AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

K Annamalai: ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ತಮಿಳುನಾಡು ಬಿಜೆಪಿ ಅಧ್ಯಕ್ಷರಾಗಿ ನೇಮಕ

ಅಣ್ಣಾಮಲೈ ವಿಧಾನಸಭೆ ಚುನಾವಣೆಯಲ್ಲಿ ಸೋತರೂ ವೈಯಕ್ತಿಕ ವರ್ಚಸ್ಸು, ಜನಪ್ರಿಯತೆಯನ್ನು ಉಳಿಸಿಕೊಂಡಿದ್ದಾರೆ. ಪಕ್ಷವನ್ನು ಮುನ್ನಡೆಸುವ ಉತ್ಸಾಹಿ ಯುವ ರಾಜಕಾರಣಿಯಾಗಬಲ್ಲರು ಅನ್ನುತ್ತಿದೆ ತಮಿಳುನಾಡು ಬಿಜೆಪಿ ವಲಯ.

K Annamalai: ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ತಮಿಳುನಾಡು ಬಿಜೆಪಿ ಅಧ್ಯಕ್ಷರಾಗಿ ನೇಮಕ
ಅಣ್ಣಾಮಲೈ
TV9 Web
| Edited By: |

Updated on:Jul 08, 2021 | 7:47 PM

Share

ದೆಹಲಿ: ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಅವರನ್ನು  ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷರಾಗಿ ನೇಮಿಸಲಾಗಿದೆ. ಈ ಕುರಿತು ಬಿಜೆಪಿ ಹೈಕಮಾಂಡ್  ಅಧಿಕೃತ ಆದೇಶ ಹೊರಡಿಸಿದೆ .ಅಣ್ಣಾಮಲೈ ಅವರನ್ನು ತಮಿಳುನಾಡು ರಾಜ್ಯ ಘಟಕದ ಅಧ್ಯಕ್ಷರನ್ನಾಗಿ ನೇಮಿಸಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಆದೇಶ ಹೊರಡಿಸಿದ್ದಾರೆ. ಈ ಹಿಂದೆ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸೋತಿದ್ದ ಅಣ್ಣಾಮಲೈ ಅವರಿಗೆ ಇದೀಗ ಮಹತ್ವದ ಹುದ್ದೆ ದೊರೆತಂತಾಗಿದೆ.

2024 ರ ಲೋಕಸಭಾ ಚುನಾವಣೆಗಳನ್ನು ಕೇಂದ್ರೀಕರಿಸಿ ಬಿಜೆಪಿ ಪಕ್ಷವು ಪ್ರಸ್ತುತ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷರಾಗಿದ್ದ ಎಲ್​ ಮುರುಗನ್ (Dr. L. Murugan)​ ಅವರನ್ನು ಮೀನುಗಾರಿಕೆ, ಪಶುಸಂಗೋಪನೆ ಮತ್ತು ಡೇರಿ ಖಾತೆ ಸಚಿವರನ್ನಾಗಿ (MoS Ministry of Fisheries, Animal Husbandry and Dairying) ಪ್ರಧಾನಿ ಮೋದಿ ತಮ್ಮ ತೆಕ್ಕೆಗೆ ತೆಗೆದುಕೊಂಡಿದ್ದಾರೆ. ಹಾಗಾಗಿ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ತೆರವಾಗಿತ್ತು. ಆ ಸ್ಥಾನಕ್ಕೆ ಕೆ. ಅಣ್ಣಾಮಲೈ ಉಚಿತ ಅಭ್ಯರ್ಥಿ ಎಂದು ಬಿಂಬಿಸಲಾಗಿತ್ತು. ಅದಂತೆಯೇ ಅಣ್ಣಾಮಲೈ ತಮಿಳುನಾಡು ಬಿಜೆಪಿಯ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ಸೋಲುಂಡ ಅಣ್ಣಾಮಲೈಗೂ ಬೇಕಿದೆ ಪೊಲಿಟಿಕಲ್​ ಟಾನಿಕ್: ಕಳೆದ ವಿಧಾಸನಭೆ ಚುನಾವಣೆಯಲ್ಲಿ ಪಕ್ಷ ಮತ್ತು ವೈಯಕ್ತಿವಾಗಿ ಸೋಲುಂಡ ಅಣ್ಣಾಮಲೈ (K Annamalai) ಒಂದಷ್ಟು ಭ್ರಮನಿರಸಗೊಂಡಿರುವುದಂತೂ ದಿಟ. ಆದರೆ ಅವರೊಬ್ಬ ಸಮರ್ಥ ನಾಯಕ ರೂಪುಗೊಳ್ಳುತ್ತಿದ್ದಾನೆ ಅನ್ನುತ್ತಿದೆ ತಮಿಳುನಾಡು ಬಿಜೆಪಿ. ಹಾಗಾಗಿ ಮುಂದಿನ ಲೋಕಸಭಾ ಚುನಾವಣೆಗೆ ಈಗಿನಿಂದಲೇ ಪಕ್ಷ ಕಟ್ಟುವಲ್ಲಿ ಕಟ್ಟಾಳಾಗಿ ಅಣ್ಣಾಮಲೈರನ್ನು ತೊಡಗಿಸಬಹುದು ಎಂಬುದು ರಾಜ್ಯ ಬಿಜೆಪಿ ನಾಯಕರ ಲೆಕ್ಕಾಚಾರ. ಅನಿವಾರ್ಯವಾಗಿ ಅದು ದಿಲ್ಲಿ ನಾಯಕರ ಅನಿಸಿಕೆಯೂ ಆಗಿರಬಹುದು. ಹಾಗಾಗಿ ಸದ್ಯದಲ್ಲೆ ಮಾಜಿ ಐಪಿಎಸ್​ ಕೆ. ಅಣ್ಣಾಮಲೈಗೆ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ (TN BJP) ಒಲಿದು ಬಂದರೆ ಅಚ್ಚರಿಯಿಲ್ಲ.

ಅಣ್ಣಾಮಲೈ ವಿಧಾನಸಭೆ ಚುನಾವಣೆಯಲ್ಲಿ ಸೋತರೂ ವೈಯಕ್ತಿಕ ವರ್ಚಸ್ಸು, ಜನಪ್ರಿಯತೆಯನ್ನು ಉಳಿಸಿಕೊಂಡಿದ್ದಾರೆ. ಪಕ್ಷವನ್ನು ಮುನ್ನಡೆಸುವ ಉತ್ಸಾಹಿ ಯುವ ರಾಜಕಾರಣಿಯಾಗಬಲ್ಲರು ಅನ್ನುತ್ತಿದೆ ತಮಿಳುನಾಡು ಬಿಜೆಪಿ ವಲಯ.

ಇದನ್ನೂ ಓದಿ:

 K Annamalai: ಮೋದಿ ಸಂಪುಟ ವಿಸ್ತರಣೆ ಎಫೆಕ್ಟ್; ಅಣ್ಣಾಮಲೈಗೆ ಒಲಿದು ಬರುತ್ತದಾ ಆ ಅದೃಷ್ಟ!?

Tamil Nadu Elections 2021: ತಮಿಳುನಾಡಿನ ರಾಜಕೀಯ ವ್ಯವಸ್ಥೆಯನ್ನು ಬದಲಿಸುತ್ತೇನೆ: ಬಿಜೆಪಿ ಅಭ್ಯರ್ಥಿ;ಸಿಂಗಂ; ಅಣ್ಣಾಮಲೈ

(K Annamalai appointed as Tamil Nadu BJP President after PM Narendra Modi cabinet expansion)

Published On - 7:39 pm, Thu, 8 July 21

Follow Us
Web contact
Web contact

TV9 Kannada

Read More
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ