AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುವೇಂದು ಅಧಿಕಾರಿ ಗೆಲುವಿನ ವಿರುದ್ಧ ಮಮತಾ ಬ್ಯಾನರ್ಜಿ ಕಾನೂನು ಹೋರಾಟ; ಅರ್ಜಿ ವಿಚಾರಣೆ ನಡೆಸುತ್ತಿರುವ ನ್ಯಾಯಾಧೀಶರ ಮೇಲೆ ಡೌಟ್​

ಮಮತಾ ಬ್ಯಾನರ್ಜಿ ಪರ ವಕೀಲರ ಮನವಿಯನ್ನು ಬಿಜೆಪಿ ಉಪಾಧ್ಯಕ್ಷ ಜಯ್​ ಪ್ರಕಾಶ್​ ಮಜುಂದಾರ್​ ಟೀಕಿಸಿದ್ದಾರೆ. ನ್ಯಾಯಾಂಗವನ್ನು ಗೌರವಿಸಬೇಕು..ನಂಬಬೇಕು ಎಂದಿದ್ದಾರೆ.

ಸುವೇಂದು ಅಧಿಕಾರಿ ಗೆಲುವಿನ ವಿರುದ್ಧ ಮಮತಾ ಬ್ಯಾನರ್ಜಿ ಕಾನೂನು ಹೋರಾಟ; ಅರ್ಜಿ ವಿಚಾರಣೆ ನಡೆಸುತ್ತಿರುವ ನ್ಯಾಯಾಧೀಶರ ಮೇಲೆ ಡೌಟ್​
ಮಮತಾ ಬ್ಯಾನರ್ಜಿ
TV9 Web
| Edited By: |

Updated on: Jun 19, 2021 | 1:14 PM

Share

ಪಶ್ಚಿಮಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ನಂದಿಗ್ರಾಮ ವಿಧಾನಸಭಾ ಕ್ಷೇತ್ರದಿಂದ ಗೆದ್ದ ಬಿಜೆಪಿಯ ಸುವೇಂದು ಅಧಿಕಾರಿ ( ಟಿಎಂಸಿ ಮಾಜಿ ಮುಖಂಡ)ಯ ವಿರುದ್ಧ ಮಮತಾ ಬ್ಯಾನರ್ಜಿ ಕಾನೂನು ಹೋರಾಟ ಶುರು ಮಾಡಿದ್ದಾರೆ. ಸುವೇಂದು ಅಧಿಕಾರಿ ಗೆಲುವು ಪ್ರಶ್ನಿಸಿ ಮಮತಾ ಬ್ಯಾನರ್ಜಿ ಸಲ್ಲಿಸಿದ ಅರ್ಜಿ ವಿಚಾರಣೆಯನ್ನು ಕೊಲ್ಕತ್ತ ಹೈಕೋರ್ಟ್​ ಜೂ.24ಕ್ಕೆ ಮುಂದೂಡಿದ ಬೆನ್ನಲ್ಲೇ, ಮಮತಾ ಬ್ಯಾನರ್ಜಿಯವರ ಪರ ವಕೀಲರು ಹೊಸದೊಂದು ಬೇಡಿಕೆಯಿಟ್ಟಿದ್ದಾರೆ. ಮಮತಾ ಬ್ಯಾನರ್ಜಿ ಅರ್ಜಿ ವಿಚಾರಣೆಯನ್ನು ನ್ಯಾಯಾಲಯದ ಬೇರೊಂದು ಪೀಠಕ್ಕೆ ವರ್ಗಾಯಿಸಬೇಕು ಎಂದು ಮನವಿ ಮಾಡಿ ಕೊಲ್ಕತ್ತ ಹೈಕೋರ್ಟ್​​ನ ಕಾರ್ಯಕಾರಿ ಮುಖ್ಯನ್ಯಾಯಮೂರ್ತಿಗಳ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ.

ಮಮತಾ ಬ್ಯಾನರ್ಜಿಯವರ ಅರ್ಜಿಯನ್ನು ಸದ್ಯ ಹೈಕೋರ್ಟ್​​ನ ಕೌಶಿಕ್​ ಚಂದಾ ಅವರ ನೇತೃತ್ವದ ಪೀಠ ವಿಚಾರಣೆ ನಡೆಸುತ್ತಿದೆ. ಆದರೆ ಈ ಕೌಶಿಕ್​ ಚಂದಾ ಬಿಜೆಪಿಯ ಸಕ್ರಿಯ ಸದಸ್ಯ ಎಂದು ದೀದಿ ಪರ ವಕೀಲರು ಆರೋಪ ಮಾಡಿದ್ದಾರೆ. ಕೌಶಿಕ್​ ಚಂದಾ ಬಿಜೆಪಿಯ ಸಕ್ರಿಯ ಸದಸ್ಯರಾಗಿರುವ ಕಾರಣ ಅರ್ಜಿ ವಿಚಾರಣೆಯಲ್ಲಿ ರಾಜಕೀಯ ಲೇಪಗಳು ಇರುವ ಸಾಧ್ಯತೆ ಇರುತ್ತದೆ. ಹಾಗಾಗಿ ಈ ವಿಷಯವನ್ನು ಇನ್ನೊಬ್ಬರು ನ್ಯಾಯಾಧೀಶರ ಪೀಠಕ್ಕೆ ವರ್ಗಾಯಿಸಬೇಕು ಎಂದು ವಕೀಲರು ಮನವಿ ಮಾಡಿದ್ದಾರೆ.

ಇನ್ನು ತೃಣಮೂಲ ಕಾಂಗ್ರೆಸ್ ಕೂಡ ಒಂದು ಫೋಟೋವನ್ನು ಪೋಸ್ಟ್ ಮಾಡಿಕೊಂಡಿದೆ. ಸದ್ಯ ಅರ್ಜಿ ವಿಚಾರಣೆ ನಡೆಸುತ್ತಿರುವ ನ್ಯಾಯಾಧೀಶ ಕೌಶಿಕ್​ ಚಾಂದ್​, ಪಶ್ಚಿಮ ಬಂಗಾಳ ಬಿಜೆಪಿ ನಾಯಕ ದಿಲೀಪ್​ ಘೋಷ್​ರೊಟ್ಟಿಗೆ ವೇದಿಕೆಯೊಂದರ ಮೇಲೆ ಕುಳಿತಿರುವ ಫೋಟೋ ಇದು. ಫೋಟೋ ಪೋಸ್ಟ್ ಮಾಡಿದ ಟಿಎಂಸಿ, ಕೌಶಿಕ್ ಚಾಂದ್​ ಅರ್ಜಿ ವಿಚಾರಣೆ ನಡೆಸುತ್ತಿರುವ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದೆ.

ಮಮತಾ ಬ್ಯಾನರ್ಜಿ ಪರ ವಕೀಲರ ಮನವಿಯನ್ನು ಬಿಜೆಪಿ ಉಪಾಧ್ಯಕ್ಷ ಜಯ್​ ಪ್ರಕಾಶ್​ ಮಜುಂದಾರ್​ ಟೀಕಿಸಿದ್ದಾರೆ. ನ್ಯಾಯಾಂಗವನ್ನು ಗೌರವಿಸಬೇಕು..ನಂಬಬೇಕು. ಆದರೆ ದುರಾದೃಷ್ಟಕ್ಕೆ ಪಶ್ಚಿಮ ಬಂಗಾಳದ ಆಡಳಿತ ಪಕ್ಷ ಟಿಎಂಸಿ ನ್ಯಾಯಾಂಗ ವ್ಯವಸ್ಥೆಯ ಮೇಲೆಯೇ ಅಪನಂಬಿಕೆ ತೋರುತ್ತಿದೆ ಎಂದೂ ಹೇಳಿದ್ದಾರೆ.

ಇದನ್ನೂ ಓದಿ: ಕಾಜಲ್​ ಸಂಸಾರದಲ್ಲಿ ಸಹೋದರಿಯ ಸ್ವಾರ್ಥ; ಬಹಿರಂಗವಾಗಿಯೇ ಹೇಳಿಕೊಂಡ ನಟಿ

Follow Us
Web contact
Web contact

TV9 Kannada

Read More
ಐಪಿಎಲ್‌ನಲ್ಲಿ ಇತಿಹಾಸ ನಿರ್ಮಿಸಿದ ಸಾಯಿ ಸುದರ್ಶನ್
ಐಪಿಎಲ್‌ನಲ್ಲಿ ಇತಿಹಾಸ ನಿರ್ಮಿಸಿದ ಸಾಯಿ ಸುದರ್ಶನ್
ಓಡಿಹೋಗುತ್ತಾಳೆಂದು ಹೆಂಡತಿಯನ್ನು ಕಟ್ಟಿಹಾಕಿದ ಗಂಡ!
ಓಡಿಹೋಗುತ್ತಾಳೆಂದು ಹೆಂಡತಿಯನ್ನು ಕಟ್ಟಿಹಾಕಿದ ಗಂಡ!
ಬುಡಸಮೇತ ರಸ್ತೆ ಮೇಲೆ ಉರುಳಿಬಿದ್ದ ಬೃಹತ್​ ಮರ: ಶಂಕರಮಠ ರಸ್ತೆ ಬಂದ್!
ಬುಡಸಮೇತ ರಸ್ತೆ ಮೇಲೆ ಉರುಳಿಬಿದ್ದ ಬೃಹತ್​ ಮರ: ಶಂಕರಮಠ ರಸ್ತೆ ಬಂದ್!
ಶುಭ್​ಮನ್ ಗಿಲ್ ಸುನಾಮಿಗೆ ಸೃಷ್ಟಿಯಾದ ದಾಖಲೆಗಳಿವು
ಶುಭ್​ಮನ್ ಗಿಲ್ ಸುನಾಮಿಗೆ ಸೃಷ್ಟಿಯಾದ ದಾಖಲೆಗಳಿವು
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ