ನ್ಯಾಯಾಂಗದಲ್ಲಿ ಭ್ರಷ್ಟಾಚಾರ ಅಧ್ಯಾಯ ವಿವಾದ, ಕ್ಷಮೆ ಕೇಳಿ ಇಡೀ ಪುಸ್ತಕವನ್ನೇ ಹಿಂಪಡೆದ ಎನ್​ಸಿಇಆರ್​ಟಿ

ನ್ಯಾಯಾಂಗದಲ್ಲಿ ಭ್ರಷ್ಟಾಚಾರ ಕುರಿತ ವಿವಾದಿತ ಅಧ್ಯಾಯವನ್ನು ಹೊಂದಿದ್ದ 8ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕವನ್ನು ಎನ್​ಸಿಆರ್​ಟಿ ಸಂಪೂರ್ಣವಾಗಿ ಹಿಂಪಡೆದಿದೆ. ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿದ್ದ ಸುಪ್ರೀಂ ಕೋರ್ಟ್, ನ್ಯಾಯಾಂಗದ ಗೌರವಕ್ಕೆ ಧಕ್ಕೆ ತರುವಂತಹ ವಿಷಯವನ್ನು ಮಕ್ಕಳಿಗೆ ಕಲಿಸುವುದು ಸರಿಯಲ್ಲ ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿತ್ತು. ಸುಪ್ರೀಂ ಆದೇಶದಂತೆ, ಎನ್​ಸಿಆರ್​ಟಿ ಕ್ಷಮೆಯಾಚಿಸಿ, ವಿವಾದಿತ ಅಧ್ಯಾಯವಲ್ಲದೆ ಇಡೀ ಪುಸ್ತಕವನ್ನೇ ಹಿಂಪಡೆದಿದೆ.

ನ್ಯಾಯಾಂಗದಲ್ಲಿ ಭ್ರಷ್ಟಾಚಾರ ಅಧ್ಯಾಯ ವಿವಾದ, ಕ್ಷಮೆ ಕೇಳಿ ಇಡೀ ಪುಸ್ತಕವನ್ನೇ ಹಿಂಪಡೆದ ಎನ್​ಸಿಇಆರ್​ಟಿ
ಎನ್​ಸಿಇಆರ್​ಟಿ
Image Credit source: fact pilgrim

Updated on: Mar 10, 2026 | 10:27 AM

ನವದೆಹಲಿ, ಮಾರ್ಚ್​ 10: ದೇಶದ ಪಠ್ಯಪುಸ್ತಕಗಳನ್ನು ಪ್ರಕಟಿಸುವ ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ( ಎನ್​ಸಿಆರ್​ಟಿ) ವಿವಾದಿತ ಅಧ್ಯಾಯದ ಬದಲಾಗಿ ಇಡೀ ಪುಸ್ತಕವನ್ನೇ ಹಿಂಪಡೆದಿದೆ. ಈ ಬಾರಿ 8ನೇ ತರಗತಿಯ ಹೊಸ ಸಮಾಜ ವಿಜ್ಞಾನ(Social Science) ಪುಸ್ತಕದ ಒಂದು ಅಧ್ಯಾಯದಲ್ಲಿ ನ್ಯಾಯಾಂಗ ವ್ಯವಸ್ಥೆಯಲ್ಲಿನ ಸವಾಲುಗಳ ಬಗ್ಗೆ ಬರೆಯಲಾಗಿದೆ. ಅಲ್ಲದೇ ನ್ಯಾಯಾಂಗದಲ್ಲಿನ ಭ್ರಷ್ಟಾಚಾರ ಎಂಬ ವಿಷಯವನ್ನು ಉಲ್ಲೇಖಿಸಿರುವುದು ದೊಡ್ಡ ಕೋಲಾಹಲವನ್ನೇ ಸೃಷ್ಟಿಸಿತ್ತು.

ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿದ ಸುಪ್ರೀಂ ಕೋರ್ಟ್​ ತೀವ್ರ ಅಸಮಾಧಾನ ವ್ಯಕ್ತಪಡಿಸಿತ್ತು. ನ್ಯಾಯಾಂಗದ ಗೌರವಕ್ಕೆ ಧಕ್ಕೆಯಾಗುವಂತಹ ವಿಷಯವನ್ನು ಮಕ್ಕಳಿಗೆ ಈ ರೀತಿಯಲ್ಲಿ ಕಲಿಸುವುದು ಸರಿಯೇ ಎಂಬ ಪ್ರಶ್ನೆಯೂ ಮೂಡಿತ್ತು. ಇದೀಗ ಎನ್​ಸಿಆರ್​ಟಿ ಕ್ಷಮೆಯಾಚಿಸುವುದರ ಜತೆ ಅಧ್ಯಾಯವಲ್ಲ ಇಡೀ ಪುಸ್ತಕವನ್ನೇ ಹಿಂಪಡೆದಿದೆ. ಪುಸ್ತಕದಲ್ಲಿರುವ ಕೆಲವು ಮಾಹಿತಿಗಳು ದಾರಿತಪ್ಪಿಸುವಂತಿವೆ ಮತ್ತು ನ್ಯಾಯಾಂಗದ ಹೆಸರು ಕೆಡಿಸುವಂತಿವೆ.

ಈ ಹಿನ್ನೆಲೆಯಲ್ಲಿ ವಿವಾದ ದೊಡ್ಡ ಮಟ್ಟದಲ್ಲಿ ಚರ್ಚೆಯಾಗಿತ್ತು. ಫೆಬ್ರವರಿ 26ರಂದು 8ನೇ ತರಗತಿಯ ಪಠ್ಯಪುಸ್ತಕವನ್ನು ಸುಪ್ರೀಂಕೋರ್ಟ್​ರ ಸಂಪೂರ್ಣ ಬ್ಯಾನ್ ಮಾಡಿತ್ತು. ಅದರ ಎಲ್ಲಾ ಪ್ರತಿಗಳನ್ನು ವಶಪಡಿಸಿಕೊಳ್ಳಲು ಮತ್ತು ಅದರ ಡಿಜಿಟಲ್ ಆವೃತ್ತಿಗಳನ್ನು ತಕ್ಷಣವೇ ತೆಗೆದುಹಾಕುವಂತೆ ಆದೇಶಿಸಿತ್ತು.ಆದೇಶವನ್ನು ಅನುಸರಿಸುವಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಅಧಿಕಾರಿಗಳಿಗೆ ನಿರ್ದೇಶಿಸಿದ ನ್ಯಾಯಾಲಯ, ಯಾವುದೇ ರೂಪದಲ್ಲಿ ತನ್ನ ನಿರ್ದೇಶನಗಳನ್ನು ಧಿಕ್ಕರಿಸಿದರೆ ಗಂಭೀರ ಕ್ರಮ ಎದುರಿಸಬೇಕಾದೀತು ಎಂದು ಎಚ್ಚರಿಕೆ ನೀಡಿತ್ತು.

ಮತ್ತಷ್ಟು ಓದಿ: ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು, ಇದನ್ನು ಇಲ್ಲಿಗೆ ಬಿಡುವುದಿಲ್ಲ, ಎನ್​ಸಿಇಆರ್​ಟಿಯನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂ

ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದ ಸುಪ್ರೀಂ ಕೋರ್ಟ್‌ನ ತ್ರಿಸದಸ್ಯ ಪೀಠವು ಎನ್‌ಸಿಇಆರ್‌ಟಿ ನಿರ್ದೇಶಕರು ಮತ್ತು ಶಾಲಾ ಶಿಕ್ಷಣ ಕಾರ್ಯದರ್ಶಿಗೆ ಶೋಕಾಸ್ ನೋಟಿಸ್ ಜಾರಿ ಮಾಡಿದ್ದು, ಅಧ್ಯಾಯ ಸೇರ್ಪಡೆಗೆ ಕಾರಣರಾದವರ ವಿರುದ್ಧ ಏಕೆ ಕ್ರಮ ತೆಗೆದುಕೊಂಡಿಲ್ಲ ಎಂಬುದರ ಬಗ್ಗೆ ವಿವರಿಸುವಂತೆ ಕೇಳಿತ್ತು.

ಸಾಂಸ್ಥಿಕ ಅಧಿಕಾರವನ್ನು ಹಾಳುಮಾಡಲು ಮತ್ತು ನ್ಯಾಯಾಂಗದ ಘನತೆಗೆ ಚ್ಯುತಿ ತರಲು ಮಾಡಿದ ಪ್ರಯತ್ನದಂತೆ ತೋರುತ್ತಿದೆ. ಇದನ್ನು ತಡೆಯದೆ ಹೋದರೆ, ಸಾರ್ವಜನಿಕರು ಹಾಗೂ ಯುವ ಜನತೆಯ ಮನಸ್ಸಿನಲ್ಲಿ ನ್ಯಾಯಾಂಗ ಕಚೇರಿಯ ಪಾವಿತ್ರ್ಯತೆಯನ್ನು ಕಳೆದುಕೊಳ್ಳುತ್ತದೆ ಎಂದು ಮುಖ್ಯ ನ್ಯಾಯಮರ್ತಿಗಳು ಅಭಿಪ್ರಾಯಪಟ್ಟಿದ್ದರು. ಮುಂಬರುವ ಶೈಕ್ಷಣಿಕ ಅವಧಿಗೆ ನವೀಕರಿಸಿದ ಪಠ್ಯಕ್ರಮ ಯೋಜನೆಗಳ ಕುರಿತು ಮಂಡಳಿಯಿಂದ ಹೆಚ್ಚಿನ ಸ್ಪಷ್ಟೀಕರಣಕ್ಕಾಗಿ ಇನ್ನೂ ಕಾಯಲಾಗುತ್ತಿದೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:27 am, Tue, 10 March 26

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us