AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

BSNL 4G: ಸ್ವದೇಶಿ ತಂತ್ರಜ್ಞಾನದೊಂದಿಗೆ ಸಿದ್ಧಗೊಂಡ ಬಿಎಸ್​ಎನ್​ಎಲ್ 4ಜಿ, ಯಾವಾಗ ಸಿಗಲಿದೆ ಹೈ ಸ್ಪೀಡ್ ಇಂಟರ್ನೆಟ್?

ಟೆಲಿಕಾಂ ಖಾಸಗಿ ಸಂಸ್ಥೆಗಳೊಂದಿಗೆ ಸ್ಪರ್ಧಿಸಲಾಗದೆ ನೆಲಕಚ್ಚಿದ್ದ ಬಿಎಸ್​ಎನ್​ಎಲ್​ ಮತ್ತೆ ಮೇಲೇಳಲು ಸಿದ್ಧವಾಗಿದೆ. ಈಗ ಸ್ವದೇಶಿ ತಂತ್ರಜ್ಞಾನದ ಮೂಲಕ 4ಜಿ ಹಾಗೂ 5ಜಿ ಸಂಪರ್ಕದೊಂದಿಗೆ ಗ್ರಾಹಕರನ್ನು ಆಕರ್ಷಿಸಲು ಪ್ರಯತ್ನಿಸುತ್ತಿದೆ. ಎಲ್ಲವೂ ಅಂದುಕೊಂಡಂತೆ ನಡೆದರೆ ಶೀಘ್ರ ಹೈಸ್ಪೀಡ್ ಇಂಟರ್ನೆಟ್ ಲಭ್ಯವಾಗಲಿದೆ.

BSNL 4G: ಸ್ವದೇಶಿ ತಂತ್ರಜ್ಞಾನದೊಂದಿಗೆ ಸಿದ್ಧಗೊಂಡ ಬಿಎಸ್​ಎನ್​ಎಲ್ 4ಜಿ, ಯಾವಾಗ ಸಿಗಲಿದೆ ಹೈ ಸ್ಪೀಡ್ ಇಂಟರ್ನೆಟ್?
ಬಿಎಸ್​ಎನ್​ಎಲ್
ನಯನಾ ರಾಜೀವ್
|

Updated on: Aug 06, 2024 | 9:34 AM

Share

ಅದು 2001ರ ಸಮಯ, ಬಿಎಸ್​ಎನ್​ಎಲ್ ಸಿಮ್ ಖರೀದಿಸುವುದು ಕಷ್ಟದ ವಿಷಯವಾಗಿತ್ತು. ಸಿಮ್​ ಪಡೆದುಕೊಳ್ಳಲು 6 ರಿಂದ ಒಂದು ವರ್ಷದವರೆಗೆ ಕಾಯಬೇಕಿತ್ತು. ಸಿಮ್ ಪಡೆಯಲು ಜನರು ಸರದಿಯಲ್ಲಿ ನಿಲ್ಲುತ್ತಿದ್ದರು. ಆ ಬಳಿಕ ಖಾಸಗಿ ಟೆಲಿಕಾಂ ಕಂಪನಿಗಳು ಬಂದು ಬಿಎಸ್​ಎನ್​ಎಲ್ ಹಿಂದೆ ಬಿದ್ದಿತ್ತು. ಈಗ ಸುಮಾರು 23 ವರ್ಷಗಳ ಬಳಿಕ ಬಿಎಸ್​ಎನ್​ಎಲ್ ಮೇಲೆ ಮತ್ತೆ ಭರವಸೆ ಮೂಡಲು ಶುರುವಾಗಿದೆ. ಬಿಎಸ್​ಎನ್​ಎಲ್ 4ಜಿ ಹಾಗೂ 5ಜಿ ಕುರಿತು ಕೇಂದ್ರ ಟೆಲಿಕಾಂ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಕೆಲವು ಮಾಹಿತಿ ನೀಡಿದ್ದಾರೆ. ಬಿಎಸ್‌ಎನ್‌ಎಲ್ ಶೀಘ್ರದಲ್ಲೇ ದೇಶಾದ್ಯಂತ 4ಜಿ ಸೇವೆಗಳನ್ನು ಆರಂಭಿಸಲಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.

ಈ ಬಿಎಸ್​ಎನ್​ಎಲ್ 4ಜಿ ನೆಟ್​ವರ್ಕ್​ ಸಂಪೂರ್ಣವಾಗಿ ಭಾರತದಲ್ಲಿ ಅಭಿವೃದ್ಧಿಪಡಿಸಿದ ತಂತ್ರಜ್ಞಾನವನ್ನು ಆಧರಿಸಿದೆ. ಶೀಘ್ರದಲ್ಲೇ 5ಜಿಗೆ ಅಪ್​ಗ್ರೇಡ್ ಮಾಡಲಾಗುವುದು ಎಂದು ಸಿಂಧಿಯಾ ಹೇಳಿದ್ದಾರೆ. ಬಿಎಸ್​ಎನ್​ಎಲ್ ಗ್ರಾಹಕರ ಸಂಖ್ಯೆ ನಿರಂತರವಾಗಿ ಹೆಚ್ಚುತ್ತಿದೆ.

ಬಿಎಸ್​ಎನ್​ಎಲ್ ತನ್ನ 4G ನೆಟ್‌ವರ್ಕ್ ಅನ್ನು ಸಂಪೂರ್ಣವಾಗಿ ಸ್ವದೇಶಿ ತಂತ್ರಜ್ಞಾನದೊಂದಿಗೆ ಸ್ವಾವಲಂಬಿ ಭಾರತ ಅಡಿಯಲ್ಲಿ ಸಿದ್ಧಪಡಿಸಿದೆ. ಜಿಯೋ, ಏರ್‌ಟೆಲ್ ಮತ್ತು ವೊಡಾಫೋನ್ 4ಜಿ ನೆಟ್‌ವರ್ಕ್ ಆರಂಭಿಸಿದಾಗ ಬಿಎಸ್‌ಎನ್‌ಎಲ್ ಏಕೆ ಮಾಡಬಾರದು ಎಂದು ಹಲವರು ಕೇಳಿದ್ದರು. ನಾವು ಸರ್ಕಾರಿ ಕಂಪನಿಯ ನೆಟ್‌ವರ್ಕ್ ಅನ್ನು ಅಭಿವೃದ್ಧಿಪಡಿಸಬೇಕಾದರೆ, ನಾವು ಚೀನಾ ಅಥವಾ ಯಾವುದೇ ವಿದೇಶಿ ದೇಶದ ಉಪಕರಣಗಳನ್ನು ಬಳಸುವುದಿಲ್ಲ ಎಂಬುದು ಪ್ರಧಾನಿ ನರೇಂದ್ರ ಮೋದಿಯವರ ಸಂಕಲ್ಪವಾಗಿತ್ತು.

ಮತ್ತಷ್ಟು ಓದಿ: BSNL Offer: ಬಿಎಸ್​ಎನ್​ಎಲ್​ನಿಂದ ಹೊಸ ಭರ್ಜರಿ ಪ್ಲಾನ್ ಬಿಡುಗಡೆ; ಜಿಯೋ, ಏರ್ಟೆಲ್​ನಿಂದ ಗ್ರಾಹಕರ ವಲಸೆ?

ಇದು ಪ್ರಧಾನಿ ಮೋದಿಯವರ ನಿರ್ಧಾರ ಭಾರತವು ತನ್ನದೇ ಆದ 4G ನೆಟ್‌ವರ್ಕ್ ಅನ್ನು ಅಭಿವೃದ್ಧಿಪಡಿಸಬೇಕು ಎಂದು ಪ್ರಧಾನಿ ಮೋದಿ ಹೇಳಿದ್ದರು. ದು ಸಂಪೂರ್ಣವಾಗಿ ಸುರಕ್ಷಿತ ಮತ್ತು ಸ್ಥಳೀಯವಾಗಿದೆ. ಪ್ರಧಾನಿ ಮೋದಿ ಅವರು ಆತ್ಮನಿರ್ಭರ್ ಭಾರತ್ ಅಡಿಯಲ್ಲಿ ಭಾರತವು ತನ್ನದೇ ಆದ 4G ಸ್ಟಾಕ್, ಕೋರ್ ಸಿಸ್ಟಮ್ ಅಥವಾ ರೇಡಿಯೇಶನ್ ಆಕ್ಸೆಸ್ ನೆಟ್‌ವರ್ಕ್ (RAN) ಎಂಬ ಟವರ್ ಅನ್ನು ಅಭಿವೃದ್ಧಿಪಡಿಸುವುದಾಗಿ ವಾಗ್ದಾನ ಮಾಡಿದ್ದರು. ಅದು ಒಂದೂವರೆ ವರ್ಷವನ್ನು ತೆಗೆದುಕೊಂಡಿತು.

ಭಾರತವು ತನ್ನದೇ ಆದ ಸ್ವದೇಶಿ ತಂತ್ರಜ್ಞಾನವನ್ನು ಹೊಂದಿರುವ ಐದನೇ ರಾಷ್ಟ್ರವಾಗಿದೆ. ಟವರ್ ಅಳವಡಿಸುವ ಕೆಲಸ ನಡೆಯುತ್ತಿದೆ. ಟಾಟಾ, ತೇಜಸ್ ಮತ್ತು ಸಿ-ಡಾಟ್‌ನಂತಹ ಭಾರತೀಯ ಕಂಪನಿಗಳು ಬಿಎಸ್‌ಎನ್‌ಎಲ್‌ನ 4 ಜಿ ನೆಟ್‌ವರ್ಕ್ ಸ್ಥಾಪಿಸಲು ಸಹಾಯ ಮಾಡುತ್ತಿವೆ ಎಂದು ಸಿಂಧಿಯಾ ಹೇಳಿದರು. ಅಕ್ಟೋಬರ್ ಅಂತ್ಯದೊಳಗೆ 80,000 ಟವರ್‌ಗಳನ್ನು ಅಳವಡಿಸಲಾಗುವುದು ಮತ್ತು ಮಾರ್ಚ್ 2025 ರೊಳಗೆ 1 ಲಕ್ಷ ಟವರ್‌ಗಳನ್ನು ಸ್ಥಾಪಿಸುವ ಗುರಿ ಇದೆ ಎಂದು ಹೇಳಿದರು.

ಅಕ್ಟೋಬರ್ ಅಂತ್ಯದೊಳಗೆ 80 ಸಾವಿರ ಹಾಗೂ ಮುಂದಿನ ವರ್ಷದ ಮಾರ್ಚ್ ವೇಳೆಗೆ ಉಳಿದ 21 ಸಾವಿರ ಟವರ್ ಗಳನ್ನು ಸ್ಥಾಪಿಸುತ್ತೇವೆ. 4G ನೆಟ್‌ವರ್ಕ್‌ನ ಒಂದು ಲಕ್ಷ ಟವರ್‌ಗಳನ್ನು ಮಾರ್ಚ್ 2025 ರೊಳಗೆ ಸ್ಥಾಪಿಸಲಾಗುವುದು ಎಂದು ಭರವಸೆ ನೀಡಿದರು. BSNLನ ಈ 4G ನೆಟ್‌ವರ್ಕ್ 5G ಗೆ ಅಪ್‌ಗ್ರೇಡ್ ಮಾಡಲು ಸಿದ್ಧವಾಗಿದೆ ಎಂದು ಸಿಂಧಿಯಾ ಹೇಳಿದರು. ಅವರು ಹೇಳಿದರು, ಈ 4G ಕೋರ್​ನಲ್ಲಿ ನಾವು 5G ಅನ್ನು ಬಳಸಬಹುದು. ನಾವು 5G ಸೇವೆಗಳಿಗಾಗಿ ಟವರ್‌ಗಳಲ್ಲಿ ಕೆಲವು ಬದಲಾವಣೆಗಳನ್ನು ಮಾಡಬೇಕಾಗಿದೆ ಮತ್ತು ಈ ಕೆಲಸ ನಡೆಯುತ್ತಿದೆ. ನಾವು ಶೀಘ್ರದಲ್ಲೇ 4G ಯಿಂದ 5G ಗೆ ಪ್ರಯಾಣವನ್ನು ಪೂರ್ಣಗೊಳಿಸುತ್ತೇವೆ ಎಂದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ