AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

K. Annamalai: 6 ದಿನಗಳ ಬ್ರಿಟನ್​​ ಪ್ರವಾಸದಲ್ಲಿರಲಿದ್ದಾರೆ ಕೆ.ಅಣ್ಣಾಮಲೈ, ತಮಿಳರೊಂದಿಗೆ ಸಂವಾದ

ತಮಿಳುನಾಡಿನ ಬಿಜೆಪಿ ರಾಜ್ಯಾಧ್ಯಕ್ಷ ಕೆ.ಅಣ್ಣಾಮಲೈ ಬ್ರಿಟನ್​​ ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ಬಿಜೆಪಿ ತಿಳಿಸಿದೆ. ಆರು ದಿನಗಳ ಯುಕೆ ಭೇಟಿಗಾಗಿ ಇಂದು (ಜೂ22) ಬೆಳಗ್ಗೆ ತೆರಳಿದ್ದಾರೆ. ಬ್ರಿಟನ್​​ನಲ್ಲಿರುವ ತಮಿಳರು ಆಯೋಜಿಸುವ ವಿವಿಧ ಕಾರ್ಯಕ್ರಮಗಳಲ್ಲಿ ಅವರು ಭಾಗವಹಿಸಲಿದ್ದಾರೆ.

K. Annamalai: 6 ದಿನಗಳ ಬ್ರಿಟನ್​​ ಪ್ರವಾಸದಲ್ಲಿರಲಿದ್ದಾರೆ ಕೆ.ಅಣ್ಣಾಮಲೈ, ತಮಿಳರೊಂದಿಗೆ ಸಂವಾದ
ಕೆ.ಅಣ್ಣಾಮಲೈ
ಅಕ್ಷಯ್​ ಪಲ್ಲಮಜಲು​​
|

Updated on:Jun 22, 2023 | 4:02 PM

Share

ಚೆನ್ನೈ: ತಮಿಳುನಾಡಿನ ಬಿಜೆಪಿ ರಾಜ್ಯಾಧ್ಯಕ್ಷ ಕೆ.ಅಣ್ಣಾಮಲೈ (K. Annamalai) ಬ್ರಿಟನ್​​ ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ಬಿಜೆಪಿ ತಿಳಿಸಿದೆ. ಆರು ದಿನಗಳ ಯುಕೆ ಭೇಟಿಗಾಗಿ ಇಂದು (ಜೂ22) ಬೆಳಗ್ಗೆ ತೆರಳಿದ್ದಾರೆ. ಬ್ರಿಟನ್​​ನಲ್ಲಿರುವ ತಮಿಳರು ಆಯೋಜಿಸುವ ವಿವಿಧ ಕಾರ್ಯಕ್ರಮಗಳಲ್ಲಿ ಅವರು ಭಾಗವಹಿಸಲಿದ್ದಾರೆ ಎಂದು ತಮಿಳುನಾಡು ಬಿಜೆಪಿ ಮೂಲಗಳು ತಿಳಿಸಿವೆ. ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರದ ಒಂಬತ್ತು ವರ್ಷಗಳ ಸಾಧನೆಗಳ ಕುರಿತು ಬ್ರಿಟನ್​​ನಲ್ಲಿರುವ ಮುಖಂಡ ಜತೆಗೆ ಚರ್ಚೆಯನ್ನು ನಡೆಸಲಿದ್ದಾರೆ. ಅವರು ತಮ್ಮ 6 ದಿನಗಳ ಭೇಟಿಯಲ್ಲಿ ಲಂಡನ್, ಬರ್ಮಿಂಗ್ಹ್ಯಾಮ್ ಮತ್ತು ಹೌನ್ಸ್ಲೋದಲ್ಲಿ ವಾಸಿಸುವ ತಮಿಳರೊಂದಿಗೆ ಸಂವಾದ ನಡೆಸಲಿದ್ದಾರೆ ಮತ್ತು ಅವರು ಜೂನ್ 29 ರಂದು ಮತ್ತೆ ಚೆನ್ನೈಗೆ ಬರಲಿದ್ದಾರೆ.

ಇದನ್ನೂ ಓದಿ: Katchatheevu Island: ಕಚ್ಚತೀವು ದ್ವೀಪ ಮರಳಿ ಭಾರತಕ್ಕೆ ಸೇರಬೇಕು; ತಮಿಳನಾಡು ಸಿಎಂ ಆಗ್ರಹ; ಏನಿದು ಕಚ್ಚತೀವು ದ್ವೀಪ ವಿವಾದ ಇಲ್ಲಿದೆ ಮಾಹಿತಿ

ಅಣ್ಣಾಮಲೈ ಅವರು ಕಳೆದ ವರ್ಷ 3 ದಿನಗಳ ಕಾಲ ಶ್ರೀಲಂಕಾಕ್ಕೆ ಪ್ರಯಾಣಿಸಿ ಲಂಕಾ ತಮಿಳರೊಂದಿಗೆ ಸಂವಾದ ನಡೆಸಿದ್ದರು. ಆ ವೇಳೆ ಶ್ರೀಲಂಕಾ ತಮಿಳರಿಗೆ ಅಗತ್ಯ ನೆರವು ನೀಡುವಂತೆ ಕೇಂದ್ರ ಸರ್ಕಾರಕ್ಕೆ ತಿಳಿಸುವುದಾಗಿ ಭರವಸೆ ನೀಡಿದ್ದರು.

ತಮಿಳುನಾಡು ಬಿಜೆಪಿ ಮುಖ್ಯಸ್ಥ ಕೆ ಅಣ್ಣಾಮಲೈ ಮೇ 1 2022ರಲ್ಲಿ ನಾಲ್ಕು ದಿನಗಳ ಕಾಲ ದ್ವೀಪ ರಾಷ್ಟ್ರ ಶ್ರೀಲಂಕಾಕ್ಕೆ ಭೇಟಿ ನೀಡಿದ್ದರು. ಶ್ರೀಲಂಕಾ ಆರ್ಥಿಕವಾಗಿ ದಿವಾಳಿಯಾಗಿದ್ದು, ಈ ಸಮಯದಲ್ಲಿ ಭಾರತ ಸಾಹಯವನ್ನು ಕೂಡ ಕೇಳಿತ್ತು, ತಮಿಳುನಾಡು ಸರ್ಕಾರ ಅಲ್ಲಿಯ ತಮಿಳರಿಗೆ ಬಟ್ಟೆ ಮತ್ತು ಅಗತ್ಯ ವಸ್ತುಗಳನ್ನು ಕಳಿಸುವ ಬಗ್ಗೆ ಕೇಂದ್ರ ಮೌನ ವಹಿಸಿತ್ತು, ಈ ಸಮಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಕೆ ಅಣ್ಣಾಮಲೈ ಭೇಟಿ ನೀಡಿದ್ದರು, ಅಲ್ಲಿಯ ತಮಿಳರ ಜತೆಗೆ ಚರ್ಚೆಯನ್ನು ನಡೆಸಿದ್ದರು, ಇದರ ಜತೆಗೆ ಕೇಂದ್ರವು ಶ್ರೀಲಂಕಾಕ್ಕೆ ಅಗತ್ಯ ಸಹಾಯವನ್ನು ಮಾಡುವಂತೆ ಒತ್ತಾಯಿಸುತ್ತೇನೆ ಎಂದು ಹೇಳಿದ್ದರು.

ಇದರ ಜತೆಗೆ ತಮಿಳು ಮೀನಾಗಾರ ಜತೆಗೂ ಮಾತನಾಡಿ ಅವರ ಸಮಸ್ಯೆಗಳ ಬಗ್ಗೆಯು ಚರ್ಚೆ ನಡೆಸಿದ್ದರು. ಇದೀಗ ಬ್ರಿಟನ್​ನಲ್ಲಿರುವ ತಮಿಳರೊಂದಿಗೆ ಸಂವಾದವನ್ನು ನಡೆಸಲಿದ್ದು. 6 ದಿನಗಳ ಪ್ರವಾಸವನ್ನು ಕೈಗೊಂಡಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:44 pm, Thu, 22 June 23

Follow Us
Akshay Pallamajalu
Akshay Pallamajalu

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ