AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಎನ್​.ವಿ.ರಮಣ ಪ್ರಮಾಣವಚನ ಸ್ವೀಕಾರ

ಎನ್​​.ವಿ.ರಮಣ 1957ರ ಆಗಸ್ಟ್​ 27ರಂದು ಆಂಧ್ರಪ್ರದೇಶದ ಕೃಷ್ಣಾ ಜಿಲ್ಲೆಯ ಪೊನ್ನಾವರಂನಲ್ಲಿ ಜನಿಸಿದ್ದಾರೆ. ಇವರದ್ದು ಮೂಲತಃ ಕೃಷಿ ಕುಟುಂಬ. 1983ರಿಂದ ವಕೀಲಿ ವೃತ್ತಿ ಶುರು ಮಾಡಿದರು.

ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಎನ್​.ವಿ.ರಮಣ ಪ್ರಮಾಣವಚನ ಸ್ವೀಕಾರ
ನ್ಯಾಯಮೂರ್ತಿ ರಮಣ
Lakshmi Hegde
|

Updated on:Apr 24, 2021 | 11:33 AM

Share

ಸುಪ್ರೀಂಕೋರ್ಟ್​​​​ನ 48ನೇ ಮುಖ್ಯನ್ಯಾಯಮೂರ್ತಿಯಾಗಿ (CJI) ಎನ್​.ವಿ.ರಮಣ ಇಂದು ಪ್ರಮಾಣವಚನ ಸ್ವೀಕರಿಸಿದರು. ರಾಷ್ಟ್ರಪತಿ ರಾಮನಾಥ ಕೋವಿಂದ ಅವರು ನೂತನ ಸಿಜೆಐಗೆ ಪ್ರಮಾಣವಚನ ಬೋಧಿಸಿದರು. ಎನ್​. ವಿ.ರಮಣ ಸಿಜೆಐ ಆಗಿ 2022ರ ಆಗಸ್ಟ್ 26ರವರೆಗೆ ಮುಂದುವರಿಯಲಿದ್ದಾರೆ. ಈ ಹಿಂದಿನ ಸಿಜೆಐ ಎಸ್​ಎ.ಬೊಬ್ಡೆ ನಿನ್ನೆ ನಿವೃತ್ತರಾಗಿದ್ದು, ತನ್ನ ನಂತರದ ಸಿಜೆಐ ಆಗಿ ರಮಣ ಅವರನ್ನು ಶಿಫಾರಸ್ಸು ಮಾಡಿದ್ದರು.

ಎನ್​​.ವಿ.ರಮಣ 1957ರ ಆಗಸ್ಟ್​ 27ರಂದು ಆಂಧ್ರಪ್ರದೇಶದ ಕೃಷ್ಣಾ ಜಿಲ್ಲೆಯ ಪೊನ್ನಾವರಂನಲ್ಲಿ ಜನಿಸಿದ್ದಾರೆ. ಇವರದ್ದು ಮೂಲತಃ ಕೃಷಿ ಕುಟುಂಬ. 1983ರಿಂದ ವಕೀಲಿ ವೃತ್ತಿ ಶುರು ಮಾಡಿದರು. 2014ರ ಫೆಬ್ರವರಿ 17ರಂದು ಸುಪ್ರಿಂಕೋರ್ಟ್​ ಹಿರಿಯ ನ್ಯಾಯಮೂರ್ತಿಯಾಗಿ ನೇಮಕವಾಗುವುದಕ್ಕೂ ಮೊದಲು ದೆಹಲಿ ಹೈಕೋರ್ಟ್​ನಲ್ಲಿ ಮುಖ್ಯ ನ್ಯಾಯಾಧೀಶರಾಗಿದ್ದರು.

ಇನ್ನು 2019ರ ನವೆಂಬರ್​ನಲ್ಲಿ ಸಿಜೆಐ ಆಗಿ ಪ್ರಮಾಣವಚನ ಸ್ವೀಕರಸಿದ್ದ ಎಸ್​.ಎ.ಬೋಬ್ಡೆ ನಿನ್ನೆ ನಿವೃತ್ತರಾಗಿದ್ದು, ವಿದಾಯದ ಭಾಷಣ ಮಾಡಿದರು. ನಾನು ಮುಖ್ಯನ್ಯಾಯಮೂರ್ತಿಯಾದ ಮೇಲೆ ನನ್ನ ಕೈಲಾದಷ್ಟು ಉತ್ತಮ ಕೆಲಸ ಮಾಡಿದ್ದೇನೆ. ನನ್ನಲ್ಲಿ ಸಮ್ಮಿಶ್ರ ಭಾವ ಇದೆ. ಈ ಹೊತ್ತಲ್ಲಿ ಖುಷಿಯಿಂದಲೇ ನ್ಯಾಯಾಲಯ ಬಿಟ್ಟು ಹೋಗುತ್ತಿದ್ದೇನೆ ಎಂದೂ ಹೇಳಿದ್ದರು.

ಇದನ್ನೂ ಓದಿ: ವ್ಯಕ್ತಿ-ವ್ಯಕ್ತಿತ್ವ: ಕಡಿಮೆ ಮಾತು, ಖಚಿತ ನಿಲುವು- ಇದು ಸುಪ್ರೀಂಕೋರ್ಟ್​ ನಿಯೋಜಿತ ಮುಖ್ಯ ನ್ಯಾಯಮೂರ್ತಿ ಎನ್​.ವಿ.ರಮಣ ಅವರ ಕಾರ್ಯಶೈಲಿ

ಸುಪ್ರೀಂಕೋರ್ಟ್​ ನ್ಯಾಯಮೂರ್ತಿ ಸ್ಥಾನಕ್ಕೆ ಎನ್​.ವಿ.ರಮಣ ಹೆಸರನ್ನು ಶಿಫಾರಸು ಮಾಡಿದ ಸಿಜಿಐ ಬೋಬ್ಡೆ..; ಕೇಂದ್ರ ಸಚಿವರ ಪತ್ರಕ್ಕೆ ಉತ್ತರ

Justice NV Ramana Takes Oath As Next CJI Of Supreme Court of India

Published On - 11:30 am, Sat, 24 April 21

Follow Us
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ
ಫಿಲಿಪೈನ್ಸ್ ದೋಣಿ ಬೆಂಕಿ ದುರಂತ; ಮೃತರ ಸಂಖ್ಯೆ 35ಕ್ಕೆ ಏರಿಕೆ
ಫಿಲಿಪೈನ್ಸ್ ದೋಣಿ ಬೆಂಕಿ ದುರಂತ; ಮೃತರ ಸಂಖ್ಯೆ 35ಕ್ಕೆ ಏರಿಕೆ
ಹಾಸನದಲ್ಲಿ ಬೆಚ್ಚಿಬೀಳಿಸಿದ ಸರಣಿ ಹೃದಯಘಾತ ಪ್ರಕರಣಗಳು
ಹಾಸನದಲ್ಲಿ ಬೆಚ್ಚಿಬೀಳಿಸಿದ ಸರಣಿ ಹೃದಯಘಾತ ಪ್ರಕರಣಗಳು