ಜೂನ್ 25ರಂದು ಸಂವಿಧಾನ್ ಹತ್ಯಾ ದಿವಸ್ ಆಚರಿಸಲು ಕೇಂದ್ರ ನಿರ್ಧಾರ; ‘ಜೂನ್ 4 ಮೋದಿಮುಕ್ತಿ ದಿವಸ್’ ಎಂದ ಕಾಂಗ್ರೆಸ್

ಜೈವಿಕ ಅಲ್ಲದ  ಪ್ರಧಾನ ಮಂತ್ರಿಯ ಬೂಟಾಟಿಕೆಯಲ್ಲಿ ಮತ್ತೊಂದು ಹೆಡ್‌ಲೈನ್-ಹಪಾಹಪಿ ಕಸರತ್ತು. ಮೊದಲು ಹತ್ತು ವರ್ಷಗಳ ಕಾಲ ಅಘೋಷಿತ ತುರ್ತು ಪರಿಸ್ಥಿತಿಯನ್ನು ಹೇರಿದ್ದ ಅವರಿಗೆ 2024 ಜೂನ್ 4ರಂದು ಭಾರತದ ಜನರು ನಿರ್ಣಾಯಕ ವೈಯಕ್ತಿಕ, ರಾಜಕೀಯ ಮತ್ತು ನೈತಿಕ ಸೋಲನ್ನು ನೀಡಿದ್ದಾರೆ. ಆ ದಿನವನ್ನು ಇತಿಹಾಸದಲ್ಲಿ ಮೋದಿ ಮುಕ್ತಿ ದಿವಸ್ ಎಂದು ನೆನಪಿಸಲಾಗುವುದು ಎಂದು ಜೈರಾಮ್ ರಮೇಶ್ ಎಕ್ಸ್ ನಲ್ಲಿ ಬರೆದಿದ್ದಾರೆ.

ಜೂನ್ 25ರಂದು ಸಂವಿಧಾನ್ ಹತ್ಯಾ ದಿವಸ್ ಆಚರಿಸಲು ಕೇಂದ್ರ ನಿರ್ಧಾರ; 'ಜೂನ್ 4 ಮೋದಿಮುಕ್ತಿ ದಿವಸ್' ಎಂದ ಕಾಂಗ್ರೆಸ್
ಜೈರಾಮ್ ರಮೇಶ್
Follow us
|

Updated on:Jul 12, 2024 | 8:11 PM

ದೆಹಲಿ ಜುಲೈ 12: ಜೂನ್ 25 ರಂದು ಸಂವಿಧಾನ್ ಹತ್ಯಾ ದಿವಸ್ (Samvidhaan Hatya Diwas) ಎಂದು ಆಚರಿಸುವ ಕೇಂದ್ರದ ನಿರ್ಧಾರಕ್ಕೆ ತೀಕ್ಷ್ಣವಾಗಿಯೇ ಪ್ರತಿಕ್ರಿಯಿಸಿರುವ ಕಾಂಗ್ರೆಸ್ (Congress) ಜೂನ್ 4 ಅನ್ನು “ಮೋದಿಮುಕ್ತಿ ದಿವಸ್” (ModiMukti Diwas)ಎಂದು ಆಚರಿಸಬೇಕು ಎಂದು ಹೇಳಿದೆ. ಜೂನ್ 4ರಂದು ಲೋಕಸಭಾ ಚುನಾವಣೆಯ ಫಲಿತಾಂಶ ಪ್ರಕಟವಾಗಿತ್ತು. 2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಕೇವಲ 240 ಸ್ಥಾನಗಳನ್ನು ಗೆಲ್ಲಲು ಸಾಧ್ಯವಾಗಿದ್ದು, ಸರಳ ಬಹುಮತಕ್ಕೆ 32 ಸ್ಥಾನಗಳ ಕೊರತೆ ಇತ್ತು. ಆದರೆ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಎನ್‌ಡಿಎ ಮಿತ್ರಪಕ್ಷಗಳ ಬೆಂಬಲದೊಂದಿಗೆ ಸತತ ಮೂರನೇ ಬಾರಿ ಸರ್ಕಾರವನ್ನು ರಚಿಸಿದರು. ಈ ರೀತಿ ಸೀಟುಗಳನ್ನು ಕಳೆದುಕೊಂಡಿರುವುದು ಪ್ರಧಾನಿ ಮೋದಿಯವರ ನೈತಿಕ ಸೋಲು ಎಂದು ವಿರೋಧ ಪಕ್ಷಗಳ ಇಂಡಿಯಾ ಬಣ ಹೇಳಿದೆ.

ಸಂವಿಧಾನ್ ಹತ್ಯಾ ದಿವಸ್ ಬಗ್ಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, ಕೇಂದ್ರದ ಈ ನಡೆ ಹೆಡ್‌ಲೈನ್ ಹಪಾಹಪಿಯ ಕಸರತ್ತು ಎಂದು ಹೇಳಿದ್ದಾರೆ.

ಜೈವಿಕ ಅಲ್ಲದ  ಪ್ರಧಾನ ಮಂತ್ರಿಯ ಬೂಟಾಟಿಕೆಯಲ್ಲಿ ಮತ್ತೊಂದು ಹೆಡ್‌ಲೈನ್-ಹಪಾಹಪಿ ಕಸರತ್ತು. ಮೊದಲು ಹತ್ತು ವರ್ಷಗಳ ಕಾಲ ಅಘೋಷಿತ ತುರ್ತು ಪರಿಸ್ಥಿತಿಯನ್ನು ಹೇರಿದ್ದ ಅವರಿಗೆ 2024 ಜೂನ್ 4ರಂದು ಭಾರತದ ಜನರು ನಿರ್ಣಾಯಕ ವೈಯಕ್ತಿಕ, ರಾಜಕೀಯ ಮತ್ತು ನೈತಿಕ ಸೋಲನ್ನು ನೀಡಿದ್ದಾರೆ. ಆ ದಿನವನ್ನು ಇತಿಹಾಸದಲ್ಲಿ ಮೋದಿ ಮುಕ್ತಿ ದಿವಸ್ ಎಂದು ನೆನಪಿಸಲಾಗುವುದು ಎಂದು ಅವರು ಎಕ್ಸ್ ನಲ್ಲಿ ಬರೆದಿದ್ದಾರೆ.

ಇವರು ಭಾರತದ ಸಂವಿಧಾನ ಮತ್ತು ಅದರ ತತ್ವಗಳು, ಮೌಲ್ಯಗಳು ಮತ್ತು ಸಂಸ್ಥೆಗಳನ್ನು ವ್ಯವಸ್ಥಿತ ದಾಳಿಗೆ ಒಳಪಡಿಸಿದ ಜೈವಿಕವಲ್ಲದ ಪ್ರಧಾನಿ. ಇವರು ಮನುಸ್ಮೃತಿಯಿಂದ ಸ್ಫೂರ್ತಿ ಪಡೆದಿಲ್ಲ ಎಂಬ ಕಾರಣಕ್ಕಾಗಿ 1949 ರ ನವೆಂಬರ್‌ನಲ್ಲಿ ಭಾರತದ ಸಂವಿಧಾನವನ್ನು ತಿರಸ್ಕರಿಸಿದ ಸೈದ್ಧಾಂತಿಕ ಪರಿವಾರದ ಜೈವಿಕವಲ್ಲದ ಪ್ರಧಾನಿ. ಇವರು ಜೈವಿಕವಲ್ಲದ ಪ್ರಧಾನಿಯಾಗಿದ್ದು, ಅವರಿಗೆ ಪ್ರಜಾಪ್ರಭುತ್ವ ಎಂದರೆ ಡೆಮೊ-ಕುರ್ಸಿ ಮಾತ್ರ ಎಂದು  ಜೈರಾಮ್ ರಮೇಶ್ ಹೇಳಿದ್ದಾರೆ.

ಸಂವಿಧಾನ್ ಹತ್ಯಾ ದಿವಸ್ ಘೋಷಿಸಿದ ಕೇಂದ್ರ

ತುರ್ತು ಪರಿಸ್ಥಿತಿಯ ಸ್ಮರಣೆಗೆ ಪ್ರತಿ ವರ್ಷ ಜೂನ್ 25 ಅನ್ನು ಸಂವಿಧಾನ್ ಹತ್ಯಾ ದಿವಸ್ ಎಂದು ಆಚರಿಸಲಾಗುವುದು ಎಂದು ಕೇಂದ್ರ ಸರ್ಕಾರ ಇಂದು (ಶುಕ್ರವಾರ) ತಿಳಿಸಿದೆ. ಇಂದಿರಾ ಗಾಂಧಿ ಸರ್ಕಾರ ಜೂನ್ 25, 1975 ರಂದು ತುರ್ತು ಪರಿಸ್ಥಿತಿಯನ್ನು ಹೇರಿತ್ತು. ದಬ್ಬಾಳಿಕೆಯ ಸರ್ಕಾರದ ಕೈಯಲ್ಲಿ ವಿವರಿಸಲಾಗದ ಕಿರುಕುಳವನ್ನು ಎದುರಿಸುತ್ತಿದ್ದರೂ ಪ್ರಜಾಪ್ರಭುತ್ವವನ್ನು ಪುನರುಜ್ಜೀವನಗೊಳಿಸಲು ಹೋರಾಡಿದ ಲಕ್ಷಾಂತರ ಜನರ ಆತ್ಮವನ್ನು ಗೌರವಿಸುವ ಉದ್ದೇಶದಿಂದ ಪ್ರಧಾನಿ ನರೇಂದ್ರ ಮೋದಿಯವರು ಈ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ಅಮಿತ್ ಶಾ ಹೇಳಿದರು.

ಇದನ್ನೂ ಓದಿ: ಸ್ಮೃತಿ ಇರಾನಿ ಬಗ್ಗೆ ಅವಹೇಳನಕಾರಿ ಪದ ಬಳಕೆ ಬೇಡ: ಎಕ್ಸ್‌ನಲ್ಲಿ ರಾಹುಲ್ ಗಾಂಧಿ ಮನವಿ

ಕಾಂಗ್ರೆಸ್ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ

ದೇಶದ ಇತಿಹಾಸದ ಕರಾಳ ಘಟ್ಟವನ್ನು ಕಾಂಗ್ರೆಸ್ ಬಿಚ್ಚಿಟ್ಟಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. “ಜೂನ್ 25 ಅನ್ನು ಸಂವಿಧಾನಹತ್ಯದಿವಾಸ್ ಎಂದು ಆಚರಿಸುವುದು ಭಾರತದ ಸಂವಿಧಾನವನ್ನು ತುಳಿದು ಹಾಕಿದಾಗ ಏನಾಗುತ್ತದೆ ಎಂಬುದನ್ನು ನೆನಪಿಸುತ್ತದೆ. ಭಾರತೀಯ ಇತಿಹಾಸದ ಕರಾಳ ಘಟ್ಟವನ್ನು ಬಿಚ್ಚಿಟ್ಟ ಕಾಂಗ್ರೆಸ್ ತುರ್ತುಪರಿಸ್ಥಿತಿಯಿಂದ ನೊಂದ ಪ್ರತಿಯೊಬ್ಬ ವ್ಯಕ್ತಿಗೂ ನಮನ ಸಲ್ಲಿಸುವ ದಿನವೂ ಹೌದು. ” ಎಂದು ಅವರು X ನಲ್ಲಿ ಬರೆದಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:53 pm, Fri, 12 July 24

ನಾವು ಸೇಡು ತೀರಿಸಿಕೊಂಡರೆ ಬಿಜೆಪಿಗೆ ಜೈಲುಗಳು ಸಾಕಾಗಲ್ಲ: ಹೆಬ್ಬಾಳ್ಕರ್
ನಾವು ಸೇಡು ತೀರಿಸಿಕೊಂಡರೆ ಬಿಜೆಪಿಗೆ ಜೈಲುಗಳು ಸಾಕಾಗಲ್ಲ: ಹೆಬ್ಬಾಳ್ಕರ್
‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
‘ನನಗೂ ಕೆಟ್ಟ ಅನುಭವ ಆಗಿದೆ’; ನೀತು ಶೆಟ್ಟಿ ನೇರ ಮಾತು
‘ನನಗೂ ಕೆಟ್ಟ ಅನುಭವ ಆಗಿದೆ’; ನೀತು ಶೆಟ್ಟಿ ನೇರ ಮಾತು
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ