AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಎನ್​.ವಿ.ರಮಣ ಪ್ರಮಾಣವಚನ ಸ್ವೀಕಾರ

ಎನ್​​.ವಿ.ರಮಣ 1957ರ ಆಗಸ್ಟ್​ 27ರಂದು ಆಂಧ್ರಪ್ರದೇಶದ ಕೃಷ್ಣಾ ಜಿಲ್ಲೆಯ ಪೊನ್ನಾವರಂನಲ್ಲಿ ಜನಿಸಿದ್ದಾರೆ. ಇವರದ್ದು ಮೂಲತಃ ಕೃಷಿ ಕುಟುಂಬ. 1983ರಿಂದ ವಕೀಲಿ ವೃತ್ತಿ ಶುರು ಮಾಡಿದರು.

ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಎನ್​.ವಿ.ರಮಣ ಪ್ರಮಾಣವಚನ ಸ್ವೀಕಾರ
ನ್ಯಾಯಮೂರ್ತಿ ರಮಣ
Lakshmi Hegde
|

Updated on:Apr 24, 2021 | 11:33 AM

Share

ಸುಪ್ರೀಂಕೋರ್ಟ್​​​​ನ 48ನೇ ಮುಖ್ಯನ್ಯಾಯಮೂರ್ತಿಯಾಗಿ (CJI) ಎನ್​.ವಿ.ರಮಣ ಇಂದು ಪ್ರಮಾಣವಚನ ಸ್ವೀಕರಿಸಿದರು. ರಾಷ್ಟ್ರಪತಿ ರಾಮನಾಥ ಕೋವಿಂದ ಅವರು ನೂತನ ಸಿಜೆಐಗೆ ಪ್ರಮಾಣವಚನ ಬೋಧಿಸಿದರು. ಎನ್​. ವಿ.ರಮಣ ಸಿಜೆಐ ಆಗಿ 2022ರ ಆಗಸ್ಟ್ 26ರವರೆಗೆ ಮುಂದುವರಿಯಲಿದ್ದಾರೆ. ಈ ಹಿಂದಿನ ಸಿಜೆಐ ಎಸ್​ಎ.ಬೊಬ್ಡೆ ನಿನ್ನೆ ನಿವೃತ್ತರಾಗಿದ್ದು, ತನ್ನ ನಂತರದ ಸಿಜೆಐ ಆಗಿ ರಮಣ ಅವರನ್ನು ಶಿಫಾರಸ್ಸು ಮಾಡಿದ್ದರು.

ಎನ್​​.ವಿ.ರಮಣ 1957ರ ಆಗಸ್ಟ್​ 27ರಂದು ಆಂಧ್ರಪ್ರದೇಶದ ಕೃಷ್ಣಾ ಜಿಲ್ಲೆಯ ಪೊನ್ನಾವರಂನಲ್ಲಿ ಜನಿಸಿದ್ದಾರೆ. ಇವರದ್ದು ಮೂಲತಃ ಕೃಷಿ ಕುಟುಂಬ. 1983ರಿಂದ ವಕೀಲಿ ವೃತ್ತಿ ಶುರು ಮಾಡಿದರು. 2014ರ ಫೆಬ್ರವರಿ 17ರಂದು ಸುಪ್ರಿಂಕೋರ್ಟ್​ ಹಿರಿಯ ನ್ಯಾಯಮೂರ್ತಿಯಾಗಿ ನೇಮಕವಾಗುವುದಕ್ಕೂ ಮೊದಲು ದೆಹಲಿ ಹೈಕೋರ್ಟ್​ನಲ್ಲಿ ಮುಖ್ಯ ನ್ಯಾಯಾಧೀಶರಾಗಿದ್ದರು.

ಇನ್ನು 2019ರ ನವೆಂಬರ್​ನಲ್ಲಿ ಸಿಜೆಐ ಆಗಿ ಪ್ರಮಾಣವಚನ ಸ್ವೀಕರಸಿದ್ದ ಎಸ್​.ಎ.ಬೋಬ್ಡೆ ನಿನ್ನೆ ನಿವೃತ್ತರಾಗಿದ್ದು, ವಿದಾಯದ ಭಾಷಣ ಮಾಡಿದರು. ನಾನು ಮುಖ್ಯನ್ಯಾಯಮೂರ್ತಿಯಾದ ಮೇಲೆ ನನ್ನ ಕೈಲಾದಷ್ಟು ಉತ್ತಮ ಕೆಲಸ ಮಾಡಿದ್ದೇನೆ. ನನ್ನಲ್ಲಿ ಸಮ್ಮಿಶ್ರ ಭಾವ ಇದೆ. ಈ ಹೊತ್ತಲ್ಲಿ ಖುಷಿಯಿಂದಲೇ ನ್ಯಾಯಾಲಯ ಬಿಟ್ಟು ಹೋಗುತ್ತಿದ್ದೇನೆ ಎಂದೂ ಹೇಳಿದ್ದರು.

ಇದನ್ನೂ ಓದಿ: ವ್ಯಕ್ತಿ-ವ್ಯಕ್ತಿತ್ವ: ಕಡಿಮೆ ಮಾತು, ಖಚಿತ ನಿಲುವು- ಇದು ಸುಪ್ರೀಂಕೋರ್ಟ್​ ನಿಯೋಜಿತ ಮುಖ್ಯ ನ್ಯಾಯಮೂರ್ತಿ ಎನ್​.ವಿ.ರಮಣ ಅವರ ಕಾರ್ಯಶೈಲಿ

ಸುಪ್ರೀಂಕೋರ್ಟ್​ ನ್ಯಾಯಮೂರ್ತಿ ಸ್ಥಾನಕ್ಕೆ ಎನ್​.ವಿ.ರಮಣ ಹೆಸರನ್ನು ಶಿಫಾರಸು ಮಾಡಿದ ಸಿಜಿಐ ಬೋಬ್ಡೆ..; ಕೇಂದ್ರ ಸಚಿವರ ಪತ್ರಕ್ಕೆ ಉತ್ತರ

Justice NV Ramana Takes Oath As Next CJI Of Supreme Court of India

Published On - 11:30 am, Sat, 24 April 21

ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್