AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನ್ಯಾಯಮೂರ್ತಿ ಯಶವಂತ್ ವರ್ಮಾ ಮನೆಯಲ್ಲಿ ಹಣ ಪತ್ತೆಯಾಗಿದ್ದು ದೃಢ; ರಾಜೀನಾಮೆಗೆ ಸೂಚನೆ

ದೆಹಲಿ ಹೈಕೋರ್ಟ್‌ನಲ್ಲಿ ಬೆಂಕಿ ಅವಘಡದ ಸಂದರ್ಭದಲ್ಲಿ ನ್ಯಾಯಮೂರ್ತಿ ಯಶವಂತ್ ವರ್ಮಾ ಮನೆಯಲ್ಲಿ ನಗದು ಪತ್ತೆಯಾದ ನಂತರ ರಚಿಸಲಾದ ತನಿಖಾ ಸಮಿತಿಯು ಭಾರತದ ಮುಖ್ಯ ನ್ಯಾಯಮೂರ್ತಿಗೆ ತನ್ನ ವರದಿಯನ್ನು ಸಲ್ಲಿಸಿತು. ಅದರ ಪ್ರತಿಯನ್ನು ನ್ಯಾಯಾಧೀಶ ಯಶವಂತ್ ವರ್ಮ ಅವರಿಗೂ ಕಳುಹಿಸಲಾಗಿದೆ. ಈ ವರದಿಗೆ ಪ್ರತಿಕ್ರಿಯಿಸಲು ನ್ಯಾಯಮೂರ್ತಿ ಯಶವಂತ್ ವರ್ಮಾ ಅವರಿಗೆ ಎರಡು ದಿನಗಳ ಕಾಲಾವಕಾಶ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ.

ನ್ಯಾಯಮೂರ್ತಿ ಯಶವಂತ್ ವರ್ಮಾ ಮನೆಯಲ್ಲಿ ಹಣ ಪತ್ತೆಯಾಗಿದ್ದು ದೃಢ; ರಾಜೀನಾಮೆಗೆ ಸೂಚನೆ
Yashwant Varma
Follow us
ಸುಷ್ಮಾ ಚಕ್ರೆ
|

Updated on:May 07, 2025 | 6:44 PM

ನವದೆಹಲಿ, ಮೇ 7: ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ಯಶವಂತ್ ವರ್ಮ (Yashwant Varma) ಅವರನ ಮನೆಯಲ್ಲಿ ಬೆಂಕಿ ಅವಘಡವಾದಾಗ ಬೆಂಕಿ ಆರಿಸುವ ಸಂದರ್ಭದಲ್ಲಿ ಅಗ್ನಿಶಾಮಕ ದಳದವರಿಗೆ ಆ ಮನೆಯಲ್ಲಿ ಕಂತೆ ಕಂತೆ ನೋಟುಗಳು ಸಿಕ್ಕಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನೇಮಿಸಿದ ಮೂವರು ಸದಸ್ಯರ ಸಮಿತಿಯು ಮೇ 4ರಂದು ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸಂಜೀವ್ ಖನ್ನಾ ಅವರಿಗೆ ಸಲ್ಲಿಸಿದ ತನಿಖಾ ವರದಿಯಲ್ಲಿ ಅಲಹಾಬಾದ್ ಹೈಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಯಶವಂತ್ ವರ್ಮಾ ವಿರುದ್ಧದ ನಗದು ಪತ್ತೆ ಆರೋಪಗಳನ್ನು ದೃಢಪಡಿಸಿದೆ.

ಸಿಜೆಐ ಸಂಜೀವ್ ಖನ್ನಾ ಅವರು ತ್ರಿಸದಸ್ಯ ಸಮಿತಿಯ ವರದಿಯನ್ನು ನ್ಯಾಯಮೂರ್ತಿ ಯಶವಂತ್ ವರ್ಮಾ ಅವರಿಗೆ ಕಳುಹಿಸಿದ್ದಾರೆ. ನೈಸರ್ಗಿಕ ನ್ಯಾಯದ ತತ್ವವನ್ನು ಅನುಸರಿಸಿ ಅವರ ಉತ್ತರ ಕೋರಿದ್ದಾರೆ. ಹಾಗೇ, ವರದಿಯಲ್ಲಿನ ನಿರ್ಣಾಯಕ ಅಂಶಗಳನ್ನು ಗಮನದಲ್ಲಿಟ್ಟುಕೊಂಡು ಸಿಜೆಐ ಖನ್ನಾ ಅವರು ನ್ಯಾಯಮೂರ್ತಿ ಯಶವಂತ್ ವರ್ಮ ಅವರಿಗೆ ರಾಜೀನಾಮೆ ನೀಡುವಂತೆ ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: ನ್ಯಾಯಮೂರ್ತಿ ಯಶವಂತ್ ವರ್ಮಾ ವರ್ಗಾವಣೆ; ನಾಳೆ ಅಲಹಾಬಾದ್ ಹೈಕೋರ್ಟ್ ವಕೀಲರಿಂದ ​ ಮುಷ್ಕರ

ಮಾರ್ಚ್ 14ರಂದು ರಾತ್ರಿ 11.35ರ ಸುಮಾರಿಗೆ ದೆಹಲಿ ಹೈಕೋರ್ಟ್ ನ್ಯಾಯಾಧೀಶರಾಗಿದ್ದ ಯಶವಂತ್ ವರ್ಮಾ ಅವರ ಅಧಿಕೃತ ನಿವಾಸದಲ್ಲಿ ಬೆಂಕಿ ಕಾಣಿಸಿಕೊಂಡ ನಂತರ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿರುವ ಅವರ ಅಧಿಕೃತ ನಿವಾಸದಿಂದ ಭಾರಿ ಪ್ರಮಾಣದ ನಗದು ಪತ್ತೆಯಾಗಿತ್ತು. ಈ ಪ್ರಕರಣದ ಬಗ್ಗೆ ಆಂತರಿಕ ತನಿಖೆ ನಡೆಸಲು ಮಾರ್ಚ್ 22ರಂದು ಸಿಜೆಐ ಸಂಜೀವ್ ಖನ್ನಾ ಮೂವರು ಸದಸ್ಯರ ಸಮಿತಿಯನ್ನು ನೇಮಿಸಿದರು. ಮೇ 13ರಂದು ಅಧಿಕಾರದಿಂದ ಕೆಳಗಿಳಿಯಲಿರುವ ಸಿಜೆಐ ಸಂಜೀವ್ ಖನ್ನಾ ಅವರು ಈ ಸಮಸ್ಯೆಯನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯುವ ಸಾಧ್ಯತೆಯಿದೆ. ಅವರು ಸುಪ್ರೀಂ ಕೋರ್ಟ್‌ನ ಹಿರಿಯ ಕೊಲಿಜಿಯಂ ಸದಸ್ಯರೊಂದಿಗೆ ತ್ರಿಸದಸ್ಯ ಸಮಿತಿ ವರದಿಯ ಆವಿಷ್ಕಾರಗಳನ್ನು ಅನೌಪಚಾರಿಕವಾಗಿ ಚರ್ಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಸುಪ್ರೀಂ ಕೋರ್ಟ್​ನಿಂದ ನೇಮಕವಾಗಿದ್ದ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಶೀಲ್ ನಾಗು, ಹಿಮಾಚಲ ಪ್ರದೇಶ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಜಿ.ಎಸ್. ಸಂಧವಾಲಿಯಾ ಮತ್ತು ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ಅನು ಶಿವರಾಮನ್ ಅವರನ್ನೊಳಗೊಂಡ ತ್ರಿಸದಸ್ಯ ಸಮಿತಿಯು ಮೇ 4ರಂದು ಸಿಜೆಐಗೆ ಈ ಪ್ರಕರಣದಲ್ಲಿ ತನ್ನ ವರದಿಯನ್ನು ಸಲ್ಲಿಸಿದೆ. ಈ ಸಮಿತಿಯು ಸಾಕ್ಷ್ಯಗಳನ್ನು ವಿಶ್ಲೇಷಿಸಿ 50 ಕ್ಕೂ ಹೆಚ್ಚು ಜನರ ಹೇಳಿಕೆಗಳನ್ನು ದಾಖಲಿಸಿಕೊಂಡಿದೆ. ಮಾರ್ಚ್ 14ರಂದು ನ್ಯಾಯಮೂರ್ತಿ ವರ್ಮಾ ಅವರ ಅಧಿಕೃತ ದೆಹಲಿ ನಿವಾಸದಲ್ಲಿ ರಾತ್ರಿ 11.35 ರ ಸುಮಾರಿಗೆ ಸಂಭವಿಸಿದ ಅಗ್ನಿ ಅವಘಡಕ್ಕೆ ಮೊದಲು ಪ್ರತಿಕ್ರಿಯಿಸಿದ ದೆಹಲಿ ಪೊಲೀಸ್ ಆಯುಕ್ತ ಸಂಜಯ್ ಅರೋರಾ ಮತ್ತು ದೆಹಲಿ ಅಗ್ನಿಶಾಮಕ ಸೇವೆಯ ಮುಖ್ಯಸ್ಥರ ಹೇಳಿಕೆಗಳು ಕೂಡ ಇದರಲ್ಲಿ ಸೇರಿವೆ. ಅಗ್ನಿ ಅವಘಡದ ಸಮಯದಲ್ಲಿ ನ್ಯಾಯಮೂರ್ತಿ ವರ್ಮಾ ಅವರ ಅಧಿಕೃತ ದೆಹಲಿ ನಿವಾಸದಲ್ಲಿ ಅಪಾರ ಪ್ರಮಾಣದ ನಗದು ಪತ್ತೆಯಾಗಿದೆ ಎಂಬ ಆರೋಪಗಳನ್ನು ದೃಢೀಕರಿಸಲು ಸಮಿತಿಯು ಸ್ಪಷ್ಟ ಪುರಾವೆಗಳನ್ನು ಕಲೆಹಾಕಿದೆ.

ಇದನ್ನೂ ಓದಿ: ಮನೆಯಲ್ಲಿ ಹಣ ಪತ್ತೆ ಪ್ರಕರಣ; ಯಶವಂತ್ ವರ್ಮಾ ನ್ಯಾಯಾಂಗ ಕರ್ತವ್ಯ ನಿರ್ವಹಿಸದಂತೆ ಹೈಕೋರ್ಟ್ ಆದೇಶ

ಈ ಪ್ರಕರಣದ ಬಳಿಕ ನ್ಯಾಯಾಂಗ ಕೆಲಸವಿಲ್ಲದೆ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರನ್ನು ಅಲಹಾಬಾದ್ ಹೈಕೋರ್ಟ್‌ಗೆ ವರ್ಗಾಯಿಸಲಾಗಿತ್ತು. ಯಶವಂತ್ ವರ್ಮಾ ತಮ್ಮ ಮೇಲಿನ ಆರೋಪವನ್ನು ಪದೇಪದೆ ನಿರಾಕರಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Published On - 6:27 pm, Wed, 7 May 25

ಹೊತ್ತಿ ಉರಿದ ಗೋದಾಮು, 60ಕ್ಕೂ ಹೆಚ್ಚು ಗಾಡಿ ನೀರು ಹಾಕಿದ್ರೂ ಆರದ ಬೆಂಕಿ
ಹೊತ್ತಿ ಉರಿದ ಗೋದಾಮು, 60ಕ್ಕೂ ಹೆಚ್ಚು ಗಾಡಿ ನೀರು ಹಾಕಿದ್ರೂ ಆರದ ಬೆಂಕಿ
ಸಾಮಾನ್ಯ ಸಂಗತಿಯೆಂಬಂತೆ ಘಟನೆ ವಿವರಿಸಿದ ಮೃತ ಬಾಲಕನ ತಂದೆ
ಸಾಮಾನ್ಯ ಸಂಗತಿಯೆಂಬಂತೆ ಘಟನೆ ವಿವರಿಸಿದ ಮೃತ ಬಾಲಕನ ತಂದೆ
ಮದುವೆಗೆಂದು ಮಂಗಳೂರಿಗೆ ಹೊರಟ್ಟಿದ್ದ ಬಸ್ ಶಿರಾಡಿ ಘಾಟಿನಲ್ಲಿ ಪಲ್ಟಿ
ಮದುವೆಗೆಂದು ಮಂಗಳೂರಿಗೆ ಹೊರಟ್ಟಿದ್ದ ಬಸ್ ಶಿರಾಡಿ ಘಾಟಿನಲ್ಲಿ ಪಲ್ಟಿ
ಆದಂಪುರ ಏರ್​ಬೇಸ್​​ ಭೇಟಿ ಬಳಿಕ ಮೋದಿ ಮಾತು: ಇಲ್ಲಿದೆ ನೇರಪ್ರಸಾರ
ಆದಂಪುರ ಏರ್​ಬೇಸ್​​ ಭೇಟಿ ಬಳಿಕ ಮೋದಿ ಮಾತು: ಇಲ್ಲಿದೆ ನೇರಪ್ರಸಾರ
ಇಡೀ ವಿಶ್ವವೇ ಭಾರತೀಯ ಸೈನಿಕರ ಕಾರ್ಯವನ್ನು ಕೊಂಡಾಡುತ್ತಿದೆ: ಶಾಸಕ
ಇಡೀ ವಿಶ್ವವೇ ಭಾರತೀಯ ಸೈನಿಕರ ಕಾರ್ಯವನ್ನು ಕೊಂಡಾಡುತ್ತಿದೆ: ಶಾಸಕ
ನಾಗರಿಕರ ಹೆಸರಿನಲ್ಲಿ ರಾಜ್ಯಾದ್ಯಂತ ತಿರಂಗಾ ಯಾತ್ರೆ: ಆರ್ ಅಶೋಕ್
ನಾಗರಿಕರ ಹೆಸರಿನಲ್ಲಿ ರಾಜ್ಯಾದ್ಯಂತ ತಿರಂಗಾ ಯಾತ್ರೆ: ಆರ್ ಅಶೋಕ್
ನಮ್ಮ ಸರ್ಕಾರದ ಸಾಧನೆಗಳ ಬಗ್ಗೆ ಬಿಜೆಪಿ ಮಾತಾಡಲ್ಲ: ಶಿವಲಿಂಗೇಗೌಡ
ನಮ್ಮ ಸರ್ಕಾರದ ಸಾಧನೆಗಳ ಬಗ್ಗೆ ಬಿಜೆಪಿ ಮಾತಾಡಲ್ಲ: ಶಿವಲಿಂಗೇಗೌಡ
ಶೋಪಿಯಾನ್​ನಲ್ಲಿ ಲಷ್ಕರ್​​ನ ಮೋಸ್ಟ್ ವಾಂಟೆಡ್ ಉಗ್ರ ಸೇರಿ ಮೂವರ ಎನ್​ಕೌಂಟರ್
ಶೋಪಿಯಾನ್​ನಲ್ಲಿ ಲಷ್ಕರ್​​ನ ಮೋಸ್ಟ್ ವಾಂಟೆಡ್ ಉಗ್ರ ಸೇರಿ ಮೂವರ ಎನ್​ಕೌಂಟರ್
ಎಲ್ಲ ಸಂದೇಹಗಳನ್ನು ಪ್ರಧಾನಿ ಮೋದಿ ದೂರ ಮಾಡಿದ್ದಾರೆ: ವಿಜಯೇಂದ್ರ
ಎಲ್ಲ ಸಂದೇಹಗಳನ್ನು ಪ್ರಧಾನಿ ಮೋದಿ ದೂರ ಮಾಡಿದ್ದಾರೆ: ವಿಜಯೇಂದ್ರ
ನಿಮಗೆ ಇಂಗ್ಲಿಷ್ ಬರದಿದ್ದರೆ ಸುಮ್ಮನಿರಿ, ಪಾಕ್​ ರಕ್ಷಣಾ ಸಚಿವಗೆ ತರಾಟೆ
ನಿಮಗೆ ಇಂಗ್ಲಿಷ್ ಬರದಿದ್ದರೆ ಸುಮ್ಮನಿರಿ, ಪಾಕ್​ ರಕ್ಷಣಾ ಸಚಿವಗೆ ತರಾಟೆ