AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇನ್ನು 6 ತಿಂಗಳಲ್ಲಿ ಮಾಧ್ಯಮಗಳನ್ನು ಬಿಜೆಪಿ ನಿಯಂತ್ರಣಕ್ಕೆ ತೆಗೆದುಕೊಳ್ಳುತ್ತೇವೆ, ಕಾರ್ಯಕರ್ತರಿಗೆ ಭಯಬೇಡ: ಕೆ.ಅಣ್ಣಾಮಲೈ ವಿವಾದಾಸ್ಪದ ಹೇಳಿಕೆ

ಮಾಧ್ಯಮಗಳನ್ನು ನಮ್ಮ ನಿಯಂತ್ರಣದಲ್ಲಿ ಇಟ್ಟುಕೊಳ್ಳೋಣ, ಬಿಜೆಪಿ ವಿರುದ್ದ ಸುಳ್ಳು ಮಾಹಿತಿ ನೀಡಿದರೆ ಸುಮ್ಮನೆ ಬಿಡುವುದಿಲ್ಲ, ಬಿಜೆಪಿ ಕಾರ್ಯಕರ್ತರಿಗೆ ಮಾಧ್ಯಮಗಳ ಬಗ್ಗೆ ಭಯ ಬೇಡ ಎಂದು ಬಹಿರಂಗವಾಗಿಯೇ ಹೇಳಿರುವ ಅಣ್ಣಾಮಲೈ, ಮಾಧ್ಯಮಗಳನ್ನು ಅಡಿಯಾಳುಗಳಾಗಿ ಮಾಡಿಕೊಳ್ಳುವಂತೆ ಮಾತನಾಡಿದ್ದಾರೆ.

ಇನ್ನು 6 ತಿಂಗಳಲ್ಲಿ ಮಾಧ್ಯಮಗಳನ್ನು ಬಿಜೆಪಿ ನಿಯಂತ್ರಣಕ್ಕೆ ತೆಗೆದುಕೊಳ್ಳುತ್ತೇವೆ, ಕಾರ್ಯಕರ್ತರಿಗೆ ಭಯಬೇಡ: ಕೆ.ಅಣ್ಣಾಮಲೈ ವಿವಾದಾಸ್ಪದ ಹೇಳಿಕೆ
ಕೆ.ಅಣ್ಣಾಮಲೈ
TV9 Web
| Updated By: Skanda|

Updated on: Jul 16, 2021 | 2:33 PM

Share

ಚೆನ್ನೈ: ತಮಿಳುನಾಡು ಜಿಜೆಪಿಯ ನಿಯೋಜಿತ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ (K. Annamalai) ಅಧಿಕಾರ ಸ್ವೀಕಾರಕ್ಕೂ ಮುನ್ನವೇ ಮಾಧ್ಯಮಗಳನ್ನು (Media) ನಿಯಂತ್ರಿಸಬೇಕೆಂಬ ವಿವಾದಿತ ಹೇಳಿಕೆಯೊಂದನ್ನು ನೀಡುವ ಮೂಲಕ ಸುದ್ದಿಯಾಗಿದ್ದಾರೆ. ಶುಕ್ರವಾರದಂದು ತಮಿಳುನಾಡು ರಾಜ್ಯ ಬಿಜೆಪಿ (Tamil Nadu BJP) ಘಟಕದ ಅಧ್ಯಕ್ಷರಾಗಿ (President) ಅಧಿಕಾರ ವಹಿಸಿಕೊಳ್ಳಲಿರುವ ಅವರು, ಮುಂದಿನ ಆರು ತಿಂಗಳಲ್ಲಿ ಮಾಧ್ಯಮಗಳನ್ನು ನಿಯಂತ್ರಣಕ್ಕೆ ತೆಗೆದುಕೊಳ್ಳಲಿದ್ದೇವೆ ಎನ್ನುವ ಮೂಲಕ ವಿವಾದಕ್ಕೆ ಆಸ್ಪದ ಮಾಡಿಕೊಟ್ಟಿದ್ದಾರೆ.

ಯಾವುದೇ ಮಾಧ್ಯಮ ಸಂಸ್ಥೆ ದೀರ್ಘಕಾಲ ಸುಳ್ಳು ಹರಡುವುದು ಸಾಧ್ಯವಿಲ್ಲ. ಸುಳ್ಳುಸುದ್ದಿ ಹರಡುವುದಕ್ಕೆ ಕಡಿವಾಣ ಹಾಕಲಾಗುವುದು. ತಮಿಳುನಾಡು ಬಿಜೆಪಿ ಘಟಕದ ಅಧ್ಯಕ್ಷರಾಗಿದ್ದ ಎಲ್‌.ಮುರುಗನ್‌ ಇದೀಗ ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆಯ ರಾಜ್ಯ ಸಚಿವರಾಗಿದ್ದಾರೆ. ಎಲ್ಲಾ ಮಾಧ್ಯಮಗಳೂ ಅವರ ಕೈಕೆಳಗೇ ಬರುತ್ತವೆ. ಸುಳ್ಳು ಸುದ್ದಿಯನ್ನೇ ಮುಂದಿಟ್ಟುಕೊಂಡು ದೀರ್ಘಕಾಲ ರಾಜಕಾರಣ ಮಾಡುವುದು ಸಾಧ್ಯವಿಲ್ಲ ಎಂದು ಅಣ್ಣಾಮಲೈ ತಮ್ಮ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ರೋಡ್​ ಶೋ ವೇಳೆ ಹೇಳಿಕೆ ನೀಡಿದ್ದಾರೆ.

ಮಾಧ್ಯಮಗಳನ್ನು ನಮ್ಮ ನಿಯಂತ್ರಣದಲ್ಲಿ ಇಟ್ಟುಕೊಳ್ಳೋಣ, ಬಿಜೆಪಿ ವಿರುದ್ದ ಸುಳ್ಳು ಮಾಹಿತಿ ನೀಡಿದರೆ ಸುಮ್ಮನೆ ಬಿಡುವುದಿಲ್ಲ, ಬಿಜೆಪಿ ಕಾರ್ಯಕರ್ತರಿಗೆ ಮಾಧ್ಯಮಗಳ ಬಗ್ಗೆ ಭಯ ಬೇಡ ಎಂದು ಬಹಿರಂಗವಾಗಿಯೇ ಹೇಳಿರುವ ಅಣ್ಣಾಮಲೈ, ಮಾಧ್ಯಮಗಳನ್ನು ಅಡಿಯಾಳುಗಳಾಗಿ ಮಾಡಿಕೊಳ್ಳುವಂತೆ ಮಾತನಾಡಿದ್ದಾರೆ.

ಕರ್ನಾಟಕ ಕೇಡರ್‌ನ ಐಪಿಎಸ್‌ ಅಧಿಕಾರಿಯಾಗಿದ್ದ ಅಣ್ಣಾಮಲೈ ಈ ಹಿಂದೆಯೂ ಬೇರೆ ಬೇರೆ ಹೇಳಿಕೆಗಳ ಮೂಲಕ ಕೆಲ ವಿವಾದ ಸೃಷ್ಟಿಸಿದ್ದರು. ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಅರವಕುರಿಚಿ ಕ್ಷೇತ್ರದ ಅಭ್ಯರ್ಥಿಯಾಗಿದ್ದ ಅಣ್ಣಾಮಲೈ ಅವರು ಡಿಎಂಕೆ ಮುಖಂಡ ಸೆಂಥಿಲ್‌ ಬಾಲಾಜಿ ಅವರಿಗೆ ಬೆದರಿಕೆ ಒಡ್ಡಿದ್ದಾರೆ ಎಂಬ ಆರೋಪವೂ ಕೇಳಿಬಂದಿತ್ತು. ಇದೀಗ ಪತ್ರಿಕಾ ಸ್ವಾತಂತ್ರ್ಯ ಹರಣ ಮಾಡುವ ಧಾಟಿಯಲ್ಲಿ ಬಹಿರಂಗವಾಗಿಯೇ ಮಾತನಾಡಿರುವ ಅಣ್ಣಾಮಲೈ ಮತ್ತೆ ಪ್ರಜ್ಞಾವಂತರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

ಅಣ್ಣಾಮಲೈ ಹೇಳಿಕೆಗೆ ತೀವ್ರ ವಿರೋಧ ವ್ಯಕ್ತವಾಗಿದ್ದು, ಇದು ಮಾಧ್ಯಮಕ್ಕೆ ಬಹಿರಂಗ ಬೆದರಿಕೆ ಎಂದು ಆಡಳಿತಾರೂಢ ಡಿಎಂಕೆ ಅಭಿಪ್ರಾಯಪಟ್ಟಿದೆ. ಇದು ಮಾಧ್ಯಮವನ್ನು ಹತ್ತಿಕ್ಕುವ, ಬಹಿರಂಗವಾಗಿ ಬೆದರಿಸುವ ಕ್ರಮವಾಗಿದ್ದು, ಅಣ್ಣಾಮಲೈ ಹೇಳಿಕೆಯನ್ನು ತೀವ್ರವಾಗಿ ಖಂಡಿಸುತ್ತೇವೆ ಎಂದು ತಮಿಳುನಾಡಿನ ಮಾಹಿತಿ ತಂತ್ರಜ್ಞಾನ ಸಚಿವ ಮನೊ ತಂಗರಾಜ್‌ ಹೇಳಿದ್ದಾರೆ. ಅಣ್ಣಾಮಲೈ ಹೇಳಿಕೆಯನ್ನು ತಮಿಳುನಾಡು ಮಾಧ್ಯಮಗಳು ಸಹ ಖಂಡಿಸಿವೆ.

ಮೇಕೆದಾಟು ವಿಚಾರದಲ್ಲಿ ನಾವು ತಮಿಳುನಾಡು ಪರ: ಅಣ್ಣಾಮಲೈ ಮೇಕೆದಾಟು ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿರುವ ಅಣ್ಣಾಮಲೈ, ತಮಿಳುನಾಡು ಬಿಜೆಪಿ ಘಟಕವು ಮೇಕೆದಾಟು ವಿಷಯದಲ್ಲಿ ತಮಿಳುನಾಡು ಸರ್ಕಾರದ ಪರ ಇರಲಿದೆ ಎಂದು ಸ್ಪಷ್ಟಪಡಿಸಿದ್ದಾರೆ. ತಮಿಳುನಾಡಿನ ರೈತರು ಹಾಗೂ ಜನತೆಯ ಪರವಾಗಿ ತಮಿಳುನಾಡು ಬಿಜೆಪಿ ನಿಲ್ಲಲಿದೆ. ಇದರಲ್ಲಿ ಯಾವುದೇ ರಾಜಕೀಯ ಮಾಡುವ ಅಗತ್ಯವಿಲ್ಲ ಎಂದು ಅಣ್ಣಾಮಲೈ ತಮ್ಮ ನಿಲುವನ್ನು ತಿಳಿಸಿದ್ದಾರೆ.

(K Annamalai Tamil Nadu BJP New President Controversial statement on controlling Media houses within 6 months)

ಇದನ್ನೂ ಓದಿ: K Annamalai: ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ತಮಿಳುನಾಡು ಬಿಜೆಪಿ ಅಧ್ಯಕ್ಷರಾಗಿ ನೇಮಕ

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್