AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

K. Chandrashekar Rao: ಪ್ರತ್ಯೇಕ ತೆಲಂಗಾಣ ರಾಜ್ಯಕ್ಕೆ ಬೇಡಿಕೆ ಇಟ್ಟ ಸಿಎಂ ಕೆ. ಚಂದ್ರಶೇಖರ ರಾವ್ ನಡೆದು ಬಂದ ದಾರಿ

ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್ ಅವರ ಜೀವನ, ಅವರು ನಡೆದು ಬಂದ ದಾರಿ, ರಾಜಕೀಯ, ಪ್ರತ್ಯೇಕ ರಾಜ್ಯಕ್ಕೆ ಬೇಡಿಕೆ ಕುರಿತು ಇಲ್ಲಿದೆ ಮಾಹಿತಿ

K. Chandrashekar Rao: ಪ್ರತ್ಯೇಕ ತೆಲಂಗಾಣ ರಾಜ್ಯಕ್ಕೆ ಬೇಡಿಕೆ ಇಟ್ಟ ಸಿಎಂ ಕೆ. ಚಂದ್ರಶೇಖರ ರಾವ್ ನಡೆದು ಬಂದ ದಾರಿ
ಕೆ ಚಂದ್ರಶೇಖರ್​ ರಾವ್​​
TV9 Web
| Updated By: ವಿವೇಕ ಬಿರಾದಾರ|

Updated on: Feb 17, 2023 | 7:25 AM

Share

ತೆಲೆಂಗಾಣ ರಾಜ್ಯದ ಮೊದಲ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್ (K. Chandrashekar Rao) ಅವರ ಜನ್ಮದಿನ. ಚಂದ್ರಶೇಖರ್​ ರಾವ್​ ಅವರು 17 ಫೆಬ್ರವರಿ 1954 ರಂದು ಇಂದಿನ ತೆಲಂಗಾಣದ ಸಿದ್ದಿಪೇಟ್ ಬಳಿಯ ಚಿಂತಮಡಕ ಗ್ರಾಮದಲ್ಲಿ ಜನಿಸಿದರು. ತಂದೆ ರಾಘವ ರಾವ್ ಮತ್ತು ತಾಯಿ ವೆಂಕಟಮ್ಮ. ಚಂದ್ರಶೇಖರ ರಾವ್​​ ಅವರಿಗೆ 9 ಜನ ಸಹೋದರಿಯರು ಮತ್ತು ಒಬ್ಬರು ಅಣ್ಣ ಇದ್ದಾರೆ. ಅವರು ಹೈದರಾಬಾದ್‌ನ ಉಸ್ಮಾನಿಯಾ ವಿಶ್ವವಿದ್ಯಾಲಯದಿಂದ ತೆಲುಗು ಸಾಹಿತ್ಯದಲ್ಲಿ ಎಂಎ ಪದವಿ ಪಡೆದರು. ಚಂದ್ರಶೇಖರ್ ರಾವ್​ ಅವರು ತಮ್ಮ ರಾಜಕೀಯ ಜೀವನನ್ನು ಕಾಂಗ್ರೆಸ್​ ಪಕ್ಷದಿಂದ ಆರಂಭಿಸಿದರು. ಮುಂದೆ ಇವರು ಕಾಂಗ್ರೆಸ್​ ತೊರೆದು 1983ರಲ್ಲಿ ತೆಲಗು ದೇಶಂ ಪಕ್ಷಕ್ಕೆ ಸೇರಿದರು. 1985ರಲ್ಲಿ ಮೊದಲ ಬಾರಿಗೆ ಸಿದ್ದಿಪೇಟ ವಿಧಾನಸಭೆ ಕ್ಷೇತ್ರದಿಂದ ಸ್ಪರ್ಧಿಸಿ ಗೆದ್ದರು. ಮತ್ತು ಎನ್​. ಟಿ. ರಾಮ್​ ರಾವ್​ ಸಂಪುಟದಲ್ಲಿ ಸಚಿವರಾದರು. ಮುಂದೆ 2000 ರಿಂದ 2001ರ ವೆರೆಗೆ ಆಂದ್ರಪ್ರದೇಶ (ಇಬ್ಬಾಗಕ್ಕೂ ಮೊದಲು) ನ ವಿಧಾನಸಭೆಯ ಉಪಸಭಾಪತಿಯಾಗಿದ್ದರು.

ತೆಲಂಗಾಣ ಪ್ರದೇಶದ ಜನರು ತಾರತಮ್ಯಕ್ಕೆ ಒಳಗಾಗುತ್ತಿದ್ದಾರೆ ಮತ್ತು ಪ್ರತ್ಯೇಕ ರಾಜ್ಯವೊಂದೇ ಪರಿಹಾರ ಎಂದು ಅವರು ಪ್ರತಿಪಾದಿಸಿದರು. ಈ ಹಿನ್ನೆಲೆ ಅವರು 2001ರಲ್ಲಿ ತೆಲೆಂಗಾಣ ರಾಷ್ಟ್ರ ಸಮೀತಿಯನ್ನು ಸ್ಥಾಪಿಸಿದರು. ಇದನ್ನು ಮುಂದೆ ಭಾರತೀಯ ರಾಷ್ಟ್ರ ಸಮೀತಿ ಎಂದು ಮರು ನಾಮಕರಣ ಮಾಡಿದರು.

ಪ್ರತ್ಯೇಕ ತೆಲಂಗಾಣ ರಾಜ್ಯಕ್ಕಾಗಿ ಕೂಗು

ಪ್ರತ್ಯೇಕ ತೆಲಂಗಾಣ ರಾಜ್ಯಕ್ಕಾಗಿ 2009 ರಲ್ಲಿ ಅಮರಣಾಂತ ಉಪವಾಸ ಸತ್ಯಾಗ್ರಹ ಪ್ರಾರಂಭಿಸಿದರು. ಇವರು ಸತ್ಯಾಗ್ರಾಹ ಪ್ರಾರಂಭಿಸಿದ 11 ದಿವಸಗಳ ನಂತರ ಸಂಸತ್ತನಲ್ಲಿ ಪ್ರತ್ಯೇಕ ತೆಲಂಗಾಣ ರಾಜ್ಯಕ್ಕೆ ಅನುಮತಿ ದೊರೆಯಿತು. ಆಗ ಕೇಂದ್ರ ಸರ್ಕಾರ ಆಂದ್ರ ಪ್ರದೇಶ ಮತ್ತು ತೆಲಂಗಾಣವನ್ನು ಇಬ್ಬಾಗ ಮಾಡಿ, ಎರಡು ಪ್ರತ್ಯೇಕ ರಾಜ್ಯ ಮಾಡಿತು.

2014 ರಲ್ಲಿ ತೆಲೆಂಗಾಣದಲ್ಲಿ ನಡೆದ ಮೊದಲ ವಿಧಾನಸಭೆ ಚುನಾವಣೆಯಲ್ಲಿ ತೆಲೆಂಗಾಣ ರಾಷ್ಟ್ರೀಯ ಸಮೀತಿ ಪಕ್ಷದಿಂದ, ಗಾಜ್ವೆಲ್​​ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಗೆದ್ದರು. ತೆಲೆಂಗಾಣ ಪಕ್ಷ 119 ವಿಧಾನಸಭಾ ಕ್ಷೇತ್ರಗಳಲ್ಲಿ 69ರಲ್ಲಿ ವಿಜಯಸಾಧಿಸಿದರೇ, 17 ಲೋಕಸಭಾ ಕ್ಷೇತ್ರಗಳಲ್ಲಿ 11ದರಲ್ಲಿ ಜಯಸಾಧಿಸಿದೆ. ಜಂದ್ರಶೇಖರ ರಾವ್​ ಅವರು ಜೂನ್​ 2 2014 ರಂದು ತೆಲೆಂಗಾಣ ರಾಜ್ಯದ ಮೊದಲ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. 2022 ಅಕ್ಟೋಬರ್​ 5ರಂದು ತೆಲೆಂಗಾಣ ರಾಷ್ಟ್ರ ಸಮೀತಿಯನ್ನು, ಭಾರತೀಯ ರಾಷ್ಟ್ರ ಸಮೀತಿ ಎಂದು ಮರುನಾಮಕರಣ ಮಾಡಿದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!