರುದ್ಧ ಮಮತಾ ಬ್ಯಾನರ್ಜಿ ಕಾನೂನು ಹೋರಾಟ; ಅರ್ಜಿ ವಿಚಾರಣೆ ನಡೆಸುತ್ತಿರುವ ನ್ಯಾಯಾಧೀಶರ ಮೇಲೆ ಡೌಟ್​
ಮಮತಾ ಬ್ಯಾನರ್ಜಿ
TV9 Web
| Edited By: |

Updated on: Jun 19, 2021 | 1:14 PM

Share

ಪಶ್ಚಿಮಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ನಂದಿಗ್ರಾಮ ವಿಧಾನಸಭಾ ಕ್ಷೇತ್ರದಿಂದ ಗೆದ್ದ ಬಿಜೆಪಿಯ ಸುವೇಂದು ಅಧಿಕಾರಿ ( ಟಿಎಂಸಿ ಮಾಜಿ ಮುಖಂಡ)ಯ ವಿರುದ್ಧ ಮಮತಾ ಬ್ಯಾನರ್ಜಿ ಕಾನೂನು ಹೋರಾಟ ಶುರು ಮಾಡಿದ್ದಾರೆ. ಸುವೇಂದು ಅಧಿಕಾರಿ ಗೆಲುವು ಪ್ರಶ್ನಿಸಿ ಮಮತಾ ಬ್ಯಾನರ್ಜಿ ಸಲ್ಲಿಸಿದ ಅರ್ಜಿ ವಿಚಾರಣೆಯನ್ನು ಕೊಲ್ಕತ್ತ ಹೈಕೋರ್ಟ್​ ಜೂ.24ಕ್ಕೆ ಮುಂದೂಡಿದ ಬೆನ್ನಲ್ಲೇ, ಮಮತಾ ಬ್ಯಾನರ್ಜಿಯವರ ಪರ ವಕೀಲರು ಹೊಸದೊಂದು ಬೇಡಿಕೆಯಿಟ್ಟಿದ್ದಾರೆ. ಮಮತಾ ಬ್ಯಾನರ್ಜಿ ಅರ್ಜಿ ವಿಚಾರಣೆಯನ್ನು ನ್ಯಾಯಾಲಯದ ಬೇರೊಂದು ಪೀಠಕ್ಕೆ ವರ್ಗಾಯಿಸಬೇಕು ಎಂದು ಮನವಿ ಮಾಡಿ ಕೊಲ್ಕತ್ತ ಹೈಕೋರ್ಟ್​​ನ ಕಾರ್ಯಕಾರಿ ಮುಖ್ಯನ್ಯಾಯಮೂರ್ತಿಗಳ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ.

ಮಮತಾ ಬ್ಯಾನರ್ಜಿಯವರ ಅರ್ಜಿಯನ್ನು ಸದ್ಯ ಹೈಕೋರ್ಟ್​​ನ ಕೌಶಿಕ್​ ಚಂದಾ ಅವರ ನೇತೃತ್ವದ ಪೀಠ ವಿಚಾರಣೆ ನಡೆಸುತ್ತಿದೆ. ಆದರೆ ಈ ಕೌಶಿಕ್​ ಚಂದಾ ಬಿಜೆಪಿಯ ಸಕ್ರಿಯ ಸದಸ್ಯ ಎಂದು ದೀದಿ ಪರ ವಕೀಲರು ಆರೋಪ ಮಾಡಿದ್ದಾರೆ. ಕೌಶಿಕ್​ ಚಂದಾ ಬಿಜೆಪಿಯ ಸಕ್ರಿಯ ಸದಸ್ಯರಾಗಿರುವ ಕಾರಣ ಅರ್ಜಿ ವಿಚಾರಣೆಯಲ್ಲಿ ರಾಜಕೀಯ ಲೇಪಗಳು ಇರುವ ಸಾಧ್ಯತೆ ಇರುತ್ತದೆ. ಹಾಗಾಗಿ ಈ ವಿಷಯವನ್ನು ಇನ್ನೊಬ್ಬರು ನ್ಯಾಯಾಧೀಶರ ಪೀಠಕ್ಕೆ ವರ್ಗಾಯಿಸಬೇಕು ಎಂದು ವಕೀಲರು ಮನವಿ ಮಾಡಿದ್ದಾರೆ.

ಇನ್ನು ತೃಣಮೂಲ ಕಾಂಗ್ರೆಸ್ ಕೂಡ ಒಂದು ಫೋಟೋವನ್ನು ಪೋಸ್ಟ್ ಮಾಡಿಕೊಂಡಿದೆ. ಸದ್ಯ ಅರ್ಜಿ ವಿಚಾರಣೆ ನಡೆಸುತ್ತಿರುವ ನ್ಯಾಯಾಧೀಶ ಕೌಶಿಕ್​ ಚಾಂದ್​, ಪಶ್ಚಿಮ ಬಂಗಾಳ ಬಿಜೆಪಿ ನಾಯಕ ದಿಲೀಪ್​ ಘೋಷ್​ರೊಟ್ಟಿಗೆ ವೇದಿಕೆಯೊಂದರ ಮೇಲೆ ಕುಳಿತಿರುವ ಫೋಟೋ ಇದು. ಫೋಟೋ ಪೋಸ್ಟ್ ಮಾಡಿದ ಟಿಎಂಸಿ, ಕೌಶಿಕ್ ಚಾಂದ್​ ಅರ್ಜಿ ವಿಚಾರಣೆ ನಡೆಸುತ್ತಿರುವ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದೆ.

ಮಮತಾ ಬ್ಯಾನರ್ಜಿ ಪರ ವಕೀಲರ ಮನವಿಯನ್ನು ಬಿಜೆಪಿ ಉಪಾಧ್ಯಕ್ಷ ಜಯ್​ ಪ್ರಕಾಶ್​ ಮಜುಂದಾರ್​ ಟೀಕಿಸಿದ್ದಾರೆ. ನ್ಯಾಯಾಂಗವನ್ನು ಗೌರವಿಸಬೇಕು..ನಂಬಬೇಕು. ಆದರೆ ದುರಾದೃಷ್ಟಕ್ಕೆ ಪಶ್ಚಿಮ ಬಂಗಾಳದ ಆಡಳಿತ ಪಕ್ಷ ಟಿಎಂಸಿ ನ್ಯಾಯಾಂಗ ವ್ಯವಸ್ಥೆಯ ಮೇಲೆಯೇ ಅಪನಂಬಿಕೆ ತೋರುತ್ತಿದೆ ಎಂದೂ ಹೇಳಿದ್ದಾರೆ.

ಇದನ್ನೂ ಓದಿ: ಕಾಜಲ್​ ಸಂಸಾರದಲ್ಲಿ ಸಹೋದರಿಯ ಸ್ವಾರ್ಥ; ಬಹಿರಂಗವಾಗಿಯೇ ಹೇಳಿಕೊಂಡ ನಟಿ

Follow Us
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ