AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನಗಿಂತಲೂ ಹೆಚ್ಚು ವಿನಮ್ರ ಎಂದು ತೋರಿಸಲು ಮೋದಿ ಮಂಡಿಯೂರಿ ನಮಸ್ಕರಿಸಿದ್ದಾರೆ: ಅಶೋಕ್ ಗೆಹ್ಲೋಟ್

ರಾಜಸ್ಥಾನದಲ್ಲಿ ಅಶೋಕ್ ಗೆಹ್ಲೋಟ್ ತುಂಬಾ ವಿನಮ್ರ, ಸಾಮಾನ್ಯ ಮನುಷ್ಯ ಎಂಬುದು ಅವರಿಗೆ ಗೊತ್ತು. ನಾನು ಬಾಲ್ಯದಿಂದಲೇ ಹೀಗೆ. ಮೋದಿಜೀಗೆ ಇದನ್ನು ಹೇಗೆ ಸಹಿಸುವುದಕ್ಕೆ ಆಗುತ್ತೆ

ನನಗಿಂತಲೂ ಹೆಚ್ಚು ವಿನಮ್ರ ಎಂದು ತೋರಿಸಲು ಮೋದಿ ಮಂಡಿಯೂರಿ ನಮಸ್ಕರಿಸಿದ್ದಾರೆ: ಅಶೋಕ್ ಗೆಹ್ಲೋಟ್
ನರೇಂದ್ರ ಮೋದಿ
TV9 Web
| Edited By: |

Updated on:Oct 02, 2022 | 1:00 PM

Share

ಜೈಪುರ: ಶನಿವಾರ ಸಿರೋಹಿಯಲ್ಲಿ ನಡೆದ ಸಭೆಯ ಮುಂದೆ ನರೇಂದ್ರ ಮೋದಿ(Narendra Modi) ಮಂಡಿಯೂರಿದ್ದನ್ನು ಟೀಕಿಸಿದ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ (Ashok Gehlot) ನನಗಿಂತ ವಿನಮ್ರರಾಗಿ ಕಾಣಿಸಿಕೊಳ್ಳಲು ಪ್ರಧಾನಿ ಬಯಸುತ್ತಿದ್ದಾರೆ ಎಂದು ಹೇಳಿದ್ದಾರೆ. ಇಂತಹ ಹಳೇ ತಂತ್ರ ಪ್ರದರ್ಶಿಸುವ ಬದಲು ಮೋದಿಯವರು ದೇಶದ ಜನತೆಗೆ ಸಹೋದರತೆ ಮತ್ತು ಪ್ರೀತಿಯ ಸಂದೇಶವನ್ನು ನೀಡಬೇಕು ಎಂದು ಗೆಹ್ಲೋಟ್ ಹೇಳಿದ್ದಾರೆ. ಶುಕ್ರವಾರ ಸಂಜೆ ಸಿರೋಹಿ (Sirohi) ಜಿಲ್ಲೆಯ ಅಬು ರೋಡ್ ಗೆ ಬಂದು ತಲುಪಿದ ಮೋದಿ, ತಾನು ತಡವಾಗಿ ತಲುಪಿದ್ದಿಂದ ಲೌಡ್ ಸ್ಪೀಕರ್ ನಿಯಮವನ್ನು ಪಾಲಿಸುತ್ತೇನೆ. ಹಾಗಾಗಿ ತಾನು ರ್ಯಾಲಿಯನ್ನುದ್ದೇಶಿಸಿ ಮಾತನಾಡುವುದಿಲ್ಲ ಎಂದು ಹೇಳಿ ನೆರೆದಿದ್ದ ಸಭಿಕರ ಮುಂದೆ ಮೂರು ಬಾರಿ ಮಂಡಿಯೂರಿ ಕ್ಷಮೆ ಕೇಳಿದ್ದಾರೆ. ಬಿಕಾನೇರ್​​ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಗೆಹ್ಲೋಟ್, ರಾಜಸ್ಥಾನದಲ್ಲಿ ಅಶೋಕ್ ಗೆಹ್ಲೋಟ್ ತುಂಬಾ ವಿನಮ್ರ, ಸಾಮಾನ್ಯ ಮನುಷ್ಯ ಎಂಬುದು ಅವರಿಗೆ ಗೊತ್ತು. ನಾನು ಬಾಲ್ಯದಿಂದಲೇ ಹೀಗೆ. ಮೋದಿಜೀಗೆ ಇದನ್ನು ಹೇಗೆ ಸಹಿಸುವುದಕ್ಕೆ ಆಗುತ್ತೆ? ಅವರು ನನಗಿಂತೆ ಹೆಚ್ಚು ವಿನಮ್ರತೆ ಹೊಂದಿದ್ದಾರೆ ಎಂದುತೋರಿಸಲು ಬಯಸುತ್ತಾರೆ ಎಂದು ಹೇಳಿದ್ದಾರೆ.

ಸೌಹಾರ್ದತೆ ಸಾರಲು ಮೋದಿ ಜನರಲ್ಲಿ ಮನವಿ ಮಾಡಿದ್ದರೆ ನಾನು ಪ್ರಧಾನಿಗೆ ಕರೆ ಮಾಡಿ ಅಭಿನಂದಿಸುತ್ತಿದ್ದೆ. ಕೇವಲ ಮಂಡಿಯೂರಿ ಏಕೆ? ನಾನು ಕೂಡ ಅಶೋಕ್ ಗೆಹ್ಲೋಟ್ ಅವರಂತೆ ವಿನಮ್ರ ಎಂದು ತಿಳಿಸಲು ಹಾಗೆ ಮಾಡಿದ್ದಾರೆಯೇ ಎಂದು ಅವರು ಕೇಳಿದ್ದಾರೆ.

ಮೋದಿ ವಿಡಿಯೊ  ವೈರಲ್

ರಾಜಸ್ಥಾನದ ಸಿರೋಹಿಯ ಅಬು ರಾಡ್ ಪ್ರದೇಶದಲ್ಲಿ ನಿಗದಿತ ರ್ಯಾಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮೈಕ್ ಬಳಸದೆ ಮಾತನಾಡಿದ  ವಿಡಿಯೋ ವೈರಲ್ ಆಗಿದೆ “ನಾನು ತಲುಪಲು ತಡವಾಯಿತು. ಆಗಲೇ ರಾತ್ರಿ 10 ಗಂಟೆಯಾಗಿದೆ. ನಾನು ನಿಯಮಗಳನ್ನು ಅನುಸರಿಸಬೇಕು ಎಂದು ನನ್ನ ಆತ್ಮಸಾಕ್ಷಿಯು ಹೇಳುತ್ತದೆ. ನಾನು ನಿಮ್ಮ ಮುಂದೆ ಕ್ಷಮೆಯಾಚಿಸುತ್ತೇನೆ. ಆದರೆ ನಾನು ಮತ್ತೆ ಇಲ್ಲಿಗೆ ಬಂದು ನಿಮ್ಮ ಪ್ರೀತಿಯನ್ನು ಬಡ್ಡಿಯೊಂದಿಗೆ ಮರುಪಾವತಿಸುತ್ತೇನೆ ಎಂದು ನಾನು ಭರವಸೆ ನೀಡುತ್ತೇನೆ” ಎಂದು ಪ್ರಧಾನಿ ಮೋದಿ  ‘ಭಾರತ್ ಮಾತಾ ಕಿ ಜೈ’ ಘೋಷಣೆಯೊಂದಿಗೆ ತಮ್ಮ ಸಂಕ್ಷಿಪ್ತ ಭಾಷಣವನ್ನು ಮುಗಿಸಿದ್ದಾರೆ.

ಬಿಜೆಪಿ ನಾಯಕ ಅಮಿತ್ ಮಾಳವಿಯಾ ಅವರು ವಿಡಿಯೊವನ್ನು ಹಂಚಿಕೊಂಡಿದ್ದು ಪ್ರಧಾನಿ ಮೋದಿ ಅವರು ಶುಕ್ರವಾರ ನವರಾತ್ರಿ ಉಪವಾಸ ಮಾಡುತ್ತಿದ್ದಾರೆ ಎಂದಿದ್ದಾರೆ.ನಿಗದಿತ ಸಮಯ ಮೀರಿರುವುದರಿಂದ ಅಬು ರೋಡ್‌ನಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡುವುದು ಬೇಡ ಎಂದು ಪ್ರಧಾನಿ ಮೋದಿ ನಿರ್ಧರಿಸಿದ್ದಾರೆ. ಇದು ದಿನದ 7 ನೇ ಕಾರ್ಯಕ್ರಮವಾಗಿತ್ತು. ಇದಕ್ಕೂ ಮೊದಲು ಅವರು ವಂದೇ ಭಾರತ್ ಮತ್ತು ಅಹಮದಾಬಾದ್ ಮೆಟ್ರೋದಲ್ಲಿ ಧ್ವಜಾರೋಹಣ ಮಾಡಿದರು.ಅಂಬಾಜಿಯಲ್ಲಿ ಪ್ರಾರ್ಥನೆ ಮಾಡಿದರು. ಅವರಿಗೆ  72  ವರ್ಷ, ಅವರು ನವರಾತ್ರಿ ಉಪವಾಸ ಮಾಡುತ್ತಿದ್ದಾರೆ ಎಂದು ಮಾಳವಿಯಾ ಬರೆದಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು 10 ಗಂಟೆಯ ನಂತರ ಸೌಂಡ್ ಸಿಸ್ಟಮ್ ಬಳಕೆಯ ಮೇಲಿನ ನಿರ್ಬಂಧದ ಕಾರಣ ಸಭಿಕರನ್ನು  ಉದ್ದೇಶಿಸಿ ಮಾತನಾಡಲು ಸಾಧ್ಯವಾಗದ ಕಾರಣ ತಾಳ್ಮೆಯಿಂದ ಕಾಯುತ್ತಿರುವ ಪ್ರೇಕ್ಷಕರಿಗೆ ಮಂಡಿಯೂರಿ ಪ್ರಣಾಮ ಮಾಡಿದ್ದಾರೆ. ಇದು ನಮ್ಮನ್ನು ಮೂಕರನ್ನಾಗಿಸುತ್ತದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿಎಲ್ ಸಂತೋಷ್ ಬರೆದಿದ್ದಾರೆ.

Published On - 12:49 pm, Sun, 2 October 22

ಆಗ ವೀರಪ್ಪನ್‌ ಕೇಸ್‌ನಲ್ಲಿ ಗಿಫ್ಟ್‌: ಹೆಚ್​ಡಿ ಕುಮಾರಸ್ವಾಮಿ ಹೊಸ ಬಾಂಬ್‌
ಆಗ ವೀರಪ್ಪನ್‌ ಕೇಸ್‌ನಲ್ಲಿ ಗಿಫ್ಟ್‌: ಹೆಚ್​ಡಿ ಕುಮಾರಸ್ವಾಮಿ ಹೊಸ ಬಾಂಬ್‌
ಬಾಂಗ್ಲಾ ಜೊತೆಗೆ ಪಾಕಿಸ್ತಾನ ಕೂಡ ಟಿ20 ವಿಶ್ವಕಪ್​ನಿಂದ ಔಟ್?
ಬಾಂಗ್ಲಾ ಜೊತೆಗೆ ಪಾಕಿಸ್ತಾನ ಕೂಡ ಟಿ20 ವಿಶ್ವಕಪ್​ನಿಂದ ಔಟ್?
ತಾನು ಕಲಿತ ಶಾಲೆಗೆ ಹೋಗಿ ವಿದ್ಯಾರ್ಥಿಗಳೊಟ್ಟಿಗೆ ಬೆರೆತ ಗಿಲ್ಲಿ: ವಿಡಿಯೋ
ತಾನು ಕಲಿತ ಶಾಲೆಗೆ ಹೋಗಿ ವಿದ್ಯಾರ್ಥಿಗಳೊಟ್ಟಿಗೆ ಬೆರೆತ ಗಿಲ್ಲಿ: ವಿಡಿಯೋ
ಬೆಂಗಳೂರಿನಲ್ಲಿ ಫುಲ್ ಟ್ರಾಫಿಕ್: ತಡೆಯಲಾಗದೇ ರಸ್ತೆಯಲ್ಲಿ ಮೂತ್ರ ವಿಸರ್ಜನೆ!
ಬೆಂಗಳೂರಿನಲ್ಲಿ ಫುಲ್ ಟ್ರಾಫಿಕ್: ತಡೆಯಲಾಗದೇ ರಸ್ತೆಯಲ್ಲಿ ಮೂತ್ರ ವಿಸರ್ಜನೆ!
ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್ ನಿಯಂತ್ರಿಸಲು ಪೊಲೀಸರ ಪ್ಲ್ಯಾನ್: ಏನದು?
ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್ ನಿಯಂತ್ರಿಸಲು ಪೊಲೀಸರ ಪ್ಲ್ಯಾನ್: ಏನದು?
ಮೂಲಕ ಧರ್ಮ ಪ್ರಚಾರದ ವಾಹನವಾದ ಪಂಚಾಯ್ತಿ ಸ್ವಚ್ಛತಾ ಗಾಡಿ!
ಮೂಲಕ ಧರ್ಮ ಪ್ರಚಾರದ ವಾಹನವಾದ ಪಂಚಾಯ್ತಿ ಸ್ವಚ್ಛತಾ ಗಾಡಿ!
ಲಕ್ಕುಂಡಿ ಸಂಪತ್ತು ಕಾಯ್ತಾ ಇದೆಯಾ ಘಟಸರ್ಪ? ಬೃಹತ್ ಘಟಸರ್ಪ ಮೂರ್ತಿ ಪತ್ತೆ!
ಲಕ್ಕುಂಡಿ ಸಂಪತ್ತು ಕಾಯ್ತಾ ಇದೆಯಾ ಘಟಸರ್ಪ? ಬೃಹತ್ ಘಟಸರ್ಪ ಮೂರ್ತಿ ಪತ್ತೆ!
ಸಿದ್ದರಾಮಯ್ಯ ಆಗಮನಕ್ಕೂ ಮುನ್ನ ಬೃಹತ್ ಕಟೌಟ್​ಗಳು ಬಿದ್ದು ನಾಲ್ವರಿಗೆ ಗಾಯ
ಸಿದ್ದರಾಮಯ್ಯ ಆಗಮನಕ್ಕೂ ಮುನ್ನ ಬೃಹತ್ ಕಟೌಟ್​ಗಳು ಬಿದ್ದು ನಾಲ್ವರಿಗೆ ಗಾಯ
ಮಗನ ‘ಕಲ್ಟ್’ ಸಿನಿಮಾ ನೋಡಿ ವಿಮರ್ಶೆ ತಿಳಿಸಿದ ಜಮೀರ್ ಅಹ್ಮದ್
ಮಗನ ‘ಕಲ್ಟ್’ ಸಿನಿಮಾ ನೋಡಿ ವಿಮರ್ಶೆ ತಿಳಿಸಿದ ಜಮೀರ್ ಅಹ್ಮದ್
ಕುಮಾರ ಷಷ್ಠಿ ಆಚರಣೆಯ ವಿಧಾನ ಹಾಗೂ ಮಹತ್ವ
ಕುಮಾರ ಷಷ್ಠಿ ಆಚರಣೆಯ ವಿಧಾನ ಹಾಗೂ ಮಹತ್ವ