AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುವೇಂದು ಅಧಿಕಾರಿ ಗೆಲುವಿನ ವಿರುದ್ಧ ಮಮತಾ ಬ್ಯಾನರ್ಜಿ ಕಾನೂನು ಹೋರಾಟ; ಅರ್ಜಿ ವಿಚಾರಣೆ ನಡೆಸುತ್ತಿರುವ ನ್ಯಾಯಾಧೀಶರ ಮೇಲೆ ಡೌಟ್​

ಮಮತಾ ಬ್ಯಾನರ್ಜಿ ಪರ ವಕೀಲರ ಮನವಿಯನ್ನು ಬಿಜೆಪಿ ಉಪಾಧ್ಯಕ್ಷ ಜಯ್​ ಪ್ರಕಾಶ್​ ಮಜುಂದಾರ್​ ಟೀಕಿಸಿದ್ದಾರೆ. ನ್ಯಾಯಾಂಗವನ್ನು ಗೌರವಿಸಬೇಕು..ನಂಬಬೇಕು ಎಂದಿದ್ದಾರೆ.

ಸುವೇಂದು ಅಧಿಕಾರಿ ಗೆಲುವಿನ ವಿರುದ್ಧ ಮಮತಾ ಬ್ಯಾನರ್ಜಿ ಕಾನೂನು ಹೋರಾಟ; ಅರ್ಜಿ ವಿಚಾರಣೆ ನಡೆಸುತ್ತಿರುವ ನ್ಯಾಯಾಧೀಶರ ಮೇಲೆ ಡೌಟ್​
ಮಮತಾ ಬ್ಯಾನರ್ಜಿ
TV9 Web
| Edited By: |

Updated on: Jun 19, 2021 | 1:14 PM

Share

ಪಶ್ಚಿಮಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ನಂದಿಗ್ರಾಮ ವಿಧಾನಸಭಾ ಕ್ಷೇತ್ರದಿಂದ ಗೆದ್ದ ಬಿಜೆಪಿಯ ಸುವೇಂದು ಅಧಿಕಾರಿ ( ಟಿಎಂಸಿ ಮಾಜಿ ಮುಖಂಡ)ಯ ವಿರುದ್ಧ ಮಮತಾ ಬ್ಯಾನರ್ಜಿ ಕಾನೂನು ಹೋರಾಟ ಶುರು ಮಾಡಿದ್ದಾರೆ. ಸುವೇಂದು ಅಧಿಕಾರಿ ಗೆಲುವು ಪ್ರಶ್ನಿಸಿ ಮಮತಾ ಬ್ಯಾನರ್ಜಿ ಸಲ್ಲಿಸಿದ ಅರ್ಜಿ ವಿಚಾರಣೆಯನ್ನು ಕೊಲ್ಕತ್ತ ಹೈಕೋರ್ಟ್​ ಜೂ.24ಕ್ಕೆ ಮುಂದೂಡಿದ ಬೆನ್ನಲ್ಲೇ, ಮಮತಾ ಬ್ಯಾನರ್ಜಿಯವರ ಪರ ವಕೀಲರು ಹೊಸದೊಂದು ಬೇಡಿಕೆಯಿಟ್ಟಿದ್ದಾರೆ. ಮಮತಾ ಬ್ಯಾನರ್ಜಿ ಅರ್ಜಿ ವಿಚಾರಣೆಯನ್ನು ನ್ಯಾಯಾಲಯದ ಬೇರೊಂದು ಪೀಠಕ್ಕೆ ವರ್ಗಾಯಿಸಬೇಕು ಎಂದು ಮನವಿ ಮಾಡಿ ಕೊಲ್ಕತ್ತ ಹೈಕೋರ್ಟ್​​ನ ಕಾರ್ಯಕಾರಿ ಮುಖ್ಯನ್ಯಾಯಮೂರ್ತಿಗಳ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ.

ಮಮತಾ ಬ್ಯಾನರ್ಜಿಯವರ ಅರ್ಜಿಯನ್ನು ಸದ್ಯ ಹೈಕೋರ್ಟ್​​ನ ಕೌಶಿಕ್​ ಚಂದಾ ಅವರ ನೇತೃತ್ವದ ಪೀಠ ವಿಚಾರಣೆ ನಡೆಸುತ್ತಿದೆ. ಆದರೆ ಈ ಕೌಶಿಕ್​ ಚಂದಾ ಬಿಜೆಪಿಯ ಸಕ್ರಿಯ ಸದಸ್ಯ ಎಂದು ದೀದಿ ಪರ ವಕೀಲರು ಆರೋಪ ಮಾಡಿದ್ದಾರೆ. ಕೌಶಿಕ್​ ಚಂದಾ ಬಿಜೆಪಿಯ ಸಕ್ರಿಯ ಸದಸ್ಯರಾಗಿರುವ ಕಾರಣ ಅರ್ಜಿ ವಿಚಾರಣೆಯಲ್ಲಿ ರಾಜಕೀಯ ಲೇಪಗಳು ಇರುವ ಸಾಧ್ಯತೆ ಇರುತ್ತದೆ. ಹಾಗಾಗಿ ಈ ವಿಷಯವನ್ನು ಇನ್ನೊಬ್ಬರು ನ್ಯಾಯಾಧೀಶರ ಪೀಠಕ್ಕೆ ವರ್ಗಾಯಿಸಬೇಕು ಎಂದು ವಕೀಲರು ಮನವಿ ಮಾಡಿದ್ದಾರೆ.

ಇನ್ನು ತೃಣಮೂಲ ಕಾಂಗ್ರೆಸ್ ಕೂಡ ಒಂದು ಫೋಟೋವನ್ನು ಪೋಸ್ಟ್ ಮಾಡಿಕೊಂಡಿದೆ. ಸದ್ಯ ಅರ್ಜಿ ವಿಚಾರಣೆ ನಡೆಸುತ್ತಿರುವ ನ್ಯಾಯಾಧೀಶ ಕೌಶಿಕ್​ ಚಾಂದ್​, ಪಶ್ಚಿಮ ಬಂಗಾಳ ಬಿಜೆಪಿ ನಾಯಕ ದಿಲೀಪ್​ ಘೋಷ್​ರೊಟ್ಟಿಗೆ ವೇದಿಕೆಯೊಂದರ ಮೇಲೆ ಕುಳಿತಿರುವ ಫೋಟೋ ಇದು. ಫೋಟೋ ಪೋಸ್ಟ್ ಮಾಡಿದ ಟಿಎಂಸಿ, ಕೌಶಿಕ್ ಚಾಂದ್​ ಅರ್ಜಿ ವಿಚಾರಣೆ ನಡೆಸುತ್ತಿರುವ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದೆ.

ಮಮತಾ ಬ್ಯಾನರ್ಜಿ ಪರ ವಕೀಲರ ಮನವಿಯನ್ನು ಬಿಜೆಪಿ ಉಪಾಧ್ಯಕ್ಷ ಜಯ್​ ಪ್ರಕಾಶ್​ ಮಜುಂದಾರ್​ ಟೀಕಿಸಿದ್ದಾರೆ. ನ್ಯಾಯಾಂಗವನ್ನು ಗೌರವಿಸಬೇಕು..ನಂಬಬೇಕು. ಆದರೆ ದುರಾದೃಷ್ಟಕ್ಕೆ ಪಶ್ಚಿಮ ಬಂಗಾಳದ ಆಡಳಿತ ಪಕ್ಷ ಟಿಎಂಸಿ ನ್ಯಾಯಾಂಗ ವ್ಯವಸ್ಥೆಯ ಮೇಲೆಯೇ ಅಪನಂಬಿಕೆ ತೋರುತ್ತಿದೆ ಎಂದೂ ಹೇಳಿದ್ದಾರೆ.

ಇದನ್ನೂ ಓದಿ: ಕಾಜಲ್​ ಸಂಸಾರದಲ್ಲಿ ಸಹೋದರಿಯ ಸ್ವಾರ್ಥ; ಬಹಿರಂಗವಾಗಿಯೇ ಹೇಳಿಕೊಂಡ ನಟಿ

Follow Us
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?