Sign In

By signing in or creating an account, you agree with Associated Broadcasting Company's Terms & Conditions and Privacy Policy.

K. Annamalai: 6 ದಿನಗಳ ಬ್ರಿಟನ್​​ ಪ್ರವಾಸದಲ್ಲಿರಲಿದ್ದಾರೆ ಕೆ.ಅಣ್ಣಾಮಲೈ, ತಮಿಳರೊಂದಿಗೆ ಸಂವಾದ

ತಮಿಳುನಾಡಿನ ಬಿಜೆಪಿ ರಾಜ್ಯಾಧ್ಯಕ್ಷ ಕೆ.ಅಣ್ಣಾಮಲೈ ಬ್ರಿಟನ್​​ ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ಬಿಜೆಪಿ ತಿಳಿಸಿದೆ. ಆರು ದಿನಗಳ ಯುಕೆ ಭೇಟಿಗಾಗಿ ಇಂದು (ಜೂ22) ಬೆಳಗ್ಗೆ ತೆರಳಿದ್ದಾರೆ. ಬ್ರಿಟನ್​​ನಲ್ಲಿರುವ ತಮಿಳರು ಆಯೋಜಿಸುವ ವಿವಿಧ ಕಾರ್ಯಕ್ರಮಗಳಲ್ಲಿ ಅವರು ಭಾಗವಹಿಸಲಿದ್ದಾರೆ.

K. Annamalai: 6 ದಿನಗಳ ಬ್ರಿಟನ್​​ ಪ್ರವಾಸದಲ್ಲಿರಲಿದ್ದಾರೆ ಕೆ.ಅಣ್ಣಾಮಲೈ, ತಮಿಳರೊಂದಿಗೆ ಸಂವಾದ
ಕೆ.ಅಣ್ಣಾಮಲೈ
Follow us
ಅಕ್ಷಯ್​ ಪಲ್ಲಮಜಲು​​
|

Updated on:Jun 22, 2023 | 4:02 PM

ಚೆನ್ನೈ: ತಮಿಳುನಾಡಿನ ಬಿಜೆಪಿ ರಾಜ್ಯಾಧ್ಯಕ್ಷ ಕೆ.ಅಣ್ಣಾಮಲೈ (K. Annamalai) ಬ್ರಿಟನ್​​ ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ಬಿಜೆಪಿ ತಿಳಿಸಿದೆ. ಆರು ದಿನಗಳ ಯುಕೆ ಭೇಟಿಗಾಗಿ ಇಂದು (ಜೂ22) ಬೆಳಗ್ಗೆ ತೆರಳಿದ್ದಾರೆ. ಬ್ರಿಟನ್​​ನಲ್ಲಿರುವ ತಮಿಳರು ಆಯೋಜಿಸುವ ವಿವಿಧ ಕಾರ್ಯಕ್ರಮಗಳಲ್ಲಿ ಅವರು ಭಾಗವಹಿಸಲಿದ್ದಾರೆ ಎಂದು ತಮಿಳುನಾಡು ಬಿಜೆಪಿ ಮೂಲಗಳು ತಿಳಿಸಿವೆ. ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರದ ಒಂಬತ್ತು ವರ್ಷಗಳ ಸಾಧನೆಗಳ ಕುರಿತು ಬ್ರಿಟನ್​​ನಲ್ಲಿರುವ ಮುಖಂಡ ಜತೆಗೆ ಚರ್ಚೆಯನ್ನು ನಡೆಸಲಿದ್ದಾರೆ. ಅವರು ತಮ್ಮ 6 ದಿನಗಳ ಭೇಟಿಯಲ್ಲಿ ಲಂಡನ್, ಬರ್ಮಿಂಗ್ಹ್ಯಾಮ್ ಮತ್ತು ಹೌನ್ಸ್ಲೋದಲ್ಲಿ ವಾಸಿಸುವ ತಮಿಳರೊಂದಿಗೆ ಸಂವಾದ ನಡೆಸಲಿದ್ದಾರೆ ಮತ್ತು ಅವರು ಜೂನ್ 29 ರಂದು ಮತ್ತೆ ಚೆನ್ನೈಗೆ ಬರಲಿದ್ದಾರೆ.

ಇದನ್ನೂ ಓದಿ: Katchatheevu Island: ಕಚ್ಚತೀವು ದ್ವೀಪ ಮರಳಿ ಭಾರತಕ್ಕೆ ಸೇರಬೇಕು; ತಮಿಳನಾಡು ಸಿಎಂ ಆಗ್ರಹ; ಏನಿದು ಕಚ್ಚತೀವು ದ್ವೀಪ ವಿವಾದ ಇಲ್ಲಿದೆ ಮಾಹಿತಿ

ಅಣ್ಣಾಮಲೈ ಅವರು ಕಳೆದ ವರ್ಷ 3 ದಿನಗಳ ಕಾಲ ಶ್ರೀಲಂಕಾಕ್ಕೆ ಪ್ರಯಾಣಿಸಿ ಲಂಕಾ ತಮಿಳರೊಂದಿಗೆ ಸಂವಾದ ನಡೆಸಿದ್ದರು. ಆ ವೇಳೆ ಶ್ರೀಲಂಕಾ ತಮಿಳರಿಗೆ ಅಗತ್ಯ ನೆರವು ನೀಡುವಂತೆ ಕೇಂದ್ರ ಸರ್ಕಾರಕ್ಕೆ ತಿಳಿಸುವುದಾಗಿ ಭರವಸೆ ನೀಡಿದ್ದರು.

ತಮಿಳುನಾಡು ಬಿಜೆಪಿ ಮುಖ್ಯಸ್ಥ ಕೆ ಅಣ್ಣಾಮಲೈ ಮೇ 1 2022ರಲ್ಲಿ ನಾಲ್ಕು ದಿನಗಳ ಕಾಲ ದ್ವೀಪ ರಾಷ್ಟ್ರ ಶ್ರೀಲಂಕಾಕ್ಕೆ ಭೇಟಿ ನೀಡಿದ್ದರು. ಶ್ರೀಲಂಕಾ ಆರ್ಥಿಕವಾಗಿ ದಿವಾಳಿಯಾಗಿದ್ದು, ಈ ಸಮಯದಲ್ಲಿ ಭಾರತ ಸಾಹಯವನ್ನು ಕೂಡ ಕೇಳಿತ್ತು, ತಮಿಳುನಾಡು ಸರ್ಕಾರ ಅಲ್ಲಿಯ ತಮಿಳರಿಗೆ ಬಟ್ಟೆ ಮತ್ತು ಅಗತ್ಯ ವಸ್ತುಗಳನ್ನು ಕಳಿಸುವ ಬಗ್ಗೆ ಕೇಂದ್ರ ಮೌನ ವಹಿಸಿತ್ತು, ಈ ಸಮಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಕೆ ಅಣ್ಣಾಮಲೈ ಭೇಟಿ ನೀಡಿದ್ದರು, ಅಲ್ಲಿಯ ತಮಿಳರ ಜತೆಗೆ ಚರ್ಚೆಯನ್ನು ನಡೆಸಿದ್ದರು, ಇದರ ಜತೆಗೆ ಕೇಂದ್ರವು ಶ್ರೀಲಂಕಾಕ್ಕೆ ಅಗತ್ಯ ಸಹಾಯವನ್ನು ಮಾಡುವಂತೆ ಒತ್ತಾಯಿಸುತ್ತೇನೆ ಎಂದು ಹೇಳಿದ್ದರು.

ಇದರ ಜತೆಗೆ ತಮಿಳು ಮೀನಾಗಾರ ಜತೆಗೂ ಮಾತನಾಡಿ ಅವರ ಸಮಸ್ಯೆಗಳ ಬಗ್ಗೆಯು ಚರ್ಚೆ ನಡೆಸಿದ್ದರು. ಇದೀಗ ಬ್ರಿಟನ್​ನಲ್ಲಿರುವ ತಮಿಳರೊಂದಿಗೆ ಸಂವಾದವನ್ನು ನಡೆಸಲಿದ್ದು. 6 ದಿನಗಳ ಪ್ರವಾಸವನ್ನು ಕೈಗೊಂಡಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:44 pm, Thu, 22 June 23

ಚಿಕ್ಕಬಳ್ಳಾಪುರದಲ್ಲಿ ಅಗ್ನಿ ಅವಘಡ: ಬಸ್​, ಬೈಕ್​ಗಳು ಬೆಂಕಿಗಾಹುತಿ
ಚಿಕ್ಕಬಳ್ಳಾಪುರದಲ್ಲಿ ಅಗ್ನಿ ಅವಘಡ: ಬಸ್​, ಬೈಕ್​ಗಳು ಬೆಂಕಿಗಾಹುತಿ
Daily Devotional: ಕಾಲಭೈರವೇಶ್ವರನಿಗೆ ನೈವೇದ್ಯೆ ಹೇಗೆ ಸಮರ್ಪಿಸಬೇಕು?
Daily Devotional: ಕಾಲಭೈರವೇಶ್ವರನಿಗೆ ನೈವೇದ್ಯೆ ಹೇಗೆ ಸಮರ್ಪಿಸಬೇಕು?
Daily Horoscope: ಈ ರಾಶಿಯವರು ಆರ್ಥಿಕವಾಗಿ ಸ್ವಲ್ಪ ಸಂಕಷ್ಟ ಎದುರಿಸಬಹುದು
Daily Horoscope: ಈ ರಾಶಿಯವರು ಆರ್ಥಿಕವಾಗಿ ಸ್ವಲ್ಪ ಸಂಕಷ್ಟ ಎದುರಿಸಬಹುದು
ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು